Homeಮುಖಪುಟ10 ವರ್ಷ ಅಧಿಕಾರದಲ್ಲಿದ್ದು, ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಿದ್ದರೆ ಅವರು ಮತ್ತೆ ಅಧಿಕಾರಕ್ಕೆ ಬರಬಾರದು: ಕೀರ್ತಿ...

10 ವರ್ಷ ಅಧಿಕಾರದಲ್ಲಿದ್ದು, ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಿದ್ದರೆ ಅವರು ಮತ್ತೆ ಅಧಿಕಾರಕ್ಕೆ ಬರಬಾರದು: ಕೀರ್ತಿ ಆಝಾದ್

- Advertisement -
- Advertisement -

10 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಕೇಸರಿ ಪಕ್ಷವು ‘ಹಿಂದೂಗಳು ಅಪಾಯದಲ್ಲಿದ್ದಾರೆ’ (ಹಿಂದೂ ಖತ್ರೆ ಮೇ) ಎಂದು ಹೇಳುವುದನ್ನು ಮುಂದುವರಿಸಿದರೆ, ಪಕ್ಷ ಅಧಿಕಾರಕ್ಕೆ ಮರಳುವ ಅಗತ್ಯದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತದೆ, ಅಂತಹ ಪಕ್ಷ ಅಧಿಕಾರಕ್ಕೆ ಮತ್ತೆ ಬರಬಾರದು ಎಂದು ಟಿಎಂಸಿ ಅಭ್ಯರ್ಥಿ ಮತ್ತು ಭಾರತದ ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರ ಲೋಕಸಭಾ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ಆಝಾದ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ಕೇಸರಿ ಪಾಳಯಕ್ಕೆ ಜನರ ಮುಂದೆ ಪ್ರಸ್ತುತ ಪಡಿಸಲು ಬೇರೆ ಏನೂ ಇಲ್ಲದ ಕಾರಣ ಯುಸಿಸಿಯನ್ನು(ಏಕರೂಪ ನಾಗರಿಕ ಸಂಹಿತೆಯನ್ನು) ತಂದಿದ್ದು, ಇದು ಚುನಾವಣೆಗಳನ್ನು ಕೋಮುವಾದೀಕರಣಗೊಳಿಸುವ ತಂತ್ರ ಎಂದು ಹೇಳಿದ್ದಾರೆ. ಆಝಾದ್ ಅವರು ಭಾರತದ ವೈವಿಧ್ಯತೆಯನ್ನು ಎತ್ತಿ ಹಿಡಿದಿದ್ದು, ಯುಸಿಸಿಯನ್ನು ವೈವಿಧ್ಯಮಯ ಪ್ರದೇಶದಲ್ಲಿ ಅಳವಡಿಸುವುದರ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಮೊಘಲರ ಆಳ್ವಿಕೆಯಲ್ಲಿ- ಹಿಂದೂಗಳು ಬೆದರಿಕೆಗೆ ಒಳಗಾಗಲಿಲ್ಲ, ಬ್ರಿಟಿಷ್ ಆಳ್ವಿಕೆಯಲ್ಲಿ ಅವರು ಅಪಾಯಕ್ಕೆ ಒಳಗಾಗಲಿಲ್ಲ, ಸ್ವಾತಂತ್ರ್ಯದ ನಂತರದ ಅನೇಕ ಸರ್ಕಾರಗಳ ಅಡಿಯಲ್ಲಿಯೂ ಸಹ ಹಿಂದೂಗಳು ಯಾವುದೇ  ಅಪಾಯವನ್ನು ಎದುರಿಸಲಿಲ್ಲ. ಆದರೆ ಕಳೆದ 10 ವರ್ಷಗಳಿಂದ ಹಿಂದೂ ರಾಷ್ಟ್ರೀಯವಾದಿ ಪಕ್ಷವು ಅಧಿಕಾರದಲ್ಲಿದ್ದಾಗ ಹಿಂದೂಗಳು ಇದ್ದಕ್ಕಿದ್ದಂತೆ ಅಪಾಯಕ್ಕೆ ಒಳಗಾಗುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಪಕ್ಷವು ಹಿಂದೂಗಳನ್ನು ಉಳಿಸಲು ಸಾಧ್ಯವಾಗದಿದ್ದರೆ, ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು. ಬಿಜೆಪಿಗೆ ತನ್ನ 10 ವರ್ಷಗಳ ಸಾಧನೆಯ ವರದಿ ತೋರಿಸಲು ಏನೂ ಇಲ್ಲ ಎಂಬುವುದು ಸತ್ಯ. ಅದಕ್ಕಾಗಿಯೇ ಅವರು ‘ಹಿಂದೂ ಖತ್ರೇ ಮೇ ಹೈಂ’ (ಹಿಂದೂಗಳು ಅಪಾಯದಲ್ಲಿದ್ದಾರೆ) ಎಂದು ಸಮುದಾಯಗಳ ಬಗ್ಗೆ ಭಯದ ಮನೋವಿಕಾರವನ್ನು ಹುಟ್ಟುಹಾಕಿದರು ಎಂದು ಹೇಳಿದ್ದಾರೆ.

1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಸದಸ್ಯರಾದ ಆಝಾದ್, ನಾವು ಕಪ್ ಗೆದ್ದಾಗ, ನಮ್ಮ ತಂಡದಲ್ಲಿ ಹಿಂದೂ ಆಟಗಾರರು ಇದ್ದರು, ಮುಸ್ಲಿಂ ಸಮುದಾಯದ ಸೈಯದ್ ಕಿರ್ಮಾನಿ, ಸಿಖ್ ಸಮುದಾಯದ ಬಲ್ವಿಂದರ್ ಸಂಧು, ಕ್ರಿಶ್ಚಿಯನ್ ಸಮುದಾಯದ ರೋಜರ್ ಬಿನ್ನಿ ಇದ್ದರು. ನಾವೆಲ್ಲರೂ ಒಟ್ಟಾಗಿ ಹೋರಾಡಿ ಭಾರತಕ್ಕೆ ಮೊದಲ ವಿಶ್ವಕಪ್ ಗೆದ್ದುಕೊಟ್ಟಿದ್ದೇವೆ. ಈ ಎಲ್ಲಾ ಧರ್ಮಗಳು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಒಟ್ಟಾಗಿ ಹೋರಾಡಿದವು. ಬಿಜೆಪಿ ಈಗ ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಿದೆ ಎಂದು ಹೇಳಿದ್ದಾರೆ.

ಅನೇಕ ಚುನಾವಣಾ ಪ್ರಚಾರಗಳಲ್ಲಿ ನೀಡಿದ ಭರವಸೆಯ ಹೊರತಾಗಿಯೂ ಯುಸಿಸಿಯನ್ನು ತನ್ನ ಅಧಿಕಾರಾವಧಿಯಲ್ಲಿ ಜಾರಿಗೆ ತರುವಲ್ಲಿ ಬಿಜೆಪಿ ವಿಫಲವಾಗಿದೆ. ಯುಸಿಸಿ ತರುತ್ತೇವೆ ಎಂದು ಬಿಜೆಪಿ ಮೊದಲಿನಿಂದಲೂ ಹೇಳುತ್ತಿದೆ. ಅವರು 1998 ಮತ್ತು 1999ರಲ್ಲೂ ಈ ಭರವಸೆಯನ್ನು ನೀಡಿದ್ದರು. 2014 ರಲ್ಲಿಯೂ UCC ಅವರ ಚುನಾವಣಾ ಕಾರ್ಯಸೂಚಿಯಲ್ಲಿತ್ತು. ಕಳೆದ 1 ದಶಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ  ಅವರಿಗೆ ಯುಸಿಸಿಯನ್ನು ಜಾರಿಗೆ ತರದಂತೆ ತಡೆದಿದ್ದು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನು ಓದಿ:ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...