HomeUncategorizedಹಿಂದೂಸ್ಥಾನ ಯಾರಪ್ಪನದೂ ಅಲ್ಲ: ರಾಹತ್ ಇಂದೋರಿ ಅವರ ಒಂದು ಗಜಲ್ ಓದಿ

ಹಿಂದೂಸ್ಥಾನ ಯಾರಪ್ಪನದೂ ಅಲ್ಲ: ರಾಹತ್ ಇಂದೋರಿ ಅವರ ಒಂದು ಗಜಲ್ ಓದಿ

- Advertisement -
- Advertisement -

ಈಗಿನ ಸುದ್ದಿ ಬರೀ ಲಾಠಿ -ಬೂಟಿನ ಸದ್ದಿನ ಸುದ್ದಿ. ಅಸ್ಸಾಮಿನೊಳಗ ಸುರು ಆದ ಈ ಸದ್ದು ಈಗ ಎಲ್ಲಾ ಕಡೆ ಝಂಕಾರ ಬೀಟ್ಸ ಜೊತೆ ಕೇಳಲಿಕ್ಕೆ ಹತ್ತೇದ.

ಕಾಲೇಜು- ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಬಾಯಿ ಮುಚ್ಚಿಕೊಂಡು ಅಧ್ಯಯನ ಮಾಡಬೇಕು. ಅದನ್ನ ಬಿಟ್ಟುಕೊಟ್ಟು ಪ್ರತಿಭಟನೆ – ಹೋರಾಟ ಎಲ್ಲಾ ಯಾಕ ಮಾಡಬೇಕು? ಅಂತ ಕೆಲವರು ಕೇಳಾಕ ಹತ್ಯಾರ. ನೀವು ಗದ್ದಲಾ ಮಾಡಿದರ ನಾವು ಬಡೀತೇವಿ ಅಂತ ಹೇಳಿ ಅದು ಖರೇ ಅನ್ನೋದನ್ನ ತೋರಿಸಲಿಕ್ಕೆ ಹತ್ಯಾರ.

ಇದೆಲ್ಲಾ ಯಾಕ ಸುರು ಆತು? ಇದು ಪಾರ್ಲಿಮೆಂಟ ಭವನದಿಂದ ಸುರು ಆತು. ಅಲ್ಲೆ ನಮ್ಮನ್ನ ಪ್ರತಿನಿಧಿಸುವ ಮಹಾಮಹೋಪಾಧ್ಯಾಯರೆಲ್ಲಾ ಸೇರಿ `ಹೊರಗಿನಿಂದ ಬಂದವರನ್ನ ಹಿಡದು ಹೊರಗ ಹಾಕೋ’ ಕಾನೂನು ಖಲಬಲಿಯಿಂದ ಪಾಸು ಮಾಡಿದರು. ಅವರ ಪ್ರಕಾರ ಇದು ಅಸ್ಸಾಮು ಮತ್ತು ಇನ್ನು ಕೆಲವು ಪೂರ್ವ ಹಾಗೂ ಈಶಾನ್ಯದ ರಾಜ್ಯಗಳಿಗೆ ಅನ್ವಯ ಆಗಬೇಕಾಗಿತ್ತು. ಆದರ ಅವರಿಗೆ ಭಾಳ ದೊಡ್ಡ ಮನಸ್ಸು ಇದ್ದದ್ದಕ್ಕ ಇಡೀ ದೇಶಕ್ಕ ಲಾಗೂ ಮಾಡೋ ಹಂಗ ಅದನ್ನ ಮಾಡಿದರು.

ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ರಕ್ತ ಬರೋ ಹಂಗ ಹೊಡದು, ಅವರ ಮ್ಯಾಲೆ ದೌರ್ಜನ್ಯ ಮಾಡಿ ಅವಮಾನ ಮಾಡಿದ್ದನ್ನ ಭಾಳ ಜನಾ ಖಂಡಿಸಲಿಕ್ಕೆ ಹತ್ಯಾರ. ಆದರ ಅದನ್ನ ಬೆಂಬಲಿಸೋರ ಸಂಖ್ಯಾನೂ ಏನು ಕಮ್ಮಿ ಇಲ್ಲ. ಅವರು `ಹಂಗ ಆಗಬೇಕು’, `ದಂಡಂ ದಶಗುಣಂ’, `ಜಿಸಕಿ ಲಾಠ, ಉಸಕೀ ಭೈಂಸ್’ ಅಂತೆಲ್ಲಾ ಸಮಾಜ ವಿರೋಧಿ ಮಾಧ್ಯಮಗಳಾದ ವಾಟ್ಸಪ್ಪು – ಫೇಸುಬುಕ್ಕಿನ್ಯಾಗ ಚೀರಲಿಕ್ಕೆ ಹತ್ಯಾರ. ಈಗ ಆಗಲಿಕ್ಕೆ ಹತ್ತಿದ್ದು ಅವರ ಪ್ರಕಾರ ಸರಿ.

ಇದರ ಬಗ್ಗೆ ಒಂದು ಸ್ವಲ್ಪ ಉಲ್ಟಾ ವಿಚಾರ ಮಾಡೋಣ. ಎನ್‍ಡಿಎ ಸರಕಾರದ ಜಾಗಾದಾಗ ಯುಪಿಎ ಇತ್ತು ಅನಕೋರಿ, ಆಗ ಪೊಲೀಸರು ಬನಾರಸ ಹಿಂದೂ ಯುನಿವರ್ಸಿಟಿ ಒಳಗ ಹೊಕ್ಕು ಹುಡುಗ- ಹುಡುಗಿಯರನ್ನು ಹೊಡದಿದ್ದರೂ ಅಂತ ಅನಕೋರಿ ಆವಾಗನೂ ಅವರದು ಇದ ರೀತಿ ಪ್ರತಿಕ್ರಿಯಾ ಇರತಿತ್ತ? ಈ ನುಡಿಮುತ್ತುಗಳನ್ನ ಬಳಸಿ ಅವರು ಇದನ್ನ ಸಮರ್ಥಿಸಿ ಕೊಳ್ಳತಿದ್ದರೇನು?

ಇಷ್ಟರಾಗ ನಮ್ಮ ಮಹಾಮಹಿಮ ಪಂತ ಪ್ರಧಾನರ ಬಾಯಿಯಿಂದ ಒಂದು ಪವಿತ್ರ ವಾಕ್ಯ ಉದರಿ ಬಿದ್ದದ. ಅದೇನಂದರ ‘ಹಿಂಸಾಕೃತ್ಯಗಳನ್ನ ಮಾಡಲಿಕ್ಕೆ ಹತ್ತವರು ಯಾರು ಅಂತ ಎಲ್ಲಾರಿಗೂ ಗೊತ್ತದ. ಅವರವರು ಹಾಕ್ಕೊಂಡ ಅರಿವಿಯಿಂದ ಗೊತ್ತಾಗೇ ಬಿಡತದ’ ಅಂತ ಅಪರೂಪಕ್ಕ ಒಂದು ಖರೇ ಹೇಳ್ಯಾರ. ಯಾಕಂದರ ಹೊಡದವರು, ಬಡದವರು, ಖಾಕಿ ಸಮವಸ್ತ್ರ ಹಾಕಿಕೊಂಡ ಪೊಲೀಸರು. ದೆಹಲಿ ಪೋಲೀಸರು ದೆಹಲಿ ರಾಜ್ಯದ ಕೆಳಗ ಕೆಲಸ ಮಾಡೋರಲ್ಲ. ನೇರವಾಗಿ ಕೇಂದ್ರ ಸರಕಾರದ ಕೈಕೆಳಗ ದುಡಿಯೋರು. ಅವರ ಚಕ್ರವರ್ತಿ ಅಂದರ ಕೇಂದ್ರದ ಗೃಹ ಮಂತ್ರಿ. ಹಿಂಗಾಗಿ ಹಿಂಸೆಯನ್ನ ಆರ್ಡರ್ ಮಾಡಿದವರು ಯಾರು ಅಂತ ಎಲ್ಲಾರಿಗೂ ಗೊತ್ತಾಗತದ.

ಇನ್ನ ಕೆಲವರು ಟೀ ಷರ್ಟು – ಜೀನ್ಸ ಪ್ಯಾಂಟ್ ಹಕ್ಕೊಂಡು, ಪೊಲೀಸರ ಹೆಲ್ಮೇಟು, ಮುಖದ ಮ್ಯಾಲೆ ಮುಸುಗು ಹಾಕಿಹೊಂಡು ಸಣ್ಣಸಣ್ಣ ಹುಡುಗಿಯರನ್ನು ಹುಡುಕಿಹುಡುಕಿ ದೊಡ್ಡ ದೊಡ್ಡ ಲಾಠಿ ತೊಗೊಂಡು ಹೊಡದಾರ. ಅವರ ಅರಿವಿ ನೋಡಿದರ ಅವರು ಯಾರು ಅಂತ ಇನ್ನೋ ಗೊತ್ತಾಗವಲ್ಲದು. ಇನ್ನೇನು ಇನ್ನೊಂದು ಸ್ವಲ್ಪ ದಿವಸದಾಗ ಗೊತ್ತಾಗತದ. ನಮ್ಮ ನಾಯಕರು ದಾಡಿ- ಪೈಜಾಮಾ- ಬುರ್ಖಾ ಮನಸಿನ್ಯಾಗ ಇಟಗೊಂಡು ಹೇಳಿದ್ದರೋ ಏನೋ. ನಮಗಂತೂ ಅಂಥಾ ಅರಿವಿ ಕಾಣಲಿಲ್ಲ.

ಇಷ್ಟು ಎಲ್ಲದಕ್ಕೂ ಕಾರಣ ಏನು? ಹೊರಗಿನಿಂದ ಬಂದವರನ್ನು ಹೊರಗ ಹಾಕೋ ಹೆಸರಿನ್ಯಾಗ ನಮ್ಮ ಅಣ್ಣತಮ್ಮಂದಿರನ್ನ ಬ್ಯಾರೆ ಮಾಡೋ ಪಿತೂರಿ ನಡದದ.

ಭಾರತದ ವಿಭಜನಾ 1947 ಆದಾಗ ಹಾಗೂ ಪಾಕಿಸ್ತಾನದ ವಿಭಜನಾ 1971 ರೊಳಗ ಭಾಳ ಕುಟುಂಬ ಈ ನಾಲ್ಕೂ ದೇಶಗಳ ಗಡಿ ದಾಟಿ ಹೋದರು, ಬಂದರು. ಅವರು ಈಗ 50-70 ವರ್ಷಗಳಿಂದ ಈ ದೇಶದ ನೀರು ಕುಡದು, ಇಲ್ಲೆ ಮಣ್ಣಿನ್ಯಾಗ ಬೆವರು ಸುರಿಸಿಕೊಂಡು, ದುಡಕೊಂಡು, ದುಃಖ ಪಟಕೊಂಡು ಇದ್ದಾರ. ಇಷ್ಟು ವರ್ಷ ಆಗಲಾರದ ಈ ನಿರಾಶ್ರಿತರ ಸಮಸ್ಯಾ ಈಗ ಬಂದಂಗ ಕಾಣತದ. ಯಾಕಂದರ ಈ ದೇಶದಾಗ ಯಾವ ಸಮಸ್ಯೆನೂ ಇಲ್ಲ ಈಗ. ಬಡತನಾ ಇಲ್ಲ, ಹಸಿವು ಇಲ್ಲಾ, ನಿರಕ್ಷರತೆ ಇಲ್ಲಾ, ದೌರ್ಜನ್ಯ ಇಲ್ಲ, ಬಾಲ್ಯವಿವಾಹ ಇಲ್ಲ, ದೇವದಾಸಿ ಪದ್ಧತಿ ಇಲ್ಲ, ಬಾಲ ಕಾರ್ಮಿಕರು ಇಲ್ಲ, ಯಾವುದೇ ರೋಗ – ರುಜಿನ ಇಲ್ಲ, ಎಲ್ಲರಿಗೂ ಬೇಕಾದಷ್ಟು ಶಿಕ್ಷಣ ಸಿಕ್ಕದ, ಸಾಕಷ್ಟು ಉದ್ಯೋಗ ಅವ. ನಮ್ಮ ಆರ್ಥಿಕತೆ ಐದೋ – ಆರೋ ಟ್ರಿಲಿಯನ್ ಡಾಲರ್ ಕಡೆ ದಾಪುಗಾಲು ಹಾಕಲಿಕ್ಕೆ ಹತ್ತೇದ. ಹಿಂಗಾಗಿ ಇವೆಲ್ಲಾ.

ಹಿಂಗಾಗಿ ನಾಗರಿಕತೆ ತಿದ್ದುಪಡಿ ಕಾಯಿದೆ, ರಾಷ್ಟ್ರೀಯ ನಾಗರಿಕರ ದಾಖಲೆಪಟ್ಟಿ ಅಂತೆಲ್ಲಾ ಅವರನ್ನ ಹುಡುಕೋದು, ಕುತಗೀ ಹಿಡದು ಹೊರಗ ಹಾಕೋದು ಇಂಥಾ ವಿಚಾರ ನಡದದ. ಇದು ಉಚ್ಚ ಶಿಕ್ಷಣ ಪಡದ ವಿದ್ಯಾರ್ಥಿಗಳಿಗೆ ಮನಸು ಬರವಲ್ಲತು. ಹಿಂದೂ – ಮುಸ್ಲಿಮ ಸ್ವಾತಂತ್ರ್ಯ ಹೋರಾಟಗಾರರ ಪ್ರಾಣದ ಆಹುತಿ ಪಡದ ಮ್ಯಾಲೆ ಈ ದೇಶ ಪ್ರಜಾತಂತ್ರ ಆಗೇದ. ಈಗ ಅದನ್ನ ಧರ್ಮದ ಆಧಾರದ ಮ್ಯಾಲೆ ಒಡದು ಹಾಕಿದರ ಜನಸತ್ತಾ ಹೋಗಿ ಜನಾ ಸತ್ತಾರ ಆಗತದ ಅಂತ ಅವರ ಚಿಂತಿ.

ಅದಕ್ಕೆ ಈ ದೇಶ ಬರೇ ಹಿಂದೂಗಳದ್ದಲ್ಲ. ಬರೇ ಮೇಲುಜಾತಿಯವರದಲ್ಲ, ಬರೇ ಸಾಹುಕಾರರದ್ದಲ್ಲ. ಬರೇ ಗಂಡಸರದಲ್ಲ, ಬರೇ ಅಧಿಕಾರಸ್ಥರದಲ್ಲ, ಬರೇ ಜಮೀನುದಾರರು, ವ್ಯಾಪಾರಸ್ಥರು, ಕಾರಖಾನಿ ಮಾಲಿಕರದ್ದಲ್ಲ, ಇದು ಎಲ್ಲರಿಗೂ ಸೇರಿದ್ದು. ಐದು ಸಾವಿರ ವರ್ಷದ ಶ್ರೀಮಂತ ಬಹು ಸಾಂಸ್ಕøತಿಕ ನಾಗರಿಕತೆಯನ್ನು ಬರೇ ಐದು ವರ್ಷ ಆಳಲಿಕ್ಕೆ ಪರವಾನಗಿ ಪಡದು ಬಂದಿರೋರು ಹಾಳು ಮಾಡಬಾರದು ಅಂತ ಅವರ ಆಸೆ. ನಮ್ಮ ಯಾರನ್ನೂ ಸಾಕ್ಷ್ಯ, ಪ್ರಮಾಣ, ಗುರುತು, ಪುರಾವೆ ಕೇಳಬ್ಯಾಡರಿ. ಅಣ್ಣ- ತಮ್ಮಂದಿರಿಗೆ ಅಣ್ಣಾ ತಮ್ಮನಂಗ ಇರಲಿಕ್ಕೆ ಬಿಡರಿ ಅಂತ ಅವರ ಬೇಡಿಕೆ.

ಈ ಗುಂಗಿನ್ಯಾಗ ಶಾಯರಿ ಸರದಾರ ರಾಹತ್ ಇಂದೋರಿ ಅವರ ಒಂದು ಗಜಲ್ ಕೇಳೋಣು. ಏನಂತೀ?

ಏನು ?
ವಿರೋಧ ಮಾಡ್ತಾರಂತ?
ಮಾಡ್ಲಿ ಬಿಡು,
ಅವರೇನೀಗ
ನಮಗ ಜೀವಕ್ಕ ಜೀವಾ
ಕೊಡವರದಾರು? ಇಲ್ಲಲಾ?

ಇದೆಲ್ಲಾ ಬರೇ ಹೊಗಿ
ಬರೇ ಒಣಾ ಧೂಳು-ಹೊಗಿ ಅಷ್ಟ.
ಇದನ್ನ ಏನರ
ಮುಗಲು ಅಂತ ತಿಳ್ಕೊಂಡೀಯೇನು ಮತ್ತ?
ಇಲ್ಲಲಾ?

ಒಮ್ಮೆ ಬೆಂಕಿ ಬಿತ್ತೆಪಾ ಅಂದರ
ಕಿವಿ ತುಂಬುವಂಗ
ಕೆಟ್ಟ ಸುದ್ದಿ ಬರ್ತಾವ ನೋಡು
ಮನಿ ಎಲ್ಲಾ ಉರಕೊಂಡು ಬಿದ್ದಿದ್ದು,
ಬಾಯಿಬಾಯಿ ಬಡಕೊಂಡು ಅಳೋದು,
ಗೊತೈತಿಲ್ಲ?
ಇಲ್ಲೇನು ಬರೇ
ನಮ್ಮವ ಮನೀ
ಅದಾವೇನು?
ಇಲ್ಲಲಾ?

ನೋಡಪಾ ಯಪ್ಪಾ
ನಮ್ಮ ಬಾಯಾಗ ಬಂದದ್ದ ಮಾತೆಲ್ಲಾ
ಖರೇನ ಇರತೇತಿ
ನಮ್ಮ ಬಾಯಾಗೇನರ
ನಿಮ್ಮ ನಾಲಿಗಿ ಐತೇನ?
ಇಲ್ಲಲಾ?

ನಮ್ಮ ದುಷ್ಮನಗಳೇನೂ
ಕಮ್ಮಿ ಇಲ್ಲ ಅನ್ನೋದು
ನನಗ ಗೊತೈತಿ
ಆದರ ನಮ್ಮಂಗ ಅವರೇನು
ಮುಟಿಗ್ಯಾಗ
ಜೀವಾ ಇಟಗೊಂಡ
ಹೊಂಟಾರೇನು?
ಇಲ್ಲಲಾ?

ಇವತ್ತೇನು ಗಾದಿ ಮ್ಯಾಲೆ ಕುತುಗೊಂಡು
ಮೆರಿಲ್ಯಾಕ ಹತ್ಯಾರಲಾ
ಅವರು ನಾಳೆ ಇರಂಗಿಲ್ಲಾ
ಅವರು ಇಲ್ಲೆ
ಬಾಡಗೀಲೆ ಇರಾಕ ಬಂದಾವ್ರು
ಏನು ಈ ಮನಿ
ಇವರ ಸ್ವಂತದ್ದೇನು?
ಅಲ್ಲಲಾ?

ಎಲ್ಲಾರ ರಕ್ತ ಬಿದ್ದು ಬಿದ್ದು ಕೆಂಪಾಗೇತಿ
ಈ ಮಣ್ಣು
ಯಾರದರ
ಅಪ್ಪನ ಮನೀದೇನು
ಈ ಹಿಂದುಸ್ತಾನಾ?
ಅಲ್ಲಲಾ?

ವಿಡಿಯೋ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...