Homeಮುಖಪುಟಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ...

ಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ ಮಾಡುವ ಪ್ರತಿಜ್ಞೆ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ವಿವಾದಿತ ಕಟ್ಟಡದ ಬಳಿಯಿದ್ದ ನವಾಬ್ ಸಮದ್ ಖಾನ್ ಅವರ ಸಮಾಧಿಯನ್ನು ಹಿಂದುತ್ವ ಗುಂಪುಗಳು ಧ್ವಸಂಗೊಳಿಸಿದ ಘಟನೆ ಸೋಮವಾರ (ಆ.11) ನಡೆದಿದೆ.

ಬಿಜೆಪಿ, ಬಜರಂಗದಳ ಸೇರಿದಂತೆ ವಿವಿಧ ಹಿಂದುತ್ವ ಗುಂಪುಗಳ ಸದಸ್ಯರು ಕೋಲುಗಳನ್ನು ಹಿಡಿದುಕೊಂಡು ಏಕಾಏಕಿ ವಿವಾದಿತ ಕಟ್ಟಡದ ಪರಿಸರಕ್ಕೆ ನುಗ್ಗಿದ್ದು, ಕಟ್ಟಡದ ಹೊರಗಡೆಯಿದ್ದ ಸಮಾಧಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ವಿಡಿಯೋಗಳು ವೈರಲ್ ಆಗಿವೆ.

ದುಷ್ಕೃತ್ಯದಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ವರದಿಗಳ ಪ್ರಕಾರ, ಫತೇಪುರ್ ಜಿಲ್ಲೆಯ ಸದರ್ ತಾಲೂಕಿನ ರೆಡಿಯಾ ಪ್ರದೇಶದ ಅಬು ನಗರದಲ್ಲಿರುವ ಸಮಾಧಿ ಮತ್ತು ಕಟ್ಟಡ ವಿವಾದ ಕೇಂದ್ರ ಬಿಂದುವಾಗಿದೆ. ಇಲ್ಲಿನ ಸರ್ವೆ ನಂಬರ್ 753ರಲ್ಲಿ ಮಕ್ಬರಾ ಮಾಂಗಿ( ಸೂಫಿ ಸಂತರ ಸಮಾಧಿ ಇರುವ ಜಾಗ ಎಂದು ಹೇಳಬಹುದು) ಇದೆ ಎಂದು ಸರ್ಕಾರದ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

ವಿಡಿಯೋಗಳಲ್ಲಿ ಇಸ್ಲಾಮಿಕ್ ಶೈಲಿಯ ಬೃಹತ್ ಪುರಾತನ ಕಟ್ಟಡ ಮತ್ತು ಅದರ ಸಮೀಪ ಸಮಾಧಿ ಇರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಪುರಾತನ ಕಟ್ಟಡದ ಅಂಗಳದಲ್ಲಿ ನವಾಬ್ ಸಮದ್ ಖಾನ್ ಅವರ ಸಮಾಧಿ ಇದೆ. ಇದನ್ನು ಸರ್ಕಾರ ರಾಷ್ಟ್ರೀಯ ಆಸ್ತಿ ಎಂದು ಗುರುತಿಸಿದೆ.

ಸರ್ಕಾರಿ ದಾಖಲೆಗಳಲ್ಲಿ ಕೂಡ ವಿವಾದಿತ ಕಟ್ಟಡವನ್ನು ಚಕ್ರವರ್ತಿ ಔರಂಗಜೇಬರ ಆಳ್ವಿಕೆಯಲ್ಲಿ ಪೈಲಾನಿಯ ಫೌಜ್‌ದಾರ್ ಆಗಿದ್ದ ನವಾಬ್ ಅಬ್ದುಸಮದ್ ಖಾನ್ ಬಹದ್ದೂರ್ ಅವರ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆ ಹಂಚಿಕೊಂಡಿದ್ದಾರೆ.

ಆದರೆ, ಹಿಂದುತ್ವ ಗುಂಪುಗಳು ಇದು ಠಾಕೂರ್ಜಿ ಮತ್ತು ಶಿವನಿಗೆ ಅರ್ಪಿತವಾದ ದೇವಾಲಯವಾಗಿದ್ದು, ಸಾವಿರ ವರ್ಷಗಳಿಗಿಂತ ಹಳೆಯದು ಎಂದು ಹೇಳಿಕೊಂಡಿವೆ.

ಸದರ್ ತಾಲೂಕಿನಲ್ಲಿರುವ ನವಾಬ್ ಅಬ್ದುಸಮದ್ ಅವರ ಸಮಾಧಿ ವಾಸ್ತವವಾಗಿ ಸಾವಿರ ವರ್ಷಗಳಷ್ಟು ಹಳೆಯದಾದ ಠಾಕೂರ್ಜಿ ಮತ್ತು ಶಿವನ ದೇವಾಲಯವಾಗಿದೆ ಎಂದು ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಮುಖ್ಲಾಲ್ ಪಾಲ್ ಆರೋಪಿಸಿದ ನಂತರ ವಿವಾದ ಭುಗಿಲೆದ್ದಿದೆ. ಕಟ್ಟಡದ ಒಳಗೆ ಕಮಲದ ಹೂವು ಮತ್ತು ತ್ರಿಶೂಲ ಇದೆ ಎಂದು ತಮ್ಮ ಆರೋಪಕ್ಕೆ ಹಿಂದುತ್ವ ಗುಂಪುಗಳು ಪುರಾವೆಯಾಗಿ ಉಲ್ಲೇಖಿಸಿದೆ.

ವರದಿಗಳ ಪ್ರಕಾರ, ಮುಖ್ಲಾಲ್ ಪಾಲ್ ಅವರು ಸನಾತನಿಗಳು ಸೋಮವಾರ ಬೆಳಿಗ್ಗೆ 9 ಗಂಟೆಗೆ ಪುರಿ ಠಾಕೂರ್ ಡಾಕ್ ಬಂಗಲೆಯಿಂದ ಮೆರವಣಿಗೆ ನಡೆಸಿ, ವಿವಾದಿತ ಜಾಗದಲ್ಲಿ ಪೂಜೆ ಸಲ್ಲಿಸಲು ಸೇರುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ.

ಅವರ ಕರೆಯ ನಂತರ, ಹಿಂದುತ್ವ ಸಂಘಟನೆಯ ಸದಸ್ಯರು ಸಮಾಧಿಯ ಹೊರಗಿನ ಪ್ರದೇಶವನ್ನು ಧ್ವಂಸಗೊಳಿಸಿದ್ದಾರೆ. ಉದ್ರಿಕ್ತರು ಪೂಜೆ ಸಲ್ಲಿಸಲು ಮುಂದಾಗಿದ್ದು ಬಿಗುವಿನ ವಾತಾವರಣ ಸೃಷ್ಟಿಸಿತ್ತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋಗಳಲ್ಲಿ ಕೈಯಲ್ಲಿ ಕೇಸರಿ ಧ್ವಜ ಮತ್ತು ಕೋಲುಗಳನ್ನು ಹಿಡಿದು ವಿವಾದಿತ ಕಟ್ಟಡದ ಪ್ರದೇಶಕ್ಕೆ ನುಗ್ಗಿದ ಹಿಂದುತ್ವ ಗುಂಪು, ಪುರಾತನ ಕಟ್ಟಡ ಮತ್ತು ಸಮಾಧಿಯ ಸುತ್ತ ದಾಂದಲೆ ನಡೆಸಿದ್ದನ್ನು ನೋಡಬಹುದು. ದುಷ್ಕರ್ಮಿಗಳು ಜೈಶ್ರೀರಾಮ್ ಘೋಷಣೆ ಕೂಗಿರುವುದು ಮತ್ತು ಪೊಲೀಸರ ಮುಂದೆಯೇ ವಿವಾದಿತ ಜಾಗಕ್ಕೆ ನುಗ್ಗುವುದು ಕೂಡ ವಿಡಿಯೋದಲ್ಲಿ ಇದೆ.

ಘಟನೆಯ ನಂತರ ಜಿಲ್ಲಾಡಳಿತ ಭಾರೀ ಪೊಲೀಸ್ ಮತ್ತು ಪಿಎಸಿ ಪಡೆಗಳನ್ನು ನಿಯೋಜಿಸಿದೆ ಮತ್ತು ವಿವಾದಿತ ಸ್ಥಳದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಮತ್ತಷ್ಟು ಅಶಾಂತಿ ಉಂಟಾಗದಂತೆ ಎಚ್ಚರ ವಹಿಸಿದೆ ಎಂದು ವರದಿಯಾಗಿದೆ.

ವಿವಾದಿತ ಪ್ರದೇಶದೊಳಗೆ ಯಾರೂ ಪ್ರವೇಶಿಸದಂತೆ ನೋಡಿಕೊಳ್ಳಲು ಜಿಲ್ಲಾ ಅಧಿಕಾರಿಯ ಆದೇಶದ ಮೇರೆಗೆ ಬ್ಯಾರಿಕೇಡ್ ಹಾಕಲಾಗುತ್ತಿದೆ.

ಫತೇಪುರ್ ಬಜರಂಗದಳ ಜಿಲ್ಲಾ ಸಹ-ಸಂಚಾಲಕ ಧರ್ಮೇಂದ್ರ ಸಿಂಗ್ ಕೂಡ ಸಮಾಧಿಯಲ್ಲಿ ಪೂಜೆ ಸಲ್ಲಿಸುವ ಬಗ್ಗೆ ಘೋಷಿಸಿದ್ದರು. “ನಾವು ಮಧ್ಯಾಹ್ನ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ. ಆಡಳಿತವು ನಮ್ಮನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯ ಉಪಾಧ್ಯಕ್ಷ ವೀರೇಂದ್ರ ಪಾಂಡೆ ಅವರು ಈ ಸ್ಥಳವು ಭಗವಾನ್ ಭೋಲೆನಾಥ ಮತ್ತು ಶ್ರೀಕೃಷ್ಣನಿಗೆ ಅರ್ಪಿತವಾದ ದೇವಾಲಯವಾಗಿದೆ, ಸಮಾಧಿಯಲ್ಲ ಎಂದು ಹೇಳಿದ್ದಾರೆ.

ಧಾರ್ಮಿಕ ಚಿಹ್ನೆಗಳು, ಪರಿಕ್ರಮ ಮಾರ್ಗ ಮತ್ತು ದೇವಾಲಯವನ್ನು ಅವರು ಸಾಕ್ಷಿಯಾಗಿ ತೋರಿಸಿದ್ದು, ಆಗಸ್ಟ್ 16 ರಂದು ಜನ್ಮಾಷ್ಟಮಿ ಆಚರಣೆಗಾಗಿ ಆ ಸ್ಥಳವನ್ನು ಸ್ವಚ್ಛಗೊಳಿಸಬೇಕು ಎಂದಿದ್ದಾರೆ.

“ನಾವು ಹತ್ತು ದಿನಗಳ ಹಿಂದೆಯೇ ಆಡಳಿತಕ್ಕೆ ಮಾಹಿತಿ ನೀಡಿದ್ದೆವು. ಆದರೆ, ಅವರು ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ” ಎಂದು ಪಾಂಡೆ ಹೇಳಿದ್ದು, ಇದು ಹಿಂದೂಗಳ ನಂಬಿಕೆಯ ಕೇಂದ್ರ ಸ್ಥಳ, ಮರಳಿ ಪಡೆಯುತ್ತೇವೆ ಎಂದಿದ್ದಾರೆ.

ಇಂಡಿಯಾ ಟುಡೇ ಪ್ರಕಾರ, ಆಡಳಿತವು ಭೂಮಿಯನ್ನು ಅಧಿಕೃತವಾಗಿ ರಾಷ್ಟ್ರೀಯ ಆಸ್ತಿ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಪುನರುಚ್ಚರಿಸಿದೆ. ಅಧಿಕಾರಿಗಳು ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ತಡೆಯಲು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ರಾಷ್ಟ್ರೀಯ ಉಲಮಾ ಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ಮೊಹಮ್ಮದ್ ನಸೀಮ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ಇತಿಹಾಸವನ್ನು ವಿರೂಪಗೊಳಿಸುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಎಂದಿದ್ದಾರೆ.

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ: ಮುಂದಿನ ವರ್ಷ ನಡೆಯುವ ಚುನಾವಣೆಗಾಗಿ ‘ನರೇಟಿವ್’ ಸೃಷ್ಟಿ ಎಂದು ತಜ್ಞರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...