Homeಕರ್ನಾಟಕಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

- Advertisement -
- Advertisement -

ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಶೇಷಾದ್ರಿಪುರಂ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ಅವರು ಗುರುವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಪರಪ್ಪನ ಅಗ್ರಹಾರ ಬಳಿ ಮಾತನಾಡಿದ ಚೇತನ್, ”ಕಳೆದ ಬಾರಿ ಟ್ವೀಟ್ ಮಾಡಿದ್ದಕ್ಕೆ ಏಳು ದಿನ ಜೈಲಿಗೆ ಹಾಕಿದ್ದರು. ಈ ಬಾರಿ ‌ಟ್ವೀಟ್ ಮಾಡಿದಕ್ಕೆ ಮೂರು ದಿನ‌ ಬಂಧನ ಮಾಡಿದ್ದಾರೆ. ಹಿಂದುತ್ವ ಅನ್ನೋದು ಯಾವುದು ಇಲ್ಲ. ಲಿಂಗಾಯುತ ಪ್ರತ್ಯೇಕ ಧರ್ಮ ಕೇಳಿದಂತೆ ಹಿಂದುತ್ವವನ್ನು ಕೇಳಿ. ನಾವು ನಿಮ್ಮ ಜೊತೆಗೆ ನಿಲ್ಲುತ್ತೇವೆ. ಆದರೆ ಹಿಂದುತ್ವವನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ. ಈಗಲೂ ನಾನು ಹೇಳುತ್ತೇನೆ ಇದನ್ನು ಒಪ್ಪಲು ಸಾಧ್ಯ ಇಲ್ಲ. ಇನ್ನಷ್ಟು ಬಾರಿ ಬಂಧಿಸಿದರೂ ನಾನು ಹೆದರುವುದಿಲ್ಲ. ಹೋರಾಟಗಾರನಿಗೆ ಸೆರೆಮನೆಯೂ ಅರಮನೆಯೇ..” ಎಂದು ಹೇಳಿದರು.

”ಉರಿಗೌಡ ನಂಜೇಗೌಡ ಎನ್ನುವುದು ಶುದ್ಧಸುಳ್ಳು, ಅವರು ಕಾಲ್ಪನಿಕ ವ್ಯಕ್ತಿಗಳು ಎಂದು ಇತಿಹಾಸ ತಜ್ಞರು, ಬುದ್ದಿವಂತರು, ವಿಚಾರವಂತರು ಹಾಗೂ ಓದಿರುವವರೆಲ್ಲರೂ ಹೇಳುತ್ತಾರೆ. ಆ ನಿಟ್ಟಿನಲ್ಲಿ ಉರಿಗೌಡ ನಂಜೇಗೌಡ ಇದ್ದರು ಎನ್ನುವುದಕ್ಕೆ ಯಾವದೇ ದಾಖಲೆಗಳು ಇಲ್ಲ. ಅದೇ ರೀತಿ ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ. ನನ್ನ ಟ್ವೀಟ್‌ನಲ್ಲೇ ಹೇಳಿದ್ದೇನೆ. ಸಾವರ್ಕರ್‌ನಿಂದ ಹೇಳಿದ ಸುಳ್ಳುಗಳು, 1992ರಲ್ಲಿ ಆಗಿರುವ ಸುಳ್ಳುಗಳು, 2023ರಲ್ಲಿ ಆಗಿರುವ ಸುಳ್ಳುಗಳು, ಈ ಎಲ್ಲ ಸುಳ್ಳುಗಳ ಮೇಲೆ ಹಿಂದುತ್ವ ನಡೆಯುತ್ತಿದೆ” ಎಂದು ಜೈಲಿಗೆ ಕಳುಹಿಸಲು ಕಾರವಾಗಿದ್ದ ಟ್ವೀಟ್‌ನ್ನೇ ಚೇತನ್ ಪುನರುಚ್ಚರಿಸಿದರು.

”ಉರಿಗೌಡ ನಂಜೇಗೌಡ ಎಂಬುದು ಸುಳ್ಳು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದು ಮುಸ್ಲಿಂರು ಮತ್ತು ಒಕ್ಕಲಿಗರ ನಡುವೆ ದ್ವೇಷ ಬಿತ್ತುವ ಪ್ರಯತ್ನವಾಗಿದೆ, ಅದು ಯಾವುದೇ ಕಾರಣಕ್ಕೂ ಸಫಲ ಆಗಲ್ಲ. ಟಿಪ್ಪು ಒಬ್ಬ ಮಹಾನ್ ಸ್ವಾತಂತ್ರ ಹೋರಾಟಗಾರ, ಅದ್ಭುತ ಕೆಲಸಗಳನ್ನು ಸಹ ಮಾಡಿದ್ದಾರೆ.. ಅವರ ಖಡ್ಗವನ್ನ ನಾವು ಒಪ್ಪಲ್ಲ, ಆದರೆ ಅವರ ಸುಧಾರಣೆ ಇವತ್ತಿನ ದಿನ ನಮಗೆ ಅಗತ್ಯ ಇದೆ . ಅದೇ ರೀತಿಯಲ್ಲಿ ನಮಗೆ ಬಹಳ ಮುಖ್ಯವಾಗಿ ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಪುಲೆ, ಹಾಗೂ ಗಾಂಧಿಯವರ ಸಮಾನತೆ, ನ್ಯಾಯ, ವೈಜ್ಞಾನಿಕತೆ ಮತ್ತು ಅಹಿಂಸೆ ನಮಗೆ ಅಗತ್ಯ ಇದೆ, ಅದೇ ನಮ್ಮ ಶಕ್ತಿ. ಸಮಾನತೆಯೇ ಸತ್ಯ ಸಮಾನತೆಯೇ ಪರಿವರ್ತನೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್: ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮಾದ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಚೇತನ್, ”ಇದು ನನ್ನನ್ನ ಮಾತ್ರ ಕುಗ್ಗಿಸುವ ಪ್ರಯತ್ನ ಅಲ್ಲ, ಲಕ್ಷಾಂತರ ಸಮಾನತಾವಾದಿಗಳನ್ನು ಕುಗ್ಗಿಸುವ ಪ್ರಯತ್ನವಾಗಿದೆ. ನಾವು ಸತ್ಯ ಮಾತನಾಡಿದರೆ ಜೈಲಿಗೆ ಹಾಕುವ ಪ್ರಯತ್ನ ನಡೆಯುತ್ತದೆ. ಆದರೆ ಅವರು ನಮ್ಮನ್ನ ವಿಚಾರಗಳಲ್ಲಿ ಸೋಲಿಸೋಕಾಗಲ್ಲ ಹಾಗಾಗಿ ಜೈಲಿಗೆ ಹಾಕುವ ಪ್ರಯತ್ನ ಮಾಡುತ್ತಾರೆ. ಅವರಲ್ಲಿ ವಿಚಾರಗಳೇ ಇಲ್ಲ, ಬರೀ ಸುಳ್ಳು, ದ್ವೇಷ, ಅಸಮಾನತೆ, ಹಿಂಸೆ ಇದೆ. ಸಮಾನತಾವಾದಿಗಳಾದ ನಾವುಗಳು ಸಂವಿಧಾನದ ಪೀಠಿಕೆಯನ್ನು ಎತ್ತಿಹಿಡಿಯುತ್ತೇವೆ, ನಾವೇ ನಿಜವಾದ ಭಾರತೀಯರು” ಎಂದರು.

”ನಿಮಗೆ ತಾಕತ್ತಿದ್ದರೆ ವಿಚಾರದಲ್ಲಿ ಸೋಲಿಸಿ, ಯಾವುದೇ ತಪ್ಪಿಲ್ಲದೇ ನಮ್ಮನ್ನ ನೀವು ಜೈಲಿಗೆ ಹಾಕುತ್ತಿದ್ದಿರಿ. ಸಾವಿರಾರು ವರ್ಷಗಳಿಂದ ನಮನ್ನ ಸತ್ಯ ಹೇಳಲಿಕ್ಕೆ ಬಿಟ್ಟಿಲ್ಲ ನೀವು.. ಬಸವಣ್ಣನವರ ವಚನಗಳನ್ನೇ ಸುಟ್ಟು ಹಾಕಿದ್ದಾರೆ. ಬಾಬಾಸಾಹೇಬರ ವಿಚಾರಗಳು ಇಂದಿಗೂ ಬೆಳಕಿಗೆ ಬರಲ್ಲ. ಪೆರಿಯಾರ್ ವಿಚಾರಗಳನ್ನ ಮುಚ್ಚಿಹಾಕುತ್ತಿದ್ದೀರಿ. ಆದರೆ ಸಮಾನತೆಯೇ ಸತ್ಯ ನಮ್ಮ ಹೋರಾಟ ಹೀಗೆ ಮುಂದುವರೆಯುತ್ತದೆ” ಎಂದು ನಟ ಚೇತನ್ ಹೇಳಿದ್ದಾರೆ.

ಗುರುವಾರ, ನಟ ಚೇತನ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 32ನೇ ಎಸಿಎಂಎಂ ನ್ಯಾಯಾಧೀಶೆ ಜೆ.ಲತಾ ಅವರು, 25 ಸಾವಿರ ರೂ. ವೈಯಕ್ತಿಕ ಬಾಂಡ್ ಅಥವಾ ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಲು ಆದೇಶಿಸಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸುವಂತೆ ನಿರ್ದೇಶನ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...