Homeಮುಖಪುಟಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

- Advertisement -
- Advertisement -

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾದ್ರಿ ಬಿಪಿನ್ ಬಿಹಾರಿ ನಾಯಕ್, ಅವರ ಪತ್ನಿ ಮತ್ತು ಇತರ ಕೆಲವರೊಂದಿಗೆ ಪರ್ಜಂಗ್ ಗ್ರಾಮದ ಮನೆಯೊಂದರಲ್ಲಿ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದಾಗ ಸುಮಾರು 40 ಜನರ ಗುಂಪೊಂದು ಮನೆಯ ಹೊರಗೆ ಜಮಾಯಿಸಿತ್ತು ಎಂದು ವರದಿ ಹೇಳಿದೆ.

“ಗುಂಪು ನಾಯಕ್ ಅವರನ್ನು ಮನೆಯಿಂದ ಹೊರಗೆ ಬರಲು ಒತ್ತಾಯಿಸಿತು. ಪ್ರಾರ್ಥನೆ ಮುಗಿದ ನಂತರ ಹೊರಗೆ ಬರುವುದಾಗಿ ನಾಯಕ್ ಹೇಳಿದಾಗ, ಗುಂಪು ಮನೆಯೊಳಗೆ ಪ್ರವೇಶಿಸಿತು. ನಂತರ ಮನೆಯೊಳಗಿದ್ದ ಎಲ್ಲರಿಗೂ ಹೊಡೆಯಲು ಪ್ರಾರಂಭಿಸಿತು. ನಮ್ಮೊಂದಿಗೆ ಪ್ರಾರ್ಥನೆ ಮಾಡುತ್ತಿದ್ದ ಏಳು ಕುಟುಂಬಗಳು ಇದ್ದವು. ನನ್ನ ಮಕ್ಕಳು ಮತ್ತು ನಾನು ಮನೆಯಿಂದ ಹೊರಗೆ ಓಡಿಹೋಗುವಲ್ಲಿ ಯಶಸ್ವಿಯಾದೆವು ಮತ್ತು ಕಿರಿದಾದ ಓಣಿಯ ಮೂಲಕ ಹತ್ತಿರದ ಪೊಲೀಸ್ ಠಾಣೆಯ ಕಡೆಗೆ ಧಾವಿಸಿದೆವು” ಎಂದು ಪಾದ್ರಿ ನಾಯಕ್ ಅವರ ಪತ್ನಿ ವಂದನಾ ಹೇಳಿದ್ದಾಗಿ ಮಕ್ತೂಬ್ ಮೀಡಿಯಾ ಉಲ್ಲೇಖಿಸಿದೆ.

“ತನ್ನನ್ನು ಮನೆಯಿಂದ ಹೊರಗೆಳೆದು ದೇಹದ ಯಾವುದೇ ಜಾಗವೂ ಬಿಡದೆ ಥಳಿಸಿದರು. ಕಪಾಳಮೋಕ್ಷ ಮಾಡಿದರು. ಕೋಲುಗಳಿಂದ ಹೊಡೆದರು. ಹಣೆಗೆ ಮುಖಕ್ಕೆ ಕುಂಕುಮ ಬಳಿದು, ಕುತ್ತಿಗೆಗೆ ಚಪ್ಪಲಿ ಹಾರ ಹಾಕಿದರು. ನಂತರ ಬಜರಂಗದಳ ಸದಸ್ಯರು ಮತ್ತು ಕೆಲವು ಗ್ರಾಮಸ್ಥರು ಗ್ರಾಮದಾದ್ಯಂತ ಮೆರವಣಿಗೆ ಮಾಡಿದರು. ಇದು ಸುಮಾರು ಎರಡು ಗಂಟೆಗಳ ಕಾಲ ಮುಂದುವರೆಯಿತು” ಎಂದು ಪಾದ್ರಿ ನಾಯಕ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಈ ನಡುವೆ, ವಂದನಾ ಪೊಲೀಸ್ ಠಾಣೆಯಲ್ಲಿ ತನ್ನ ಗಂಡನನ್ನು ರಕ್ಷಿಸುವಂತೆ ಅಧಿಕಾರಿಗಳನ್ನು ಬೇಡಿಕೊಳ್ಳುತ್ತಿದ್ದರು. ಸುಮಾರು ಎರಡು ಗಂಟೆಗಳ ನಂತರವೇ ಪೊಲೀಸರು ಗ್ರಾಮವನ್ನು ತಲುಪಿದರು ಎಂದು ವರದಿ ಹೇಳಿದೆ.

“ತಾನು ಪದೇ ಪದೇ ವಿನಂತಿಸಿಕೊಂಡರೂ, ಪೊಲೀಸರು ಆರಂಭದಲ್ಲಿ ಗ್ರಾಮದಲ್ಲಿ ಯಾರೂ ಇಲ್ಲ ಎಂದು ಹೇಳಿ ತನ್ನನ್ನು ದಾರಿ ತಪ್ಪಿಸಿದರು ಎಂದು ವಂದನಾ ತಿಳಿಸಿದ್ದಾರೆ. ಕೊನೆಗೆ ನಾನು ಪೊಲೀಸರೊಂದಿಗೆ ಗ್ರಾಮಕ್ಕೆ ತೆರಳಿದಾಗ ಕಂಡದ್ದು ಭಯಾನಕ ದೃಶ್ಯವಾಗಿತ್ತು ಎಂದಿದ್ದಾರೆ.

“ನನ್ನ ಗಂಡನನ್ನು ಗ್ರಾಮದ ಹನುಮಾನ್ ದೇವಸ್ಥಾನಕ್ಕೆ ಕಟ್ಟಿ ಹಾಕಲಾಗಿತ್ತು. ಅವರ ಎರಡೂ ಕೈಗಳನ್ನು ರಾಡ್‌ನ ಹಿಂದೆ ಕಟ್ಟಲಾಗಿತ್ತು. ಅವರಿಗೆ ಹಸುವಿನ ಸಗಣಿ ತಿನ್ನುವಂತೆ ಒತ್ತಾಯಿಸುತ್ತಿದ್ದರು. ತೀವ್ರ ರಕ್ತಸ್ರಾವವಾಗುತ್ತಿತ್ತು. ಜನರು ಅವರಿಗೆ ಕಪಾಳಮೋಕ್ಷ ಮಾಡಿ ಜೈ ಶ್ರೀ ರಾಮ್ ಕೂಗುವಂತೆ ಒತ್ತಾಯಿಸುತ್ತಿದ್ದರು” ಎಂದು ವಂದನಾ ವಿವರಿಸಿದ್ದಾರೆ.

ಪೊಲೀಸರ ಮಧ್ಯಪ್ರವೇಶದ ಹೊರತಾಗಿಯೂ, ಗುಂಪು ತಕ್ಷಣ ಹಲ್ಲೆ ನಡೆಸುವುದನ್ನು ನಿಲ್ಲಿಸಿರಲಿಲ್ಲ. ಕೊನೆಗೆ ಪೊಲೀಸರು ನಾಯಕ್ ಅವರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ವರದಿ ಉಲ್ಲೇಖಿಸಿದೆ.

ಠಾಣೆಗೆ ಕರೆದೊಯ್ದ ಮೇಲೆ ಯಾವುದೇ ವೈದ್ಯಕೀಯ ಚಿಕಿತ್ಸೆ ನೀಡದೆ ನಾಯಕ್ ಅವರನ್ನು ಸುಮಾರು ಒಂದು ಗಂಟೆಗಳ ಕಾಲ ಸುಮ್ಮನೆ ಕೂರಿಸಲಾಗಿತ್ತು. ನಾನು ಠಾಣೆಗೆ ತಲುಪುವ ಹೊತ್ತಿಗೆ, ಅವರು ಅಲ್ಲಿಯೇ ಮೂರ್ಛೆ ಹೋಗಿದ್ದರು. ಅವರು ಬರಿಗಾಲಿನಲ್ಲಿದ್ದರು ಮತ್ತು ಮುಖದ ಮೇಲೆ ಕುಂಕುಮವಿತ್ತು. ಅವರು ಭಯಾನಕ ಸ್ಥಿತಿಯಲ್ಲಿದ್ದರು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.

ನಾಯಕ್ ಬಲವಂತದ ಧಾರ್ಮಿಕ ಮತಾಂತರಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗುಂಪು ಹಲ್ಲೆ ನಡೆಸಲಾಗಿದೆ. ಗ್ರಾಮದ ಸರಪಂಚ್ ಮಾಡಿದ ಮತಾಂತರದ ಆರೋಪಗಳನ್ನು ಉಲ್ಲೇಖಿಸಿ ಪೊಲೀಸರು ಈ ವಿಷಯವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ್ದರು ಮತ್ತು ಆರಂಭದಲ್ಲಿ ದೂರು ದಾಖಲಿಸಲು ನಿರಾಕರಿಸಿದ್ದರು ಎಂದು ಸಾಮಾಜಿಕ ಕಾರ್ಯಕರ್ತ ಆರೋಪಿಸಿದ್ದಾರೆ.

ಪದೇ ಪದೇ ಒತ್ತಾಯಿಸಿದ ನಂತರ ಕೊನೆಗೆ ದೂರು ದಾಖಲಿಸಲಾಯಿತಾದರೂ, ಬಲವಂತದ ಮತಾಂತರದ ಆರೋಪ ಹೊರಿಸಿ ನಾಯಕ್ ವಿರುದ್ಧ ಪ್ರತಿ ಎಫ್‌ಐಆರ್ ಕೂಡ ದಾಖಲಿಸಲಾಗಿದೆ ಎಂದು ವಂದನಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...