Homeಮುಖಪುಟಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದಿದ್ದ ಹಿಂದುತ್ವ ಮುಖಂಡ ಅರೆಸ್ಟ್

ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದಿದ್ದ ಹಿಂದುತ್ವ ಮುಖಂಡ ಅರೆಸ್ಟ್

- Advertisement -
- Advertisement -

ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದು ನಾಲಿಗೆ ಹರಿಬಿಟ್ಟಿದ್ದ ಹಿಂದುತ್ವ ಸಂಘಟನೆಯ, ರಾಷ್ಟ್ರೀಯ ದಲಿತ ಸೇನೆಯ ಸಂಸ್ಥಾಪಕ ತೆಲಂಗಾಣದ ಹಮಾರಾ ಪ್ರಸಾದ್‌ನನ್ನು ಬಂಧಿಸಲಾಗಿದೆ. ಹಮಾರಾ ಪ್ರಸಾದ್, ಡಾ ಬಿಆರ್ ಅಂಬೇಡ್ಕರ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ವೀಡಿಯೊವನ್ನು ಹರಿಬಿಟ್ಟಿದ್ದನು.

ಹೈದರಾಬಾದ್ ಪೊಲೀಸರು ಶುಕ್ರವಾರ ಹಮಾರಾ ಪ್ರಸಾದ್‌ನನ್ನು ಬಂಧಿಸಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸರು, ”ಡಾ ಬಿಆರ್ ಅಂಬೇಡ್ಕರ್ ಅವರನ್ನು ನಿಂದನೆ ಮಾಡಿರುವ ವಿಡಿಯೋ ರೆಕಾರ್ಡ ಮಾಡಿಕೊಂಡು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ವೀಡಿಯೊಗಳನ್ನು ಫಾರ್ವರ್ಡ್ ಮಾಡಿದ ಹಮಾರಾ ಪ್ರಸಾದ್‌ರನ್ನು ಇಂದು ಬಂಧಿಸಿದ್ದೇವೆ. ಅವರ ವಿರುದ್ಧ 256/2023 ಯು/ಎಸ್ 153 ಎ, 505 (2) ಐಪಿಸಿ ಎಫ್‌ಐಆರ್ ದಾಖಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ’: ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

ಹಮಾರಾ ಪ್ರಸಾದ್ ಆ ವಿಡಿಯೋದಲ್ಲಿ, ಡಾ. ಬಿಆರ್ ಅಂಬೇಡ್ಕರ್ ಅವರು ಬರೆದಿರುವ ‘ಹಿಂದೂಯಿಸಂನಲ್ಲಿ ಒಗಟುಗಳು’ ಎನ್ನುವ ಪುಸ್ತಕವನ್ನು ಹಿಡಿದು, “ಈ ಮನುಷ್ಯ (ಅಂಬೇಡ್ಕರ್) ಸ್ಪಷ್ಟವಾಗಿ 12 ಡಿಗ್ರಿ (ಮಾಸ್ಟರ್ಸ್) ಹೊಂದಿರುವ ಬುದ್ಧಿಜೀವಿಯಾಗಿದ್ದಾರೆ. ರಾಷ್ಟ್ರನಾಯಕನಾದವನು ದೇಶದ ಎಲ್ಲ ಜನರನ್ನು ಸಮಾನವಾಗಿ ಕಾಣಬೇಕು. ಅವನು ಕಷ್ಟ ಅನುಭವಿಸಿದರೂ ಇತರರ ಮೇಲೆ ತನ್ನ ದ್ವೇಷವನ್ನು ತೋರಿಸಬಾರದು. ಅಂಬೇಡ್ಕರ್ ಅವರು ಈ ರೀತಿಯ ಕಸ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ” ಎಂದು ಹಮಾರಾ ಪ್ರಸಾದ್ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮುಂದುವರೆದು, ”ನಾನು ಅಂಬೇಡ್ಕರ್ ಬದುಕಿದ್ದಾಗ ಹುಟ್ಟಿದ್ದರೆ, ಈ ಪುಸ್ತಕ ನನ್ನ ಕಣ್ಣಿಗೆ ಬಿದ್ದಿದ್ದರೆ, ಗೋಡ್ಸೆ ಗಾಂಧಿಗೆ ಹೇಗೆ ಗುಂಡು ಹಾರಿಸಿದನೋ ಅದೇ ರೀತಿ ನಾನು ಅಂಬೇಡ್ಕರ್‌ಗೆ ಗುಂಡು ಹಾರಿಸುತ್ತಿದ್ದೆ” ಎಂದು ನಾಲಿಗೆ ಹರಿಬಿಟ್ಟಿದ್ದನು.

ಈ ವಿಚಾರವಾಗಿ ಹಮಾರಾ ಪ್ರಸಾದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಕ್ಷದ ತೆಲಂಗಾಣ ಮುಖ್ಯಸ್ಥ ಆರ್‌.ಎಸ್ ಪ್ರವೀಣ್ ಕುಮಾರ್ ಆಗ್ರಹಿಸಿದ್ದರು.

ವಿಡಿಯೊ ಕ್ಲಿಪ್ಪಿಂಗ್ ಶೇರ್ ಮಾಡಿದ್ದ ಆರ್‌.ಎಸ್. ಪ್ರವೀಣ್ ಕುಮಾರ್ ಅವರು, ಬಿಆರ್ ಎಸ್ ಪಕ್ಷವನ್ನು ಟ್ಯಾಗ್ ಮಾಡಿ, ಈ ‘ಈಡಿಯಟ್’ ವಿರುದ್ಧ 153 ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಅಡಿಯಲ್ಲಿ ಸರ್ಕಾರ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿದ್ದರು. ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್‌ನ ಅಡಿಯಲ್ಲಿ ಅವನನ್ನು ಜೈಲಿನಲ್ಲಿಡಿ ಎಂದು ಪ್ರವೀಣ್ ಕುಮಾರ್ ತಮ್ಮ ಆಕ್ರೋಶ ಹೊರಹಾಕಿದ್ದರು.

”ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸುವ ಮತ್ತು ಪರಿಶಿಷ್ಟ ಜಾತಿಯ ನಾಗರಿಕರ ಭಾವನೆಗಳಿಗೆ ನೋವುಂಟು ಮಾಡುವ ವೀಡಿಯೊಗಳನ್ನು ಮಾಡಿ ಮತ್ತು ಫಾರ್ವರ್ಡ್ ಮಾಡಿದ್ದಾರೆ” ಎಂದು ದಲಿತಪರ ಹೋರಾಟಗಾರ ಕಾರ್ತಿಕ್ ನವಯನ್ ಅವರು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರಿಗೆ ಆನ್‌ಲೈನ್ ದೂರು ದಾಖಲಿಸಿದ್ದರು.

ಆದರೆ, ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು, ಹಮಾರಾ ಪ್ರಸಾದ್ ವಿರುದ್ಧ ಇನ್ನೂ ಯಾವುದೇ ದೂರುಗಳು ಬಂದಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಇದಕ್ಕೆ ದಲಿತಪರ ಸಂಘಟನೆಗಳು ಮತ್ತು ಪ್ರಜ್ಞಾವಂತ ಜನರು, ತೆಲಂಗಾಣ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕೂಡಲೇ ಹಮಾರಾ ಪ್ರಸಾದ್‌ನನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...