Homeಮುಖಪುಟಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

- Advertisement -
- Advertisement -

ಅಮೆರಿಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಶ್ನೆ ಕೇಳಿದ ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಅವರಿಗೆ ಹಿಂದುತ್ವವಾದಿಗಳು ಹಾಗೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸೇರಿದಂತೆ ಬಿಜೆಪಿ ಸದಸ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಕಿರುಕುಳ ನೀಡಿದ್ದಾರೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ಶ್ವೇತಭವನ ಸೋಮವಾರ ಖಂಡನೆ ವ್ಯಕ್ತಪಡಿಸಿದೆ.

ಜೂನ್ 23ರಂದು, ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮೋದಿ ಅವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರ್ತಿ, ”ಹಲವಾರು ಮಾನವ ಹಕ್ಕುಗಳ ಗುಂಪುಗಳು ಮೋದಿ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡುತ್ತಿದೆ ಮತ್ತು ಸರ್ಕಾರದ ವಿರುದ್ಧ ಟೀಕೆ ಮಾಡುವವರನ್ನು ಮೌನಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದೆ” ಎಂದು ಹೇಳುವ ಮೂಲಕ ಗಮನ ಸೆಳೆದಿದ್ದರು.

ಪತ್ರಿಕಾಗೋಷ್ಠಿಯ ನಂತರ ಸಿದ್ಧಿಕಿಯ ಮೇಲೆ ಹಿಂದುತ್ವ ಬೆಂಬಲಿಗರು ಮತ್ತು ಆಡಳಿತಾರೂಢ ಬಿಜೆಪಿ ಸದಸ್ಯರು ಆನ್ಲೈನ್‌ನಲ್ಲಿ ಮುಗಿಬಿದ್ದು, ಅವರನ್ನು ”ಪಾಕಿಸ್ತಾನದ ಪೋಷಕರ ಮಗಳು” ಮತ್ತು ”ಇಸ್ಲಾಮಿಸ್ಟ್‌” ಎಂದು ದಾಳಿ ಮಾಡಿದರು.

ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಗೆ ಉತ್ತರವಾಗಿ ಟ್ವೀಟ್ ಮಾಡಿದ ಸಿದ್ದಿಕಿ, ತನ್ನ ತಂದೆಯೊಂದಿಗೆ ಭಾರತ ಕ್ರಿಕೆಟ್ ತಂಡವನ್ನು ಬೆಂಬಲಿಸುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದರು. ಈ ಮೂಲಕ ತಾನು ಭಾರತದ ವಿರೋಧಿಯಲ್ಲ, ಭಾರತದ ಪರವಾಗಿರುವವಳು ಎಂದು ಸ್ಪಷ್ಟಪಡಿಸಿದಳು.

ಈ ಬಗ್ಗೆ ಸೋಮವಾರ, ಸ್ಟ್ರಾಟೆಜಿಕ್ ಕಮ್ಯುನಿಕೇಷನ್ಸ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಸಂಯೋಜಕ ಜಾನ್ ಕಿರ್ಬಿಯನ್ನು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತೆ ಸಿದ್ದಿಕಿ ಮೇಲೆ ನಡೆದ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದರು. ಆ ಕಿರುಕುಳದ ವರದಿಗಳ ಬಗ್ಗೆ ನಮಗೆ ತಿಳಿದಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಯಾವುದೇ ಸಂದರ್ಭದಲ್ಲೂ ಪತ್ರಕರ್ತರಿಗೆ ಯಾವುದೇ ಕಿರುಕುಳ ನೀಡುವುದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಅದು … ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಮತ್ತು ಇದು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ … ಎಂದು ಹೇಳುವ ಮೂಲಕ ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಯನ್ನು ಖಂಡಿಸಿದ್ದಾರೆ.

”ಅಮೆರಿಕಾ ಸರ್ಕಾರವು ಪತ್ರಿಕಾ ಸ್ವಾತಂತ್ರ್ಯಕ್ಕೆ ಬದ್ಧವಾಗಿದೆ. ಪತ್ರಕರ್ತರು ತಮ್ಮ ಕೆಲಸವನ್ನು ಅವರು ಮಾಡುತ್ತಿರುವಾಗ ಅವರಿಗೆ ಬೆದರಿಕೆ ಅಥವಾ ಕಿರುಕುಳ ನೀಡುವಿದನ್ನು ನಾವು ಖಂಡಿತವಾಗಿಯೂ ಖಂಡಿಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಹೇಳಿದರು.

ಜೂನ್ 24 ರಂದು, ಸಿದ್ದಿಕಿ ಆನ್‌ಲೈನ್ ಕಿರುಕುಳವನ್ನು ಎದುರಿಸಿದ ನಂತರ ದಕ್ಷಿಣ ಏಷ್ಯಾದ ಪತ್ರಕರ್ತರ ಸಂಘವೂ ಸಹ ಬೆಂಬಲವನ್ನು ನೀಡಿತ್ತು. ”ನಮ್ಮ ಸಹೋದ್ಯೋಗಿ ಸಬ್ರಿನಾ ಸಿದ್ದಿಕಿ ಅವರಿಗೆ ಬೆಂಬಲವನ್ನು ವ್ಯಕ್ತಪಡಿಸಲು ನಾವು ಬಯಸುತ್ತೇವೆ, ಅವರು ಅನೇಕ ದಕ್ಷಿಣ ಏಷ್ಯಾದ ಮತ್ತು ಮಹಿಳಾ ಪತ್ರಕರ್ತರಂತೆ, ತಮ್ಮ ಕೆಲಸವನ್ನು ಸರಳವಾಗಿ ಮಾಡುವುದಕ್ಕಾಗಿ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯವು ಯಾವುದೇ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವಾಗಿದೆ ಮತ್ತು ಪಿಎಂ ಮೋದಿ ಅವರು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವನ್ನು ಮುನ್ನಡೆಸುತ್ತಿದ್ದಾರೆ. ಅವರಿಗೆ ಪ್ರಶ್ನೆ ಮಾಡುವುದು ನಮ್ಮ ಕರ್ತವ್ಯ ನಾವು ಅದನ್ನು ಮಾಡಿದ್ದೇವೆ” ಎಂದು ಅಸೋಸಿಯೇಷನ್ ಹೇಳಿದೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಮೋದಿಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಟ್ವಿಟರ್‌ನಲ್ಲಿ ಹಿಂದುತ್ವವಾದಿಗಳಿಂದ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...