Homeಮುಖಪುಟಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ಅಕ್ಷಯ್ ಯಾದವ್ ಎಂಬುವವರು ತಮ್ಮ ಅಂಗಡಿ ಸ್ಥಳದಲ್ಲಿ ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ.

- Advertisement -
- Advertisement -

ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ 8 ರಲ್ಲಿ ಸ್ಥಳೀಯರ ವಿರೋಧದಿಂದ ಅನುಮತಿ ವಾಪಸ್ ಪಡೆದಿದೆ. ತದನಂತರ ಹರಿಯಾಣ-ದೆಹಲಿ ಗಡಿಯಲ್ಲಿರುವ 5 ಸಿಖ್ ಗುರುದ್ವಾರಗಳ ಮೇಲ್ವಿಚಾರಣ ಸಮಿತಿಯು ತಮ್ಮ ಗುರುದ್ವಾರಗಳನ್ನು ಮುಸ್ಲಿಮರು ನಮಾಜ್ ಮಾಡಲು ಬಳಸಬಹುದು ಎಂದು ಆಹ್ವಾನ ನೀಡಿದೆ.

ಗುರುಗ್ರಾಮ್ ಸಬ್ಜಿ ಮಂಡಿಯಲ್ಲಿರುವ ಶ್ರೀ ಗುರು ಸಿಂಗ್ ಸಭಾದ ಅಧ್ಯಕ್ಷರಾದ ಶೆರ್ದಿಲ್ ಸಿಂಗ್ ಸಿಧು ಮಾತನಾಡಿ, “ಗುರುದ್ವಾರವೆಂದರೆ ಗುರುವಿನ ಮನೆ ಎಂದರ್ಥ. ಎಲ್ಲಾ ಸಮುದಾಯದ ಜನರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಲು ಆಹ್ವಾನವಿದೆ. ಮುಸ್ಲಿಮರಿಗೆ ನಿಗಧಿಪಡಿಸಿದ ಪ್ರದೇಶಗಳಲ್ಲಿ ಪ್ರಾರ್ಥನೆ ಮಾಡಲು ಅಡ್ಡಿಯಾಗುತ್ತಿದ್ದಲ್ಲಿ ಅವರು ಗುರುದ್ವಾರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಬಹುದು. ಎಲ್ಲರಿಗೂ ಗುರುದ್ವಾರದ ಬಾಗಿಲು ಸದಾ ತೆರೆದಿರುತ್ತವೆ” ಎಂದು ತಿಳಿಸಿದ್ದಾರೆ.

ಸೆಕ್ಟರ್ 39ರ ಸರ್ದಾರ್ ಬಜಾರ್‌ನಿಂದ ಆರಂಭವಾಗಿ ಸೆಕ್ಟರ್ 46ರ ಮಾಡೆಲ್ ಟೌನ್‌ವರೆಗೂ 5 ಗುರುದ್ವಾರಗಳಿವೆ. ಈ ಗುರುದ್ವಾರಗಳು 2000 ಜನರನ್ನು ಒಳಗೊಳ್ಳುವ ಸಾಮರ್ಥ್ಯ ಹೊಂದಿವೆ. ಆದರೆ ಕೋವಿಡ್ ಕಾರಣದಿಂದ ಸಣ್ಣ ಸಣ್ಣ ಗುಂಪುಗಳಲ್ಲಿ ಜನರು ಬಂದು ದೈಹಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಿದರೆ ಒಳ್ಳೆಯದು. ಅದಕ್ಕೆ ಅಧಿಕಾರಗಳ ಅನುಮತಿ ಬೇಕಾದರೆ ಅದನ್ನು ಕೂಡ ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸುವ ಆಹ್ವಾನವನ್ನು ಜಮಾತ್ ಉಲಾಮದ ಅಧ್ಯಕ್ಷ ಮುಫ್ತಿ ಮೊಹಮ್ಮದ್ ಸಲೀಂ ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ. ಬುಧವಾರ ಗುರುದ್ವಾರದ ಅಧಿಕಾರಗಳನ್ನು ಭೇಟಿಯಾದ ಅವರು ಪ್ರಾರ್ಥನೆ ಮಾಡುವುದಾಗಿ ತಿಳಿಸಿ ಅವಕಾಶಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. ಇದು ಅತ್ಯಂತ ಸ್ವಾಗತಾರ್ಹ ಹೆಜ್ಜೆಯಾಗಿದ್ದು, ದೀರ್ಘಕಾಲೀನವಾಗಿ ಸಮುದಾಯಗಳ ನಡುವೆ ಸಾಮರಸ್ಯವನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಗುರುಗ್ರಾಮದ ಸೆಕ್ಟರ್‌ 12 ರಲ್ಲಿ ಕಿರಾಣಿ ಅಂಗಡಿ ನಡೆಸುವ ಅಕ್ಷಯ್ ಯಾದವ್ ಎಂಬುವವರು ನಮಾಜ್‌ಗಾಗಿ ತಮ್ಮ ಅಂಗಡಿ ಸ್ಥಳವನ್ನು ಬಿಟ್ಟುಕೊಡುವುದಾಗಿ ಘೋಷಿಸಿದ್ದು ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ. ಒಂದು ಬಾರಿಗೆ 15 ಜನ ನಮಾಜ್ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಈ ಆಹ್ವಾನಗಳನ್ನು ಗುರುಗ್ರಾಮ್ ಮುಸ್ಲಿಂ ಕೌನ್ಸಿಲ್‌ನ ಸ್ಥಾಪಕರಾದ ಅಲ್ತಾಫ್ ಅಹ್ಮದ್ ಪ್ರಶಂಸಿದ್ದಾರೆ. “ಕಳೆದ ಎರಡು ತಿಂಗಳಿನಿಂದ ಗುರ್ಗಾಂವ್‌ನಲ್ಲಿ ದ್ವೇಷ ಮತ್ತು ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ವಿಭಜಕ ಶಕ್ತಿಗಳನ್ನು ಸೋಲಿಸಲು ಬಹು ಧರ್ಮಗಳ ಜನರು ಮುಂದೆ ಬಂದಿರುವುದು ಸಹೋದರತ್ವದ ನಿಜವಾದ ಉದಾಹರಣೆಯಾಗಿದೆ” ಎಂದಿದ್ದಾರೆ.

ಬಹಳ ಹಿಂದಿನಿಂದಲೂ ಗುರುಗ್ರಾಮದ ಹಲವು ಖಾಲಿ ನಿವೇ‍ಶನಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ವಾರದಲ್ಲಿ ಒಂದು ದಿನ ನಮಾಜ್ ಮಾಡುತ್ತಿದ್ದರು. ಆದರೆ ಅಕ್ಟೋಬರ್ ಆರಂಭದಿಂದ ಕೆಲವು ಹಿಂದುತ್ವವಾದಿ ಸಂಘಟನೆಗಳು ಅದಕ್ಕೆ ಅಡ್ಡಿಪಡಿಸಿದ್ದವು. ಮುಸ್ಲಿಮರು ನಮಾಜ್ ಮಾಡುವ ಜಾಗದಲ್ಲಿಯೇ ಈ ಸಂಘಟನೆಗಳು ಗೋವರ್ಧನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಅಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿತ್ತು. ಕಾರ್ಯಕ್ರಮದಲ್ಲಿ ದೆಹಲಿ ಗಲಭೆಯ ಪ್ರಚೋದನಾಕಾರಿ ಭಾಷಣಕಾರರದ ಕಪಿಲ್ ಮಿಶ್ರಾ ಭಾಗವಹಿಸಿದ್ದರು. ನಂತರ ಅದೇ ಜಾಗದಲ್ಲಿ ಸಗಣಿಗಳನ್ನು ತಂದು ಹಾಕಿ ನಮಾಜ್ ಮಾಡಲು ಅಡ್ಡಿಪಡಿಸಲಾಗಿತ್ತು. ಹಾಗಾಗಿ ಜಿಲ್ಲಾಡಳಿತ ಅಲ್ಲಿ ನಮಾಜ್ ಮಾಡಲು ಅನುಮತಿ ನಿರಾಕರಿಸಲಾಗಿತ್ತು. ಈಗ ಸಿಖ್ ಮತ್ತು ಕೆಲ ಹಿಂದೂ ಜನರು ಮಸ್ಲಿಮರು ನಮ್ಮ ಸ್ಥಳಗಳಿಗೆ ಬಂದು ನಮಾಜ್ ಮಾಡಿ ಎಂದು ಆಹ್ವಾನ ನೀಡುವ ಮೂಲಕ ಸಾಮರಸ್ಯ ಮೆರೆದಿದ್ದಾರೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...