Homeಮುಖಪುಟಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದಿದ್ದ ಹಿಂದುತ್ವ ಮುಖಂಡ ಅರೆಸ್ಟ್

ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದಿದ್ದ ಹಿಂದುತ್ವ ಮುಖಂಡ ಅರೆಸ್ಟ್

- Advertisement -
- Advertisement -

ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದು ನಾಲಿಗೆ ಹರಿಬಿಟ್ಟಿದ್ದ ಹಿಂದುತ್ವ ಸಂಘಟನೆಯ, ರಾಷ್ಟ್ರೀಯ ದಲಿತ ಸೇನೆಯ ಸಂಸ್ಥಾಪಕ ತೆಲಂಗಾಣದ ಹಮಾರಾ ಪ್ರಸಾದ್‌ನನ್ನು ಬಂಧಿಸಲಾಗಿದೆ. ಹಮಾರಾ ಪ್ರಸಾದ್, ಡಾ ಬಿಆರ್ ಅಂಬೇಡ್ಕರ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ವೀಡಿಯೊವನ್ನು ಹರಿಬಿಟ್ಟಿದ್ದನು.

ಹೈದರಾಬಾದ್ ಪೊಲೀಸರು ಶುಕ್ರವಾರ ಹಮಾರಾ ಪ್ರಸಾದ್‌ನನ್ನು ಬಂಧಿಸಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸರು, ”ಡಾ ಬಿಆರ್ ಅಂಬೇಡ್ಕರ್ ಅವರನ್ನು ನಿಂದನೆ ಮಾಡಿರುವ ವಿಡಿಯೋ ರೆಕಾರ್ಡ ಮಾಡಿಕೊಂಡು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ವೀಡಿಯೊಗಳನ್ನು ಫಾರ್ವರ್ಡ್ ಮಾಡಿದ ಹಮಾರಾ ಪ್ರಸಾದ್‌ರನ್ನು ಇಂದು ಬಂಧಿಸಿದ್ದೇವೆ. ಅವರ ವಿರುದ್ಧ 256/2023 ಯು/ಎಸ್ 153 ಎ, 505 (2) ಐಪಿಸಿ ಎಫ್‌ಐಆರ್ ದಾಖಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ’: ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

ಹಮಾರಾ ಪ್ರಸಾದ್ ಆ ವಿಡಿಯೋದಲ್ಲಿ, ಡಾ. ಬಿಆರ್ ಅಂಬೇಡ್ಕರ್ ಅವರು ಬರೆದಿರುವ ‘ಹಿಂದೂಯಿಸಂನಲ್ಲಿ ಒಗಟುಗಳು’ ಎನ್ನುವ ಪುಸ್ತಕವನ್ನು ಹಿಡಿದು, “ಈ ಮನುಷ್ಯ (ಅಂಬೇಡ್ಕರ್) ಸ್ಪಷ್ಟವಾಗಿ 12 ಡಿಗ್ರಿ (ಮಾಸ್ಟರ್ಸ್) ಹೊಂದಿರುವ ಬುದ್ಧಿಜೀವಿಯಾಗಿದ್ದಾರೆ. ರಾಷ್ಟ್ರನಾಯಕನಾದವನು ದೇಶದ ಎಲ್ಲ ಜನರನ್ನು ಸಮಾನವಾಗಿ ಕಾಣಬೇಕು. ಅವನು ಕಷ್ಟ ಅನುಭವಿಸಿದರೂ ಇತರರ ಮೇಲೆ ತನ್ನ ದ್ವೇಷವನ್ನು ತೋರಿಸಬಾರದು. ಅಂಬೇಡ್ಕರ್ ಅವರು ಈ ರೀತಿಯ ಕಸ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ” ಎಂದು ಹಮಾರಾ ಪ್ರಸಾದ್ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮುಂದುವರೆದು, ”ನಾನು ಅಂಬೇಡ್ಕರ್ ಬದುಕಿದ್ದಾಗ ಹುಟ್ಟಿದ್ದರೆ, ಈ ಪುಸ್ತಕ ನನ್ನ ಕಣ್ಣಿಗೆ ಬಿದ್ದಿದ್ದರೆ, ಗೋಡ್ಸೆ ಗಾಂಧಿಗೆ ಹೇಗೆ ಗುಂಡು ಹಾರಿಸಿದನೋ ಅದೇ ರೀತಿ ನಾನು ಅಂಬೇಡ್ಕರ್‌ಗೆ ಗುಂಡು ಹಾರಿಸುತ್ತಿದ್ದೆ” ಎಂದು ನಾಲಿಗೆ ಹರಿಬಿಟ್ಟಿದ್ದನು.

ಈ ವಿಚಾರವಾಗಿ ಹಮಾರಾ ಪ್ರಸಾದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಕ್ಷದ ತೆಲಂಗಾಣ ಮುಖ್ಯಸ್ಥ ಆರ್‌.ಎಸ್ ಪ್ರವೀಣ್ ಕುಮಾರ್ ಆಗ್ರಹಿಸಿದ್ದರು.

ವಿಡಿಯೊ ಕ್ಲಿಪ್ಪಿಂಗ್ ಶೇರ್ ಮಾಡಿದ್ದ ಆರ್‌.ಎಸ್. ಪ್ರವೀಣ್ ಕುಮಾರ್ ಅವರು, ಬಿಆರ್ ಎಸ್ ಪಕ್ಷವನ್ನು ಟ್ಯಾಗ್ ಮಾಡಿ, ಈ ‘ಈಡಿಯಟ್’ ವಿರುದ್ಧ 153 ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಅಡಿಯಲ್ಲಿ ಸರ್ಕಾರ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿದ್ದರು. ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್‌ನ ಅಡಿಯಲ್ಲಿ ಅವನನ್ನು ಜೈಲಿನಲ್ಲಿಡಿ ಎಂದು ಪ್ರವೀಣ್ ಕುಮಾರ್ ತಮ್ಮ ಆಕ್ರೋಶ ಹೊರಹಾಕಿದ್ದರು.

”ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸುವ ಮತ್ತು ಪರಿಶಿಷ್ಟ ಜಾತಿಯ ನಾಗರಿಕರ ಭಾವನೆಗಳಿಗೆ ನೋವುಂಟು ಮಾಡುವ ವೀಡಿಯೊಗಳನ್ನು ಮಾಡಿ ಮತ್ತು ಫಾರ್ವರ್ಡ್ ಮಾಡಿದ್ದಾರೆ” ಎಂದು ದಲಿತಪರ ಹೋರಾಟಗಾರ ಕಾರ್ತಿಕ್ ನವಯನ್ ಅವರು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರಿಗೆ ಆನ್‌ಲೈನ್ ದೂರು ದಾಖಲಿಸಿದ್ದರು.

ಆದರೆ, ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು, ಹಮಾರಾ ಪ್ರಸಾದ್ ವಿರುದ್ಧ ಇನ್ನೂ ಯಾವುದೇ ದೂರುಗಳು ಬಂದಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಇದಕ್ಕೆ ದಲಿತಪರ ಸಂಘಟನೆಗಳು ಮತ್ತು ಪ್ರಜ್ಞಾವಂತ ಜನರು, ತೆಲಂಗಾಣ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕೂಡಲೇ ಹಮಾರಾ ಪ್ರಸಾದ್‌ನನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

0
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ...