Homeಮುಖಪುಟಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

- Advertisement -
- Advertisement -

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ.

ಮೇಲಧಿಕಾರಿಗಳು ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಗುರುವಾರ ಬೆಳಿಗ್ಗೆ ಸೈದಾಬಾದ್‌ನ ಪೂರ್ವ ವಲಯ ಡಿಸಿಪಿ ಕಚೇರಿಯಲ್ಲಿ ಬಲಪಂಥೀಯ ಸಂಘಟನೆಯ ಹಲವಾರು ಕಾರ್ಯಕರ್ತರು ಅಯ್ಯಪ್ಪ ಭಕ್ತರ ಗುಂಪಿನೊಂದಿಗೆ ಪ್ರತಿಭಟನೆ ನಡೆಸಿದರು.

ಪೊಲೀಸ್ ಮುಖ್ಯ ಕಚೇರಿಯ ಹಿಂದಿನ ಸೂಚನೆಗಳನ್ನು ಉಲ್ಲೇಖಿಸಿ, ಅಧಿಕಾರಿ ಕೂದಲು ಮತ್ತು ಗಡ್ಡ ಬೆಳೆಸಲು, ಕಪ್ಪು ಧಾರ್ಮಿಕ ಉಡುಪು ಧರಿಸಲು ಅಥವಾ ಆಚರಣೆಯ ಭಾಗವಾಗಿ ಬರಿಗಾಲಿನಲ್ಲಿ ಇರಲು ಅನುಮತಿ ನಿರಾಕರಿಸಿದರು. ಯಾವುದೇ ಪೊಲೀಸ್ ಸಿಬ್ಬಂದಿ ಕರ್ತವ್ಯದ ಸಮಯದಲ್ಲಿ ಧಾರ್ಮಿಕ ಉಡುಪು ಅಥವಾ ಪದ್ಧತಿಗಳನ್ನು ಅಳವಡಿಸಿಕೊಳ್ಳಬಾರದು ಎಂದು ಅದು ಹೇಳಿದೆ. ದೀಕ್ಷೆ ಆಚರಿಸಲು ಬಯಸುವವರು ರಜೆಗಾಗಿ ಅರ್ಜಿ ಸಲ್ಲಿಸಬೇಕು ಎಂದು ಮೆಮೋನಲ್ಲಿ ಸಲಹೆ ನೀಡಿದ್ದಾರೆ.

ಈ ಜ್ಞಾಪಕ ಪತ್ರಕ್ಕೆ ತಕ್ಷಣವೇ ರಾಜಕೀಯ ನಾಯಕರು ಮತ್ತು ಹಿಂದೂ ಸಂಘಟನೆಗಳಿಂದ ತೀವ್ರ ಪ್ರತಿಕ್ರಿಯೆಗಳು ಬಂದವು.

ಅಮಾನತುಗೊಂಡ ಬಿಜೆಪಿ ಶಾಸಕ ಟಿ ರಾಜಾ ಸಿಂಗ್, ಇಂತಹ ನಿರ್ಬಂಧಗಳು ಹಿಂದೂಗಳಿಗೆ ಮಾತ್ರ ಅನ್ವಯಿಸುತ್ತವೆಯೇ ಎಂದು ಪ್ರಶ್ನಿಸಿದ್ದಾರೆ. “ಒಂದು ನಿರ್ದಿಷ್ಟ ಸಮುದಾಯದದ ಸಿಬ್ಬಂದಿಗೆ ಅವರ ಹಬ್ಬಗಳ ಸಮಯದಲ್ಲಿ ಧಾರ್ಮಿಕ ಪದ್ಧತಿಗಳನ್ನು ಅನುಸರಿಸಲು ಅವಕಾಶವಿದೆ” ಎಂದು ಆರೋಪಿಸಿದರು.

“ಹಿಂದೂ ಹಬ್ಬಗಳಿದ್ದಾಗ, ಸ್ವಾಮಿ ಅಯ್ಯಪ್ಪ ದೀಕ್ಷೆಯ ಆಚರಣೆಯ ಸಮಯದಲ್ಲಿ ಮಾತ್ರ ಅವರು ಅಂತಹ ನಿಯಮಗಳನ್ನು ಹೊರಡಿಸುತ್ತಾರೆ. ರೇವಂತ್ ರೆಡ್ಡಿಗೆ ನನ್ನ ವಿನಂತಿಯೆಂದರೆ, ನಿಯಮಗಳು ಎಲ್ಲಾ ಧರ್ಮಗಳಿಗೂ ಸಮಾನವಾಗಿ ಅನ್ವಯವಾಗಬೇಕು” ಎಂದು ಅವರು ವೀಡಿಯೊ ಸಂದೇಶದಲ್ಲಿ ಹೇಳಿದರು.

ತೆಲಂಗಾಣ ಬಿಜೆಪಿ ನಾಯಕರು ಧ್ವನಿಗೂಡಿಸಿ, ಬಿಜೆಪಿ ರಾಜ್ಯ ಮುಖ್ಯಸ್ಥ ರಾಮಚಂದರ್ ರಾವ್ ಅವರು ಈ ನಿರ್ಧಾರವನ್ನು ಹಿಂದೂ ವಿರೋಧಿ, ತಾರತಮ್ಯ ಎಂದು ಕರೆದರು.

“ಸರ್ಕಾರವು ಪೊಲೀಸ್ ಸಿಬ್ಬಂದಿಯ ವೈಯಕ್ತಿಕ ಧಾರ್ಮಿಕ ಆಚರಣೆಗಳಲ್ಲಿ ಹಸ್ತಕ್ಷೇಪ ಮಾಡಬಾರದು, ಇತರ ಸಂದರ್ಭಗಳಲ್ಲಿ ಇದೇ ರೀತಿಯ ನಿರ್ಬಂಧಗಳನ್ನು ಈ ಹಿಂದೆ ಏಕೆ ಜಾರಿಗೊಳಿಸಲಾಗಿಲ್ಲ” ಎಂದು ಅವರು ಪ್ರಶ್ನಿಸಿದರು.

ಡಿಜಿಪಿ ಕಚೇರಿ ಮುಂದೆ ಪ್ರತಿಭಟನೆ

ಕರ್ತವ್ಯ ಸಮಯದಲ್ಲಿ ಸಬ್ ಇನ್ಸ್‌ಪೆಕ್ಟರ್ ಒಬ್ಬರಿಗೆ ‘ಅಯ್ಯಪ್ಪ ದೀಕ್ಷಾ’ ವೇಷಭೂಷಣ ಧರಿಸಲು ಅನುಮತಿ ನಿರಾಕರಿಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ಗುರುವಾರ ತೆಲಂಗಾಣ ಡಿಜಿಪಿ ಕಚೇರಿ ತಲುಪಿತು. ಅಯ್ಯಪ್ಪ ಸ್ವಾಮಿ ಭಕ್ತರ ಗುಂಪು ಮೆಮೊ ವಿರುದ್ಧ ಪ್ರತಿಭಟನೆ ನಡೆಸಿತು. ಪ್ರತಿಭಟನಾಕಾರರು ಡಿಜಿಪಿ ಕಚೇರಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಆದರೆ, ಡಿಜಿಪಿ ಕಚೇರಿಯ ದ್ವಾರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದ ಪೊಲೀಸರು ಅವರನ್ನು ತಡೆದರು.

ಪ್ರತಿಭಟನಾಕಾರರು ತೆಲಂಗಾಣ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಮೆಮೊ ನೀಡಿದ್ದಕ್ಕಾಗಿ ಹೆಚ್ಚುವರಿ ಡಿಸಿಪಿ (ಆಗ್ನೇಯ) ಕೆ. ಶ್ರೀಕಾಂತ್ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...