Homeಮುಖಪುಟ10 ವರ್ಷ ಅಧಿಕಾರದಲ್ಲಿದ್ದು, ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಿದ್ದರೆ ಅವರು ಮತ್ತೆ ಅಧಿಕಾರಕ್ಕೆ ಬರಬಾರದು: ಕೀರ್ತಿ...

10 ವರ್ಷ ಅಧಿಕಾರದಲ್ಲಿದ್ದು, ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಿದ್ದರೆ ಅವರು ಮತ್ತೆ ಅಧಿಕಾರಕ್ಕೆ ಬರಬಾರದು: ಕೀರ್ತಿ ಆಝಾದ್

- Advertisement -
- Advertisement -

10 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಕೇಸರಿ ಪಕ್ಷವು ‘ಹಿಂದೂಗಳು ಅಪಾಯದಲ್ಲಿದ್ದಾರೆ’ (ಹಿಂದೂ ಖತ್ರೆ ಮೇ) ಎಂದು ಹೇಳುವುದನ್ನು ಮುಂದುವರಿಸಿದರೆ, ಪಕ್ಷ ಅಧಿಕಾರಕ್ಕೆ ಮರಳುವ ಅಗತ್ಯದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತದೆ, ಅಂತಹ ಪಕ್ಷ ಅಧಿಕಾರಕ್ಕೆ ಮತ್ತೆ ಬರಬಾರದು ಎಂದು ಟಿಎಂಸಿ ಅಭ್ಯರ್ಥಿ ಮತ್ತು ಭಾರತದ ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರ ಲೋಕಸಭಾ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ಆಝಾದ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ಕೇಸರಿ ಪಾಳಯಕ್ಕೆ ಜನರ ಮುಂದೆ ಪ್ರಸ್ತುತ ಪಡಿಸಲು ಬೇರೆ ಏನೂ ಇಲ್ಲದ ಕಾರಣ ಯುಸಿಸಿಯನ್ನು(ಏಕರೂಪ ನಾಗರಿಕ ಸಂಹಿತೆಯನ್ನು) ತಂದಿದ್ದು, ಇದು ಚುನಾವಣೆಗಳನ್ನು ಕೋಮುವಾದೀಕರಣಗೊಳಿಸುವ ತಂತ್ರ ಎಂದು ಹೇಳಿದ್ದಾರೆ. ಆಝಾದ್ ಅವರು ಭಾರತದ ವೈವಿಧ್ಯತೆಯನ್ನು ಎತ್ತಿ ಹಿಡಿದಿದ್ದು, ಯುಸಿಸಿಯನ್ನು ವೈವಿಧ್ಯಮಯ ಪ್ರದೇಶದಲ್ಲಿ ಅಳವಡಿಸುವುದರ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಮೊಘಲರ ಆಳ್ವಿಕೆಯಲ್ಲಿ- ಹಿಂದೂಗಳು ಬೆದರಿಕೆಗೆ ಒಳಗಾಗಲಿಲ್ಲ, ಬ್ರಿಟಿಷ್ ಆಳ್ವಿಕೆಯಲ್ಲಿ ಅವರು ಅಪಾಯಕ್ಕೆ ಒಳಗಾಗಲಿಲ್ಲ, ಸ್ವಾತಂತ್ರ್ಯದ ನಂತರದ ಅನೇಕ ಸರ್ಕಾರಗಳ ಅಡಿಯಲ್ಲಿಯೂ ಸಹ ಹಿಂದೂಗಳು ಯಾವುದೇ  ಅಪಾಯವನ್ನು ಎದುರಿಸಲಿಲ್ಲ. ಆದರೆ ಕಳೆದ 10 ವರ್ಷಗಳಿಂದ ಹಿಂದೂ ರಾಷ್ಟ್ರೀಯವಾದಿ ಪಕ್ಷವು ಅಧಿಕಾರದಲ್ಲಿದ್ದಾಗ ಹಿಂದೂಗಳು ಇದ್ದಕ್ಕಿದ್ದಂತೆ ಅಪಾಯಕ್ಕೆ ಒಳಗಾಗುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಪಕ್ಷವು ಹಿಂದೂಗಳನ್ನು ಉಳಿಸಲು ಸಾಧ್ಯವಾಗದಿದ್ದರೆ, ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು. ಬಿಜೆಪಿಗೆ ತನ್ನ 10 ವರ್ಷಗಳ ಸಾಧನೆಯ ವರದಿ ತೋರಿಸಲು ಏನೂ ಇಲ್ಲ ಎಂಬುವುದು ಸತ್ಯ. ಅದಕ್ಕಾಗಿಯೇ ಅವರು ‘ಹಿಂದೂ ಖತ್ರೇ ಮೇ ಹೈಂ’ (ಹಿಂದೂಗಳು ಅಪಾಯದಲ್ಲಿದ್ದಾರೆ) ಎಂದು ಸಮುದಾಯಗಳ ಬಗ್ಗೆ ಭಯದ ಮನೋವಿಕಾರವನ್ನು ಹುಟ್ಟುಹಾಕಿದರು ಎಂದು ಹೇಳಿದ್ದಾರೆ.

1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಸದಸ್ಯರಾದ ಆಝಾದ್, ನಾವು ಕಪ್ ಗೆದ್ದಾಗ, ನಮ್ಮ ತಂಡದಲ್ಲಿ ಹಿಂದೂ ಆಟಗಾರರು ಇದ್ದರು, ಮುಸ್ಲಿಂ ಸಮುದಾಯದ ಸೈಯದ್ ಕಿರ್ಮಾನಿ, ಸಿಖ್ ಸಮುದಾಯದ ಬಲ್ವಿಂದರ್ ಸಂಧು, ಕ್ರಿಶ್ಚಿಯನ್ ಸಮುದಾಯದ ರೋಜರ್ ಬಿನ್ನಿ ಇದ್ದರು. ನಾವೆಲ್ಲರೂ ಒಟ್ಟಾಗಿ ಹೋರಾಡಿ ಭಾರತಕ್ಕೆ ಮೊದಲ ವಿಶ್ವಕಪ್ ಗೆದ್ದುಕೊಟ್ಟಿದ್ದೇವೆ. ಈ ಎಲ್ಲಾ ಧರ್ಮಗಳು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಒಟ್ಟಾಗಿ ಹೋರಾಡಿದವು. ಬಿಜೆಪಿ ಈಗ ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಿದೆ ಎಂದು ಹೇಳಿದ್ದಾರೆ.

ಅನೇಕ ಚುನಾವಣಾ ಪ್ರಚಾರಗಳಲ್ಲಿ ನೀಡಿದ ಭರವಸೆಯ ಹೊರತಾಗಿಯೂ ಯುಸಿಸಿಯನ್ನು ತನ್ನ ಅಧಿಕಾರಾವಧಿಯಲ್ಲಿ ಜಾರಿಗೆ ತರುವಲ್ಲಿ ಬಿಜೆಪಿ ವಿಫಲವಾಗಿದೆ. ಯುಸಿಸಿ ತರುತ್ತೇವೆ ಎಂದು ಬಿಜೆಪಿ ಮೊದಲಿನಿಂದಲೂ ಹೇಳುತ್ತಿದೆ. ಅವರು 1998 ಮತ್ತು 1999ರಲ್ಲೂ ಈ ಭರವಸೆಯನ್ನು ನೀಡಿದ್ದರು. 2014 ರಲ್ಲಿಯೂ UCC ಅವರ ಚುನಾವಣಾ ಕಾರ್ಯಸೂಚಿಯಲ್ಲಿತ್ತು. ಕಳೆದ 1 ದಶಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ  ಅವರಿಗೆ ಯುಸಿಸಿಯನ್ನು ಜಾರಿಗೆ ತರದಂತೆ ತಡೆದಿದ್ದು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನು ಓದಿ:ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...