Homeಕರ್ನಾಟಕಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

- Advertisement -
- Advertisement -

ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಶೇಷಾದ್ರಿಪುರಂ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ಅವರು ಗುರುವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಪರಪ್ಪನ ಅಗ್ರಹಾರ ಬಳಿ ಮಾತನಾಡಿದ ಚೇತನ್, ”ಕಳೆದ ಬಾರಿ ಟ್ವೀಟ್ ಮಾಡಿದ್ದಕ್ಕೆ ಏಳು ದಿನ ಜೈಲಿಗೆ ಹಾಕಿದ್ದರು. ಈ ಬಾರಿ ‌ಟ್ವೀಟ್ ಮಾಡಿದಕ್ಕೆ ಮೂರು ದಿನ‌ ಬಂಧನ ಮಾಡಿದ್ದಾರೆ. ಹಿಂದುತ್ವ ಅನ್ನೋದು ಯಾವುದು ಇಲ್ಲ. ಲಿಂಗಾಯುತ ಪ್ರತ್ಯೇಕ ಧರ್ಮ ಕೇಳಿದಂತೆ ಹಿಂದುತ್ವವನ್ನು ಕೇಳಿ. ನಾವು ನಿಮ್ಮ ಜೊತೆಗೆ ನಿಲ್ಲುತ್ತೇವೆ. ಆದರೆ ಹಿಂದುತ್ವವನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ. ಈಗಲೂ ನಾನು ಹೇಳುತ್ತೇನೆ ಇದನ್ನು ಒಪ್ಪಲು ಸಾಧ್ಯ ಇಲ್ಲ. ಇನ್ನಷ್ಟು ಬಾರಿ ಬಂಧಿಸಿದರೂ ನಾನು ಹೆದರುವುದಿಲ್ಲ. ಹೋರಾಟಗಾರನಿಗೆ ಸೆರೆಮನೆಯೂ ಅರಮನೆಯೇ..” ಎಂದು ಹೇಳಿದರು.

”ಉರಿಗೌಡ ನಂಜೇಗೌಡ ಎನ್ನುವುದು ಶುದ್ಧಸುಳ್ಳು, ಅವರು ಕಾಲ್ಪನಿಕ ವ್ಯಕ್ತಿಗಳು ಎಂದು ಇತಿಹಾಸ ತಜ್ಞರು, ಬುದ್ದಿವಂತರು, ವಿಚಾರವಂತರು ಹಾಗೂ ಓದಿರುವವರೆಲ್ಲರೂ ಹೇಳುತ್ತಾರೆ. ಆ ನಿಟ್ಟಿನಲ್ಲಿ ಉರಿಗೌಡ ನಂಜೇಗೌಡ ಇದ್ದರು ಎನ್ನುವುದಕ್ಕೆ ಯಾವದೇ ದಾಖಲೆಗಳು ಇಲ್ಲ. ಅದೇ ರೀತಿ ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ. ನನ್ನ ಟ್ವೀಟ್‌ನಲ್ಲೇ ಹೇಳಿದ್ದೇನೆ. ಸಾವರ್ಕರ್‌ನಿಂದ ಹೇಳಿದ ಸುಳ್ಳುಗಳು, 1992ರಲ್ಲಿ ಆಗಿರುವ ಸುಳ್ಳುಗಳು, 2023ರಲ್ಲಿ ಆಗಿರುವ ಸುಳ್ಳುಗಳು, ಈ ಎಲ್ಲ ಸುಳ್ಳುಗಳ ಮೇಲೆ ಹಿಂದುತ್ವ ನಡೆಯುತ್ತಿದೆ” ಎಂದು ಜೈಲಿಗೆ ಕಳುಹಿಸಲು ಕಾರವಾಗಿದ್ದ ಟ್ವೀಟ್‌ನ್ನೇ ಚೇತನ್ ಪುನರುಚ್ಚರಿಸಿದರು.

”ಉರಿಗೌಡ ನಂಜೇಗೌಡ ಎಂಬುದು ಸುಳ್ಳು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದು ಮುಸ್ಲಿಂರು ಮತ್ತು ಒಕ್ಕಲಿಗರ ನಡುವೆ ದ್ವೇಷ ಬಿತ್ತುವ ಪ್ರಯತ್ನವಾಗಿದೆ, ಅದು ಯಾವುದೇ ಕಾರಣಕ್ಕೂ ಸಫಲ ಆಗಲ್ಲ. ಟಿಪ್ಪು ಒಬ್ಬ ಮಹಾನ್ ಸ್ವಾತಂತ್ರ ಹೋರಾಟಗಾರ, ಅದ್ಭುತ ಕೆಲಸಗಳನ್ನು ಸಹ ಮಾಡಿದ್ದಾರೆ.. ಅವರ ಖಡ್ಗವನ್ನ ನಾವು ಒಪ್ಪಲ್ಲ, ಆದರೆ ಅವರ ಸುಧಾರಣೆ ಇವತ್ತಿನ ದಿನ ನಮಗೆ ಅಗತ್ಯ ಇದೆ . ಅದೇ ರೀತಿಯಲ್ಲಿ ನಮಗೆ ಬಹಳ ಮುಖ್ಯವಾಗಿ ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಪುಲೆ, ಹಾಗೂ ಗಾಂಧಿಯವರ ಸಮಾನತೆ, ನ್ಯಾಯ, ವೈಜ್ಞಾನಿಕತೆ ಮತ್ತು ಅಹಿಂಸೆ ನಮಗೆ ಅಗತ್ಯ ಇದೆ, ಅದೇ ನಮ್ಮ ಶಕ್ತಿ. ಸಮಾನತೆಯೇ ಸತ್ಯ ಸಮಾನತೆಯೇ ಪರಿವರ್ತನೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್: ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮಾದ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಚೇತನ್, ”ಇದು ನನ್ನನ್ನ ಮಾತ್ರ ಕುಗ್ಗಿಸುವ ಪ್ರಯತ್ನ ಅಲ್ಲ, ಲಕ್ಷಾಂತರ ಸಮಾನತಾವಾದಿಗಳನ್ನು ಕುಗ್ಗಿಸುವ ಪ್ರಯತ್ನವಾಗಿದೆ. ನಾವು ಸತ್ಯ ಮಾತನಾಡಿದರೆ ಜೈಲಿಗೆ ಹಾಕುವ ಪ್ರಯತ್ನ ನಡೆಯುತ್ತದೆ. ಆದರೆ ಅವರು ನಮ್ಮನ್ನ ವಿಚಾರಗಳಲ್ಲಿ ಸೋಲಿಸೋಕಾಗಲ್ಲ ಹಾಗಾಗಿ ಜೈಲಿಗೆ ಹಾಕುವ ಪ್ರಯತ್ನ ಮಾಡುತ್ತಾರೆ. ಅವರಲ್ಲಿ ವಿಚಾರಗಳೇ ಇಲ್ಲ, ಬರೀ ಸುಳ್ಳು, ದ್ವೇಷ, ಅಸಮಾನತೆ, ಹಿಂಸೆ ಇದೆ. ಸಮಾನತಾವಾದಿಗಳಾದ ನಾವುಗಳು ಸಂವಿಧಾನದ ಪೀಠಿಕೆಯನ್ನು ಎತ್ತಿಹಿಡಿಯುತ್ತೇವೆ, ನಾವೇ ನಿಜವಾದ ಭಾರತೀಯರು” ಎಂದರು.

”ನಿಮಗೆ ತಾಕತ್ತಿದ್ದರೆ ವಿಚಾರದಲ್ಲಿ ಸೋಲಿಸಿ, ಯಾವುದೇ ತಪ್ಪಿಲ್ಲದೇ ನಮ್ಮನ್ನ ನೀವು ಜೈಲಿಗೆ ಹಾಕುತ್ತಿದ್ದಿರಿ. ಸಾವಿರಾರು ವರ್ಷಗಳಿಂದ ನಮನ್ನ ಸತ್ಯ ಹೇಳಲಿಕ್ಕೆ ಬಿಟ್ಟಿಲ್ಲ ನೀವು.. ಬಸವಣ್ಣನವರ ವಚನಗಳನ್ನೇ ಸುಟ್ಟು ಹಾಕಿದ್ದಾರೆ. ಬಾಬಾಸಾಹೇಬರ ವಿಚಾರಗಳು ಇಂದಿಗೂ ಬೆಳಕಿಗೆ ಬರಲ್ಲ. ಪೆರಿಯಾರ್ ವಿಚಾರಗಳನ್ನ ಮುಚ್ಚಿಹಾಕುತ್ತಿದ್ದೀರಿ. ಆದರೆ ಸಮಾನತೆಯೇ ಸತ್ಯ ನಮ್ಮ ಹೋರಾಟ ಹೀಗೆ ಮುಂದುವರೆಯುತ್ತದೆ” ಎಂದು ನಟ ಚೇತನ್ ಹೇಳಿದ್ದಾರೆ.

ಗುರುವಾರ, ನಟ ಚೇತನ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 32ನೇ ಎಸಿಎಂಎಂ ನ್ಯಾಯಾಧೀಶೆ ಜೆ.ಲತಾ ಅವರು, 25 ಸಾವಿರ ರೂ. ವೈಯಕ್ತಿಕ ಬಾಂಡ್ ಅಥವಾ ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಲು ಆದೇಶಿಸಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸುವಂತೆ ನಿರ್ದೇಶನ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...