Homeಮುಖಪುಟಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

- Advertisement -
- Advertisement -

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ.

ಮೇಲಧಿಕಾರಿಗಳು ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಗುರುವಾರ ಬೆಳಿಗ್ಗೆ ಸೈದಾಬಾದ್‌ನ ಪೂರ್ವ ವಲಯ ಡಿಸಿಪಿ ಕಚೇರಿಯಲ್ಲಿ ಬಲಪಂಥೀಯ ಸಂಘಟನೆಯ ಹಲವಾರು ಕಾರ್ಯಕರ್ತರು ಅಯ್ಯಪ್ಪ ಭಕ್ತರ ಗುಂಪಿನೊಂದಿಗೆ ಪ್ರತಿಭಟನೆ ನಡೆಸಿದರು.

ಪೊಲೀಸ್ ಮುಖ್ಯ ಕಚೇರಿಯ ಹಿಂದಿನ ಸೂಚನೆಗಳನ್ನು ಉಲ್ಲೇಖಿಸಿ, ಅಧಿಕಾರಿ ಕೂದಲು ಮತ್ತು ಗಡ್ಡ ಬೆಳೆಸಲು, ಕಪ್ಪು ಧಾರ್ಮಿಕ ಉಡುಪು ಧರಿಸಲು ಅಥವಾ ಆಚರಣೆಯ ಭಾಗವಾಗಿ ಬರಿಗಾಲಿನಲ್ಲಿ ಇರಲು ಅನುಮತಿ ನಿರಾಕರಿಸಿದರು. ಯಾವುದೇ ಪೊಲೀಸ್ ಸಿಬ್ಬಂದಿ ಕರ್ತವ್ಯದ ಸಮಯದಲ್ಲಿ ಧಾರ್ಮಿಕ ಉಡುಪು ಅಥವಾ ಪದ್ಧತಿಗಳನ್ನು ಅಳವಡಿಸಿಕೊಳ್ಳಬಾರದು ಎಂದು ಅದು ಹೇಳಿದೆ. ದೀಕ್ಷೆ ಆಚರಿಸಲು ಬಯಸುವವರು ರಜೆಗಾಗಿ ಅರ್ಜಿ ಸಲ್ಲಿಸಬೇಕು ಎಂದು ಮೆಮೋನಲ್ಲಿ ಸಲಹೆ ನೀಡಿದ್ದಾರೆ.

ಈ ಜ್ಞಾಪಕ ಪತ್ರಕ್ಕೆ ತಕ್ಷಣವೇ ರಾಜಕೀಯ ನಾಯಕರು ಮತ್ತು ಹಿಂದೂ ಸಂಘಟನೆಗಳಿಂದ ತೀವ್ರ ಪ್ರತಿಕ್ರಿಯೆಗಳು ಬಂದವು.

ಅಮಾನತುಗೊಂಡ ಬಿಜೆಪಿ ಶಾಸಕ ಟಿ ರಾಜಾ ಸಿಂಗ್, ಇಂತಹ ನಿರ್ಬಂಧಗಳು ಹಿಂದೂಗಳಿಗೆ ಮಾತ್ರ ಅನ್ವಯಿಸುತ್ತವೆಯೇ ಎಂದು ಪ್ರಶ್ನಿಸಿದ್ದಾರೆ. “ಒಂದು ನಿರ್ದಿಷ್ಟ ಸಮುದಾಯದದ ಸಿಬ್ಬಂದಿಗೆ ಅವರ ಹಬ್ಬಗಳ ಸಮಯದಲ್ಲಿ ಧಾರ್ಮಿಕ ಪದ್ಧತಿಗಳನ್ನು ಅನುಸರಿಸಲು ಅವಕಾಶವಿದೆ” ಎಂದು ಆರೋಪಿಸಿದರು.

“ಹಿಂದೂ ಹಬ್ಬಗಳಿದ್ದಾಗ, ಸ್ವಾಮಿ ಅಯ್ಯಪ್ಪ ದೀಕ್ಷೆಯ ಆಚರಣೆಯ ಸಮಯದಲ್ಲಿ ಮಾತ್ರ ಅವರು ಅಂತಹ ನಿಯಮಗಳನ್ನು ಹೊರಡಿಸುತ್ತಾರೆ. ರೇವಂತ್ ರೆಡ್ಡಿಗೆ ನನ್ನ ವಿನಂತಿಯೆಂದರೆ, ನಿಯಮಗಳು ಎಲ್ಲಾ ಧರ್ಮಗಳಿಗೂ ಸಮಾನವಾಗಿ ಅನ್ವಯವಾಗಬೇಕು” ಎಂದು ಅವರು ವೀಡಿಯೊ ಸಂದೇಶದಲ್ಲಿ ಹೇಳಿದರು.

ತೆಲಂಗಾಣ ಬಿಜೆಪಿ ನಾಯಕರು ಧ್ವನಿಗೂಡಿಸಿ, ಬಿಜೆಪಿ ರಾಜ್ಯ ಮುಖ್ಯಸ್ಥ ರಾಮಚಂದರ್ ರಾವ್ ಅವರು ಈ ನಿರ್ಧಾರವನ್ನು ಹಿಂದೂ ವಿರೋಧಿ, ತಾರತಮ್ಯ ಎಂದು ಕರೆದರು.

“ಸರ್ಕಾರವು ಪೊಲೀಸ್ ಸಿಬ್ಬಂದಿಯ ವೈಯಕ್ತಿಕ ಧಾರ್ಮಿಕ ಆಚರಣೆಗಳಲ್ಲಿ ಹಸ್ತಕ್ಷೇಪ ಮಾಡಬಾರದು, ಇತರ ಸಂದರ್ಭಗಳಲ್ಲಿ ಇದೇ ರೀತಿಯ ನಿರ್ಬಂಧಗಳನ್ನು ಈ ಹಿಂದೆ ಏಕೆ ಜಾರಿಗೊಳಿಸಲಾಗಿಲ್ಲ” ಎಂದು ಅವರು ಪ್ರಶ್ನಿಸಿದರು.

ಡಿಜಿಪಿ ಕಚೇರಿ ಮುಂದೆ ಪ್ರತಿಭಟನೆ

ಕರ್ತವ್ಯ ಸಮಯದಲ್ಲಿ ಸಬ್ ಇನ್ಸ್‌ಪೆಕ್ಟರ್ ಒಬ್ಬರಿಗೆ ‘ಅಯ್ಯಪ್ಪ ದೀಕ್ಷಾ’ ವೇಷಭೂಷಣ ಧರಿಸಲು ಅನುಮತಿ ನಿರಾಕರಿಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ಗುರುವಾರ ತೆಲಂಗಾಣ ಡಿಜಿಪಿ ಕಚೇರಿ ತಲುಪಿತು. ಅಯ್ಯಪ್ಪ ಸ್ವಾಮಿ ಭಕ್ತರ ಗುಂಪು ಮೆಮೊ ವಿರುದ್ಧ ಪ್ರತಿಭಟನೆ ನಡೆಸಿತು. ಪ್ರತಿಭಟನಾಕಾರರು ಡಿಜಿಪಿ ಕಚೇರಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಆದರೆ, ಡಿಜಿಪಿ ಕಚೇರಿಯ ದ್ವಾರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದ ಪೊಲೀಸರು ಅವರನ್ನು ತಡೆದರು.

ಪ್ರತಿಭಟನಾಕಾರರು ತೆಲಂಗಾಣ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಮೆಮೊ ನೀಡಿದ್ದಕ್ಕಾಗಿ ಹೆಚ್ಚುವರಿ ಡಿಸಿಪಿ (ಆಗ್ನೇಯ) ಕೆ. ಶ್ರೀಕಾಂತ್ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...