ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ ಮತ್ತು ವ್ಯಾಪಕ ಖಂಡನೆಗೆ ಕಾರಣವಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದ ಸಮ್ಮೇಳನದಲ್ಲಿ ಈ ಭಾಷಣ ಮಾಡಲಾಗಿದ್ದು, ಅಲ್ಲಿ ಮೋಹನ್ ಭಟ್ ಎಂಬಾತ ಸಮುದಾಯವೊಂದರ ವಿರುದ್ಧ ಪ್ರಚೋಧನಾತ್ಮಕವಾಗಿ ಮಾತನಾಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. “ಜಿಹಾದಿ ಮನಸ್ಥಿತಿ ಹೊಂದಿರುವ ವ್ಯಕ್ತಿಗಳನ್ನು ಉತ್ತರಾಖಂಡ ತೊರೆಯಿರಿ” ಎಂದು ಎಚ್ಚರಿಸಿದ್ದಾನೆ.
ಭಾಷಣದ ಸಮಯದಲ್ಲಿ ಕೇಂದ್ರ ರಾಜ್ಯಖಾತೆ ಸಚಿವ ಅಜಯ್ ತಮ್ತಾ ವೇದಿಕೆಯಲ್ಲಿ ಇರುವುದು ವಿರೋಧ ಪಕ್ಷಗಳು ಮತ್ತು ನಾಗರಿಕ ಸಮಾಜ ಗುಂಪುಗಳಿಂದ ಟೀಕೆಗೆ ಗುರಿಯಾಗಿದೆ. ಆ ಸಮಯದಲ್ಲಿ ಯಾವುದೇ ಆಕ್ಷೇಪಣೆ ವ್ಯಕ್ತವಾಗಲಿಲ್ಲ ಎಂದು ಹಲವರು ಪ್ರಶ್ನಿಸಿದ್ದಾರೆ. ಸಚಿವರಿಂದ ಅವರ ನಿಲುವಿನ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ತಮ್ತಾ ಈ ವಿಷಯದ ಬಗ್ಗೆ ಸಾರ್ವಜನಿಕ ಹೇಳಿಕೆಯನ್ನು ನೀಡಿಲ್ಲ.
ದೂರಿನ ನಂತರ, ಅಲ್ಮೋರಾ ಪೊಲೀಸರು ಲಾಲ್ ಬಾಬಾ ವಿರುದ್ಧ ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 196(1) ರ ಅಡಿಯಲ್ಲಿ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ. ಇದು ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದಕ್ಕೆ ಸಂಬಂಧಿಸಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.
ಅಲ್ಮೋರಾ ಸೇರಿದಂತೆ ರಾಜ್ಯದ ಇತರೆಡೆ ಮುಸ್ಲಿಂ ಸಮುದಾಯದ ನಾಯಕರು ಈ ಹೇಳಿಕೆಗಳನ್ನು ಖಂಡಿಸಿದ್ದಾರೆ. ಇದು ಕೋಮು ಸಾಮರಸ್ಯ ಮತ್ತು ಸಾರ್ವಜನಿಕ ಸುರಕ್ಷತೆಗೆ ಬೆದರಿಕೆ ಎಂದು ಕರೆದಿದ್ದಾರೆ. ನಾಗರಿಕ ಸಮಾಜ ಸಂಘಟನೆಗಳು ಅಧಿಕಾರಿಗಳು ತ್ವರಿತ ಕಾನೂನು ಕ್ರಮ ಕೈಗೊಳ್ಳಬೇಕು, ಶಾಂತಿ ಕಾಪಾಡಿಕೊಳ್ಳಲು ಕೈಗೊಂಡ ಕ್ರಮಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿವೆ.


