Homeಮುಖಪುಟಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ: ಬಿಜೆಪಿ ಮುಖಂಡರಿದ್ದ ವೇದಿಕೆಯಲ್ಲಿ ಹಿಂದುತ್ವವಾದಿಯ ದ್ವೇಷ ಭಾಷಣ

ಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ: ಬಿಜೆಪಿ ಮುಖಂಡರಿದ್ದ ವೇದಿಕೆಯಲ್ಲಿ ಹಿಂದುತ್ವವಾದಿಯ ದ್ವೇಷ ಭಾಷಣ

- Advertisement -
- Advertisement -

‘ಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ. ನಾನು ಸಂತನಾಗಿದ್ದರೂ ದ್ವೇಷವನ್ನು ಹರಡುತ್ತಿದ್ದೇನೆ ಎಂದು ನೀವು ಹೇಳಬಹುದು. ಆದರೆ ಕೆಲವೊಮ್ಮೆ ಬೆಂಕಿಯನ್ನು ಹೊತ್ತಿಸುವುದು ಮುಖ್ಯ. ನಾನು ನಿಮಗೆ ಹೇಳುತ್ತಿದ್ದೇನೆ, ನಿಮ್ಮ ಮನೆ, ರಸ್ತೆ, ನೆರೆಹೊರೆ, ಹಳ್ಳಿಗೆ ಯಾರೇ ಬಂದರು ಅವರನ್ನು ಕ್ಷಮಿಸಬೇಡಿ’ ಎಂದು ಛತ್ತೀಸ್ ಗಡದ ಸ್ವಾಮಿ ಪರಮಾತ್ಮಾನಂದ ಅಲ್ಪಸಂಖ್ಯಾತರ ಹತ್ಯೆಗೆ ಬಹಿರಂಗವಾಗಿ ಕರೆ ನೀಡಿರುವ ವಿಡಿಯೋ ಇತ್ತೀಚಿಗೆ ವೈರಲ್ ಆಗಿದೆ.

ಸಮಾನ ಮನಸ್ಕ ಹಿಂದುತ್ವವಾದಿಗಳ ಒಕ್ಕೂಟ, ಸರ್ವ ಸನಾತನ ಹಿಂದು ರಕ್ಷಾ ಮಂಚ್ ಅಕ್ಟೋಬರ್‌ 1ರಂದು ಆಯೋಜಿಸಿದ್ದ ‘ಧಾರ್ಮಿಕ ಮತಾಂತರ ನಿಲ್ಲಿಸಿ’ (ಬಂದ್‌ ಕರೋ ಧರ್ಮಾಂತರನ್‌) ಪ್ರತಿಭಟನೆಯಲ್ಲಿ ಸ್ವಾಮಿ ಪರಮಾತ್ಮಾನಂದ ಈ ದ್ವೇಷ ಭಾಷಣ ಮಾಡುವಾಗ ಛತ್ತೀಸ್ ಗಡದ ಬಿಜೆಪಿಯ ಪ್ರಭಾವಿ ನಾಯಕರಾದ ರಾಮ್ವಿಚಾರ್ ನೇತಮ್, ನಂದಕುಮಾರ್ ಸಾಯಿ ಮತ್ತು ಬಿಜೆಪಿಯ ವಕ್ತಾರ ಅನುರಾಗ್ ಸಿಂಗ್ ದೇವ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ವೇದಿಕೆಯಲ್ಲಿ ಹಾಜರಿದ್ದರು ಎಂದು ದಿ ವೈರ್ ವರದಿ ಮಾಡಿದೆ.

‘ನಾನೊಬ್ಬ ಸಂತ. ನಾನು ಹೆದರುವುದಿಲ್ಲ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಮನೆಯಲ್ಲಿ ಲಾಠಿ ಇಟ್ಟುಕೊಳ್ಳಿ, ನಮ್ಮ ಹಳ್ಳಿಗಳಲ್ಲಿ ಜನರು ಕೈ ಕೊಡಲಿ ಇಟ್ಟಕೊಳ್ಳುತ್ತಾರೆ. ಅವರು ಕೊಡಲಿಗಳನ್ನು ಏಕೆ ಇಟ್ಟುಕೊಳ್ಳುತ್ತಾರೆ? ನೀವು ನಿಮ್ಮ ಹತ್ತಿರ ಪರಶು ಇಟ್ಟುಕೊಳ್ಳಿ’ ಎಂದು ಕೋಮು ದ್ವೇಷ ಕಾರಿದ್ದಾರೆ.

ಮುಂದುವರೆದು, ‘ನೀವೇಕೆ ಬಾವಿಗಾಗಿ ಸಾಗರವನ್ನು ತೊರೆಯುತ್ತೀರಿ? ಎಂದು ಮತಾಂತರಗೊಂಡ ಕ್ರೈಸ್ತರೊಂದಿಗೆ ಮೊದಲು ಸೌಜನ್ಯದೊಂದಿಗೆ ಕೇಳಲು ಬಯಸುತ್ತೇನೆ. ಬೇಡ ಎನ್ನುತ್ತೇನೆ, ಕೊನೆಗೆ ಕೊಲ್ಲುತ್ತೇನೆ ಎಂದು ನಿಲ್ಲು, ಪ್ರತಿಭಟಿಸು, ಕೊಲ್ಲು (ರೊಕೊ, ಫಿರ್ ಟೊಕೊ, ಫಿರ್ ಥೋಕೊ) ನಿಯಮವನ್ನು ಪಾಲಿಸಿ’ ಎಂದಿದ್ದಾರೆ.

ವೀಡಿಯೋದಲ್ಲಿ, ಮಾಜಿ ಸಂಸದೆ ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಮಾಜಿ ಅಧ್ಯಕ್ಷ ನಂದ ಕುಮಾರ್ ಸಾಯಿ ಪರಮಾತ್ಮಾನಂದರ ಭಾಷಣಕ್ಕೆ ನಗುತ್ತಾ, ಚಪ್ಪಾಳೆ ತಟ್ಟುವುದು, ಅವರ ಮಾತುಗಳಿಗೆ ಒಪ್ಪಿಗೆ ಸೂಚಿಸಿರುವಂತೆ ಕಾಣುವುದನ್ನು ನೋಡಬಹುದು. ವೇದಿಕೆಯಲ್ಲಿ ನಾಯಕರೆಲ್ಲರೂ ಬಿಲ್ಲು, ಬಾಣ ಮತ್ತು ಈಟಿಯೊಂದಿಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.

ಸಂಸ್ಕೃತ ಮಂಡಳಿಯ ಮಾಜಿ ಮುಖ್ಯಸ್ಥ ಪರಮಾತ್ಮಾನಂದರ ಛತ್ತೀಸ್ ಗಡದ ಪ್ರಮುಖ ಹಿಂದುತ್ವವಾದಿ ನಾಯಕರಾಗಿದ್ದು, ಅಲ್ಪಸಂಖ್ಯಾತರ ವಿರುದ್ಧ ಹಿಂಸಾತ್ಮಕ ಹೇಳಿಕೆಗಳಿಗೆ ಕುಖ್ಯಾತರಾಗಿದ್ದಾರೆ. ಈ ಹಿಂದೆ ಹಸು ಕಳ್ಳ ಸಾಗಣೆದಾರರನ್ನು ಕೊಲ್ಲುವವರನ್ನು ಅಭಿನಂದಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. 2017ರಲ್ಲಿ ‘ಗೋವುಗಳನ್ನು ಕೊಲ್ಲುವವರನ್ನು ಗಾಜಿನ ಗುಂಡುಗಳಿಂದ ಹೊಡೆದು ಸಾಯಿಸಬೇಕು’ ಎಂದು ಹೇಳಿಕೆ ನೀಡಿದ್ದರು.

ಸಮಾನ ಮನಸ್ಕ ಹಿಂದುತ್ವವಾದಿಗಳ ಒಕ್ಕೂಟ ಸರ್ವ ಸನಾತನ ಹಿಂದು ರಕ್ಷಾ ಮಂಚ್, ಸುಕ್ಮಾದ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಸಲ್ಲಿಸಿದ್ದು, ಕಾನೂನು ಬಾಹಿರ’ ಧಾರ್ಮಿಕ ಮತಾಂತರವನ್ನು ತಡೆಗಟ್ಟಲು, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕ್ರಿಶ್ಚಿಯನ್ ಮಿಶನರಿಗಳು ಹಾಗೂ ಇತ್ತೀಚೆಗೆ ಮತಾಂತರಗೊಂಡ ಬುಡಕಟ್ಟು ಜನರ ಮೇಲೆ ಮೇಲೆ ಕಣ್ಣಿಡುವಂತೆ ಮನವಿ ಮಾಡಿತ್ತು.


ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...