Homeಕರ್ನಾಟಕಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

- Advertisement -
- Advertisement -

ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಶೇಷಾದ್ರಿಪುರಂ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ಅವರು ಗುರುವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಪರಪ್ಪನ ಅಗ್ರಹಾರ ಬಳಿ ಮಾತನಾಡಿದ ಚೇತನ್, ”ಕಳೆದ ಬಾರಿ ಟ್ವೀಟ್ ಮಾಡಿದ್ದಕ್ಕೆ ಏಳು ದಿನ ಜೈಲಿಗೆ ಹಾಕಿದ್ದರು. ಈ ಬಾರಿ ‌ಟ್ವೀಟ್ ಮಾಡಿದಕ್ಕೆ ಮೂರು ದಿನ‌ ಬಂಧನ ಮಾಡಿದ್ದಾರೆ. ಹಿಂದುತ್ವ ಅನ್ನೋದು ಯಾವುದು ಇಲ್ಲ. ಲಿಂಗಾಯುತ ಪ್ರತ್ಯೇಕ ಧರ್ಮ ಕೇಳಿದಂತೆ ಹಿಂದುತ್ವವನ್ನು ಕೇಳಿ. ನಾವು ನಿಮ್ಮ ಜೊತೆಗೆ ನಿಲ್ಲುತ್ತೇವೆ. ಆದರೆ ಹಿಂದುತ್ವವನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ. ಈಗಲೂ ನಾನು ಹೇಳುತ್ತೇನೆ ಇದನ್ನು ಒಪ್ಪಲು ಸಾಧ್ಯ ಇಲ್ಲ. ಇನ್ನಷ್ಟು ಬಾರಿ ಬಂಧಿಸಿದರೂ ನಾನು ಹೆದರುವುದಿಲ್ಲ. ಹೋರಾಟಗಾರನಿಗೆ ಸೆರೆಮನೆಯೂ ಅರಮನೆಯೇ..” ಎಂದು ಹೇಳಿದರು.

”ಉರಿಗೌಡ ನಂಜೇಗೌಡ ಎನ್ನುವುದು ಶುದ್ಧಸುಳ್ಳು, ಅವರು ಕಾಲ್ಪನಿಕ ವ್ಯಕ್ತಿಗಳು ಎಂದು ಇತಿಹಾಸ ತಜ್ಞರು, ಬುದ್ದಿವಂತರು, ವಿಚಾರವಂತರು ಹಾಗೂ ಓದಿರುವವರೆಲ್ಲರೂ ಹೇಳುತ್ತಾರೆ. ಆ ನಿಟ್ಟಿನಲ್ಲಿ ಉರಿಗೌಡ ನಂಜೇಗೌಡ ಇದ್ದರು ಎನ್ನುವುದಕ್ಕೆ ಯಾವದೇ ದಾಖಲೆಗಳು ಇಲ್ಲ. ಅದೇ ರೀತಿ ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ. ನನ್ನ ಟ್ವೀಟ್‌ನಲ್ಲೇ ಹೇಳಿದ್ದೇನೆ. ಸಾವರ್ಕರ್‌ನಿಂದ ಹೇಳಿದ ಸುಳ್ಳುಗಳು, 1992ರಲ್ಲಿ ಆಗಿರುವ ಸುಳ್ಳುಗಳು, 2023ರಲ್ಲಿ ಆಗಿರುವ ಸುಳ್ಳುಗಳು, ಈ ಎಲ್ಲ ಸುಳ್ಳುಗಳ ಮೇಲೆ ಹಿಂದುತ್ವ ನಡೆಯುತ್ತಿದೆ” ಎಂದು ಜೈಲಿಗೆ ಕಳುಹಿಸಲು ಕಾರವಾಗಿದ್ದ ಟ್ವೀಟ್‌ನ್ನೇ ಚೇತನ್ ಪುನರುಚ್ಚರಿಸಿದರು.

”ಉರಿಗೌಡ ನಂಜೇಗೌಡ ಎಂಬುದು ಸುಳ್ಳು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದು ಮುಸ್ಲಿಂರು ಮತ್ತು ಒಕ್ಕಲಿಗರ ನಡುವೆ ದ್ವೇಷ ಬಿತ್ತುವ ಪ್ರಯತ್ನವಾಗಿದೆ, ಅದು ಯಾವುದೇ ಕಾರಣಕ್ಕೂ ಸಫಲ ಆಗಲ್ಲ. ಟಿಪ್ಪು ಒಬ್ಬ ಮಹಾನ್ ಸ್ವಾತಂತ್ರ ಹೋರಾಟಗಾರ, ಅದ್ಭುತ ಕೆಲಸಗಳನ್ನು ಸಹ ಮಾಡಿದ್ದಾರೆ.. ಅವರ ಖಡ್ಗವನ್ನ ನಾವು ಒಪ್ಪಲ್ಲ, ಆದರೆ ಅವರ ಸುಧಾರಣೆ ಇವತ್ತಿನ ದಿನ ನಮಗೆ ಅಗತ್ಯ ಇದೆ . ಅದೇ ರೀತಿಯಲ್ಲಿ ನಮಗೆ ಬಹಳ ಮುಖ್ಯವಾಗಿ ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಪುಲೆ, ಹಾಗೂ ಗಾಂಧಿಯವರ ಸಮಾನತೆ, ನ್ಯಾಯ, ವೈಜ್ಞಾನಿಕತೆ ಮತ್ತು ಅಹಿಂಸೆ ನಮಗೆ ಅಗತ್ಯ ಇದೆ, ಅದೇ ನಮ್ಮ ಶಕ್ತಿ. ಸಮಾನತೆಯೇ ಸತ್ಯ ಸಮಾನತೆಯೇ ಪರಿವರ್ತನೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್: ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮಾದ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಚೇತನ್, ”ಇದು ನನ್ನನ್ನ ಮಾತ್ರ ಕುಗ್ಗಿಸುವ ಪ್ರಯತ್ನ ಅಲ್ಲ, ಲಕ್ಷಾಂತರ ಸಮಾನತಾವಾದಿಗಳನ್ನು ಕುಗ್ಗಿಸುವ ಪ್ರಯತ್ನವಾಗಿದೆ. ನಾವು ಸತ್ಯ ಮಾತನಾಡಿದರೆ ಜೈಲಿಗೆ ಹಾಕುವ ಪ್ರಯತ್ನ ನಡೆಯುತ್ತದೆ. ಆದರೆ ಅವರು ನಮ್ಮನ್ನ ವಿಚಾರಗಳಲ್ಲಿ ಸೋಲಿಸೋಕಾಗಲ್ಲ ಹಾಗಾಗಿ ಜೈಲಿಗೆ ಹಾಕುವ ಪ್ರಯತ್ನ ಮಾಡುತ್ತಾರೆ. ಅವರಲ್ಲಿ ವಿಚಾರಗಳೇ ಇಲ್ಲ, ಬರೀ ಸುಳ್ಳು, ದ್ವೇಷ, ಅಸಮಾನತೆ, ಹಿಂಸೆ ಇದೆ. ಸಮಾನತಾವಾದಿಗಳಾದ ನಾವುಗಳು ಸಂವಿಧಾನದ ಪೀಠಿಕೆಯನ್ನು ಎತ್ತಿಹಿಡಿಯುತ್ತೇವೆ, ನಾವೇ ನಿಜವಾದ ಭಾರತೀಯರು” ಎಂದರು.

”ನಿಮಗೆ ತಾಕತ್ತಿದ್ದರೆ ವಿಚಾರದಲ್ಲಿ ಸೋಲಿಸಿ, ಯಾವುದೇ ತಪ್ಪಿಲ್ಲದೇ ನಮ್ಮನ್ನ ನೀವು ಜೈಲಿಗೆ ಹಾಕುತ್ತಿದ್ದಿರಿ. ಸಾವಿರಾರು ವರ್ಷಗಳಿಂದ ನಮನ್ನ ಸತ್ಯ ಹೇಳಲಿಕ್ಕೆ ಬಿಟ್ಟಿಲ್ಲ ನೀವು.. ಬಸವಣ್ಣನವರ ವಚನಗಳನ್ನೇ ಸುಟ್ಟು ಹಾಕಿದ್ದಾರೆ. ಬಾಬಾಸಾಹೇಬರ ವಿಚಾರಗಳು ಇಂದಿಗೂ ಬೆಳಕಿಗೆ ಬರಲ್ಲ. ಪೆರಿಯಾರ್ ವಿಚಾರಗಳನ್ನ ಮುಚ್ಚಿಹಾಕುತ್ತಿದ್ದೀರಿ. ಆದರೆ ಸಮಾನತೆಯೇ ಸತ್ಯ ನಮ್ಮ ಹೋರಾಟ ಹೀಗೆ ಮುಂದುವರೆಯುತ್ತದೆ” ಎಂದು ನಟ ಚೇತನ್ ಹೇಳಿದ್ದಾರೆ.

ಗುರುವಾರ, ನಟ ಚೇತನ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 32ನೇ ಎಸಿಎಂಎಂ ನ್ಯಾಯಾಧೀಶೆ ಜೆ.ಲತಾ ಅವರು, 25 ಸಾವಿರ ರೂ. ವೈಯಕ್ತಿಕ ಬಾಂಡ್ ಅಥವಾ ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಲು ಆದೇಶಿಸಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸುವಂತೆ ನಿರ್ದೇಶನ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...