Homeಮುಖಪುಟದಲಿತರಿಲ್ಲದೆ ಹಿಂದುತ್ವ ಅಪೂರ್ಣ: ಬಿಜೆಪಿ ನಾಯಕ ಗುರು ಪ್ರಕಾಶ್ ಪಾಸ್ವಾನ್

ದಲಿತರಿಲ್ಲದೆ ಹಿಂದುತ್ವ ಅಪೂರ್ಣ: ಬಿಜೆಪಿ ನಾಯಕ ಗುರು ಪ್ರಕಾಶ್ ಪಾಸ್ವಾನ್

- Advertisement -
- Advertisement -

ದಲಿತರ ಸಬಲೀಕರಣವೇ ಹಿಂದುತ್ವ ಚಿಂತನೆ ಮತ್ತು ಭಾರತ ಸಂವಿಧಾನದ ತಿರುಳಾಗಿದೆ. ಭಾರತ ಸ್ವಾತಂತ್ರ್ಯ ಗಳಿಸಿದ 75 ವರ್ಷದಲ್ಲಿ ದಲಿತರ ಸಬಲೀಕರಣದ ಕಡೆಗೆ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ಬಿಜೆಪಿ ವಕ್ತಾರ ಗುರು ಪ್ರಕಾಶ್ ಪಾಸ್ವಾನ್ ಹೇಳಿದ್ದಾರೆ.

ನ್ಯೂಜೆರ್ಸಿಯಲ್ಲಿ ನಡೆಯುತ್ತಿರುವ ‘ಇಂಡಿಕ್ ಡೈಲಾಗ್’ ಕಾರ್ಯಕ್ರಮದ ಮೊದಲ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿರುವ ಅವರು, “ದಲಿತರಿಗೆ ಸಂಬಂಧಿಸಿದಂತೆ ತಾರತಮ್ಯದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರೂ, ದಲಿತರ ಸಬಲೀಕರಣವು ಹಿಂದುತ್ವ ಚಿಂತನೆ ಮತ್ತು ಭಾರತೀಯ ಸಂವಿಧಾನದ ತಿರುಳಾಗಿದೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಸ್ತುತ ಯುಎಸ್ ಪ್ರವಾಸದಲ್ಲಿರುವ ಪಾಸ್ವಾನ್, ಲಾಸ್ ಏಂಜಲೀಸ್ ಮತ್ತು ಸ್ಯಾನ್ ಜೋಸ್‌ನಲ್ಲಿ ನಡೆದ ‘ದಲಿತ, ಬಹುಜನ ಮತ್ತು ಹಿಂದುತ್ವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಭಾರತ ಸರ್ಕಾರದ ಒಳಗೊಳ್ಳುವಿಕೆ ಮತ್ತು ವೈವಿಧ್ಯತೆಯ ನೀತಿಗಳು’ ಎಂಬ ವಿಷಯದ ಕುರಿತು ಭಾಷಣ ಮಾಡಿದ್ದಾರೆ.

ಪಾಟ್ನಾ ವಿಶ್ವವಿದ್ಯಾನಿಲಯದ ಕಾನೂನು ಬೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಪಾಸ್ವಾನ್ ಅವರು ನ್ಯೂಜೆರ್ಸಿಯಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡುತ್ತಾ, “ರಾಮಾಯಣ, ಮಹಾಭಾರತ ಮತ್ತು ಭಾರತ ಸಂವಿಧಾನವು ಹಿಂದೂಗಳು ಮತ್ತು ಭಾರತವನ್ನು ವ್ಯಾಖ್ಯಾನಿಸುವ ಮೂರು ದಾಖಲೆಗಳಾಗಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಈ ಮೂರನ್ನೂ ದಲಿತರು (ರಾಮಾಯಣವನ್ನು ವಾಲ್ಮೀಕಿ ಮಹರ್ಷಿ, ಮಹಾಭಾರತವನ್ನು ವೇದವ್ಯಾಸರು ಮತ್ತು ಭಾರತದ ಸಂವಿಧಾನವನ್ನು ಡಾ.ಬಿ.ಆರ್‌.ಅಂಬೇಡ್ಕರ್‌‌) ರಚಿಸಿದ್ದಾರೆ. ಹಾಗಾದರೆ ದಲಿತರು ಭಾರತದ ಭಾಗವಾಗಿಲ್ಲ ಎಂಬ ಪ್ರಶ್ನೆ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಭಾರತದಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯಗಳು ಮತ್ತು ದಬ್ಬಾಳಿಕೆಯ ಇತಿಹಾಸವನ್ನು ನಿರಾಕರಿಸಲು ಅಥವಾ ಮುಚ್ಚಿಡಲು ಸಾಧ್ಯವಿಲ್ಲ ಎಂದೂ ಪಾಸ್ವಾನ್ ಒತ್ತಿ ಹೇಳಿದ್ದಾರೆ.

ಇದನ್ನೂ ಓದಿರಿ: ಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

“ಆದಾಗ್ಯೂ, ದಲಿತ ಸಬಲೀಕರಣವನ್ನು ಪ್ರತಿಪಾದಿಸುವ ಮೂಲಕ ಭಾರತವು 1950ರಿಂದ (ಜನವರಿ 26, 1950, ಭಾರತ ಗಣರಾಜ್ಯವು ಲಿಖಿತ ಸಂವಿಧಾನವನ್ನು ನೀಡಿದಾಗ) ಏನು ಮಾಡುತ್ತಿದೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಫಲಿತಾಂಶಗಳನ್ನು ನೋಡುವುದು ಸಹ ಮುಖ್ಯವಾಗಿದೆ” ಎಂದಿದ್ದಾರೆ.

ತಮ್ಮ ಭಾಷಣದಲ್ಲಿ ದಲಿತ ಚೇಂಬರ್ ಆಫ್ ಕಾಮರ್ಸ್, ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಅವರಂತಹ ಅಪ್ರತಿಮ ದಲಿತ ನಾಯಕರ ಪ್ರಭಾವದ ಬಗ್ಗೆ ಮಾತನಾಡಿದ್ದಾರೆ.

ಸ್ವಚ್ಛ ಭಾರತ್ ಮಿಷನ್, ಪಿಎಂ ಮುದ್ರಾ, ರಾಜ್ಯಪಾಲರ ನೇಮಕ, ರಾಷ್ಟ್ರೀಯ ನಾಗರಿಕ ಪ್ರಶಸ್ತಿಗಳಿಗೆ ದಲಿತರನ್ನು ಗುರುತಿಸುವುದು ಮೊದಲಾದ ವಿಚಾರಗಳ ಕುರಿತು ಪಾಸ್ವಾನ್ ಪ್ರಸ್ತಾಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಿಂದುತ್ವ ಅದೊಂದು ಅಸಮಾನತೆಯಿಂದ ಕೂಡಿದ ಗೊಡ್ಡು ಸಂಪ್ರದಾಯ ಮತ್ತು ಅನಾಗರೀಕ ಸಂಸ್ಕೃತಿ. ಅನಾಗರೀಕ ಆರ್ಯರು ತಮ್ಮ ಸ್ವಾರ್ಥ ಸಾಧನೆಗಾಗಿ ಸೃಷ್ಟಿಸಿಕೊಂಡಿರುವ ಕಾನೂನು. ಮೂಲತಃ ದಲಿತರು ಹಿಂದೂಗಳು ಅಲ್ಲವೇ ಅಲ್ಲ. ಅವರು ವಿಶಿಷ್ಟ ವೈಚಾರಿಕತೆ ಹೊಂದಿದ್ದ ನಾಗ ಜನಾಂಗದವರು. ಅವರು ಗೌತಮ ಬುದ್ಧನನ್ನು ಅನುಸರಿಸುತ್ತಿದ್ದರು.

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....