Homeಮುಖಪುಟಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

- Advertisement -
- Advertisement -

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ.

ಮೇಲಧಿಕಾರಿಗಳು ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಗುರುವಾರ ಬೆಳಿಗ್ಗೆ ಸೈದಾಬಾದ್‌ನ ಪೂರ್ವ ವಲಯ ಡಿಸಿಪಿ ಕಚೇರಿಯಲ್ಲಿ ಬಲಪಂಥೀಯ ಸಂಘಟನೆಯ ಹಲವಾರು ಕಾರ್ಯಕರ್ತರು ಅಯ್ಯಪ್ಪ ಭಕ್ತರ ಗುಂಪಿನೊಂದಿಗೆ ಪ್ರತಿಭಟನೆ ನಡೆಸಿದರು.

ಪೊಲೀಸ್ ಮುಖ್ಯ ಕಚೇರಿಯ ಹಿಂದಿನ ಸೂಚನೆಗಳನ್ನು ಉಲ್ಲೇಖಿಸಿ, ಅಧಿಕಾರಿ ಕೂದಲು ಮತ್ತು ಗಡ್ಡ ಬೆಳೆಸಲು, ಕಪ್ಪು ಧಾರ್ಮಿಕ ಉಡುಪು ಧರಿಸಲು ಅಥವಾ ಆಚರಣೆಯ ಭಾಗವಾಗಿ ಬರಿಗಾಲಿನಲ್ಲಿ ಇರಲು ಅನುಮತಿ ನಿರಾಕರಿಸಿದರು. ಯಾವುದೇ ಪೊಲೀಸ್ ಸಿಬ್ಬಂದಿ ಕರ್ತವ್ಯದ ಸಮಯದಲ್ಲಿ ಧಾರ್ಮಿಕ ಉಡುಪು ಅಥವಾ ಪದ್ಧತಿಗಳನ್ನು ಅಳವಡಿಸಿಕೊಳ್ಳಬಾರದು ಎಂದು ಅದು ಹೇಳಿದೆ. ದೀಕ್ಷೆ ಆಚರಿಸಲು ಬಯಸುವವರು ರಜೆಗಾಗಿ ಅರ್ಜಿ ಸಲ್ಲಿಸಬೇಕು ಎಂದು ಮೆಮೋನಲ್ಲಿ ಸಲಹೆ ನೀಡಿದ್ದಾರೆ.

ಈ ಜ್ಞಾಪಕ ಪತ್ರಕ್ಕೆ ತಕ್ಷಣವೇ ರಾಜಕೀಯ ನಾಯಕರು ಮತ್ತು ಹಿಂದೂ ಸಂಘಟನೆಗಳಿಂದ ತೀವ್ರ ಪ್ರತಿಕ್ರಿಯೆಗಳು ಬಂದವು.

ಅಮಾನತುಗೊಂಡ ಬಿಜೆಪಿ ಶಾಸಕ ಟಿ ರಾಜಾ ಸಿಂಗ್, ಇಂತಹ ನಿರ್ಬಂಧಗಳು ಹಿಂದೂಗಳಿಗೆ ಮಾತ್ರ ಅನ್ವಯಿಸುತ್ತವೆಯೇ ಎಂದು ಪ್ರಶ್ನಿಸಿದ್ದಾರೆ. “ಒಂದು ನಿರ್ದಿಷ್ಟ ಸಮುದಾಯದದ ಸಿಬ್ಬಂದಿಗೆ ಅವರ ಹಬ್ಬಗಳ ಸಮಯದಲ್ಲಿ ಧಾರ್ಮಿಕ ಪದ್ಧತಿಗಳನ್ನು ಅನುಸರಿಸಲು ಅವಕಾಶವಿದೆ” ಎಂದು ಆರೋಪಿಸಿದರು.

“ಹಿಂದೂ ಹಬ್ಬಗಳಿದ್ದಾಗ, ಸ್ವಾಮಿ ಅಯ್ಯಪ್ಪ ದೀಕ್ಷೆಯ ಆಚರಣೆಯ ಸಮಯದಲ್ಲಿ ಮಾತ್ರ ಅವರು ಅಂತಹ ನಿಯಮಗಳನ್ನು ಹೊರಡಿಸುತ್ತಾರೆ. ರೇವಂತ್ ರೆಡ್ಡಿಗೆ ನನ್ನ ವಿನಂತಿಯೆಂದರೆ, ನಿಯಮಗಳು ಎಲ್ಲಾ ಧರ್ಮಗಳಿಗೂ ಸಮಾನವಾಗಿ ಅನ್ವಯವಾಗಬೇಕು” ಎಂದು ಅವರು ವೀಡಿಯೊ ಸಂದೇಶದಲ್ಲಿ ಹೇಳಿದರು.

ತೆಲಂಗಾಣ ಬಿಜೆಪಿ ನಾಯಕರು ಧ್ವನಿಗೂಡಿಸಿ, ಬಿಜೆಪಿ ರಾಜ್ಯ ಮುಖ್ಯಸ್ಥ ರಾಮಚಂದರ್ ರಾವ್ ಅವರು ಈ ನಿರ್ಧಾರವನ್ನು ಹಿಂದೂ ವಿರೋಧಿ, ತಾರತಮ್ಯ ಎಂದು ಕರೆದರು.

“ಸರ್ಕಾರವು ಪೊಲೀಸ್ ಸಿಬ್ಬಂದಿಯ ವೈಯಕ್ತಿಕ ಧಾರ್ಮಿಕ ಆಚರಣೆಗಳಲ್ಲಿ ಹಸ್ತಕ್ಷೇಪ ಮಾಡಬಾರದು, ಇತರ ಸಂದರ್ಭಗಳಲ್ಲಿ ಇದೇ ರೀತಿಯ ನಿರ್ಬಂಧಗಳನ್ನು ಈ ಹಿಂದೆ ಏಕೆ ಜಾರಿಗೊಳಿಸಲಾಗಿಲ್ಲ” ಎಂದು ಅವರು ಪ್ರಶ್ನಿಸಿದರು.

ಡಿಜಿಪಿ ಕಚೇರಿ ಮುಂದೆ ಪ್ರತಿಭಟನೆ

ಕರ್ತವ್ಯ ಸಮಯದಲ್ಲಿ ಸಬ್ ಇನ್ಸ್‌ಪೆಕ್ಟರ್ ಒಬ್ಬರಿಗೆ ‘ಅಯ್ಯಪ್ಪ ದೀಕ್ಷಾ’ ವೇಷಭೂಷಣ ಧರಿಸಲು ಅನುಮತಿ ನಿರಾಕರಿಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ಗುರುವಾರ ತೆಲಂಗಾಣ ಡಿಜಿಪಿ ಕಚೇರಿ ತಲುಪಿತು. ಅಯ್ಯಪ್ಪ ಸ್ವಾಮಿ ಭಕ್ತರ ಗುಂಪು ಮೆಮೊ ವಿರುದ್ಧ ಪ್ರತಿಭಟನೆ ನಡೆಸಿತು. ಪ್ರತಿಭಟನಾಕಾರರು ಡಿಜಿಪಿ ಕಚೇರಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಆದರೆ, ಡಿಜಿಪಿ ಕಚೇರಿಯ ದ್ವಾರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದ ಪೊಲೀಸರು ಅವರನ್ನು ತಡೆದರು.

ಪ್ರತಿಭಟನಾಕಾರರು ತೆಲಂಗಾಣ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಮೆಮೊ ನೀಡಿದ್ದಕ್ಕಾಗಿ ಹೆಚ್ಚುವರಿ ಡಿಸಿಪಿ (ಆಗ್ನೇಯ) ಕೆ. ಶ್ರೀಕಾಂತ್ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...