Homeಮುಖಪುಟಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

- Advertisement -
- Advertisement -

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ.

ಮೇಲಧಿಕಾರಿಗಳು ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಗುರುವಾರ ಬೆಳಿಗ್ಗೆ ಸೈದಾಬಾದ್‌ನ ಪೂರ್ವ ವಲಯ ಡಿಸಿಪಿ ಕಚೇರಿಯಲ್ಲಿ ಬಲಪಂಥೀಯ ಸಂಘಟನೆಯ ಹಲವಾರು ಕಾರ್ಯಕರ್ತರು ಅಯ್ಯಪ್ಪ ಭಕ್ತರ ಗುಂಪಿನೊಂದಿಗೆ ಪ್ರತಿಭಟನೆ ನಡೆಸಿದರು.

ಪೊಲೀಸ್ ಮುಖ್ಯ ಕಚೇರಿಯ ಹಿಂದಿನ ಸೂಚನೆಗಳನ್ನು ಉಲ್ಲೇಖಿಸಿ, ಅಧಿಕಾರಿ ಕೂದಲು ಮತ್ತು ಗಡ್ಡ ಬೆಳೆಸಲು, ಕಪ್ಪು ಧಾರ್ಮಿಕ ಉಡುಪು ಧರಿಸಲು ಅಥವಾ ಆಚರಣೆಯ ಭಾಗವಾಗಿ ಬರಿಗಾಲಿನಲ್ಲಿ ಇರಲು ಅನುಮತಿ ನಿರಾಕರಿಸಿದರು. ಯಾವುದೇ ಪೊಲೀಸ್ ಸಿಬ್ಬಂದಿ ಕರ್ತವ್ಯದ ಸಮಯದಲ್ಲಿ ಧಾರ್ಮಿಕ ಉಡುಪು ಅಥವಾ ಪದ್ಧತಿಗಳನ್ನು ಅಳವಡಿಸಿಕೊಳ್ಳಬಾರದು ಎಂದು ಅದು ಹೇಳಿದೆ. ದೀಕ್ಷೆ ಆಚರಿಸಲು ಬಯಸುವವರು ರಜೆಗಾಗಿ ಅರ್ಜಿ ಸಲ್ಲಿಸಬೇಕು ಎಂದು ಮೆಮೋನಲ್ಲಿ ಸಲಹೆ ನೀಡಿದ್ದಾರೆ.

ಈ ಜ್ಞಾಪಕ ಪತ್ರಕ್ಕೆ ತಕ್ಷಣವೇ ರಾಜಕೀಯ ನಾಯಕರು ಮತ್ತು ಹಿಂದೂ ಸಂಘಟನೆಗಳಿಂದ ತೀವ್ರ ಪ್ರತಿಕ್ರಿಯೆಗಳು ಬಂದವು.

ಅಮಾನತುಗೊಂಡ ಬಿಜೆಪಿ ಶಾಸಕ ಟಿ ರಾಜಾ ಸಿಂಗ್, ಇಂತಹ ನಿರ್ಬಂಧಗಳು ಹಿಂದೂಗಳಿಗೆ ಮಾತ್ರ ಅನ್ವಯಿಸುತ್ತವೆಯೇ ಎಂದು ಪ್ರಶ್ನಿಸಿದ್ದಾರೆ. “ಒಂದು ನಿರ್ದಿಷ್ಟ ಸಮುದಾಯದದ ಸಿಬ್ಬಂದಿಗೆ ಅವರ ಹಬ್ಬಗಳ ಸಮಯದಲ್ಲಿ ಧಾರ್ಮಿಕ ಪದ್ಧತಿಗಳನ್ನು ಅನುಸರಿಸಲು ಅವಕಾಶವಿದೆ” ಎಂದು ಆರೋಪಿಸಿದರು.

“ಹಿಂದೂ ಹಬ್ಬಗಳಿದ್ದಾಗ, ಸ್ವಾಮಿ ಅಯ್ಯಪ್ಪ ದೀಕ್ಷೆಯ ಆಚರಣೆಯ ಸಮಯದಲ್ಲಿ ಮಾತ್ರ ಅವರು ಅಂತಹ ನಿಯಮಗಳನ್ನು ಹೊರಡಿಸುತ್ತಾರೆ. ರೇವಂತ್ ರೆಡ್ಡಿಗೆ ನನ್ನ ವಿನಂತಿಯೆಂದರೆ, ನಿಯಮಗಳು ಎಲ್ಲಾ ಧರ್ಮಗಳಿಗೂ ಸಮಾನವಾಗಿ ಅನ್ವಯವಾಗಬೇಕು” ಎಂದು ಅವರು ವೀಡಿಯೊ ಸಂದೇಶದಲ್ಲಿ ಹೇಳಿದರು.

ತೆಲಂಗಾಣ ಬಿಜೆಪಿ ನಾಯಕರು ಧ್ವನಿಗೂಡಿಸಿ, ಬಿಜೆಪಿ ರಾಜ್ಯ ಮುಖ್ಯಸ್ಥ ರಾಮಚಂದರ್ ರಾವ್ ಅವರು ಈ ನಿರ್ಧಾರವನ್ನು ಹಿಂದೂ ವಿರೋಧಿ, ತಾರತಮ್ಯ ಎಂದು ಕರೆದರು.

“ಸರ್ಕಾರವು ಪೊಲೀಸ್ ಸಿಬ್ಬಂದಿಯ ವೈಯಕ್ತಿಕ ಧಾರ್ಮಿಕ ಆಚರಣೆಗಳಲ್ಲಿ ಹಸ್ತಕ್ಷೇಪ ಮಾಡಬಾರದು, ಇತರ ಸಂದರ್ಭಗಳಲ್ಲಿ ಇದೇ ರೀತಿಯ ನಿರ್ಬಂಧಗಳನ್ನು ಈ ಹಿಂದೆ ಏಕೆ ಜಾರಿಗೊಳಿಸಲಾಗಿಲ್ಲ” ಎಂದು ಅವರು ಪ್ರಶ್ನಿಸಿದರು.

ಡಿಜಿಪಿ ಕಚೇರಿ ಮುಂದೆ ಪ್ರತಿಭಟನೆ

ಕರ್ತವ್ಯ ಸಮಯದಲ್ಲಿ ಸಬ್ ಇನ್ಸ್‌ಪೆಕ್ಟರ್ ಒಬ್ಬರಿಗೆ ‘ಅಯ್ಯಪ್ಪ ದೀಕ್ಷಾ’ ವೇಷಭೂಷಣ ಧರಿಸಲು ಅನುಮತಿ ನಿರಾಕರಿಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ಗುರುವಾರ ತೆಲಂಗಾಣ ಡಿಜಿಪಿ ಕಚೇರಿ ತಲುಪಿತು. ಅಯ್ಯಪ್ಪ ಸ್ವಾಮಿ ಭಕ್ತರ ಗುಂಪು ಮೆಮೊ ವಿರುದ್ಧ ಪ್ರತಿಭಟನೆ ನಡೆಸಿತು. ಪ್ರತಿಭಟನಾಕಾರರು ಡಿಜಿಪಿ ಕಚೇರಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಆದರೆ, ಡಿಜಿಪಿ ಕಚೇರಿಯ ದ್ವಾರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದ ಪೊಲೀಸರು ಅವರನ್ನು ತಡೆದರು.

ಪ್ರತಿಭಟನಾಕಾರರು ತೆಲಂಗಾಣ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಮೆಮೊ ನೀಡಿದ್ದಕ್ಕಾಗಿ ಹೆಚ್ಚುವರಿ ಡಿಸಿಪಿ (ಆಗ್ನೇಯ) ಕೆ. ಶ್ರೀಕಾಂತ್ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...