Homeಮುಖಪುಟಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ಅಕ್ಷಯ್ ಯಾದವ್ ಎಂಬುವವರು ತಮ್ಮ ಅಂಗಡಿ ಸ್ಥಳದಲ್ಲಿ ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ.

- Advertisement -
- Advertisement -

ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ 8 ರಲ್ಲಿ ಸ್ಥಳೀಯರ ವಿರೋಧದಿಂದ ಅನುಮತಿ ವಾಪಸ್ ಪಡೆದಿದೆ. ತದನಂತರ ಹರಿಯಾಣ-ದೆಹಲಿ ಗಡಿಯಲ್ಲಿರುವ 5 ಸಿಖ್ ಗುರುದ್ವಾರಗಳ ಮೇಲ್ವಿಚಾರಣ ಸಮಿತಿಯು ತಮ್ಮ ಗುರುದ್ವಾರಗಳನ್ನು ಮುಸ್ಲಿಮರು ನಮಾಜ್ ಮಾಡಲು ಬಳಸಬಹುದು ಎಂದು ಆಹ್ವಾನ ನೀಡಿದೆ.

ಗುರುಗ್ರಾಮ್ ಸಬ್ಜಿ ಮಂಡಿಯಲ್ಲಿರುವ ಶ್ರೀ ಗುರು ಸಿಂಗ್ ಸಭಾದ ಅಧ್ಯಕ್ಷರಾದ ಶೆರ್ದಿಲ್ ಸಿಂಗ್ ಸಿಧು ಮಾತನಾಡಿ, “ಗುರುದ್ವಾರವೆಂದರೆ ಗುರುವಿನ ಮನೆ ಎಂದರ್ಥ. ಎಲ್ಲಾ ಸಮುದಾಯದ ಜನರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಲು ಆಹ್ವಾನವಿದೆ. ಮುಸ್ಲಿಮರಿಗೆ ನಿಗಧಿಪಡಿಸಿದ ಪ್ರದೇಶಗಳಲ್ಲಿ ಪ್ರಾರ್ಥನೆ ಮಾಡಲು ಅಡ್ಡಿಯಾಗುತ್ತಿದ್ದಲ್ಲಿ ಅವರು ಗುರುದ್ವಾರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಬಹುದು. ಎಲ್ಲರಿಗೂ ಗುರುದ್ವಾರದ ಬಾಗಿಲು ಸದಾ ತೆರೆದಿರುತ್ತವೆ” ಎಂದು ತಿಳಿಸಿದ್ದಾರೆ.

ಸೆಕ್ಟರ್ 39ರ ಸರ್ದಾರ್ ಬಜಾರ್‌ನಿಂದ ಆರಂಭವಾಗಿ ಸೆಕ್ಟರ್ 46ರ ಮಾಡೆಲ್ ಟೌನ್‌ವರೆಗೂ 5 ಗುರುದ್ವಾರಗಳಿವೆ. ಈ ಗುರುದ್ವಾರಗಳು 2000 ಜನರನ್ನು ಒಳಗೊಳ್ಳುವ ಸಾಮರ್ಥ್ಯ ಹೊಂದಿವೆ. ಆದರೆ ಕೋವಿಡ್ ಕಾರಣದಿಂದ ಸಣ್ಣ ಸಣ್ಣ ಗುಂಪುಗಳಲ್ಲಿ ಜನರು ಬಂದು ದೈಹಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಿದರೆ ಒಳ್ಳೆಯದು. ಅದಕ್ಕೆ ಅಧಿಕಾರಗಳ ಅನುಮತಿ ಬೇಕಾದರೆ ಅದನ್ನು ಕೂಡ ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸುವ ಆಹ್ವಾನವನ್ನು ಜಮಾತ್ ಉಲಾಮದ ಅಧ್ಯಕ್ಷ ಮುಫ್ತಿ ಮೊಹಮ್ಮದ್ ಸಲೀಂ ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ. ಬುಧವಾರ ಗುರುದ್ವಾರದ ಅಧಿಕಾರಗಳನ್ನು ಭೇಟಿಯಾದ ಅವರು ಪ್ರಾರ್ಥನೆ ಮಾಡುವುದಾಗಿ ತಿಳಿಸಿ ಅವಕಾಶಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. ಇದು ಅತ್ಯಂತ ಸ್ವಾಗತಾರ್ಹ ಹೆಜ್ಜೆಯಾಗಿದ್ದು, ದೀರ್ಘಕಾಲೀನವಾಗಿ ಸಮುದಾಯಗಳ ನಡುವೆ ಸಾಮರಸ್ಯವನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಗುರುಗ್ರಾಮದ ಸೆಕ್ಟರ್‌ 12 ರಲ್ಲಿ ಕಿರಾಣಿ ಅಂಗಡಿ ನಡೆಸುವ ಅಕ್ಷಯ್ ಯಾದವ್ ಎಂಬುವವರು ನಮಾಜ್‌ಗಾಗಿ ತಮ್ಮ ಅಂಗಡಿ ಸ್ಥಳವನ್ನು ಬಿಟ್ಟುಕೊಡುವುದಾಗಿ ಘೋಷಿಸಿದ್ದು ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ. ಒಂದು ಬಾರಿಗೆ 15 ಜನ ನಮಾಜ್ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಈ ಆಹ್ವಾನಗಳನ್ನು ಗುರುಗ್ರಾಮ್ ಮುಸ್ಲಿಂ ಕೌನ್ಸಿಲ್‌ನ ಸ್ಥಾಪಕರಾದ ಅಲ್ತಾಫ್ ಅಹ್ಮದ್ ಪ್ರಶಂಸಿದ್ದಾರೆ. “ಕಳೆದ ಎರಡು ತಿಂಗಳಿನಿಂದ ಗುರ್ಗಾಂವ್‌ನಲ್ಲಿ ದ್ವೇಷ ಮತ್ತು ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ವಿಭಜಕ ಶಕ್ತಿಗಳನ್ನು ಸೋಲಿಸಲು ಬಹು ಧರ್ಮಗಳ ಜನರು ಮುಂದೆ ಬಂದಿರುವುದು ಸಹೋದರತ್ವದ ನಿಜವಾದ ಉದಾಹರಣೆಯಾಗಿದೆ” ಎಂದಿದ್ದಾರೆ.

ಬಹಳ ಹಿಂದಿನಿಂದಲೂ ಗುರುಗ್ರಾಮದ ಹಲವು ಖಾಲಿ ನಿವೇ‍ಶನಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ವಾರದಲ್ಲಿ ಒಂದು ದಿನ ನಮಾಜ್ ಮಾಡುತ್ತಿದ್ದರು. ಆದರೆ ಅಕ್ಟೋಬರ್ ಆರಂಭದಿಂದ ಕೆಲವು ಹಿಂದುತ್ವವಾದಿ ಸಂಘಟನೆಗಳು ಅದಕ್ಕೆ ಅಡ್ಡಿಪಡಿಸಿದ್ದವು. ಮುಸ್ಲಿಮರು ನಮಾಜ್ ಮಾಡುವ ಜಾಗದಲ್ಲಿಯೇ ಈ ಸಂಘಟನೆಗಳು ಗೋವರ್ಧನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಅಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿತ್ತು. ಕಾರ್ಯಕ್ರಮದಲ್ಲಿ ದೆಹಲಿ ಗಲಭೆಯ ಪ್ರಚೋದನಾಕಾರಿ ಭಾಷಣಕಾರರದ ಕಪಿಲ್ ಮಿಶ್ರಾ ಭಾಗವಹಿಸಿದ್ದರು. ನಂತರ ಅದೇ ಜಾಗದಲ್ಲಿ ಸಗಣಿಗಳನ್ನು ತಂದು ಹಾಕಿ ನಮಾಜ್ ಮಾಡಲು ಅಡ್ಡಿಪಡಿಸಲಾಗಿತ್ತು. ಹಾಗಾಗಿ ಜಿಲ್ಲಾಡಳಿತ ಅಲ್ಲಿ ನಮಾಜ್ ಮಾಡಲು ಅನುಮತಿ ನಿರಾಕರಿಸಲಾಗಿತ್ತು. ಈಗ ಸಿಖ್ ಮತ್ತು ಕೆಲ ಹಿಂದೂ ಜನರು ಮಸ್ಲಿಮರು ನಮ್ಮ ಸ್ಥಳಗಳಿಗೆ ಬಂದು ನಮಾಜ್ ಮಾಡಿ ಎಂದು ಆಹ್ವಾನ ನೀಡುವ ಮೂಲಕ ಸಾಮರಸ್ಯ ಮೆರೆದಿದ್ದಾರೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...