Homeಮುಖಪುಟಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ: ಬಿಜೆಪಿ ಮುಖಂಡರಿದ್ದ ವೇದಿಕೆಯಲ್ಲಿ ಹಿಂದುತ್ವವಾದಿಯ ದ್ವೇಷ ಭಾಷಣ

ಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ: ಬಿಜೆಪಿ ಮುಖಂಡರಿದ್ದ ವೇದಿಕೆಯಲ್ಲಿ ಹಿಂದುತ್ವವಾದಿಯ ದ್ವೇಷ ಭಾಷಣ

- Advertisement -
- Advertisement -

‘ಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ. ನಾನು ಸಂತನಾಗಿದ್ದರೂ ದ್ವೇಷವನ್ನು ಹರಡುತ್ತಿದ್ದೇನೆ ಎಂದು ನೀವು ಹೇಳಬಹುದು. ಆದರೆ ಕೆಲವೊಮ್ಮೆ ಬೆಂಕಿಯನ್ನು ಹೊತ್ತಿಸುವುದು ಮುಖ್ಯ. ನಾನು ನಿಮಗೆ ಹೇಳುತ್ತಿದ್ದೇನೆ, ನಿಮ್ಮ ಮನೆ, ರಸ್ತೆ, ನೆರೆಹೊರೆ, ಹಳ್ಳಿಗೆ ಯಾರೇ ಬಂದರು ಅವರನ್ನು ಕ್ಷಮಿಸಬೇಡಿ’ ಎಂದು ಛತ್ತೀಸ್ ಗಡದ ಸ್ವಾಮಿ ಪರಮಾತ್ಮಾನಂದ ಅಲ್ಪಸಂಖ್ಯಾತರ ಹತ್ಯೆಗೆ ಬಹಿರಂಗವಾಗಿ ಕರೆ ನೀಡಿರುವ ವಿಡಿಯೋ ಇತ್ತೀಚಿಗೆ ವೈರಲ್ ಆಗಿದೆ.

ಸಮಾನ ಮನಸ್ಕ ಹಿಂದುತ್ವವಾದಿಗಳ ಒಕ್ಕೂಟ, ಸರ್ವ ಸನಾತನ ಹಿಂದು ರಕ್ಷಾ ಮಂಚ್ ಅಕ್ಟೋಬರ್‌ 1ರಂದು ಆಯೋಜಿಸಿದ್ದ ‘ಧಾರ್ಮಿಕ ಮತಾಂತರ ನಿಲ್ಲಿಸಿ’ (ಬಂದ್‌ ಕರೋ ಧರ್ಮಾಂತರನ್‌) ಪ್ರತಿಭಟನೆಯಲ್ಲಿ ಸ್ವಾಮಿ ಪರಮಾತ್ಮಾನಂದ ಈ ದ್ವೇಷ ಭಾಷಣ ಮಾಡುವಾಗ ಛತ್ತೀಸ್ ಗಡದ ಬಿಜೆಪಿಯ ಪ್ರಭಾವಿ ನಾಯಕರಾದ ರಾಮ್ವಿಚಾರ್ ನೇತಮ್, ನಂದಕುಮಾರ್ ಸಾಯಿ ಮತ್ತು ಬಿಜೆಪಿಯ ವಕ್ತಾರ ಅನುರಾಗ್ ಸಿಂಗ್ ದೇವ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ವೇದಿಕೆಯಲ್ಲಿ ಹಾಜರಿದ್ದರು ಎಂದು ದಿ ವೈರ್ ವರದಿ ಮಾಡಿದೆ.

‘ನಾನೊಬ್ಬ ಸಂತ. ನಾನು ಹೆದರುವುದಿಲ್ಲ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಮನೆಯಲ್ಲಿ ಲಾಠಿ ಇಟ್ಟುಕೊಳ್ಳಿ, ನಮ್ಮ ಹಳ್ಳಿಗಳಲ್ಲಿ ಜನರು ಕೈ ಕೊಡಲಿ ಇಟ್ಟಕೊಳ್ಳುತ್ತಾರೆ. ಅವರು ಕೊಡಲಿಗಳನ್ನು ಏಕೆ ಇಟ್ಟುಕೊಳ್ಳುತ್ತಾರೆ? ನೀವು ನಿಮ್ಮ ಹತ್ತಿರ ಪರಶು ಇಟ್ಟುಕೊಳ್ಳಿ’ ಎಂದು ಕೋಮು ದ್ವೇಷ ಕಾರಿದ್ದಾರೆ.

ಮುಂದುವರೆದು, ‘ನೀವೇಕೆ ಬಾವಿಗಾಗಿ ಸಾಗರವನ್ನು ತೊರೆಯುತ್ತೀರಿ? ಎಂದು ಮತಾಂತರಗೊಂಡ ಕ್ರೈಸ್ತರೊಂದಿಗೆ ಮೊದಲು ಸೌಜನ್ಯದೊಂದಿಗೆ ಕೇಳಲು ಬಯಸುತ್ತೇನೆ. ಬೇಡ ಎನ್ನುತ್ತೇನೆ, ಕೊನೆಗೆ ಕೊಲ್ಲುತ್ತೇನೆ ಎಂದು ನಿಲ್ಲು, ಪ್ರತಿಭಟಿಸು, ಕೊಲ್ಲು (ರೊಕೊ, ಫಿರ್ ಟೊಕೊ, ಫಿರ್ ಥೋಕೊ) ನಿಯಮವನ್ನು ಪಾಲಿಸಿ’ ಎಂದಿದ್ದಾರೆ.

ವೀಡಿಯೋದಲ್ಲಿ, ಮಾಜಿ ಸಂಸದೆ ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಮಾಜಿ ಅಧ್ಯಕ್ಷ ನಂದ ಕುಮಾರ್ ಸಾಯಿ ಪರಮಾತ್ಮಾನಂದರ ಭಾಷಣಕ್ಕೆ ನಗುತ್ತಾ, ಚಪ್ಪಾಳೆ ತಟ್ಟುವುದು, ಅವರ ಮಾತುಗಳಿಗೆ ಒಪ್ಪಿಗೆ ಸೂಚಿಸಿರುವಂತೆ ಕಾಣುವುದನ್ನು ನೋಡಬಹುದು. ವೇದಿಕೆಯಲ್ಲಿ ನಾಯಕರೆಲ್ಲರೂ ಬಿಲ್ಲು, ಬಾಣ ಮತ್ತು ಈಟಿಯೊಂದಿಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.

ಸಂಸ್ಕೃತ ಮಂಡಳಿಯ ಮಾಜಿ ಮುಖ್ಯಸ್ಥ ಪರಮಾತ್ಮಾನಂದರ ಛತ್ತೀಸ್ ಗಡದ ಪ್ರಮುಖ ಹಿಂದುತ್ವವಾದಿ ನಾಯಕರಾಗಿದ್ದು, ಅಲ್ಪಸಂಖ್ಯಾತರ ವಿರುದ್ಧ ಹಿಂಸಾತ್ಮಕ ಹೇಳಿಕೆಗಳಿಗೆ ಕುಖ್ಯಾತರಾಗಿದ್ದಾರೆ. ಈ ಹಿಂದೆ ಹಸು ಕಳ್ಳ ಸಾಗಣೆದಾರರನ್ನು ಕೊಲ್ಲುವವರನ್ನು ಅಭಿನಂದಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. 2017ರಲ್ಲಿ ‘ಗೋವುಗಳನ್ನು ಕೊಲ್ಲುವವರನ್ನು ಗಾಜಿನ ಗುಂಡುಗಳಿಂದ ಹೊಡೆದು ಸಾಯಿಸಬೇಕು’ ಎಂದು ಹೇಳಿಕೆ ನೀಡಿದ್ದರು.

ಸಮಾನ ಮನಸ್ಕ ಹಿಂದುತ್ವವಾದಿಗಳ ಒಕ್ಕೂಟ ಸರ್ವ ಸನಾತನ ಹಿಂದು ರಕ್ಷಾ ಮಂಚ್, ಸುಕ್ಮಾದ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಸಲ್ಲಿಸಿದ್ದು, ಕಾನೂನು ಬಾಹಿರ’ ಧಾರ್ಮಿಕ ಮತಾಂತರವನ್ನು ತಡೆಗಟ್ಟಲು, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕ್ರಿಶ್ಚಿಯನ್ ಮಿಶನರಿಗಳು ಹಾಗೂ ಇತ್ತೀಚೆಗೆ ಮತಾಂತರಗೊಂಡ ಬುಡಕಟ್ಟು ಜನರ ಮೇಲೆ ಮೇಲೆ ಕಣ್ಣಿಡುವಂತೆ ಮನವಿ ಮಾಡಿತ್ತು.


ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...