Homeಮುಖಪುಟಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

- Advertisement -
- Advertisement -

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾದ್ರಿ ಬಿಪಿನ್ ಬಿಹಾರಿ ನಾಯಕ್, ಅವರ ಪತ್ನಿ ಮತ್ತು ಇತರ ಕೆಲವರೊಂದಿಗೆ ಪರ್ಜಂಗ್ ಗ್ರಾಮದ ಮನೆಯೊಂದರಲ್ಲಿ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದಾಗ ಸುಮಾರು 40 ಜನರ ಗುಂಪೊಂದು ಮನೆಯ ಹೊರಗೆ ಜಮಾಯಿಸಿತ್ತು ಎಂದು ವರದಿ ಹೇಳಿದೆ.

“ಗುಂಪು ನಾಯಕ್ ಅವರನ್ನು ಮನೆಯಿಂದ ಹೊರಗೆ ಬರಲು ಒತ್ತಾಯಿಸಿತು. ಪ್ರಾರ್ಥನೆ ಮುಗಿದ ನಂತರ ಹೊರಗೆ ಬರುವುದಾಗಿ ನಾಯಕ್ ಹೇಳಿದಾಗ, ಗುಂಪು ಮನೆಯೊಳಗೆ ಪ್ರವೇಶಿಸಿತು. ನಂತರ ಮನೆಯೊಳಗಿದ್ದ ಎಲ್ಲರಿಗೂ ಹೊಡೆಯಲು ಪ್ರಾರಂಭಿಸಿತು. ನಮ್ಮೊಂದಿಗೆ ಪ್ರಾರ್ಥನೆ ಮಾಡುತ್ತಿದ್ದ ಏಳು ಕುಟುಂಬಗಳು ಇದ್ದವು. ನನ್ನ ಮಕ್ಕಳು ಮತ್ತು ನಾನು ಮನೆಯಿಂದ ಹೊರಗೆ ಓಡಿಹೋಗುವಲ್ಲಿ ಯಶಸ್ವಿಯಾದೆವು ಮತ್ತು ಕಿರಿದಾದ ಓಣಿಯ ಮೂಲಕ ಹತ್ತಿರದ ಪೊಲೀಸ್ ಠಾಣೆಯ ಕಡೆಗೆ ಧಾವಿಸಿದೆವು” ಎಂದು ಪಾದ್ರಿ ನಾಯಕ್ ಅವರ ಪತ್ನಿ ವಂದನಾ ಹೇಳಿದ್ದಾಗಿ ಮಕ್ತೂಬ್ ಮೀಡಿಯಾ ಉಲ್ಲೇಖಿಸಿದೆ.

“ತನ್ನನ್ನು ಮನೆಯಿಂದ ಹೊರಗೆಳೆದು ದೇಹದ ಯಾವುದೇ ಜಾಗವೂ ಬಿಡದೆ ಥಳಿಸಿದರು. ಕಪಾಳಮೋಕ್ಷ ಮಾಡಿದರು. ಕೋಲುಗಳಿಂದ ಹೊಡೆದರು. ಹಣೆಗೆ ಮುಖಕ್ಕೆ ಕುಂಕುಮ ಬಳಿದು, ಕುತ್ತಿಗೆಗೆ ಚಪ್ಪಲಿ ಹಾರ ಹಾಕಿದರು. ನಂತರ ಬಜರಂಗದಳ ಸದಸ್ಯರು ಮತ್ತು ಕೆಲವು ಗ್ರಾಮಸ್ಥರು ಗ್ರಾಮದಾದ್ಯಂತ ಮೆರವಣಿಗೆ ಮಾಡಿದರು. ಇದು ಸುಮಾರು ಎರಡು ಗಂಟೆಗಳ ಕಾಲ ಮುಂದುವರೆಯಿತು” ಎಂದು ಪಾದ್ರಿ ನಾಯಕ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಈ ನಡುವೆ, ವಂದನಾ ಪೊಲೀಸ್ ಠಾಣೆಯಲ್ಲಿ ತನ್ನ ಗಂಡನನ್ನು ರಕ್ಷಿಸುವಂತೆ ಅಧಿಕಾರಿಗಳನ್ನು ಬೇಡಿಕೊಳ್ಳುತ್ತಿದ್ದರು. ಸುಮಾರು ಎರಡು ಗಂಟೆಗಳ ನಂತರವೇ ಪೊಲೀಸರು ಗ್ರಾಮವನ್ನು ತಲುಪಿದರು ಎಂದು ವರದಿ ಹೇಳಿದೆ.

“ತಾನು ಪದೇ ಪದೇ ವಿನಂತಿಸಿಕೊಂಡರೂ, ಪೊಲೀಸರು ಆರಂಭದಲ್ಲಿ ಗ್ರಾಮದಲ್ಲಿ ಯಾರೂ ಇಲ್ಲ ಎಂದು ಹೇಳಿ ತನ್ನನ್ನು ದಾರಿ ತಪ್ಪಿಸಿದರು ಎಂದು ವಂದನಾ ತಿಳಿಸಿದ್ದಾರೆ. ಕೊನೆಗೆ ನಾನು ಪೊಲೀಸರೊಂದಿಗೆ ಗ್ರಾಮಕ್ಕೆ ತೆರಳಿದಾಗ ಕಂಡದ್ದು ಭಯಾನಕ ದೃಶ್ಯವಾಗಿತ್ತು ಎಂದಿದ್ದಾರೆ.

“ನನ್ನ ಗಂಡನನ್ನು ಗ್ರಾಮದ ಹನುಮಾನ್ ದೇವಸ್ಥಾನಕ್ಕೆ ಕಟ್ಟಿ ಹಾಕಲಾಗಿತ್ತು. ಅವರ ಎರಡೂ ಕೈಗಳನ್ನು ರಾಡ್‌ನ ಹಿಂದೆ ಕಟ್ಟಲಾಗಿತ್ತು. ಅವರಿಗೆ ಹಸುವಿನ ಸಗಣಿ ತಿನ್ನುವಂತೆ ಒತ್ತಾಯಿಸುತ್ತಿದ್ದರು. ತೀವ್ರ ರಕ್ತಸ್ರಾವವಾಗುತ್ತಿತ್ತು. ಜನರು ಅವರಿಗೆ ಕಪಾಳಮೋಕ್ಷ ಮಾಡಿ ಜೈ ಶ್ರೀ ರಾಮ್ ಕೂಗುವಂತೆ ಒತ್ತಾಯಿಸುತ್ತಿದ್ದರು” ಎಂದು ವಂದನಾ ವಿವರಿಸಿದ್ದಾರೆ.

ಪೊಲೀಸರ ಮಧ್ಯಪ್ರವೇಶದ ಹೊರತಾಗಿಯೂ, ಗುಂಪು ತಕ್ಷಣ ಹಲ್ಲೆ ನಡೆಸುವುದನ್ನು ನಿಲ್ಲಿಸಿರಲಿಲ್ಲ. ಕೊನೆಗೆ ಪೊಲೀಸರು ನಾಯಕ್ ಅವರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ವರದಿ ಉಲ್ಲೇಖಿಸಿದೆ.

ಠಾಣೆಗೆ ಕರೆದೊಯ್ದ ಮೇಲೆ ಯಾವುದೇ ವೈದ್ಯಕೀಯ ಚಿಕಿತ್ಸೆ ನೀಡದೆ ನಾಯಕ್ ಅವರನ್ನು ಸುಮಾರು ಒಂದು ಗಂಟೆಗಳ ಕಾಲ ಸುಮ್ಮನೆ ಕೂರಿಸಲಾಗಿತ್ತು. ನಾನು ಠಾಣೆಗೆ ತಲುಪುವ ಹೊತ್ತಿಗೆ, ಅವರು ಅಲ್ಲಿಯೇ ಮೂರ್ಛೆ ಹೋಗಿದ್ದರು. ಅವರು ಬರಿಗಾಲಿನಲ್ಲಿದ್ದರು ಮತ್ತು ಮುಖದ ಮೇಲೆ ಕುಂಕುಮವಿತ್ತು. ಅವರು ಭಯಾನಕ ಸ್ಥಿತಿಯಲ್ಲಿದ್ದರು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.

ನಾಯಕ್ ಬಲವಂತದ ಧಾರ್ಮಿಕ ಮತಾಂತರಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗುಂಪು ಹಲ್ಲೆ ನಡೆಸಲಾಗಿದೆ. ಗ್ರಾಮದ ಸರಪಂಚ್ ಮಾಡಿದ ಮತಾಂತರದ ಆರೋಪಗಳನ್ನು ಉಲ್ಲೇಖಿಸಿ ಪೊಲೀಸರು ಈ ವಿಷಯವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ್ದರು ಮತ್ತು ಆರಂಭದಲ್ಲಿ ದೂರು ದಾಖಲಿಸಲು ನಿರಾಕರಿಸಿದ್ದರು ಎಂದು ಸಾಮಾಜಿಕ ಕಾರ್ಯಕರ್ತ ಆರೋಪಿಸಿದ್ದಾರೆ.

ಪದೇ ಪದೇ ಒತ್ತಾಯಿಸಿದ ನಂತರ ಕೊನೆಗೆ ದೂರು ದಾಖಲಿಸಲಾಯಿತಾದರೂ, ಬಲವಂತದ ಮತಾಂತರದ ಆರೋಪ ಹೊರಿಸಿ ನಾಯಕ್ ವಿರುದ್ಧ ಪ್ರತಿ ಎಫ್‌ಐಆರ್ ಕೂಡ ದಾಖಲಿಸಲಾಗಿದೆ ಎಂದು ವಂದನಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...