Homeಮುಖಪುಟಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

- Advertisement -
- Advertisement -

ಅಮೆರಿಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಶ್ನೆ ಕೇಳಿದ ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಅವರಿಗೆ ಹಿಂದುತ್ವವಾದಿಗಳು ಹಾಗೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸೇರಿದಂತೆ ಬಿಜೆಪಿ ಸದಸ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಕಿರುಕುಳ ನೀಡಿದ್ದಾರೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ಶ್ವೇತಭವನ ಸೋಮವಾರ ಖಂಡನೆ ವ್ಯಕ್ತಪಡಿಸಿದೆ.

ಜೂನ್ 23ರಂದು, ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮೋದಿ ಅವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರ್ತಿ, ”ಹಲವಾರು ಮಾನವ ಹಕ್ಕುಗಳ ಗುಂಪುಗಳು ಮೋದಿ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡುತ್ತಿದೆ ಮತ್ತು ಸರ್ಕಾರದ ವಿರುದ್ಧ ಟೀಕೆ ಮಾಡುವವರನ್ನು ಮೌನಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದೆ” ಎಂದು ಹೇಳುವ ಮೂಲಕ ಗಮನ ಸೆಳೆದಿದ್ದರು.

ಪತ್ರಿಕಾಗೋಷ್ಠಿಯ ನಂತರ ಸಿದ್ಧಿಕಿಯ ಮೇಲೆ ಹಿಂದುತ್ವ ಬೆಂಬಲಿಗರು ಮತ್ತು ಆಡಳಿತಾರೂಢ ಬಿಜೆಪಿ ಸದಸ್ಯರು ಆನ್ಲೈನ್‌ನಲ್ಲಿ ಮುಗಿಬಿದ್ದು, ಅವರನ್ನು ”ಪಾಕಿಸ್ತಾನದ ಪೋಷಕರ ಮಗಳು” ಮತ್ತು ”ಇಸ್ಲಾಮಿಸ್ಟ್‌” ಎಂದು ದಾಳಿ ಮಾಡಿದರು.

ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಗೆ ಉತ್ತರವಾಗಿ ಟ್ವೀಟ್ ಮಾಡಿದ ಸಿದ್ದಿಕಿ, ತನ್ನ ತಂದೆಯೊಂದಿಗೆ ಭಾರತ ಕ್ರಿಕೆಟ್ ತಂಡವನ್ನು ಬೆಂಬಲಿಸುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದರು. ಈ ಮೂಲಕ ತಾನು ಭಾರತದ ವಿರೋಧಿಯಲ್ಲ, ಭಾರತದ ಪರವಾಗಿರುವವಳು ಎಂದು ಸ್ಪಷ್ಟಪಡಿಸಿದಳು.

ಈ ಬಗ್ಗೆ ಸೋಮವಾರ, ಸ್ಟ್ರಾಟೆಜಿಕ್ ಕಮ್ಯುನಿಕೇಷನ್ಸ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಸಂಯೋಜಕ ಜಾನ್ ಕಿರ್ಬಿಯನ್ನು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತೆ ಸಿದ್ದಿಕಿ ಮೇಲೆ ನಡೆದ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದರು. ಆ ಕಿರುಕುಳದ ವರದಿಗಳ ಬಗ್ಗೆ ನಮಗೆ ತಿಳಿದಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಯಾವುದೇ ಸಂದರ್ಭದಲ್ಲೂ ಪತ್ರಕರ್ತರಿಗೆ ಯಾವುದೇ ಕಿರುಕುಳ ನೀಡುವುದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಅದು … ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಮತ್ತು ಇದು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ … ಎಂದು ಹೇಳುವ ಮೂಲಕ ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಯನ್ನು ಖಂಡಿಸಿದ್ದಾರೆ.

”ಅಮೆರಿಕಾ ಸರ್ಕಾರವು ಪತ್ರಿಕಾ ಸ್ವಾತಂತ್ರ್ಯಕ್ಕೆ ಬದ್ಧವಾಗಿದೆ. ಪತ್ರಕರ್ತರು ತಮ್ಮ ಕೆಲಸವನ್ನು ಅವರು ಮಾಡುತ್ತಿರುವಾಗ ಅವರಿಗೆ ಬೆದರಿಕೆ ಅಥವಾ ಕಿರುಕುಳ ನೀಡುವಿದನ್ನು ನಾವು ಖಂಡಿತವಾಗಿಯೂ ಖಂಡಿಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಹೇಳಿದರು.

ಜೂನ್ 24 ರಂದು, ಸಿದ್ದಿಕಿ ಆನ್‌ಲೈನ್ ಕಿರುಕುಳವನ್ನು ಎದುರಿಸಿದ ನಂತರ ದಕ್ಷಿಣ ಏಷ್ಯಾದ ಪತ್ರಕರ್ತರ ಸಂಘವೂ ಸಹ ಬೆಂಬಲವನ್ನು ನೀಡಿತ್ತು. ”ನಮ್ಮ ಸಹೋದ್ಯೋಗಿ ಸಬ್ರಿನಾ ಸಿದ್ದಿಕಿ ಅವರಿಗೆ ಬೆಂಬಲವನ್ನು ವ್ಯಕ್ತಪಡಿಸಲು ನಾವು ಬಯಸುತ್ತೇವೆ, ಅವರು ಅನೇಕ ದಕ್ಷಿಣ ಏಷ್ಯಾದ ಮತ್ತು ಮಹಿಳಾ ಪತ್ರಕರ್ತರಂತೆ, ತಮ್ಮ ಕೆಲಸವನ್ನು ಸರಳವಾಗಿ ಮಾಡುವುದಕ್ಕಾಗಿ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯವು ಯಾವುದೇ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವಾಗಿದೆ ಮತ್ತು ಪಿಎಂ ಮೋದಿ ಅವರು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವನ್ನು ಮುನ್ನಡೆಸುತ್ತಿದ್ದಾರೆ. ಅವರಿಗೆ ಪ್ರಶ್ನೆ ಮಾಡುವುದು ನಮ್ಮ ಕರ್ತವ್ಯ ನಾವು ಅದನ್ನು ಮಾಡಿದ್ದೇವೆ” ಎಂದು ಅಸೋಸಿಯೇಷನ್ ಹೇಳಿದೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಮೋದಿಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಟ್ವಿಟರ್‌ನಲ್ಲಿ ಹಿಂದುತ್ವವಾದಿಗಳಿಂದ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...