Homeಕರ್ನಾಟಕಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

- Advertisement -
- Advertisement -

ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಶೇಷಾದ್ರಿಪುರಂ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ಅವರು ಗುರುವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಪರಪ್ಪನ ಅಗ್ರಹಾರ ಬಳಿ ಮಾತನಾಡಿದ ಚೇತನ್, ”ಕಳೆದ ಬಾರಿ ಟ್ವೀಟ್ ಮಾಡಿದ್ದಕ್ಕೆ ಏಳು ದಿನ ಜೈಲಿಗೆ ಹಾಕಿದ್ದರು. ಈ ಬಾರಿ ‌ಟ್ವೀಟ್ ಮಾಡಿದಕ್ಕೆ ಮೂರು ದಿನ‌ ಬಂಧನ ಮಾಡಿದ್ದಾರೆ. ಹಿಂದುತ್ವ ಅನ್ನೋದು ಯಾವುದು ಇಲ್ಲ. ಲಿಂಗಾಯುತ ಪ್ರತ್ಯೇಕ ಧರ್ಮ ಕೇಳಿದಂತೆ ಹಿಂದುತ್ವವನ್ನು ಕೇಳಿ. ನಾವು ನಿಮ್ಮ ಜೊತೆಗೆ ನಿಲ್ಲುತ್ತೇವೆ. ಆದರೆ ಹಿಂದುತ್ವವನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ. ಈಗಲೂ ನಾನು ಹೇಳುತ್ತೇನೆ ಇದನ್ನು ಒಪ್ಪಲು ಸಾಧ್ಯ ಇಲ್ಲ. ಇನ್ನಷ್ಟು ಬಾರಿ ಬಂಧಿಸಿದರೂ ನಾನು ಹೆದರುವುದಿಲ್ಲ. ಹೋರಾಟಗಾರನಿಗೆ ಸೆರೆಮನೆಯೂ ಅರಮನೆಯೇ..” ಎಂದು ಹೇಳಿದರು.

”ಉರಿಗೌಡ ನಂಜೇಗೌಡ ಎನ್ನುವುದು ಶುದ್ಧಸುಳ್ಳು, ಅವರು ಕಾಲ್ಪನಿಕ ವ್ಯಕ್ತಿಗಳು ಎಂದು ಇತಿಹಾಸ ತಜ್ಞರು, ಬುದ್ದಿವಂತರು, ವಿಚಾರವಂತರು ಹಾಗೂ ಓದಿರುವವರೆಲ್ಲರೂ ಹೇಳುತ್ತಾರೆ. ಆ ನಿಟ್ಟಿನಲ್ಲಿ ಉರಿಗೌಡ ನಂಜೇಗೌಡ ಇದ್ದರು ಎನ್ನುವುದಕ್ಕೆ ಯಾವದೇ ದಾಖಲೆಗಳು ಇಲ್ಲ. ಅದೇ ರೀತಿ ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ. ನನ್ನ ಟ್ವೀಟ್‌ನಲ್ಲೇ ಹೇಳಿದ್ದೇನೆ. ಸಾವರ್ಕರ್‌ನಿಂದ ಹೇಳಿದ ಸುಳ್ಳುಗಳು, 1992ರಲ್ಲಿ ಆಗಿರುವ ಸುಳ್ಳುಗಳು, 2023ರಲ್ಲಿ ಆಗಿರುವ ಸುಳ್ಳುಗಳು, ಈ ಎಲ್ಲ ಸುಳ್ಳುಗಳ ಮೇಲೆ ಹಿಂದುತ್ವ ನಡೆಯುತ್ತಿದೆ” ಎಂದು ಜೈಲಿಗೆ ಕಳುಹಿಸಲು ಕಾರವಾಗಿದ್ದ ಟ್ವೀಟ್‌ನ್ನೇ ಚೇತನ್ ಪುನರುಚ್ಚರಿಸಿದರು.

”ಉರಿಗೌಡ ನಂಜೇಗೌಡ ಎಂಬುದು ಸುಳ್ಳು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದು ಮುಸ್ಲಿಂರು ಮತ್ತು ಒಕ್ಕಲಿಗರ ನಡುವೆ ದ್ವೇಷ ಬಿತ್ತುವ ಪ್ರಯತ್ನವಾಗಿದೆ, ಅದು ಯಾವುದೇ ಕಾರಣಕ್ಕೂ ಸಫಲ ಆಗಲ್ಲ. ಟಿಪ್ಪು ಒಬ್ಬ ಮಹಾನ್ ಸ್ವಾತಂತ್ರ ಹೋರಾಟಗಾರ, ಅದ್ಭುತ ಕೆಲಸಗಳನ್ನು ಸಹ ಮಾಡಿದ್ದಾರೆ.. ಅವರ ಖಡ್ಗವನ್ನ ನಾವು ಒಪ್ಪಲ್ಲ, ಆದರೆ ಅವರ ಸುಧಾರಣೆ ಇವತ್ತಿನ ದಿನ ನಮಗೆ ಅಗತ್ಯ ಇದೆ . ಅದೇ ರೀತಿಯಲ್ಲಿ ನಮಗೆ ಬಹಳ ಮುಖ್ಯವಾಗಿ ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಪುಲೆ, ಹಾಗೂ ಗಾಂಧಿಯವರ ಸಮಾನತೆ, ನ್ಯಾಯ, ವೈಜ್ಞಾನಿಕತೆ ಮತ್ತು ಅಹಿಂಸೆ ನಮಗೆ ಅಗತ್ಯ ಇದೆ, ಅದೇ ನಮ್ಮ ಶಕ್ತಿ. ಸಮಾನತೆಯೇ ಸತ್ಯ ಸಮಾನತೆಯೇ ಪರಿವರ್ತನೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್: ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮಾದ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಚೇತನ್, ”ಇದು ನನ್ನನ್ನ ಮಾತ್ರ ಕುಗ್ಗಿಸುವ ಪ್ರಯತ್ನ ಅಲ್ಲ, ಲಕ್ಷಾಂತರ ಸಮಾನತಾವಾದಿಗಳನ್ನು ಕುಗ್ಗಿಸುವ ಪ್ರಯತ್ನವಾಗಿದೆ. ನಾವು ಸತ್ಯ ಮಾತನಾಡಿದರೆ ಜೈಲಿಗೆ ಹಾಕುವ ಪ್ರಯತ್ನ ನಡೆಯುತ್ತದೆ. ಆದರೆ ಅವರು ನಮ್ಮನ್ನ ವಿಚಾರಗಳಲ್ಲಿ ಸೋಲಿಸೋಕಾಗಲ್ಲ ಹಾಗಾಗಿ ಜೈಲಿಗೆ ಹಾಕುವ ಪ್ರಯತ್ನ ಮಾಡುತ್ತಾರೆ. ಅವರಲ್ಲಿ ವಿಚಾರಗಳೇ ಇಲ್ಲ, ಬರೀ ಸುಳ್ಳು, ದ್ವೇಷ, ಅಸಮಾನತೆ, ಹಿಂಸೆ ಇದೆ. ಸಮಾನತಾವಾದಿಗಳಾದ ನಾವುಗಳು ಸಂವಿಧಾನದ ಪೀಠಿಕೆಯನ್ನು ಎತ್ತಿಹಿಡಿಯುತ್ತೇವೆ, ನಾವೇ ನಿಜವಾದ ಭಾರತೀಯರು” ಎಂದರು.

”ನಿಮಗೆ ತಾಕತ್ತಿದ್ದರೆ ವಿಚಾರದಲ್ಲಿ ಸೋಲಿಸಿ, ಯಾವುದೇ ತಪ್ಪಿಲ್ಲದೇ ನಮ್ಮನ್ನ ನೀವು ಜೈಲಿಗೆ ಹಾಕುತ್ತಿದ್ದಿರಿ. ಸಾವಿರಾರು ವರ್ಷಗಳಿಂದ ನಮನ್ನ ಸತ್ಯ ಹೇಳಲಿಕ್ಕೆ ಬಿಟ್ಟಿಲ್ಲ ನೀವು.. ಬಸವಣ್ಣನವರ ವಚನಗಳನ್ನೇ ಸುಟ್ಟು ಹಾಕಿದ್ದಾರೆ. ಬಾಬಾಸಾಹೇಬರ ವಿಚಾರಗಳು ಇಂದಿಗೂ ಬೆಳಕಿಗೆ ಬರಲ್ಲ. ಪೆರಿಯಾರ್ ವಿಚಾರಗಳನ್ನ ಮುಚ್ಚಿಹಾಕುತ್ತಿದ್ದೀರಿ. ಆದರೆ ಸಮಾನತೆಯೇ ಸತ್ಯ ನಮ್ಮ ಹೋರಾಟ ಹೀಗೆ ಮುಂದುವರೆಯುತ್ತದೆ” ಎಂದು ನಟ ಚೇತನ್ ಹೇಳಿದ್ದಾರೆ.

ಗುರುವಾರ, ನಟ ಚೇತನ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 32ನೇ ಎಸಿಎಂಎಂ ನ್ಯಾಯಾಧೀಶೆ ಜೆ.ಲತಾ ಅವರು, 25 ಸಾವಿರ ರೂ. ವೈಯಕ್ತಿಕ ಬಾಂಡ್ ಅಥವಾ ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಲು ಆದೇಶಿಸಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸುವಂತೆ ನಿರ್ದೇಶನ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...