Homeಮುಖಪುಟಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ...

ಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ ಮಾಡುವ ಪ್ರತಿಜ್ಞೆ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ವಿವಾದಿತ ಕಟ್ಟಡದ ಬಳಿಯಿದ್ದ ನವಾಬ್ ಸಮದ್ ಖಾನ್ ಅವರ ಸಮಾಧಿಯನ್ನು ಹಿಂದುತ್ವ ಗುಂಪುಗಳು ಧ್ವಸಂಗೊಳಿಸಿದ ಘಟನೆ ಸೋಮವಾರ (ಆ.11) ನಡೆದಿದೆ.

ಬಿಜೆಪಿ, ಬಜರಂಗದಳ ಸೇರಿದಂತೆ ವಿವಿಧ ಹಿಂದುತ್ವ ಗುಂಪುಗಳ ಸದಸ್ಯರು ಕೋಲುಗಳನ್ನು ಹಿಡಿದುಕೊಂಡು ಏಕಾಏಕಿ ವಿವಾದಿತ ಕಟ್ಟಡದ ಪರಿಸರಕ್ಕೆ ನುಗ್ಗಿದ್ದು, ಕಟ್ಟಡದ ಹೊರಗಡೆಯಿದ್ದ ಸಮಾಧಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ವಿಡಿಯೋಗಳು ವೈರಲ್ ಆಗಿವೆ.

ದುಷ್ಕೃತ್ಯದಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ವರದಿಗಳ ಪ್ರಕಾರ, ಫತೇಪುರ್ ಜಿಲ್ಲೆಯ ಸದರ್ ತಾಲೂಕಿನ ರೆಡಿಯಾ ಪ್ರದೇಶದ ಅಬು ನಗರದಲ್ಲಿರುವ ಸಮಾಧಿ ಮತ್ತು ಕಟ್ಟಡ ವಿವಾದ ಕೇಂದ್ರ ಬಿಂದುವಾಗಿದೆ. ಇಲ್ಲಿನ ಸರ್ವೆ ನಂಬರ್ 753ರಲ್ಲಿ ಮಕ್ಬರಾ ಮಾಂಗಿ( ಸೂಫಿ ಸಂತರ ಸಮಾಧಿ ಇರುವ ಜಾಗ ಎಂದು ಹೇಳಬಹುದು) ಇದೆ ಎಂದು ಸರ್ಕಾರದ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

ವಿಡಿಯೋಗಳಲ್ಲಿ ಇಸ್ಲಾಮಿಕ್ ಶೈಲಿಯ ಬೃಹತ್ ಪುರಾತನ ಕಟ್ಟಡ ಮತ್ತು ಅದರ ಸಮೀಪ ಸಮಾಧಿ ಇರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಪುರಾತನ ಕಟ್ಟಡದ ಅಂಗಳದಲ್ಲಿ ನವಾಬ್ ಸಮದ್ ಖಾನ್ ಅವರ ಸಮಾಧಿ ಇದೆ. ಇದನ್ನು ಸರ್ಕಾರ ರಾಷ್ಟ್ರೀಯ ಆಸ್ತಿ ಎಂದು ಗುರುತಿಸಿದೆ.

ಸರ್ಕಾರಿ ದಾಖಲೆಗಳಲ್ಲಿ ಕೂಡ ವಿವಾದಿತ ಕಟ್ಟಡವನ್ನು ಚಕ್ರವರ್ತಿ ಔರಂಗಜೇಬರ ಆಳ್ವಿಕೆಯಲ್ಲಿ ಪೈಲಾನಿಯ ಫೌಜ್‌ದಾರ್ ಆಗಿದ್ದ ನವಾಬ್ ಅಬ್ದುಸಮದ್ ಖಾನ್ ಬಹದ್ದೂರ್ ಅವರ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆ ಹಂಚಿಕೊಂಡಿದ್ದಾರೆ.

ಆದರೆ, ಹಿಂದುತ್ವ ಗುಂಪುಗಳು ಇದು ಠಾಕೂರ್ಜಿ ಮತ್ತು ಶಿವನಿಗೆ ಅರ್ಪಿತವಾದ ದೇವಾಲಯವಾಗಿದ್ದು, ಸಾವಿರ ವರ್ಷಗಳಿಗಿಂತ ಹಳೆಯದು ಎಂದು ಹೇಳಿಕೊಂಡಿವೆ.

ಸದರ್ ತಾಲೂಕಿನಲ್ಲಿರುವ ನವಾಬ್ ಅಬ್ದುಸಮದ್ ಅವರ ಸಮಾಧಿ ವಾಸ್ತವವಾಗಿ ಸಾವಿರ ವರ್ಷಗಳಷ್ಟು ಹಳೆಯದಾದ ಠಾಕೂರ್ಜಿ ಮತ್ತು ಶಿವನ ದೇವಾಲಯವಾಗಿದೆ ಎಂದು ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಮುಖ್ಲಾಲ್ ಪಾಲ್ ಆರೋಪಿಸಿದ ನಂತರ ವಿವಾದ ಭುಗಿಲೆದ್ದಿದೆ. ಕಟ್ಟಡದ ಒಳಗೆ ಕಮಲದ ಹೂವು ಮತ್ತು ತ್ರಿಶೂಲ ಇದೆ ಎಂದು ತಮ್ಮ ಆರೋಪಕ್ಕೆ ಹಿಂದುತ್ವ ಗುಂಪುಗಳು ಪುರಾವೆಯಾಗಿ ಉಲ್ಲೇಖಿಸಿದೆ.

ವರದಿಗಳ ಪ್ರಕಾರ, ಮುಖ್ಲಾಲ್ ಪಾಲ್ ಅವರು ಸನಾತನಿಗಳು ಸೋಮವಾರ ಬೆಳಿಗ್ಗೆ 9 ಗಂಟೆಗೆ ಪುರಿ ಠಾಕೂರ್ ಡಾಕ್ ಬಂಗಲೆಯಿಂದ ಮೆರವಣಿಗೆ ನಡೆಸಿ, ವಿವಾದಿತ ಜಾಗದಲ್ಲಿ ಪೂಜೆ ಸಲ್ಲಿಸಲು ಸೇರುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ.

ಅವರ ಕರೆಯ ನಂತರ, ಹಿಂದುತ್ವ ಸಂಘಟನೆಯ ಸದಸ್ಯರು ಸಮಾಧಿಯ ಹೊರಗಿನ ಪ್ರದೇಶವನ್ನು ಧ್ವಂಸಗೊಳಿಸಿದ್ದಾರೆ. ಉದ್ರಿಕ್ತರು ಪೂಜೆ ಸಲ್ಲಿಸಲು ಮುಂದಾಗಿದ್ದು ಬಿಗುವಿನ ವಾತಾವರಣ ಸೃಷ್ಟಿಸಿತ್ತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋಗಳಲ್ಲಿ ಕೈಯಲ್ಲಿ ಕೇಸರಿ ಧ್ವಜ ಮತ್ತು ಕೋಲುಗಳನ್ನು ಹಿಡಿದು ವಿವಾದಿತ ಕಟ್ಟಡದ ಪ್ರದೇಶಕ್ಕೆ ನುಗ್ಗಿದ ಹಿಂದುತ್ವ ಗುಂಪು, ಪುರಾತನ ಕಟ್ಟಡ ಮತ್ತು ಸಮಾಧಿಯ ಸುತ್ತ ದಾಂದಲೆ ನಡೆಸಿದ್ದನ್ನು ನೋಡಬಹುದು. ದುಷ್ಕರ್ಮಿಗಳು ಜೈಶ್ರೀರಾಮ್ ಘೋಷಣೆ ಕೂಗಿರುವುದು ಮತ್ತು ಪೊಲೀಸರ ಮುಂದೆಯೇ ವಿವಾದಿತ ಜಾಗಕ್ಕೆ ನುಗ್ಗುವುದು ಕೂಡ ವಿಡಿಯೋದಲ್ಲಿ ಇದೆ.

ಘಟನೆಯ ನಂತರ ಜಿಲ್ಲಾಡಳಿತ ಭಾರೀ ಪೊಲೀಸ್ ಮತ್ತು ಪಿಎಸಿ ಪಡೆಗಳನ್ನು ನಿಯೋಜಿಸಿದೆ ಮತ್ತು ವಿವಾದಿತ ಸ್ಥಳದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಮತ್ತಷ್ಟು ಅಶಾಂತಿ ಉಂಟಾಗದಂತೆ ಎಚ್ಚರ ವಹಿಸಿದೆ ಎಂದು ವರದಿಯಾಗಿದೆ.

ವಿವಾದಿತ ಪ್ರದೇಶದೊಳಗೆ ಯಾರೂ ಪ್ರವೇಶಿಸದಂತೆ ನೋಡಿಕೊಳ್ಳಲು ಜಿಲ್ಲಾ ಅಧಿಕಾರಿಯ ಆದೇಶದ ಮೇರೆಗೆ ಬ್ಯಾರಿಕೇಡ್ ಹಾಕಲಾಗುತ್ತಿದೆ.

ಫತೇಪುರ್ ಬಜರಂಗದಳ ಜಿಲ್ಲಾ ಸಹ-ಸಂಚಾಲಕ ಧರ್ಮೇಂದ್ರ ಸಿಂಗ್ ಕೂಡ ಸಮಾಧಿಯಲ್ಲಿ ಪೂಜೆ ಸಲ್ಲಿಸುವ ಬಗ್ಗೆ ಘೋಷಿಸಿದ್ದರು. “ನಾವು ಮಧ್ಯಾಹ್ನ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ. ಆಡಳಿತವು ನಮ್ಮನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯ ಉಪಾಧ್ಯಕ್ಷ ವೀರೇಂದ್ರ ಪಾಂಡೆ ಅವರು ಈ ಸ್ಥಳವು ಭಗವಾನ್ ಭೋಲೆನಾಥ ಮತ್ತು ಶ್ರೀಕೃಷ್ಣನಿಗೆ ಅರ್ಪಿತವಾದ ದೇವಾಲಯವಾಗಿದೆ, ಸಮಾಧಿಯಲ್ಲ ಎಂದು ಹೇಳಿದ್ದಾರೆ.

ಧಾರ್ಮಿಕ ಚಿಹ್ನೆಗಳು, ಪರಿಕ್ರಮ ಮಾರ್ಗ ಮತ್ತು ದೇವಾಲಯವನ್ನು ಅವರು ಸಾಕ್ಷಿಯಾಗಿ ತೋರಿಸಿದ್ದು, ಆಗಸ್ಟ್ 16 ರಂದು ಜನ್ಮಾಷ್ಟಮಿ ಆಚರಣೆಗಾಗಿ ಆ ಸ್ಥಳವನ್ನು ಸ್ವಚ್ಛಗೊಳಿಸಬೇಕು ಎಂದಿದ್ದಾರೆ.

“ನಾವು ಹತ್ತು ದಿನಗಳ ಹಿಂದೆಯೇ ಆಡಳಿತಕ್ಕೆ ಮಾಹಿತಿ ನೀಡಿದ್ದೆವು. ಆದರೆ, ಅವರು ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ” ಎಂದು ಪಾಂಡೆ ಹೇಳಿದ್ದು, ಇದು ಹಿಂದೂಗಳ ನಂಬಿಕೆಯ ಕೇಂದ್ರ ಸ್ಥಳ, ಮರಳಿ ಪಡೆಯುತ್ತೇವೆ ಎಂದಿದ್ದಾರೆ.

ಇಂಡಿಯಾ ಟುಡೇ ಪ್ರಕಾರ, ಆಡಳಿತವು ಭೂಮಿಯನ್ನು ಅಧಿಕೃತವಾಗಿ ರಾಷ್ಟ್ರೀಯ ಆಸ್ತಿ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಪುನರುಚ್ಚರಿಸಿದೆ. ಅಧಿಕಾರಿಗಳು ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ತಡೆಯಲು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ರಾಷ್ಟ್ರೀಯ ಉಲಮಾ ಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ಮೊಹಮ್ಮದ್ ನಸೀಮ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ಇತಿಹಾಸವನ್ನು ವಿರೂಪಗೊಳಿಸುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಎಂದಿದ್ದಾರೆ.

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ: ಮುಂದಿನ ವರ್ಷ ನಡೆಯುವ ಚುನಾವಣೆಗಾಗಿ ‘ನರೇಟಿವ್’ ಸೃಷ್ಟಿ ಎಂದು ತಜ್ಞರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...