Homeಮುಖಪುಟಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ: ಬಿಜೆಪಿ ಮುಖಂಡರಿದ್ದ ವೇದಿಕೆಯಲ್ಲಿ ಹಿಂದುತ್ವವಾದಿಯ ದ್ವೇಷ ಭಾಷಣ

ಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ: ಬಿಜೆಪಿ ಮುಖಂಡರಿದ್ದ ವೇದಿಕೆಯಲ್ಲಿ ಹಿಂದುತ್ವವಾದಿಯ ದ್ವೇಷ ಭಾಷಣ

- Advertisement -
- Advertisement -

‘ಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ. ನಾನು ಸಂತನಾಗಿದ್ದರೂ ದ್ವೇಷವನ್ನು ಹರಡುತ್ತಿದ್ದೇನೆ ಎಂದು ನೀವು ಹೇಳಬಹುದು. ಆದರೆ ಕೆಲವೊಮ್ಮೆ ಬೆಂಕಿಯನ್ನು ಹೊತ್ತಿಸುವುದು ಮುಖ್ಯ. ನಾನು ನಿಮಗೆ ಹೇಳುತ್ತಿದ್ದೇನೆ, ನಿಮ್ಮ ಮನೆ, ರಸ್ತೆ, ನೆರೆಹೊರೆ, ಹಳ್ಳಿಗೆ ಯಾರೇ ಬಂದರು ಅವರನ್ನು ಕ್ಷಮಿಸಬೇಡಿ’ ಎಂದು ಛತ್ತೀಸ್ ಗಡದ ಸ್ವಾಮಿ ಪರಮಾತ್ಮಾನಂದ ಅಲ್ಪಸಂಖ್ಯಾತರ ಹತ್ಯೆಗೆ ಬಹಿರಂಗವಾಗಿ ಕರೆ ನೀಡಿರುವ ವಿಡಿಯೋ ಇತ್ತೀಚಿಗೆ ವೈರಲ್ ಆಗಿದೆ.

ಸಮಾನ ಮನಸ್ಕ ಹಿಂದುತ್ವವಾದಿಗಳ ಒಕ್ಕೂಟ, ಸರ್ವ ಸನಾತನ ಹಿಂದು ರಕ್ಷಾ ಮಂಚ್ ಅಕ್ಟೋಬರ್‌ 1ರಂದು ಆಯೋಜಿಸಿದ್ದ ‘ಧಾರ್ಮಿಕ ಮತಾಂತರ ನಿಲ್ಲಿಸಿ’ (ಬಂದ್‌ ಕರೋ ಧರ್ಮಾಂತರನ್‌) ಪ್ರತಿಭಟನೆಯಲ್ಲಿ ಸ್ವಾಮಿ ಪರಮಾತ್ಮಾನಂದ ಈ ದ್ವೇಷ ಭಾಷಣ ಮಾಡುವಾಗ ಛತ್ತೀಸ್ ಗಡದ ಬಿಜೆಪಿಯ ಪ್ರಭಾವಿ ನಾಯಕರಾದ ರಾಮ್ವಿಚಾರ್ ನೇತಮ್, ನಂದಕುಮಾರ್ ಸಾಯಿ ಮತ್ತು ಬಿಜೆಪಿಯ ವಕ್ತಾರ ಅನುರಾಗ್ ಸಿಂಗ್ ದೇವ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ವೇದಿಕೆಯಲ್ಲಿ ಹಾಜರಿದ್ದರು ಎಂದು ದಿ ವೈರ್ ವರದಿ ಮಾಡಿದೆ.

‘ನಾನೊಬ್ಬ ಸಂತ. ನಾನು ಹೆದರುವುದಿಲ್ಲ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಮನೆಯಲ್ಲಿ ಲಾಠಿ ಇಟ್ಟುಕೊಳ್ಳಿ, ನಮ್ಮ ಹಳ್ಳಿಗಳಲ್ಲಿ ಜನರು ಕೈ ಕೊಡಲಿ ಇಟ್ಟಕೊಳ್ಳುತ್ತಾರೆ. ಅವರು ಕೊಡಲಿಗಳನ್ನು ಏಕೆ ಇಟ್ಟುಕೊಳ್ಳುತ್ತಾರೆ? ನೀವು ನಿಮ್ಮ ಹತ್ತಿರ ಪರಶು ಇಟ್ಟುಕೊಳ್ಳಿ’ ಎಂದು ಕೋಮು ದ್ವೇಷ ಕಾರಿದ್ದಾರೆ.

ಮುಂದುವರೆದು, ‘ನೀವೇಕೆ ಬಾವಿಗಾಗಿ ಸಾಗರವನ್ನು ತೊರೆಯುತ್ತೀರಿ? ಎಂದು ಮತಾಂತರಗೊಂಡ ಕ್ರೈಸ್ತರೊಂದಿಗೆ ಮೊದಲು ಸೌಜನ್ಯದೊಂದಿಗೆ ಕೇಳಲು ಬಯಸುತ್ತೇನೆ. ಬೇಡ ಎನ್ನುತ್ತೇನೆ, ಕೊನೆಗೆ ಕೊಲ್ಲುತ್ತೇನೆ ಎಂದು ನಿಲ್ಲು, ಪ್ರತಿಭಟಿಸು, ಕೊಲ್ಲು (ರೊಕೊ, ಫಿರ್ ಟೊಕೊ, ಫಿರ್ ಥೋಕೊ) ನಿಯಮವನ್ನು ಪಾಲಿಸಿ’ ಎಂದಿದ್ದಾರೆ.

ವೀಡಿಯೋದಲ್ಲಿ, ಮಾಜಿ ಸಂಸದೆ ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಮಾಜಿ ಅಧ್ಯಕ್ಷ ನಂದ ಕುಮಾರ್ ಸಾಯಿ ಪರಮಾತ್ಮಾನಂದರ ಭಾಷಣಕ್ಕೆ ನಗುತ್ತಾ, ಚಪ್ಪಾಳೆ ತಟ್ಟುವುದು, ಅವರ ಮಾತುಗಳಿಗೆ ಒಪ್ಪಿಗೆ ಸೂಚಿಸಿರುವಂತೆ ಕಾಣುವುದನ್ನು ನೋಡಬಹುದು. ವೇದಿಕೆಯಲ್ಲಿ ನಾಯಕರೆಲ್ಲರೂ ಬಿಲ್ಲು, ಬಾಣ ಮತ್ತು ಈಟಿಯೊಂದಿಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.

ಸಂಸ್ಕೃತ ಮಂಡಳಿಯ ಮಾಜಿ ಮುಖ್ಯಸ್ಥ ಪರಮಾತ್ಮಾನಂದರ ಛತ್ತೀಸ್ ಗಡದ ಪ್ರಮುಖ ಹಿಂದುತ್ವವಾದಿ ನಾಯಕರಾಗಿದ್ದು, ಅಲ್ಪಸಂಖ್ಯಾತರ ವಿರುದ್ಧ ಹಿಂಸಾತ್ಮಕ ಹೇಳಿಕೆಗಳಿಗೆ ಕುಖ್ಯಾತರಾಗಿದ್ದಾರೆ. ಈ ಹಿಂದೆ ಹಸು ಕಳ್ಳ ಸಾಗಣೆದಾರರನ್ನು ಕೊಲ್ಲುವವರನ್ನು ಅಭಿನಂದಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. 2017ರಲ್ಲಿ ‘ಗೋವುಗಳನ್ನು ಕೊಲ್ಲುವವರನ್ನು ಗಾಜಿನ ಗುಂಡುಗಳಿಂದ ಹೊಡೆದು ಸಾಯಿಸಬೇಕು’ ಎಂದು ಹೇಳಿಕೆ ನೀಡಿದ್ದರು.

ಸಮಾನ ಮನಸ್ಕ ಹಿಂದುತ್ವವಾದಿಗಳ ಒಕ್ಕೂಟ ಸರ್ವ ಸನಾತನ ಹಿಂದು ರಕ್ಷಾ ಮಂಚ್, ಸುಕ್ಮಾದ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಸಲ್ಲಿಸಿದ್ದು, ಕಾನೂನು ಬಾಹಿರ’ ಧಾರ್ಮಿಕ ಮತಾಂತರವನ್ನು ತಡೆಗಟ್ಟಲು, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕ್ರಿಶ್ಚಿಯನ್ ಮಿಶನರಿಗಳು ಹಾಗೂ ಇತ್ತೀಚೆಗೆ ಮತಾಂತರಗೊಂಡ ಬುಡಕಟ್ಟು ಜನರ ಮೇಲೆ ಮೇಲೆ ಕಣ್ಣಿಡುವಂತೆ ಮನವಿ ಮಾಡಿತ್ತು.


ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...