Homeಕರ್ನಾಟಕಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

- Advertisement -
- Advertisement -

ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಶೇಷಾದ್ರಿಪುರಂ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ಅವರು ಗುರುವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಪರಪ್ಪನ ಅಗ್ರಹಾರ ಬಳಿ ಮಾತನಾಡಿದ ಚೇತನ್, ”ಕಳೆದ ಬಾರಿ ಟ್ವೀಟ್ ಮಾಡಿದ್ದಕ್ಕೆ ಏಳು ದಿನ ಜೈಲಿಗೆ ಹಾಕಿದ್ದರು. ಈ ಬಾರಿ ‌ಟ್ವೀಟ್ ಮಾಡಿದಕ್ಕೆ ಮೂರು ದಿನ‌ ಬಂಧನ ಮಾಡಿದ್ದಾರೆ. ಹಿಂದುತ್ವ ಅನ್ನೋದು ಯಾವುದು ಇಲ್ಲ. ಲಿಂಗಾಯುತ ಪ್ರತ್ಯೇಕ ಧರ್ಮ ಕೇಳಿದಂತೆ ಹಿಂದುತ್ವವನ್ನು ಕೇಳಿ. ನಾವು ನಿಮ್ಮ ಜೊತೆಗೆ ನಿಲ್ಲುತ್ತೇವೆ. ಆದರೆ ಹಿಂದುತ್ವವನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ. ಈಗಲೂ ನಾನು ಹೇಳುತ್ತೇನೆ ಇದನ್ನು ಒಪ್ಪಲು ಸಾಧ್ಯ ಇಲ್ಲ. ಇನ್ನಷ್ಟು ಬಾರಿ ಬಂಧಿಸಿದರೂ ನಾನು ಹೆದರುವುದಿಲ್ಲ. ಹೋರಾಟಗಾರನಿಗೆ ಸೆರೆಮನೆಯೂ ಅರಮನೆಯೇ..” ಎಂದು ಹೇಳಿದರು.

”ಉರಿಗೌಡ ನಂಜೇಗೌಡ ಎನ್ನುವುದು ಶುದ್ಧಸುಳ್ಳು, ಅವರು ಕಾಲ್ಪನಿಕ ವ್ಯಕ್ತಿಗಳು ಎಂದು ಇತಿಹಾಸ ತಜ್ಞರು, ಬುದ್ದಿವಂತರು, ವಿಚಾರವಂತರು ಹಾಗೂ ಓದಿರುವವರೆಲ್ಲರೂ ಹೇಳುತ್ತಾರೆ. ಆ ನಿಟ್ಟಿನಲ್ಲಿ ಉರಿಗೌಡ ನಂಜೇಗೌಡ ಇದ್ದರು ಎನ್ನುವುದಕ್ಕೆ ಯಾವದೇ ದಾಖಲೆಗಳು ಇಲ್ಲ. ಅದೇ ರೀತಿ ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ. ನನ್ನ ಟ್ವೀಟ್‌ನಲ್ಲೇ ಹೇಳಿದ್ದೇನೆ. ಸಾವರ್ಕರ್‌ನಿಂದ ಹೇಳಿದ ಸುಳ್ಳುಗಳು, 1992ರಲ್ಲಿ ಆಗಿರುವ ಸುಳ್ಳುಗಳು, 2023ರಲ್ಲಿ ಆಗಿರುವ ಸುಳ್ಳುಗಳು, ಈ ಎಲ್ಲ ಸುಳ್ಳುಗಳ ಮೇಲೆ ಹಿಂದುತ್ವ ನಡೆಯುತ್ತಿದೆ” ಎಂದು ಜೈಲಿಗೆ ಕಳುಹಿಸಲು ಕಾರವಾಗಿದ್ದ ಟ್ವೀಟ್‌ನ್ನೇ ಚೇತನ್ ಪುನರುಚ್ಚರಿಸಿದರು.

”ಉರಿಗೌಡ ನಂಜೇಗೌಡ ಎಂಬುದು ಸುಳ್ಳು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದು ಮುಸ್ಲಿಂರು ಮತ್ತು ಒಕ್ಕಲಿಗರ ನಡುವೆ ದ್ವೇಷ ಬಿತ್ತುವ ಪ್ರಯತ್ನವಾಗಿದೆ, ಅದು ಯಾವುದೇ ಕಾರಣಕ್ಕೂ ಸಫಲ ಆಗಲ್ಲ. ಟಿಪ್ಪು ಒಬ್ಬ ಮಹಾನ್ ಸ್ವಾತಂತ್ರ ಹೋರಾಟಗಾರ, ಅದ್ಭುತ ಕೆಲಸಗಳನ್ನು ಸಹ ಮಾಡಿದ್ದಾರೆ.. ಅವರ ಖಡ್ಗವನ್ನ ನಾವು ಒಪ್ಪಲ್ಲ, ಆದರೆ ಅವರ ಸುಧಾರಣೆ ಇವತ್ತಿನ ದಿನ ನಮಗೆ ಅಗತ್ಯ ಇದೆ . ಅದೇ ರೀತಿಯಲ್ಲಿ ನಮಗೆ ಬಹಳ ಮುಖ್ಯವಾಗಿ ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಪುಲೆ, ಹಾಗೂ ಗಾಂಧಿಯವರ ಸಮಾನತೆ, ನ್ಯಾಯ, ವೈಜ್ಞಾನಿಕತೆ ಮತ್ತು ಅಹಿಂಸೆ ನಮಗೆ ಅಗತ್ಯ ಇದೆ, ಅದೇ ನಮ್ಮ ಶಕ್ತಿ. ಸಮಾನತೆಯೇ ಸತ್ಯ ಸಮಾನತೆಯೇ ಪರಿವರ್ತನೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್: ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮಾದ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಚೇತನ್, ”ಇದು ನನ್ನನ್ನ ಮಾತ್ರ ಕುಗ್ಗಿಸುವ ಪ್ರಯತ್ನ ಅಲ್ಲ, ಲಕ್ಷಾಂತರ ಸಮಾನತಾವಾದಿಗಳನ್ನು ಕುಗ್ಗಿಸುವ ಪ್ರಯತ್ನವಾಗಿದೆ. ನಾವು ಸತ್ಯ ಮಾತನಾಡಿದರೆ ಜೈಲಿಗೆ ಹಾಕುವ ಪ್ರಯತ್ನ ನಡೆಯುತ್ತದೆ. ಆದರೆ ಅವರು ನಮ್ಮನ್ನ ವಿಚಾರಗಳಲ್ಲಿ ಸೋಲಿಸೋಕಾಗಲ್ಲ ಹಾಗಾಗಿ ಜೈಲಿಗೆ ಹಾಕುವ ಪ್ರಯತ್ನ ಮಾಡುತ್ತಾರೆ. ಅವರಲ್ಲಿ ವಿಚಾರಗಳೇ ಇಲ್ಲ, ಬರೀ ಸುಳ್ಳು, ದ್ವೇಷ, ಅಸಮಾನತೆ, ಹಿಂಸೆ ಇದೆ. ಸಮಾನತಾವಾದಿಗಳಾದ ನಾವುಗಳು ಸಂವಿಧಾನದ ಪೀಠಿಕೆಯನ್ನು ಎತ್ತಿಹಿಡಿಯುತ್ತೇವೆ, ನಾವೇ ನಿಜವಾದ ಭಾರತೀಯರು” ಎಂದರು.

”ನಿಮಗೆ ತಾಕತ್ತಿದ್ದರೆ ವಿಚಾರದಲ್ಲಿ ಸೋಲಿಸಿ, ಯಾವುದೇ ತಪ್ಪಿಲ್ಲದೇ ನಮ್ಮನ್ನ ನೀವು ಜೈಲಿಗೆ ಹಾಕುತ್ತಿದ್ದಿರಿ. ಸಾವಿರಾರು ವರ್ಷಗಳಿಂದ ನಮನ್ನ ಸತ್ಯ ಹೇಳಲಿಕ್ಕೆ ಬಿಟ್ಟಿಲ್ಲ ನೀವು.. ಬಸವಣ್ಣನವರ ವಚನಗಳನ್ನೇ ಸುಟ್ಟು ಹಾಕಿದ್ದಾರೆ. ಬಾಬಾಸಾಹೇಬರ ವಿಚಾರಗಳು ಇಂದಿಗೂ ಬೆಳಕಿಗೆ ಬರಲ್ಲ. ಪೆರಿಯಾರ್ ವಿಚಾರಗಳನ್ನ ಮುಚ್ಚಿಹಾಕುತ್ತಿದ್ದೀರಿ. ಆದರೆ ಸಮಾನತೆಯೇ ಸತ್ಯ ನಮ್ಮ ಹೋರಾಟ ಹೀಗೆ ಮುಂದುವರೆಯುತ್ತದೆ” ಎಂದು ನಟ ಚೇತನ್ ಹೇಳಿದ್ದಾರೆ.

ಗುರುವಾರ, ನಟ ಚೇತನ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 32ನೇ ಎಸಿಎಂಎಂ ನ್ಯಾಯಾಧೀಶೆ ಜೆ.ಲತಾ ಅವರು, 25 ಸಾವಿರ ರೂ. ವೈಯಕ್ತಿಕ ಬಾಂಡ್ ಅಥವಾ ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಲು ಆದೇಶಿಸಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸುವಂತೆ ನಿರ್ದೇಶನ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...