Homeಮುಖಪುಟಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದಿದ್ದ ಹಿಂದುತ್ವ ಮುಖಂಡ ಅರೆಸ್ಟ್

ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದಿದ್ದ ಹಿಂದುತ್ವ ಮುಖಂಡ ಅರೆಸ್ಟ್

- Advertisement -
- Advertisement -

ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದು ನಾಲಿಗೆ ಹರಿಬಿಟ್ಟಿದ್ದ ಹಿಂದುತ್ವ ಸಂಘಟನೆಯ, ರಾಷ್ಟ್ರೀಯ ದಲಿತ ಸೇನೆಯ ಸಂಸ್ಥಾಪಕ ತೆಲಂಗಾಣದ ಹಮಾರಾ ಪ್ರಸಾದ್‌ನನ್ನು ಬಂಧಿಸಲಾಗಿದೆ. ಹಮಾರಾ ಪ್ರಸಾದ್, ಡಾ ಬಿಆರ್ ಅಂಬೇಡ್ಕರ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ವೀಡಿಯೊವನ್ನು ಹರಿಬಿಟ್ಟಿದ್ದನು.

ಹೈದರಾಬಾದ್ ಪೊಲೀಸರು ಶುಕ್ರವಾರ ಹಮಾರಾ ಪ್ರಸಾದ್‌ನನ್ನು ಬಂಧಿಸಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸರು, ”ಡಾ ಬಿಆರ್ ಅಂಬೇಡ್ಕರ್ ಅವರನ್ನು ನಿಂದನೆ ಮಾಡಿರುವ ವಿಡಿಯೋ ರೆಕಾರ್ಡ ಮಾಡಿಕೊಂಡು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ವೀಡಿಯೊಗಳನ್ನು ಫಾರ್ವರ್ಡ್ ಮಾಡಿದ ಹಮಾರಾ ಪ್ರಸಾದ್‌ರನ್ನು ಇಂದು ಬಂಧಿಸಿದ್ದೇವೆ. ಅವರ ವಿರುದ್ಧ 256/2023 ಯು/ಎಸ್ 153 ಎ, 505 (2) ಐಪಿಸಿ ಎಫ್‌ಐಆರ್ ದಾಖಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ’: ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

ಹಮಾರಾ ಪ್ರಸಾದ್ ಆ ವಿಡಿಯೋದಲ್ಲಿ, ಡಾ. ಬಿಆರ್ ಅಂಬೇಡ್ಕರ್ ಅವರು ಬರೆದಿರುವ ‘ಹಿಂದೂಯಿಸಂನಲ್ಲಿ ಒಗಟುಗಳು’ ಎನ್ನುವ ಪುಸ್ತಕವನ್ನು ಹಿಡಿದು, “ಈ ಮನುಷ್ಯ (ಅಂಬೇಡ್ಕರ್) ಸ್ಪಷ್ಟವಾಗಿ 12 ಡಿಗ್ರಿ (ಮಾಸ್ಟರ್ಸ್) ಹೊಂದಿರುವ ಬುದ್ಧಿಜೀವಿಯಾಗಿದ್ದಾರೆ. ರಾಷ್ಟ್ರನಾಯಕನಾದವನು ದೇಶದ ಎಲ್ಲ ಜನರನ್ನು ಸಮಾನವಾಗಿ ಕಾಣಬೇಕು. ಅವನು ಕಷ್ಟ ಅನುಭವಿಸಿದರೂ ಇತರರ ಮೇಲೆ ತನ್ನ ದ್ವೇಷವನ್ನು ತೋರಿಸಬಾರದು. ಅಂಬೇಡ್ಕರ್ ಅವರು ಈ ರೀತಿಯ ಕಸ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ” ಎಂದು ಹಮಾರಾ ಪ್ರಸಾದ್ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮುಂದುವರೆದು, ”ನಾನು ಅಂಬೇಡ್ಕರ್ ಬದುಕಿದ್ದಾಗ ಹುಟ್ಟಿದ್ದರೆ, ಈ ಪುಸ್ತಕ ನನ್ನ ಕಣ್ಣಿಗೆ ಬಿದ್ದಿದ್ದರೆ, ಗೋಡ್ಸೆ ಗಾಂಧಿಗೆ ಹೇಗೆ ಗುಂಡು ಹಾರಿಸಿದನೋ ಅದೇ ರೀತಿ ನಾನು ಅಂಬೇಡ್ಕರ್‌ಗೆ ಗುಂಡು ಹಾರಿಸುತ್ತಿದ್ದೆ” ಎಂದು ನಾಲಿಗೆ ಹರಿಬಿಟ್ಟಿದ್ದನು.

ಈ ವಿಚಾರವಾಗಿ ಹಮಾರಾ ಪ್ರಸಾದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಕ್ಷದ ತೆಲಂಗಾಣ ಮುಖ್ಯಸ್ಥ ಆರ್‌.ಎಸ್ ಪ್ರವೀಣ್ ಕುಮಾರ್ ಆಗ್ರಹಿಸಿದ್ದರು.

ವಿಡಿಯೊ ಕ್ಲಿಪ್ಪಿಂಗ್ ಶೇರ್ ಮಾಡಿದ್ದ ಆರ್‌.ಎಸ್. ಪ್ರವೀಣ್ ಕುಮಾರ್ ಅವರು, ಬಿಆರ್ ಎಸ್ ಪಕ್ಷವನ್ನು ಟ್ಯಾಗ್ ಮಾಡಿ, ಈ ‘ಈಡಿಯಟ್’ ವಿರುದ್ಧ 153 ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಅಡಿಯಲ್ಲಿ ಸರ್ಕಾರ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿದ್ದರು. ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್‌ನ ಅಡಿಯಲ್ಲಿ ಅವನನ್ನು ಜೈಲಿನಲ್ಲಿಡಿ ಎಂದು ಪ್ರವೀಣ್ ಕುಮಾರ್ ತಮ್ಮ ಆಕ್ರೋಶ ಹೊರಹಾಕಿದ್ದರು.

”ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸುವ ಮತ್ತು ಪರಿಶಿಷ್ಟ ಜಾತಿಯ ನಾಗರಿಕರ ಭಾವನೆಗಳಿಗೆ ನೋವುಂಟು ಮಾಡುವ ವೀಡಿಯೊಗಳನ್ನು ಮಾಡಿ ಮತ್ತು ಫಾರ್ವರ್ಡ್ ಮಾಡಿದ್ದಾರೆ” ಎಂದು ದಲಿತಪರ ಹೋರಾಟಗಾರ ಕಾರ್ತಿಕ್ ನವಯನ್ ಅವರು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರಿಗೆ ಆನ್‌ಲೈನ್ ದೂರು ದಾಖಲಿಸಿದ್ದರು.

ಆದರೆ, ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು, ಹಮಾರಾ ಪ್ರಸಾದ್ ವಿರುದ್ಧ ಇನ್ನೂ ಯಾವುದೇ ದೂರುಗಳು ಬಂದಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಇದಕ್ಕೆ ದಲಿತಪರ ಸಂಘಟನೆಗಳು ಮತ್ತು ಪ್ರಜ್ಞಾವಂತ ಜನರು, ತೆಲಂಗಾಣ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕೂಡಲೇ ಹಮಾರಾ ಪ್ರಸಾದ್‌ನನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...