Homeಮುಖಪುಟಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

- Advertisement -
- Advertisement -

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾದ್ರಿ ಬಿಪಿನ್ ಬಿಹಾರಿ ನಾಯಕ್, ಅವರ ಪತ್ನಿ ಮತ್ತು ಇತರ ಕೆಲವರೊಂದಿಗೆ ಪರ್ಜಂಗ್ ಗ್ರಾಮದ ಮನೆಯೊಂದರಲ್ಲಿ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದಾಗ ಸುಮಾರು 40 ಜನರ ಗುಂಪೊಂದು ಮನೆಯ ಹೊರಗೆ ಜಮಾಯಿಸಿತ್ತು ಎಂದು ವರದಿ ಹೇಳಿದೆ.

“ಗುಂಪು ನಾಯಕ್ ಅವರನ್ನು ಮನೆಯಿಂದ ಹೊರಗೆ ಬರಲು ಒತ್ತಾಯಿಸಿತು. ಪ್ರಾರ್ಥನೆ ಮುಗಿದ ನಂತರ ಹೊರಗೆ ಬರುವುದಾಗಿ ನಾಯಕ್ ಹೇಳಿದಾಗ, ಗುಂಪು ಮನೆಯೊಳಗೆ ಪ್ರವೇಶಿಸಿತು. ನಂತರ ಮನೆಯೊಳಗಿದ್ದ ಎಲ್ಲರಿಗೂ ಹೊಡೆಯಲು ಪ್ರಾರಂಭಿಸಿತು. ನಮ್ಮೊಂದಿಗೆ ಪ್ರಾರ್ಥನೆ ಮಾಡುತ್ತಿದ್ದ ಏಳು ಕುಟುಂಬಗಳು ಇದ್ದವು. ನನ್ನ ಮಕ್ಕಳು ಮತ್ತು ನಾನು ಮನೆಯಿಂದ ಹೊರಗೆ ಓಡಿಹೋಗುವಲ್ಲಿ ಯಶಸ್ವಿಯಾದೆವು ಮತ್ತು ಕಿರಿದಾದ ಓಣಿಯ ಮೂಲಕ ಹತ್ತಿರದ ಪೊಲೀಸ್ ಠಾಣೆಯ ಕಡೆಗೆ ಧಾವಿಸಿದೆವು” ಎಂದು ಪಾದ್ರಿ ನಾಯಕ್ ಅವರ ಪತ್ನಿ ವಂದನಾ ಹೇಳಿದ್ದಾಗಿ ಮಕ್ತೂಬ್ ಮೀಡಿಯಾ ಉಲ್ಲೇಖಿಸಿದೆ.

“ತನ್ನನ್ನು ಮನೆಯಿಂದ ಹೊರಗೆಳೆದು ದೇಹದ ಯಾವುದೇ ಜಾಗವೂ ಬಿಡದೆ ಥಳಿಸಿದರು. ಕಪಾಳಮೋಕ್ಷ ಮಾಡಿದರು. ಕೋಲುಗಳಿಂದ ಹೊಡೆದರು. ಹಣೆಗೆ ಮುಖಕ್ಕೆ ಕುಂಕುಮ ಬಳಿದು, ಕುತ್ತಿಗೆಗೆ ಚಪ್ಪಲಿ ಹಾರ ಹಾಕಿದರು. ನಂತರ ಬಜರಂಗದಳ ಸದಸ್ಯರು ಮತ್ತು ಕೆಲವು ಗ್ರಾಮಸ್ಥರು ಗ್ರಾಮದಾದ್ಯಂತ ಮೆರವಣಿಗೆ ಮಾಡಿದರು. ಇದು ಸುಮಾರು ಎರಡು ಗಂಟೆಗಳ ಕಾಲ ಮುಂದುವರೆಯಿತು” ಎಂದು ಪಾದ್ರಿ ನಾಯಕ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಈ ನಡುವೆ, ವಂದನಾ ಪೊಲೀಸ್ ಠಾಣೆಯಲ್ಲಿ ತನ್ನ ಗಂಡನನ್ನು ರಕ್ಷಿಸುವಂತೆ ಅಧಿಕಾರಿಗಳನ್ನು ಬೇಡಿಕೊಳ್ಳುತ್ತಿದ್ದರು. ಸುಮಾರು ಎರಡು ಗಂಟೆಗಳ ನಂತರವೇ ಪೊಲೀಸರು ಗ್ರಾಮವನ್ನು ತಲುಪಿದರು ಎಂದು ವರದಿ ಹೇಳಿದೆ.

“ತಾನು ಪದೇ ಪದೇ ವಿನಂತಿಸಿಕೊಂಡರೂ, ಪೊಲೀಸರು ಆರಂಭದಲ್ಲಿ ಗ್ರಾಮದಲ್ಲಿ ಯಾರೂ ಇಲ್ಲ ಎಂದು ಹೇಳಿ ತನ್ನನ್ನು ದಾರಿ ತಪ್ಪಿಸಿದರು ಎಂದು ವಂದನಾ ತಿಳಿಸಿದ್ದಾರೆ. ಕೊನೆಗೆ ನಾನು ಪೊಲೀಸರೊಂದಿಗೆ ಗ್ರಾಮಕ್ಕೆ ತೆರಳಿದಾಗ ಕಂಡದ್ದು ಭಯಾನಕ ದೃಶ್ಯವಾಗಿತ್ತು ಎಂದಿದ್ದಾರೆ.

“ನನ್ನ ಗಂಡನನ್ನು ಗ್ರಾಮದ ಹನುಮಾನ್ ದೇವಸ್ಥಾನಕ್ಕೆ ಕಟ್ಟಿ ಹಾಕಲಾಗಿತ್ತು. ಅವರ ಎರಡೂ ಕೈಗಳನ್ನು ರಾಡ್‌ನ ಹಿಂದೆ ಕಟ್ಟಲಾಗಿತ್ತು. ಅವರಿಗೆ ಹಸುವಿನ ಸಗಣಿ ತಿನ್ನುವಂತೆ ಒತ್ತಾಯಿಸುತ್ತಿದ್ದರು. ತೀವ್ರ ರಕ್ತಸ್ರಾವವಾಗುತ್ತಿತ್ತು. ಜನರು ಅವರಿಗೆ ಕಪಾಳಮೋಕ್ಷ ಮಾಡಿ ಜೈ ಶ್ರೀ ರಾಮ್ ಕೂಗುವಂತೆ ಒತ್ತಾಯಿಸುತ್ತಿದ್ದರು” ಎಂದು ವಂದನಾ ವಿವರಿಸಿದ್ದಾರೆ.

ಪೊಲೀಸರ ಮಧ್ಯಪ್ರವೇಶದ ಹೊರತಾಗಿಯೂ, ಗುಂಪು ತಕ್ಷಣ ಹಲ್ಲೆ ನಡೆಸುವುದನ್ನು ನಿಲ್ಲಿಸಿರಲಿಲ್ಲ. ಕೊನೆಗೆ ಪೊಲೀಸರು ನಾಯಕ್ ಅವರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ವರದಿ ಉಲ್ಲೇಖಿಸಿದೆ.

ಠಾಣೆಗೆ ಕರೆದೊಯ್ದ ಮೇಲೆ ಯಾವುದೇ ವೈದ್ಯಕೀಯ ಚಿಕಿತ್ಸೆ ನೀಡದೆ ನಾಯಕ್ ಅವರನ್ನು ಸುಮಾರು ಒಂದು ಗಂಟೆಗಳ ಕಾಲ ಸುಮ್ಮನೆ ಕೂರಿಸಲಾಗಿತ್ತು. ನಾನು ಠಾಣೆಗೆ ತಲುಪುವ ಹೊತ್ತಿಗೆ, ಅವರು ಅಲ್ಲಿಯೇ ಮೂರ್ಛೆ ಹೋಗಿದ್ದರು. ಅವರು ಬರಿಗಾಲಿನಲ್ಲಿದ್ದರು ಮತ್ತು ಮುಖದ ಮೇಲೆ ಕುಂಕುಮವಿತ್ತು. ಅವರು ಭಯಾನಕ ಸ್ಥಿತಿಯಲ್ಲಿದ್ದರು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.

ನಾಯಕ್ ಬಲವಂತದ ಧಾರ್ಮಿಕ ಮತಾಂತರಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗುಂಪು ಹಲ್ಲೆ ನಡೆಸಲಾಗಿದೆ. ಗ್ರಾಮದ ಸರಪಂಚ್ ಮಾಡಿದ ಮತಾಂತರದ ಆರೋಪಗಳನ್ನು ಉಲ್ಲೇಖಿಸಿ ಪೊಲೀಸರು ಈ ವಿಷಯವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ್ದರು ಮತ್ತು ಆರಂಭದಲ್ಲಿ ದೂರು ದಾಖಲಿಸಲು ನಿರಾಕರಿಸಿದ್ದರು ಎಂದು ಸಾಮಾಜಿಕ ಕಾರ್ಯಕರ್ತ ಆರೋಪಿಸಿದ್ದಾರೆ.

ಪದೇ ಪದೇ ಒತ್ತಾಯಿಸಿದ ನಂತರ ಕೊನೆಗೆ ದೂರು ದಾಖಲಿಸಲಾಯಿತಾದರೂ, ಬಲವಂತದ ಮತಾಂತರದ ಆರೋಪ ಹೊರಿಸಿ ನಾಯಕ್ ವಿರುದ್ಧ ಪ್ರತಿ ಎಫ್‌ಐಆರ್ ಕೂಡ ದಾಖಲಿಸಲಾಗಿದೆ ಎಂದು ವಂದನಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...