Homeಮುಖಪುಟದೆಹಲಿ: 'ಜೈ ಶ್ರೀರಾಮ್' ಘೋಷಣೆ ಕೂಗುತ್ತಾ ಚರ್ಚ್ ಗೆ ನುಗ್ಗಿ ದಾಂಧಲೆ

ದೆಹಲಿ: ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತಾ ಚರ್ಚ್ ಗೆ ನುಗ್ಗಿ ದಾಂಧಲೆ

- Advertisement -
- Advertisement -

ಗುಂಪೊಂದು ಚರ್ಚ್‌ಗೆ ನುಗ್ಗಿ ‘ಜೈ ಶ್ರೀ ರಾಮ್’  ಘೋಷಣೆ ಕೂಗುತ್ತಾ ಚರ್ಚ್‌ನಲ್ಲಿ ದಾಂಧಲೆ ನಡೆಸಿ  ಕ್ರಿಶ್ಚಿಯನ್ ಸಮುದಾಯದ ಜನರ ಮೇಲೆ ಹಲ್ಲೆ ನಡೆಸಿರುವ ಘಟನೆ ದೆಹಲಿಯ ತಾಹಿರ್‌ಪುರದಲ್ಲಿ ನಡೆದ ಬಗ್ಗೆ  scroll.in ವರದಿ ಮಾಡಿದೆ.

ಭಾನುವಾರ  ಪ್ರಾರ್ಥನಾ ಸಭೆಯ ವೇಳೆ ಬೆಳಗ್ಗೆ 10.40ರ ಸುಮಾರಿಗೆ ದಾಳಿ ನಡೆದಿದೆ ಎಂದು ಪಾದ್ರಿ ಸತ್ಪಾಲ್ ಭಾಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸುಮಾರು 20 ಜನರ ಗುಂಪು “ಜೈ ಶ್ರೀ ರಾಮ್”  ಮತ್ತು ಭಾರತವನ್ನು” ಹಿಂದೂ ರಾಷ್ಟ್ರವೆಂದು”  ಘೋಷಣೆ ಕೂಗುತ್ತಾ  ಚರ್ಚ್‌ನ್ನು  ಪ್ರವೇಶಿಸಿದ್ದು, ಮಹಿಳೆಯರು ಸೇರಿದಂತೆ ಅಲ್ಲಿದ್ದ ಕ್ರಿಶ್ಚಿಯನ್ ಸಮುದಾಯದ  ಸದಸ್ಯರ ಮೇಲೆ  ಹಲ್ಲೆ ಮಾಡಿದ್ದಾರೆ.

ಪೊಲೀಸರು ದಾಖಲಿಸಿದ ಎಫ್ ಐಆರ್ ಪ್ರಕಾರ, ಗುಂಪು ಘೋಷಣೆಗಳನ್ನು ಕೂಗುತ್ತಾ ಚರ್ಚ್‌ಗೆ ನುಗ್ಗಿ ಯೇಸುವಿನ ಚಿತ್ರಗಳನ್ನು ಧ್ವಂಸಗೊಳಿಸಿದೆ ಮತ್ತು ಬೈಬಲ್‌ನ್ನು ಹರಿದು ಹಾಕಲು ಪ್ರಯತ್ನಿಸಿದೆ. ಇದಲ್ಲದೆ  ಅಲ್ಲಿ ಪಾರ್ಥನೆಗೆ ಬಂದಿದ್ದ ಕೆಲವರನ್ನು ಹೊರಗೆ ಎಳೆದು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಡೆಮಾಕ್ರಸಿ ನ್ಯೂಸ್ ಇಂಡಿಯಾ ಹಂಚಿಕೊಂಡಿರುವ ವೀಡಿಯೊದಲ್ಲಿ ಸಂಗೀತ ವಾದ್ಯಗಳನ್ನು ಕೂಡ ಧ್ವಂಸಗೊಳಿಸಲಾಗಿದೆ ಎಂದು ತೋರಿಸುತ್ತದೆ. ಚಾಕು ಬಳಸಿ ಡ್ರಮ್‌ಗಳನ್ನು ಹರಿದಿದ್ದಾರೆ ಎಂದು ಕ್ರೈಸ್ತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ.

ಈ ಕುರಿತು ಸೂಕ್ತ ತನಿಖೆ ನಡೆಯುತ್ತಿದೆ ಎಂದು ನಾನು ಭಾವಿಸುತ್ತೇನೆ .ಇಲ್ಲದಿದ್ದರೆ ಇನ್ನು ಮುಂದೆ ಕೂಡ ಇದೇ ರೀತಿಯ ಕೃತ್ಯ ನಡೆಯುವ ಸಾಧ್ಯತೆ ಇದೆ .ಕೃತ್ಯವನ್ನು ಬಜರಂಗದಳ ಮತ್ತು ಆರೆಸ್ಸೆಸ್ ನವರು ನಡೆಸಿದ್ದಾರೆ ಎಂದು ಚರ್ಚ್‌ನ ಪಾದ್ರಿ ಆರೋಪಿಸಿದ್ದಾರೆ.

ದಾಳಿಯ ಬಗ್ಗೆ ದೂರು ನೀಡಲು ಜಿಟಿಬಿ ಎನ್‌ಕ್ಲೇವ್ ಪೊಲೀಸ್ ಠಾಣೆಗೆ ನಾನು ಮತ್ತು ಇತರ ಕೆಲವರು ಹೋದಾಗ, ಭಜರಂಗದಳ, ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ವಿಶ್ವ ಹಿಂದೂ ಪರಿಷತ್‌ನ ಸುಮಾರು 100 ಜನರ  ಗುಂಪು ಠಾಣೆಯ ಹೊರಗೆ ಜಮಾಯಿಸಿ  ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ ಎಂದು ಪಾದ್ರಿ ಸತ್ಪಾಲ್ ಭಾಟಿ ಆರೋಪಿಸಿದ್ದಾರೆ.

ಇದನ್ನು ಓದಿ: ಇಸ್ರೋ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ: ಇಬ್ಬರು ಅಭ್ಯರ್ಥಿಗಳು ಅರೆಸ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...