Homeಮುಖಪುಟಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ಅಕ್ಷಯ್ ಯಾದವ್ ಎಂಬುವವರು ತಮ್ಮ ಅಂಗಡಿ ಸ್ಥಳದಲ್ಲಿ ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ.

- Advertisement -
- Advertisement -

ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ 8 ರಲ್ಲಿ ಸ್ಥಳೀಯರ ವಿರೋಧದಿಂದ ಅನುಮತಿ ವಾಪಸ್ ಪಡೆದಿದೆ. ತದನಂತರ ಹರಿಯಾಣ-ದೆಹಲಿ ಗಡಿಯಲ್ಲಿರುವ 5 ಸಿಖ್ ಗುರುದ್ವಾರಗಳ ಮೇಲ್ವಿಚಾರಣ ಸಮಿತಿಯು ತಮ್ಮ ಗುರುದ್ವಾರಗಳನ್ನು ಮುಸ್ಲಿಮರು ನಮಾಜ್ ಮಾಡಲು ಬಳಸಬಹುದು ಎಂದು ಆಹ್ವಾನ ನೀಡಿದೆ.

ಗುರುಗ್ರಾಮ್ ಸಬ್ಜಿ ಮಂಡಿಯಲ್ಲಿರುವ ಶ್ರೀ ಗುರು ಸಿಂಗ್ ಸಭಾದ ಅಧ್ಯಕ್ಷರಾದ ಶೆರ್ದಿಲ್ ಸಿಂಗ್ ಸಿಧು ಮಾತನಾಡಿ, “ಗುರುದ್ವಾರವೆಂದರೆ ಗುರುವಿನ ಮನೆ ಎಂದರ್ಥ. ಎಲ್ಲಾ ಸಮುದಾಯದ ಜನರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಲು ಆಹ್ವಾನವಿದೆ. ಮುಸ್ಲಿಮರಿಗೆ ನಿಗಧಿಪಡಿಸಿದ ಪ್ರದೇಶಗಳಲ್ಲಿ ಪ್ರಾರ್ಥನೆ ಮಾಡಲು ಅಡ್ಡಿಯಾಗುತ್ತಿದ್ದಲ್ಲಿ ಅವರು ಗುರುದ್ವಾರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಬಹುದು. ಎಲ್ಲರಿಗೂ ಗುರುದ್ವಾರದ ಬಾಗಿಲು ಸದಾ ತೆರೆದಿರುತ್ತವೆ” ಎಂದು ತಿಳಿಸಿದ್ದಾರೆ.

ಸೆಕ್ಟರ್ 39ರ ಸರ್ದಾರ್ ಬಜಾರ್‌ನಿಂದ ಆರಂಭವಾಗಿ ಸೆಕ್ಟರ್ 46ರ ಮಾಡೆಲ್ ಟೌನ್‌ವರೆಗೂ 5 ಗುರುದ್ವಾರಗಳಿವೆ. ಈ ಗುರುದ್ವಾರಗಳು 2000 ಜನರನ್ನು ಒಳಗೊಳ್ಳುವ ಸಾಮರ್ಥ್ಯ ಹೊಂದಿವೆ. ಆದರೆ ಕೋವಿಡ್ ಕಾರಣದಿಂದ ಸಣ್ಣ ಸಣ್ಣ ಗುಂಪುಗಳಲ್ಲಿ ಜನರು ಬಂದು ದೈಹಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಿದರೆ ಒಳ್ಳೆಯದು. ಅದಕ್ಕೆ ಅಧಿಕಾರಗಳ ಅನುಮತಿ ಬೇಕಾದರೆ ಅದನ್ನು ಕೂಡ ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸುವ ಆಹ್ವಾನವನ್ನು ಜಮಾತ್ ಉಲಾಮದ ಅಧ್ಯಕ್ಷ ಮುಫ್ತಿ ಮೊಹಮ್ಮದ್ ಸಲೀಂ ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ. ಬುಧವಾರ ಗುರುದ್ವಾರದ ಅಧಿಕಾರಗಳನ್ನು ಭೇಟಿಯಾದ ಅವರು ಪ್ರಾರ್ಥನೆ ಮಾಡುವುದಾಗಿ ತಿಳಿಸಿ ಅವಕಾಶಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. ಇದು ಅತ್ಯಂತ ಸ್ವಾಗತಾರ್ಹ ಹೆಜ್ಜೆಯಾಗಿದ್ದು, ದೀರ್ಘಕಾಲೀನವಾಗಿ ಸಮುದಾಯಗಳ ನಡುವೆ ಸಾಮರಸ್ಯವನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಗುರುಗ್ರಾಮದ ಸೆಕ್ಟರ್‌ 12 ರಲ್ಲಿ ಕಿರಾಣಿ ಅಂಗಡಿ ನಡೆಸುವ ಅಕ್ಷಯ್ ಯಾದವ್ ಎಂಬುವವರು ನಮಾಜ್‌ಗಾಗಿ ತಮ್ಮ ಅಂಗಡಿ ಸ್ಥಳವನ್ನು ಬಿಟ್ಟುಕೊಡುವುದಾಗಿ ಘೋಷಿಸಿದ್ದು ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ. ಒಂದು ಬಾರಿಗೆ 15 ಜನ ನಮಾಜ್ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಈ ಆಹ್ವಾನಗಳನ್ನು ಗುರುಗ್ರಾಮ್ ಮುಸ್ಲಿಂ ಕೌನ್ಸಿಲ್‌ನ ಸ್ಥಾಪಕರಾದ ಅಲ್ತಾಫ್ ಅಹ್ಮದ್ ಪ್ರಶಂಸಿದ್ದಾರೆ. “ಕಳೆದ ಎರಡು ತಿಂಗಳಿನಿಂದ ಗುರ್ಗಾಂವ್‌ನಲ್ಲಿ ದ್ವೇಷ ಮತ್ತು ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ವಿಭಜಕ ಶಕ್ತಿಗಳನ್ನು ಸೋಲಿಸಲು ಬಹು ಧರ್ಮಗಳ ಜನರು ಮುಂದೆ ಬಂದಿರುವುದು ಸಹೋದರತ್ವದ ನಿಜವಾದ ಉದಾಹರಣೆಯಾಗಿದೆ” ಎಂದಿದ್ದಾರೆ.

ಬಹಳ ಹಿಂದಿನಿಂದಲೂ ಗುರುಗ್ರಾಮದ ಹಲವು ಖಾಲಿ ನಿವೇ‍ಶನಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ವಾರದಲ್ಲಿ ಒಂದು ದಿನ ನಮಾಜ್ ಮಾಡುತ್ತಿದ್ದರು. ಆದರೆ ಅಕ್ಟೋಬರ್ ಆರಂಭದಿಂದ ಕೆಲವು ಹಿಂದುತ್ವವಾದಿ ಸಂಘಟನೆಗಳು ಅದಕ್ಕೆ ಅಡ್ಡಿಪಡಿಸಿದ್ದವು. ಮುಸ್ಲಿಮರು ನಮಾಜ್ ಮಾಡುವ ಜಾಗದಲ್ಲಿಯೇ ಈ ಸಂಘಟನೆಗಳು ಗೋವರ್ಧನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಅಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿತ್ತು. ಕಾರ್ಯಕ್ರಮದಲ್ಲಿ ದೆಹಲಿ ಗಲಭೆಯ ಪ್ರಚೋದನಾಕಾರಿ ಭಾಷಣಕಾರರದ ಕಪಿಲ್ ಮಿಶ್ರಾ ಭಾಗವಹಿಸಿದ್ದರು. ನಂತರ ಅದೇ ಜಾಗದಲ್ಲಿ ಸಗಣಿಗಳನ್ನು ತಂದು ಹಾಕಿ ನಮಾಜ್ ಮಾಡಲು ಅಡ್ಡಿಪಡಿಸಲಾಗಿತ್ತು. ಹಾಗಾಗಿ ಜಿಲ್ಲಾಡಳಿತ ಅಲ್ಲಿ ನಮಾಜ್ ಮಾಡಲು ಅನುಮತಿ ನಿರಾಕರಿಸಲಾಗಿತ್ತು. ಈಗ ಸಿಖ್ ಮತ್ತು ಕೆಲ ಹಿಂದೂ ಜನರು ಮಸ್ಲಿಮರು ನಮ್ಮ ಸ್ಥಳಗಳಿಗೆ ಬಂದು ನಮಾಜ್ ಮಾಡಿ ಎಂದು ಆಹ್ವಾನ ನೀಡುವ ಮೂಲಕ ಸಾಮರಸ್ಯ ಮೆರೆದಿದ್ದಾರೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: BJP ನಾಯಕ ಕಪಿಲ್ ಮಿಶ್ರಾ ಭಾಗವಹಿಸಿದ್ದ ಸಭೆಯಲ್ಲಿ ಮತ್ತೆ ‘ಗೋಲಿ ಮಾರೋ’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...