Homeಕರ್ನಾಟಕಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

- Advertisement -
- Advertisement -

ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಶೇಷಾದ್ರಿಪುರಂ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ಅವರು ಗುರುವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಪರಪ್ಪನ ಅಗ್ರಹಾರ ಬಳಿ ಮಾತನಾಡಿದ ಚೇತನ್, ”ಕಳೆದ ಬಾರಿ ಟ್ವೀಟ್ ಮಾಡಿದ್ದಕ್ಕೆ ಏಳು ದಿನ ಜೈಲಿಗೆ ಹಾಕಿದ್ದರು. ಈ ಬಾರಿ ‌ಟ್ವೀಟ್ ಮಾಡಿದಕ್ಕೆ ಮೂರು ದಿನ‌ ಬಂಧನ ಮಾಡಿದ್ದಾರೆ. ಹಿಂದುತ್ವ ಅನ್ನೋದು ಯಾವುದು ಇಲ್ಲ. ಲಿಂಗಾಯುತ ಪ್ರತ್ಯೇಕ ಧರ್ಮ ಕೇಳಿದಂತೆ ಹಿಂದುತ್ವವನ್ನು ಕೇಳಿ. ನಾವು ನಿಮ್ಮ ಜೊತೆಗೆ ನಿಲ್ಲುತ್ತೇವೆ. ಆದರೆ ಹಿಂದುತ್ವವನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ. ಈಗಲೂ ನಾನು ಹೇಳುತ್ತೇನೆ ಇದನ್ನು ಒಪ್ಪಲು ಸಾಧ್ಯ ಇಲ್ಲ. ಇನ್ನಷ್ಟು ಬಾರಿ ಬಂಧಿಸಿದರೂ ನಾನು ಹೆದರುವುದಿಲ್ಲ. ಹೋರಾಟಗಾರನಿಗೆ ಸೆರೆಮನೆಯೂ ಅರಮನೆಯೇ..” ಎಂದು ಹೇಳಿದರು.

”ಉರಿಗೌಡ ನಂಜೇಗೌಡ ಎನ್ನುವುದು ಶುದ್ಧಸುಳ್ಳು, ಅವರು ಕಾಲ್ಪನಿಕ ವ್ಯಕ್ತಿಗಳು ಎಂದು ಇತಿಹಾಸ ತಜ್ಞರು, ಬುದ್ದಿವಂತರು, ವಿಚಾರವಂತರು ಹಾಗೂ ಓದಿರುವವರೆಲ್ಲರೂ ಹೇಳುತ್ತಾರೆ. ಆ ನಿಟ್ಟಿನಲ್ಲಿ ಉರಿಗೌಡ ನಂಜೇಗೌಡ ಇದ್ದರು ಎನ್ನುವುದಕ್ಕೆ ಯಾವದೇ ದಾಖಲೆಗಳು ಇಲ್ಲ. ಅದೇ ರೀತಿ ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ. ನನ್ನ ಟ್ವೀಟ್‌ನಲ್ಲೇ ಹೇಳಿದ್ದೇನೆ. ಸಾವರ್ಕರ್‌ನಿಂದ ಹೇಳಿದ ಸುಳ್ಳುಗಳು, 1992ರಲ್ಲಿ ಆಗಿರುವ ಸುಳ್ಳುಗಳು, 2023ರಲ್ಲಿ ಆಗಿರುವ ಸುಳ್ಳುಗಳು, ಈ ಎಲ್ಲ ಸುಳ್ಳುಗಳ ಮೇಲೆ ಹಿಂದುತ್ವ ನಡೆಯುತ್ತಿದೆ” ಎಂದು ಜೈಲಿಗೆ ಕಳುಹಿಸಲು ಕಾರವಾಗಿದ್ದ ಟ್ವೀಟ್‌ನ್ನೇ ಚೇತನ್ ಪುನರುಚ್ಚರಿಸಿದರು.

”ಉರಿಗೌಡ ನಂಜೇಗೌಡ ಎಂಬುದು ಸುಳ್ಳು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದು ಮುಸ್ಲಿಂರು ಮತ್ತು ಒಕ್ಕಲಿಗರ ನಡುವೆ ದ್ವೇಷ ಬಿತ್ತುವ ಪ್ರಯತ್ನವಾಗಿದೆ, ಅದು ಯಾವುದೇ ಕಾರಣಕ್ಕೂ ಸಫಲ ಆಗಲ್ಲ. ಟಿಪ್ಪು ಒಬ್ಬ ಮಹಾನ್ ಸ್ವಾತಂತ್ರ ಹೋರಾಟಗಾರ, ಅದ್ಭುತ ಕೆಲಸಗಳನ್ನು ಸಹ ಮಾಡಿದ್ದಾರೆ.. ಅವರ ಖಡ್ಗವನ್ನ ನಾವು ಒಪ್ಪಲ್ಲ, ಆದರೆ ಅವರ ಸುಧಾರಣೆ ಇವತ್ತಿನ ದಿನ ನಮಗೆ ಅಗತ್ಯ ಇದೆ . ಅದೇ ರೀತಿಯಲ್ಲಿ ನಮಗೆ ಬಹಳ ಮುಖ್ಯವಾಗಿ ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಪುಲೆ, ಹಾಗೂ ಗಾಂಧಿಯವರ ಸಮಾನತೆ, ನ್ಯಾಯ, ವೈಜ್ಞಾನಿಕತೆ ಮತ್ತು ಅಹಿಂಸೆ ನಮಗೆ ಅಗತ್ಯ ಇದೆ, ಅದೇ ನಮ್ಮ ಶಕ್ತಿ. ಸಮಾನತೆಯೇ ಸತ್ಯ ಸಮಾನತೆಯೇ ಪರಿವರ್ತನೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್: ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮಾದ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಚೇತನ್, ”ಇದು ನನ್ನನ್ನ ಮಾತ್ರ ಕುಗ್ಗಿಸುವ ಪ್ರಯತ್ನ ಅಲ್ಲ, ಲಕ್ಷಾಂತರ ಸಮಾನತಾವಾದಿಗಳನ್ನು ಕುಗ್ಗಿಸುವ ಪ್ರಯತ್ನವಾಗಿದೆ. ನಾವು ಸತ್ಯ ಮಾತನಾಡಿದರೆ ಜೈಲಿಗೆ ಹಾಕುವ ಪ್ರಯತ್ನ ನಡೆಯುತ್ತದೆ. ಆದರೆ ಅವರು ನಮ್ಮನ್ನ ವಿಚಾರಗಳಲ್ಲಿ ಸೋಲಿಸೋಕಾಗಲ್ಲ ಹಾಗಾಗಿ ಜೈಲಿಗೆ ಹಾಕುವ ಪ್ರಯತ್ನ ಮಾಡುತ್ತಾರೆ. ಅವರಲ್ಲಿ ವಿಚಾರಗಳೇ ಇಲ್ಲ, ಬರೀ ಸುಳ್ಳು, ದ್ವೇಷ, ಅಸಮಾನತೆ, ಹಿಂಸೆ ಇದೆ. ಸಮಾನತಾವಾದಿಗಳಾದ ನಾವುಗಳು ಸಂವಿಧಾನದ ಪೀಠಿಕೆಯನ್ನು ಎತ್ತಿಹಿಡಿಯುತ್ತೇವೆ, ನಾವೇ ನಿಜವಾದ ಭಾರತೀಯರು” ಎಂದರು.

”ನಿಮಗೆ ತಾಕತ್ತಿದ್ದರೆ ವಿಚಾರದಲ್ಲಿ ಸೋಲಿಸಿ, ಯಾವುದೇ ತಪ್ಪಿಲ್ಲದೇ ನಮ್ಮನ್ನ ನೀವು ಜೈಲಿಗೆ ಹಾಕುತ್ತಿದ್ದಿರಿ. ಸಾವಿರಾರು ವರ್ಷಗಳಿಂದ ನಮನ್ನ ಸತ್ಯ ಹೇಳಲಿಕ್ಕೆ ಬಿಟ್ಟಿಲ್ಲ ನೀವು.. ಬಸವಣ್ಣನವರ ವಚನಗಳನ್ನೇ ಸುಟ್ಟು ಹಾಕಿದ್ದಾರೆ. ಬಾಬಾಸಾಹೇಬರ ವಿಚಾರಗಳು ಇಂದಿಗೂ ಬೆಳಕಿಗೆ ಬರಲ್ಲ. ಪೆರಿಯಾರ್ ವಿಚಾರಗಳನ್ನ ಮುಚ್ಚಿಹಾಕುತ್ತಿದ್ದೀರಿ. ಆದರೆ ಸಮಾನತೆಯೇ ಸತ್ಯ ನಮ್ಮ ಹೋರಾಟ ಹೀಗೆ ಮುಂದುವರೆಯುತ್ತದೆ” ಎಂದು ನಟ ಚೇತನ್ ಹೇಳಿದ್ದಾರೆ.

ಗುರುವಾರ, ನಟ ಚೇತನ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 32ನೇ ಎಸಿಎಂಎಂ ನ್ಯಾಯಾಧೀಶೆ ಜೆ.ಲತಾ ಅವರು, 25 ಸಾವಿರ ರೂ. ವೈಯಕ್ತಿಕ ಬಾಂಡ್ ಅಥವಾ ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಲು ಆದೇಶಿಸಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸುವಂತೆ ನಿರ್ದೇಶನ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....