Homeಮುಖಪುಟಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ಅಕ್ಷಯ್ ಯಾದವ್ ಎಂಬುವವರು ತಮ್ಮ ಅಂಗಡಿ ಸ್ಥಳದಲ್ಲಿ ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ.

- Advertisement -
- Advertisement -

ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ 8 ರಲ್ಲಿ ಸ್ಥಳೀಯರ ವಿರೋಧದಿಂದ ಅನುಮತಿ ವಾಪಸ್ ಪಡೆದಿದೆ. ತದನಂತರ ಹರಿಯಾಣ-ದೆಹಲಿ ಗಡಿಯಲ್ಲಿರುವ 5 ಸಿಖ್ ಗುರುದ್ವಾರಗಳ ಮೇಲ್ವಿಚಾರಣ ಸಮಿತಿಯು ತಮ್ಮ ಗುರುದ್ವಾರಗಳನ್ನು ಮುಸ್ಲಿಮರು ನಮಾಜ್ ಮಾಡಲು ಬಳಸಬಹುದು ಎಂದು ಆಹ್ವಾನ ನೀಡಿದೆ.

ಗುರುಗ್ರಾಮ್ ಸಬ್ಜಿ ಮಂಡಿಯಲ್ಲಿರುವ ಶ್ರೀ ಗುರು ಸಿಂಗ್ ಸಭಾದ ಅಧ್ಯಕ್ಷರಾದ ಶೆರ್ದಿಲ್ ಸಿಂಗ್ ಸಿಧು ಮಾತನಾಡಿ, “ಗುರುದ್ವಾರವೆಂದರೆ ಗುರುವಿನ ಮನೆ ಎಂದರ್ಥ. ಎಲ್ಲಾ ಸಮುದಾಯದ ಜನರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಲು ಆಹ್ವಾನವಿದೆ. ಮುಸ್ಲಿಮರಿಗೆ ನಿಗಧಿಪಡಿಸಿದ ಪ್ರದೇಶಗಳಲ್ಲಿ ಪ್ರಾರ್ಥನೆ ಮಾಡಲು ಅಡ್ಡಿಯಾಗುತ್ತಿದ್ದಲ್ಲಿ ಅವರು ಗುರುದ್ವಾರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಬಹುದು. ಎಲ್ಲರಿಗೂ ಗುರುದ್ವಾರದ ಬಾಗಿಲು ಸದಾ ತೆರೆದಿರುತ್ತವೆ” ಎಂದು ತಿಳಿಸಿದ್ದಾರೆ.

ಸೆಕ್ಟರ್ 39ರ ಸರ್ದಾರ್ ಬಜಾರ್‌ನಿಂದ ಆರಂಭವಾಗಿ ಸೆಕ್ಟರ್ 46ರ ಮಾಡೆಲ್ ಟೌನ್‌ವರೆಗೂ 5 ಗುರುದ್ವಾರಗಳಿವೆ. ಈ ಗುರುದ್ವಾರಗಳು 2000 ಜನರನ್ನು ಒಳಗೊಳ್ಳುವ ಸಾಮರ್ಥ್ಯ ಹೊಂದಿವೆ. ಆದರೆ ಕೋವಿಡ್ ಕಾರಣದಿಂದ ಸಣ್ಣ ಸಣ್ಣ ಗುಂಪುಗಳಲ್ಲಿ ಜನರು ಬಂದು ದೈಹಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಿದರೆ ಒಳ್ಳೆಯದು. ಅದಕ್ಕೆ ಅಧಿಕಾರಗಳ ಅನುಮತಿ ಬೇಕಾದರೆ ಅದನ್ನು ಕೂಡ ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸುವ ಆಹ್ವಾನವನ್ನು ಜಮಾತ್ ಉಲಾಮದ ಅಧ್ಯಕ್ಷ ಮುಫ್ತಿ ಮೊಹಮ್ಮದ್ ಸಲೀಂ ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ. ಬುಧವಾರ ಗುರುದ್ವಾರದ ಅಧಿಕಾರಗಳನ್ನು ಭೇಟಿಯಾದ ಅವರು ಪ್ರಾರ್ಥನೆ ಮಾಡುವುದಾಗಿ ತಿಳಿಸಿ ಅವಕಾಶಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. ಇದು ಅತ್ಯಂತ ಸ್ವಾಗತಾರ್ಹ ಹೆಜ್ಜೆಯಾಗಿದ್ದು, ದೀರ್ಘಕಾಲೀನವಾಗಿ ಸಮುದಾಯಗಳ ನಡುವೆ ಸಾಮರಸ್ಯವನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಗುರುಗ್ರಾಮದ ಸೆಕ್ಟರ್‌ 12 ರಲ್ಲಿ ಕಿರಾಣಿ ಅಂಗಡಿ ನಡೆಸುವ ಅಕ್ಷಯ್ ಯಾದವ್ ಎಂಬುವವರು ನಮಾಜ್‌ಗಾಗಿ ತಮ್ಮ ಅಂಗಡಿ ಸ್ಥಳವನ್ನು ಬಿಟ್ಟುಕೊಡುವುದಾಗಿ ಘೋಷಿಸಿದ್ದು ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ. ಒಂದು ಬಾರಿಗೆ 15 ಜನ ನಮಾಜ್ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಈ ಆಹ್ವಾನಗಳನ್ನು ಗುರುಗ್ರಾಮ್ ಮುಸ್ಲಿಂ ಕೌನ್ಸಿಲ್‌ನ ಸ್ಥಾಪಕರಾದ ಅಲ್ತಾಫ್ ಅಹ್ಮದ್ ಪ್ರಶಂಸಿದ್ದಾರೆ. “ಕಳೆದ ಎರಡು ತಿಂಗಳಿನಿಂದ ಗುರ್ಗಾಂವ್‌ನಲ್ಲಿ ದ್ವೇಷ ಮತ್ತು ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ವಿಭಜಕ ಶಕ್ತಿಗಳನ್ನು ಸೋಲಿಸಲು ಬಹು ಧರ್ಮಗಳ ಜನರು ಮುಂದೆ ಬಂದಿರುವುದು ಸಹೋದರತ್ವದ ನಿಜವಾದ ಉದಾಹರಣೆಯಾಗಿದೆ” ಎಂದಿದ್ದಾರೆ.

ಬಹಳ ಹಿಂದಿನಿಂದಲೂ ಗುರುಗ್ರಾಮದ ಹಲವು ಖಾಲಿ ನಿವೇ‍ಶನಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ವಾರದಲ್ಲಿ ಒಂದು ದಿನ ನಮಾಜ್ ಮಾಡುತ್ತಿದ್ದರು. ಆದರೆ ಅಕ್ಟೋಬರ್ ಆರಂಭದಿಂದ ಕೆಲವು ಹಿಂದುತ್ವವಾದಿ ಸಂಘಟನೆಗಳು ಅದಕ್ಕೆ ಅಡ್ಡಿಪಡಿಸಿದ್ದವು. ಮುಸ್ಲಿಮರು ನಮಾಜ್ ಮಾಡುವ ಜಾಗದಲ್ಲಿಯೇ ಈ ಸಂಘಟನೆಗಳು ಗೋವರ್ಧನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಅಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿತ್ತು. ಕಾರ್ಯಕ್ರಮದಲ್ಲಿ ದೆಹಲಿ ಗಲಭೆಯ ಪ್ರಚೋದನಾಕಾರಿ ಭಾಷಣಕಾರರದ ಕಪಿಲ್ ಮಿಶ್ರಾ ಭಾಗವಹಿಸಿದ್ದರು. ನಂತರ ಅದೇ ಜಾಗದಲ್ಲಿ ಸಗಣಿಗಳನ್ನು ತಂದು ಹಾಕಿ ನಮಾಜ್ ಮಾಡಲು ಅಡ್ಡಿಪಡಿಸಲಾಗಿತ್ತು. ಹಾಗಾಗಿ ಜಿಲ್ಲಾಡಳಿತ ಅಲ್ಲಿ ನಮಾಜ್ ಮಾಡಲು ಅನುಮತಿ ನಿರಾಕರಿಸಲಾಗಿತ್ತು. ಈಗ ಸಿಖ್ ಮತ್ತು ಕೆಲ ಹಿಂದೂ ಜನರು ಮಸ್ಲಿಮರು ನಮ್ಮ ಸ್ಥಳಗಳಿಗೆ ಬಂದು ನಮಾಜ್ ಮಾಡಿ ಎಂದು ಆಹ್ವಾನ ನೀಡುವ ಮೂಲಕ ಸಾಮರಸ್ಯ ಮೆರೆದಿದ್ದಾರೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...