Homeಕರ್ನಾಟಕಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

- Advertisement -
- Advertisement -

ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಶೇಷಾದ್ರಿಪುರಂ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ಅವರು ಗುರುವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಪರಪ್ಪನ ಅಗ್ರಹಾರ ಬಳಿ ಮಾತನಾಡಿದ ಚೇತನ್, ”ಕಳೆದ ಬಾರಿ ಟ್ವೀಟ್ ಮಾಡಿದ್ದಕ್ಕೆ ಏಳು ದಿನ ಜೈಲಿಗೆ ಹಾಕಿದ್ದರು. ಈ ಬಾರಿ ‌ಟ್ವೀಟ್ ಮಾಡಿದಕ್ಕೆ ಮೂರು ದಿನ‌ ಬಂಧನ ಮಾಡಿದ್ದಾರೆ. ಹಿಂದುತ್ವ ಅನ್ನೋದು ಯಾವುದು ಇಲ್ಲ. ಲಿಂಗಾಯುತ ಪ್ರತ್ಯೇಕ ಧರ್ಮ ಕೇಳಿದಂತೆ ಹಿಂದುತ್ವವನ್ನು ಕೇಳಿ. ನಾವು ನಿಮ್ಮ ಜೊತೆಗೆ ನಿಲ್ಲುತ್ತೇವೆ. ಆದರೆ ಹಿಂದುತ್ವವನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ. ಈಗಲೂ ನಾನು ಹೇಳುತ್ತೇನೆ ಇದನ್ನು ಒಪ್ಪಲು ಸಾಧ್ಯ ಇಲ್ಲ. ಇನ್ನಷ್ಟು ಬಾರಿ ಬಂಧಿಸಿದರೂ ನಾನು ಹೆದರುವುದಿಲ್ಲ. ಹೋರಾಟಗಾರನಿಗೆ ಸೆರೆಮನೆಯೂ ಅರಮನೆಯೇ..” ಎಂದು ಹೇಳಿದರು.

”ಉರಿಗೌಡ ನಂಜೇಗೌಡ ಎನ್ನುವುದು ಶುದ್ಧಸುಳ್ಳು, ಅವರು ಕಾಲ್ಪನಿಕ ವ್ಯಕ್ತಿಗಳು ಎಂದು ಇತಿಹಾಸ ತಜ್ಞರು, ಬುದ್ದಿವಂತರು, ವಿಚಾರವಂತರು ಹಾಗೂ ಓದಿರುವವರೆಲ್ಲರೂ ಹೇಳುತ್ತಾರೆ. ಆ ನಿಟ್ಟಿನಲ್ಲಿ ಉರಿಗೌಡ ನಂಜೇಗೌಡ ಇದ್ದರು ಎನ್ನುವುದಕ್ಕೆ ಯಾವದೇ ದಾಖಲೆಗಳು ಇಲ್ಲ. ಅದೇ ರೀತಿ ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ. ನನ್ನ ಟ್ವೀಟ್‌ನಲ್ಲೇ ಹೇಳಿದ್ದೇನೆ. ಸಾವರ್ಕರ್‌ನಿಂದ ಹೇಳಿದ ಸುಳ್ಳುಗಳು, 1992ರಲ್ಲಿ ಆಗಿರುವ ಸುಳ್ಳುಗಳು, 2023ರಲ್ಲಿ ಆಗಿರುವ ಸುಳ್ಳುಗಳು, ಈ ಎಲ್ಲ ಸುಳ್ಳುಗಳ ಮೇಲೆ ಹಿಂದುತ್ವ ನಡೆಯುತ್ತಿದೆ” ಎಂದು ಜೈಲಿಗೆ ಕಳುಹಿಸಲು ಕಾರವಾಗಿದ್ದ ಟ್ವೀಟ್‌ನ್ನೇ ಚೇತನ್ ಪುನರುಚ್ಚರಿಸಿದರು.

”ಉರಿಗೌಡ ನಂಜೇಗೌಡ ಎಂಬುದು ಸುಳ್ಳು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದು ಮುಸ್ಲಿಂರು ಮತ್ತು ಒಕ್ಕಲಿಗರ ನಡುವೆ ದ್ವೇಷ ಬಿತ್ತುವ ಪ್ರಯತ್ನವಾಗಿದೆ, ಅದು ಯಾವುದೇ ಕಾರಣಕ್ಕೂ ಸಫಲ ಆಗಲ್ಲ. ಟಿಪ್ಪು ಒಬ್ಬ ಮಹಾನ್ ಸ್ವಾತಂತ್ರ ಹೋರಾಟಗಾರ, ಅದ್ಭುತ ಕೆಲಸಗಳನ್ನು ಸಹ ಮಾಡಿದ್ದಾರೆ.. ಅವರ ಖಡ್ಗವನ್ನ ನಾವು ಒಪ್ಪಲ್ಲ, ಆದರೆ ಅವರ ಸುಧಾರಣೆ ಇವತ್ತಿನ ದಿನ ನಮಗೆ ಅಗತ್ಯ ಇದೆ . ಅದೇ ರೀತಿಯಲ್ಲಿ ನಮಗೆ ಬಹಳ ಮುಖ್ಯವಾಗಿ ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಪುಲೆ, ಹಾಗೂ ಗಾಂಧಿಯವರ ಸಮಾನತೆ, ನ್ಯಾಯ, ವೈಜ್ಞಾನಿಕತೆ ಮತ್ತು ಅಹಿಂಸೆ ನಮಗೆ ಅಗತ್ಯ ಇದೆ, ಅದೇ ನಮ್ಮ ಶಕ್ತಿ. ಸಮಾನತೆಯೇ ಸತ್ಯ ಸಮಾನತೆಯೇ ಪರಿವರ್ತನೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್: ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮಾದ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಚೇತನ್, ”ಇದು ನನ್ನನ್ನ ಮಾತ್ರ ಕುಗ್ಗಿಸುವ ಪ್ರಯತ್ನ ಅಲ್ಲ, ಲಕ್ಷಾಂತರ ಸಮಾನತಾವಾದಿಗಳನ್ನು ಕುಗ್ಗಿಸುವ ಪ್ರಯತ್ನವಾಗಿದೆ. ನಾವು ಸತ್ಯ ಮಾತನಾಡಿದರೆ ಜೈಲಿಗೆ ಹಾಕುವ ಪ್ರಯತ್ನ ನಡೆಯುತ್ತದೆ. ಆದರೆ ಅವರು ನಮ್ಮನ್ನ ವಿಚಾರಗಳಲ್ಲಿ ಸೋಲಿಸೋಕಾಗಲ್ಲ ಹಾಗಾಗಿ ಜೈಲಿಗೆ ಹಾಕುವ ಪ್ರಯತ್ನ ಮಾಡುತ್ತಾರೆ. ಅವರಲ್ಲಿ ವಿಚಾರಗಳೇ ಇಲ್ಲ, ಬರೀ ಸುಳ್ಳು, ದ್ವೇಷ, ಅಸಮಾನತೆ, ಹಿಂಸೆ ಇದೆ. ಸಮಾನತಾವಾದಿಗಳಾದ ನಾವುಗಳು ಸಂವಿಧಾನದ ಪೀಠಿಕೆಯನ್ನು ಎತ್ತಿಹಿಡಿಯುತ್ತೇವೆ, ನಾವೇ ನಿಜವಾದ ಭಾರತೀಯರು” ಎಂದರು.

”ನಿಮಗೆ ತಾಕತ್ತಿದ್ದರೆ ವಿಚಾರದಲ್ಲಿ ಸೋಲಿಸಿ, ಯಾವುದೇ ತಪ್ಪಿಲ್ಲದೇ ನಮ್ಮನ್ನ ನೀವು ಜೈಲಿಗೆ ಹಾಕುತ್ತಿದ್ದಿರಿ. ಸಾವಿರಾರು ವರ್ಷಗಳಿಂದ ನಮನ್ನ ಸತ್ಯ ಹೇಳಲಿಕ್ಕೆ ಬಿಟ್ಟಿಲ್ಲ ನೀವು.. ಬಸವಣ್ಣನವರ ವಚನಗಳನ್ನೇ ಸುಟ್ಟು ಹಾಕಿದ್ದಾರೆ. ಬಾಬಾಸಾಹೇಬರ ವಿಚಾರಗಳು ಇಂದಿಗೂ ಬೆಳಕಿಗೆ ಬರಲ್ಲ. ಪೆರಿಯಾರ್ ವಿಚಾರಗಳನ್ನ ಮುಚ್ಚಿಹಾಕುತ್ತಿದ್ದೀರಿ. ಆದರೆ ಸಮಾನತೆಯೇ ಸತ್ಯ ನಮ್ಮ ಹೋರಾಟ ಹೀಗೆ ಮುಂದುವರೆಯುತ್ತದೆ” ಎಂದು ನಟ ಚೇತನ್ ಹೇಳಿದ್ದಾರೆ.

ಗುರುವಾರ, ನಟ ಚೇತನ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 32ನೇ ಎಸಿಎಂಎಂ ನ್ಯಾಯಾಧೀಶೆ ಜೆ.ಲತಾ ಅವರು, 25 ಸಾವಿರ ರೂ. ವೈಯಕ್ತಿಕ ಬಾಂಡ್ ಅಥವಾ ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಲು ಆದೇಶಿಸಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸುವಂತೆ ನಿರ್ದೇಶನ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...