Homeಮುಖಪುಟಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

- Advertisement -
- Advertisement -

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾದ್ರಿ ಬಿಪಿನ್ ಬಿಹಾರಿ ನಾಯಕ್, ಅವರ ಪತ್ನಿ ಮತ್ತು ಇತರ ಕೆಲವರೊಂದಿಗೆ ಪರ್ಜಂಗ್ ಗ್ರಾಮದ ಮನೆಯೊಂದರಲ್ಲಿ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದಾಗ ಸುಮಾರು 40 ಜನರ ಗುಂಪೊಂದು ಮನೆಯ ಹೊರಗೆ ಜಮಾಯಿಸಿತ್ತು ಎಂದು ವರದಿ ಹೇಳಿದೆ.

“ಗುಂಪು ನಾಯಕ್ ಅವರನ್ನು ಮನೆಯಿಂದ ಹೊರಗೆ ಬರಲು ಒತ್ತಾಯಿಸಿತು. ಪ್ರಾರ್ಥನೆ ಮುಗಿದ ನಂತರ ಹೊರಗೆ ಬರುವುದಾಗಿ ನಾಯಕ್ ಹೇಳಿದಾಗ, ಗುಂಪು ಮನೆಯೊಳಗೆ ಪ್ರವೇಶಿಸಿತು. ನಂತರ ಮನೆಯೊಳಗಿದ್ದ ಎಲ್ಲರಿಗೂ ಹೊಡೆಯಲು ಪ್ರಾರಂಭಿಸಿತು. ನಮ್ಮೊಂದಿಗೆ ಪ್ರಾರ್ಥನೆ ಮಾಡುತ್ತಿದ್ದ ಏಳು ಕುಟುಂಬಗಳು ಇದ್ದವು. ನನ್ನ ಮಕ್ಕಳು ಮತ್ತು ನಾನು ಮನೆಯಿಂದ ಹೊರಗೆ ಓಡಿಹೋಗುವಲ್ಲಿ ಯಶಸ್ವಿಯಾದೆವು ಮತ್ತು ಕಿರಿದಾದ ಓಣಿಯ ಮೂಲಕ ಹತ್ತಿರದ ಪೊಲೀಸ್ ಠಾಣೆಯ ಕಡೆಗೆ ಧಾವಿಸಿದೆವು” ಎಂದು ಪಾದ್ರಿ ನಾಯಕ್ ಅವರ ಪತ್ನಿ ವಂದನಾ ಹೇಳಿದ್ದಾಗಿ ಮಕ್ತೂಬ್ ಮೀಡಿಯಾ ಉಲ್ಲೇಖಿಸಿದೆ.

“ತನ್ನನ್ನು ಮನೆಯಿಂದ ಹೊರಗೆಳೆದು ದೇಹದ ಯಾವುದೇ ಜಾಗವೂ ಬಿಡದೆ ಥಳಿಸಿದರು. ಕಪಾಳಮೋಕ್ಷ ಮಾಡಿದರು. ಕೋಲುಗಳಿಂದ ಹೊಡೆದರು. ಹಣೆಗೆ ಮುಖಕ್ಕೆ ಕುಂಕುಮ ಬಳಿದು, ಕುತ್ತಿಗೆಗೆ ಚಪ್ಪಲಿ ಹಾರ ಹಾಕಿದರು. ನಂತರ ಬಜರಂಗದಳ ಸದಸ್ಯರು ಮತ್ತು ಕೆಲವು ಗ್ರಾಮಸ್ಥರು ಗ್ರಾಮದಾದ್ಯಂತ ಮೆರವಣಿಗೆ ಮಾಡಿದರು. ಇದು ಸುಮಾರು ಎರಡು ಗಂಟೆಗಳ ಕಾಲ ಮುಂದುವರೆಯಿತು” ಎಂದು ಪಾದ್ರಿ ನಾಯಕ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಈ ನಡುವೆ, ವಂದನಾ ಪೊಲೀಸ್ ಠಾಣೆಯಲ್ಲಿ ತನ್ನ ಗಂಡನನ್ನು ರಕ್ಷಿಸುವಂತೆ ಅಧಿಕಾರಿಗಳನ್ನು ಬೇಡಿಕೊಳ್ಳುತ್ತಿದ್ದರು. ಸುಮಾರು ಎರಡು ಗಂಟೆಗಳ ನಂತರವೇ ಪೊಲೀಸರು ಗ್ರಾಮವನ್ನು ತಲುಪಿದರು ಎಂದು ವರದಿ ಹೇಳಿದೆ.

“ತಾನು ಪದೇ ಪದೇ ವಿನಂತಿಸಿಕೊಂಡರೂ, ಪೊಲೀಸರು ಆರಂಭದಲ್ಲಿ ಗ್ರಾಮದಲ್ಲಿ ಯಾರೂ ಇಲ್ಲ ಎಂದು ಹೇಳಿ ತನ್ನನ್ನು ದಾರಿ ತಪ್ಪಿಸಿದರು ಎಂದು ವಂದನಾ ತಿಳಿಸಿದ್ದಾರೆ. ಕೊನೆಗೆ ನಾನು ಪೊಲೀಸರೊಂದಿಗೆ ಗ್ರಾಮಕ್ಕೆ ತೆರಳಿದಾಗ ಕಂಡದ್ದು ಭಯಾನಕ ದೃಶ್ಯವಾಗಿತ್ತು ಎಂದಿದ್ದಾರೆ.

“ನನ್ನ ಗಂಡನನ್ನು ಗ್ರಾಮದ ಹನುಮಾನ್ ದೇವಸ್ಥಾನಕ್ಕೆ ಕಟ್ಟಿ ಹಾಕಲಾಗಿತ್ತು. ಅವರ ಎರಡೂ ಕೈಗಳನ್ನು ರಾಡ್‌ನ ಹಿಂದೆ ಕಟ್ಟಲಾಗಿತ್ತು. ಅವರಿಗೆ ಹಸುವಿನ ಸಗಣಿ ತಿನ್ನುವಂತೆ ಒತ್ತಾಯಿಸುತ್ತಿದ್ದರು. ತೀವ್ರ ರಕ್ತಸ್ರಾವವಾಗುತ್ತಿತ್ತು. ಜನರು ಅವರಿಗೆ ಕಪಾಳಮೋಕ್ಷ ಮಾಡಿ ಜೈ ಶ್ರೀ ರಾಮ್ ಕೂಗುವಂತೆ ಒತ್ತಾಯಿಸುತ್ತಿದ್ದರು” ಎಂದು ವಂದನಾ ವಿವರಿಸಿದ್ದಾರೆ.

ಪೊಲೀಸರ ಮಧ್ಯಪ್ರವೇಶದ ಹೊರತಾಗಿಯೂ, ಗುಂಪು ತಕ್ಷಣ ಹಲ್ಲೆ ನಡೆಸುವುದನ್ನು ನಿಲ್ಲಿಸಿರಲಿಲ್ಲ. ಕೊನೆಗೆ ಪೊಲೀಸರು ನಾಯಕ್ ಅವರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ವರದಿ ಉಲ್ಲೇಖಿಸಿದೆ.

ಠಾಣೆಗೆ ಕರೆದೊಯ್ದ ಮೇಲೆ ಯಾವುದೇ ವೈದ್ಯಕೀಯ ಚಿಕಿತ್ಸೆ ನೀಡದೆ ನಾಯಕ್ ಅವರನ್ನು ಸುಮಾರು ಒಂದು ಗಂಟೆಗಳ ಕಾಲ ಸುಮ್ಮನೆ ಕೂರಿಸಲಾಗಿತ್ತು. ನಾನು ಠಾಣೆಗೆ ತಲುಪುವ ಹೊತ್ತಿಗೆ, ಅವರು ಅಲ್ಲಿಯೇ ಮೂರ್ಛೆ ಹೋಗಿದ್ದರು. ಅವರು ಬರಿಗಾಲಿನಲ್ಲಿದ್ದರು ಮತ್ತು ಮುಖದ ಮೇಲೆ ಕುಂಕುಮವಿತ್ತು. ಅವರು ಭಯಾನಕ ಸ್ಥಿತಿಯಲ್ಲಿದ್ದರು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.

ನಾಯಕ್ ಬಲವಂತದ ಧಾರ್ಮಿಕ ಮತಾಂತರಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗುಂಪು ಹಲ್ಲೆ ನಡೆಸಲಾಗಿದೆ. ಗ್ರಾಮದ ಸರಪಂಚ್ ಮಾಡಿದ ಮತಾಂತರದ ಆರೋಪಗಳನ್ನು ಉಲ್ಲೇಖಿಸಿ ಪೊಲೀಸರು ಈ ವಿಷಯವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ್ದರು ಮತ್ತು ಆರಂಭದಲ್ಲಿ ದೂರು ದಾಖಲಿಸಲು ನಿರಾಕರಿಸಿದ್ದರು ಎಂದು ಸಾಮಾಜಿಕ ಕಾರ್ಯಕರ್ತ ಆರೋಪಿಸಿದ್ದಾರೆ.

ಪದೇ ಪದೇ ಒತ್ತಾಯಿಸಿದ ನಂತರ ಕೊನೆಗೆ ದೂರು ದಾಖಲಿಸಲಾಯಿತಾದರೂ, ಬಲವಂತದ ಮತಾಂತರದ ಆರೋಪ ಹೊರಿಸಿ ನಾಯಕ್ ವಿರುದ್ಧ ಪ್ರತಿ ಎಫ್‌ಐಆರ್ ಕೂಡ ದಾಖಲಿಸಲಾಗಿದೆ ಎಂದು ವಂದನಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...