Homeಮುಖಪುಟ10 ವರ್ಷ ಅಧಿಕಾರದಲ್ಲಿದ್ದು, ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಿದ್ದರೆ ಅವರು ಮತ್ತೆ ಅಧಿಕಾರಕ್ಕೆ ಬರಬಾರದು: ಕೀರ್ತಿ...

10 ವರ್ಷ ಅಧಿಕಾರದಲ್ಲಿದ್ದು, ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಿದ್ದರೆ ಅವರು ಮತ್ತೆ ಅಧಿಕಾರಕ್ಕೆ ಬರಬಾರದು: ಕೀರ್ತಿ ಆಝಾದ್

- Advertisement -
- Advertisement -

10 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಕೇಸರಿ ಪಕ್ಷವು ‘ಹಿಂದೂಗಳು ಅಪಾಯದಲ್ಲಿದ್ದಾರೆ’ (ಹಿಂದೂ ಖತ್ರೆ ಮೇ) ಎಂದು ಹೇಳುವುದನ್ನು ಮುಂದುವರಿಸಿದರೆ, ಪಕ್ಷ ಅಧಿಕಾರಕ್ಕೆ ಮರಳುವ ಅಗತ್ಯದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತದೆ, ಅಂತಹ ಪಕ್ಷ ಅಧಿಕಾರಕ್ಕೆ ಮತ್ತೆ ಬರಬಾರದು ಎಂದು ಟಿಎಂಸಿ ಅಭ್ಯರ್ಥಿ ಮತ್ತು ಭಾರತದ ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರ ಲೋಕಸಭಾ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ಆಝಾದ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ಕೇಸರಿ ಪಾಳಯಕ್ಕೆ ಜನರ ಮುಂದೆ ಪ್ರಸ್ತುತ ಪಡಿಸಲು ಬೇರೆ ಏನೂ ಇಲ್ಲದ ಕಾರಣ ಯುಸಿಸಿಯನ್ನು(ಏಕರೂಪ ನಾಗರಿಕ ಸಂಹಿತೆಯನ್ನು) ತಂದಿದ್ದು, ಇದು ಚುನಾವಣೆಗಳನ್ನು ಕೋಮುವಾದೀಕರಣಗೊಳಿಸುವ ತಂತ್ರ ಎಂದು ಹೇಳಿದ್ದಾರೆ. ಆಝಾದ್ ಅವರು ಭಾರತದ ವೈವಿಧ್ಯತೆಯನ್ನು ಎತ್ತಿ ಹಿಡಿದಿದ್ದು, ಯುಸಿಸಿಯನ್ನು ವೈವಿಧ್ಯಮಯ ಪ್ರದೇಶದಲ್ಲಿ ಅಳವಡಿಸುವುದರ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಮೊಘಲರ ಆಳ್ವಿಕೆಯಲ್ಲಿ- ಹಿಂದೂಗಳು ಬೆದರಿಕೆಗೆ ಒಳಗಾಗಲಿಲ್ಲ, ಬ್ರಿಟಿಷ್ ಆಳ್ವಿಕೆಯಲ್ಲಿ ಅವರು ಅಪಾಯಕ್ಕೆ ಒಳಗಾಗಲಿಲ್ಲ, ಸ್ವಾತಂತ್ರ್ಯದ ನಂತರದ ಅನೇಕ ಸರ್ಕಾರಗಳ ಅಡಿಯಲ್ಲಿಯೂ ಸಹ ಹಿಂದೂಗಳು ಯಾವುದೇ  ಅಪಾಯವನ್ನು ಎದುರಿಸಲಿಲ್ಲ. ಆದರೆ ಕಳೆದ 10 ವರ್ಷಗಳಿಂದ ಹಿಂದೂ ರಾಷ್ಟ್ರೀಯವಾದಿ ಪಕ್ಷವು ಅಧಿಕಾರದಲ್ಲಿದ್ದಾಗ ಹಿಂದೂಗಳು ಇದ್ದಕ್ಕಿದ್ದಂತೆ ಅಪಾಯಕ್ಕೆ ಒಳಗಾಗುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಪಕ್ಷವು ಹಿಂದೂಗಳನ್ನು ಉಳಿಸಲು ಸಾಧ್ಯವಾಗದಿದ್ದರೆ, ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು. ಬಿಜೆಪಿಗೆ ತನ್ನ 10 ವರ್ಷಗಳ ಸಾಧನೆಯ ವರದಿ ತೋರಿಸಲು ಏನೂ ಇಲ್ಲ ಎಂಬುವುದು ಸತ್ಯ. ಅದಕ್ಕಾಗಿಯೇ ಅವರು ‘ಹಿಂದೂ ಖತ್ರೇ ಮೇ ಹೈಂ’ (ಹಿಂದೂಗಳು ಅಪಾಯದಲ್ಲಿದ್ದಾರೆ) ಎಂದು ಸಮುದಾಯಗಳ ಬಗ್ಗೆ ಭಯದ ಮನೋವಿಕಾರವನ್ನು ಹುಟ್ಟುಹಾಕಿದರು ಎಂದು ಹೇಳಿದ್ದಾರೆ.

1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಸದಸ್ಯರಾದ ಆಝಾದ್, ನಾವು ಕಪ್ ಗೆದ್ದಾಗ, ನಮ್ಮ ತಂಡದಲ್ಲಿ ಹಿಂದೂ ಆಟಗಾರರು ಇದ್ದರು, ಮುಸ್ಲಿಂ ಸಮುದಾಯದ ಸೈಯದ್ ಕಿರ್ಮಾನಿ, ಸಿಖ್ ಸಮುದಾಯದ ಬಲ್ವಿಂದರ್ ಸಂಧು, ಕ್ರಿಶ್ಚಿಯನ್ ಸಮುದಾಯದ ರೋಜರ್ ಬಿನ್ನಿ ಇದ್ದರು. ನಾವೆಲ್ಲರೂ ಒಟ್ಟಾಗಿ ಹೋರಾಡಿ ಭಾರತಕ್ಕೆ ಮೊದಲ ವಿಶ್ವಕಪ್ ಗೆದ್ದುಕೊಟ್ಟಿದ್ದೇವೆ. ಈ ಎಲ್ಲಾ ಧರ್ಮಗಳು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಒಟ್ಟಾಗಿ ಹೋರಾಡಿದವು. ಬಿಜೆಪಿ ಈಗ ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಿದೆ ಎಂದು ಹೇಳಿದ್ದಾರೆ.

ಅನೇಕ ಚುನಾವಣಾ ಪ್ರಚಾರಗಳಲ್ಲಿ ನೀಡಿದ ಭರವಸೆಯ ಹೊರತಾಗಿಯೂ ಯುಸಿಸಿಯನ್ನು ತನ್ನ ಅಧಿಕಾರಾವಧಿಯಲ್ಲಿ ಜಾರಿಗೆ ತರುವಲ್ಲಿ ಬಿಜೆಪಿ ವಿಫಲವಾಗಿದೆ. ಯುಸಿಸಿ ತರುತ್ತೇವೆ ಎಂದು ಬಿಜೆಪಿ ಮೊದಲಿನಿಂದಲೂ ಹೇಳುತ್ತಿದೆ. ಅವರು 1998 ಮತ್ತು 1999ರಲ್ಲೂ ಈ ಭರವಸೆಯನ್ನು ನೀಡಿದ್ದರು. 2014 ರಲ್ಲಿಯೂ UCC ಅವರ ಚುನಾವಣಾ ಕಾರ್ಯಸೂಚಿಯಲ್ಲಿತ್ತು. ಕಳೆದ 1 ದಶಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ  ಅವರಿಗೆ ಯುಸಿಸಿಯನ್ನು ಜಾರಿಗೆ ತರದಂತೆ ತಡೆದಿದ್ದು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನು ಓದಿ:ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...