Homeಕರ್ನಾಟಕಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

- Advertisement -
- Advertisement -

ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಶೇಷಾದ್ರಿಪುರಂ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ಅವರು ಗುರುವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಪರಪ್ಪನ ಅಗ್ರಹಾರ ಬಳಿ ಮಾತನಾಡಿದ ಚೇತನ್, ”ಕಳೆದ ಬಾರಿ ಟ್ವೀಟ್ ಮಾಡಿದ್ದಕ್ಕೆ ಏಳು ದಿನ ಜೈಲಿಗೆ ಹಾಕಿದ್ದರು. ಈ ಬಾರಿ ‌ಟ್ವೀಟ್ ಮಾಡಿದಕ್ಕೆ ಮೂರು ದಿನ‌ ಬಂಧನ ಮಾಡಿದ್ದಾರೆ. ಹಿಂದುತ್ವ ಅನ್ನೋದು ಯಾವುದು ಇಲ್ಲ. ಲಿಂಗಾಯುತ ಪ್ರತ್ಯೇಕ ಧರ್ಮ ಕೇಳಿದಂತೆ ಹಿಂದುತ್ವವನ್ನು ಕೇಳಿ. ನಾವು ನಿಮ್ಮ ಜೊತೆಗೆ ನಿಲ್ಲುತ್ತೇವೆ. ಆದರೆ ಹಿಂದುತ್ವವನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ. ಈಗಲೂ ನಾನು ಹೇಳುತ್ತೇನೆ ಇದನ್ನು ಒಪ್ಪಲು ಸಾಧ್ಯ ಇಲ್ಲ. ಇನ್ನಷ್ಟು ಬಾರಿ ಬಂಧಿಸಿದರೂ ನಾನು ಹೆದರುವುದಿಲ್ಲ. ಹೋರಾಟಗಾರನಿಗೆ ಸೆರೆಮನೆಯೂ ಅರಮನೆಯೇ..” ಎಂದು ಹೇಳಿದರು.

”ಉರಿಗೌಡ ನಂಜೇಗೌಡ ಎನ್ನುವುದು ಶುದ್ಧಸುಳ್ಳು, ಅವರು ಕಾಲ್ಪನಿಕ ವ್ಯಕ್ತಿಗಳು ಎಂದು ಇತಿಹಾಸ ತಜ್ಞರು, ಬುದ್ದಿವಂತರು, ವಿಚಾರವಂತರು ಹಾಗೂ ಓದಿರುವವರೆಲ್ಲರೂ ಹೇಳುತ್ತಾರೆ. ಆ ನಿಟ್ಟಿನಲ್ಲಿ ಉರಿಗೌಡ ನಂಜೇಗೌಡ ಇದ್ದರು ಎನ್ನುವುದಕ್ಕೆ ಯಾವದೇ ದಾಖಲೆಗಳು ಇಲ್ಲ. ಅದೇ ರೀತಿ ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ. ನನ್ನ ಟ್ವೀಟ್‌ನಲ್ಲೇ ಹೇಳಿದ್ದೇನೆ. ಸಾವರ್ಕರ್‌ನಿಂದ ಹೇಳಿದ ಸುಳ್ಳುಗಳು, 1992ರಲ್ಲಿ ಆಗಿರುವ ಸುಳ್ಳುಗಳು, 2023ರಲ್ಲಿ ಆಗಿರುವ ಸುಳ್ಳುಗಳು, ಈ ಎಲ್ಲ ಸುಳ್ಳುಗಳ ಮೇಲೆ ಹಿಂದುತ್ವ ನಡೆಯುತ್ತಿದೆ” ಎಂದು ಜೈಲಿಗೆ ಕಳುಹಿಸಲು ಕಾರವಾಗಿದ್ದ ಟ್ವೀಟ್‌ನ್ನೇ ಚೇತನ್ ಪುನರುಚ್ಚರಿಸಿದರು.

”ಉರಿಗೌಡ ನಂಜೇಗೌಡ ಎಂಬುದು ಸುಳ್ಳು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದು ಮುಸ್ಲಿಂರು ಮತ್ತು ಒಕ್ಕಲಿಗರ ನಡುವೆ ದ್ವೇಷ ಬಿತ್ತುವ ಪ್ರಯತ್ನವಾಗಿದೆ, ಅದು ಯಾವುದೇ ಕಾರಣಕ್ಕೂ ಸಫಲ ಆಗಲ್ಲ. ಟಿಪ್ಪು ಒಬ್ಬ ಮಹಾನ್ ಸ್ವಾತಂತ್ರ ಹೋರಾಟಗಾರ, ಅದ್ಭುತ ಕೆಲಸಗಳನ್ನು ಸಹ ಮಾಡಿದ್ದಾರೆ.. ಅವರ ಖಡ್ಗವನ್ನ ನಾವು ಒಪ್ಪಲ್ಲ, ಆದರೆ ಅವರ ಸುಧಾರಣೆ ಇವತ್ತಿನ ದಿನ ನಮಗೆ ಅಗತ್ಯ ಇದೆ . ಅದೇ ರೀತಿಯಲ್ಲಿ ನಮಗೆ ಬಹಳ ಮುಖ್ಯವಾಗಿ ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಪುಲೆ, ಹಾಗೂ ಗಾಂಧಿಯವರ ಸಮಾನತೆ, ನ್ಯಾಯ, ವೈಜ್ಞಾನಿಕತೆ ಮತ್ತು ಅಹಿಂಸೆ ನಮಗೆ ಅಗತ್ಯ ಇದೆ, ಅದೇ ನಮ್ಮ ಶಕ್ತಿ. ಸಮಾನತೆಯೇ ಸತ್ಯ ಸಮಾನತೆಯೇ ಪರಿವರ್ತನೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್: ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮಾದ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಚೇತನ್, ”ಇದು ನನ್ನನ್ನ ಮಾತ್ರ ಕುಗ್ಗಿಸುವ ಪ್ರಯತ್ನ ಅಲ್ಲ, ಲಕ್ಷಾಂತರ ಸಮಾನತಾವಾದಿಗಳನ್ನು ಕುಗ್ಗಿಸುವ ಪ್ರಯತ್ನವಾಗಿದೆ. ನಾವು ಸತ್ಯ ಮಾತನಾಡಿದರೆ ಜೈಲಿಗೆ ಹಾಕುವ ಪ್ರಯತ್ನ ನಡೆಯುತ್ತದೆ. ಆದರೆ ಅವರು ನಮ್ಮನ್ನ ವಿಚಾರಗಳಲ್ಲಿ ಸೋಲಿಸೋಕಾಗಲ್ಲ ಹಾಗಾಗಿ ಜೈಲಿಗೆ ಹಾಕುವ ಪ್ರಯತ್ನ ಮಾಡುತ್ತಾರೆ. ಅವರಲ್ಲಿ ವಿಚಾರಗಳೇ ಇಲ್ಲ, ಬರೀ ಸುಳ್ಳು, ದ್ವೇಷ, ಅಸಮಾನತೆ, ಹಿಂಸೆ ಇದೆ. ಸಮಾನತಾವಾದಿಗಳಾದ ನಾವುಗಳು ಸಂವಿಧಾನದ ಪೀಠಿಕೆಯನ್ನು ಎತ್ತಿಹಿಡಿಯುತ್ತೇವೆ, ನಾವೇ ನಿಜವಾದ ಭಾರತೀಯರು” ಎಂದರು.

”ನಿಮಗೆ ತಾಕತ್ತಿದ್ದರೆ ವಿಚಾರದಲ್ಲಿ ಸೋಲಿಸಿ, ಯಾವುದೇ ತಪ್ಪಿಲ್ಲದೇ ನಮ್ಮನ್ನ ನೀವು ಜೈಲಿಗೆ ಹಾಕುತ್ತಿದ್ದಿರಿ. ಸಾವಿರಾರು ವರ್ಷಗಳಿಂದ ನಮನ್ನ ಸತ್ಯ ಹೇಳಲಿಕ್ಕೆ ಬಿಟ್ಟಿಲ್ಲ ನೀವು.. ಬಸವಣ್ಣನವರ ವಚನಗಳನ್ನೇ ಸುಟ್ಟು ಹಾಕಿದ್ದಾರೆ. ಬಾಬಾಸಾಹೇಬರ ವಿಚಾರಗಳು ಇಂದಿಗೂ ಬೆಳಕಿಗೆ ಬರಲ್ಲ. ಪೆರಿಯಾರ್ ವಿಚಾರಗಳನ್ನ ಮುಚ್ಚಿಹಾಕುತ್ತಿದ್ದೀರಿ. ಆದರೆ ಸಮಾನತೆಯೇ ಸತ್ಯ ನಮ್ಮ ಹೋರಾಟ ಹೀಗೆ ಮುಂದುವರೆಯುತ್ತದೆ” ಎಂದು ನಟ ಚೇತನ್ ಹೇಳಿದ್ದಾರೆ.

ಗುರುವಾರ, ನಟ ಚೇತನ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 32ನೇ ಎಸಿಎಂಎಂ ನ್ಯಾಯಾಧೀಶೆ ಜೆ.ಲತಾ ಅವರು, 25 ಸಾವಿರ ರೂ. ವೈಯಕ್ತಿಕ ಬಾಂಡ್ ಅಥವಾ ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಲು ಆದೇಶಿಸಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸುವಂತೆ ನಿರ್ದೇಶನ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...