Homeಮುಖಪುಟಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ...

ಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ ಮಾಡುವ ಪ್ರತಿಜ್ಞೆ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ವಿವಾದಿತ ಕಟ್ಟಡದ ಬಳಿಯಿದ್ದ ನವಾಬ್ ಸಮದ್ ಖಾನ್ ಅವರ ಸಮಾಧಿಯನ್ನು ಹಿಂದುತ್ವ ಗುಂಪುಗಳು ಧ್ವಸಂಗೊಳಿಸಿದ ಘಟನೆ ಸೋಮವಾರ (ಆ.11) ನಡೆದಿದೆ.

ಬಿಜೆಪಿ, ಬಜರಂಗದಳ ಸೇರಿದಂತೆ ವಿವಿಧ ಹಿಂದುತ್ವ ಗುಂಪುಗಳ ಸದಸ್ಯರು ಕೋಲುಗಳನ್ನು ಹಿಡಿದುಕೊಂಡು ಏಕಾಏಕಿ ವಿವಾದಿತ ಕಟ್ಟಡದ ಪರಿಸರಕ್ಕೆ ನುಗ್ಗಿದ್ದು, ಕಟ್ಟಡದ ಹೊರಗಡೆಯಿದ್ದ ಸಮಾಧಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ವಿಡಿಯೋಗಳು ವೈರಲ್ ಆಗಿವೆ.

ದುಷ್ಕೃತ್ಯದಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ವರದಿಗಳ ಪ್ರಕಾರ, ಫತೇಪುರ್ ಜಿಲ್ಲೆಯ ಸದರ್ ತಾಲೂಕಿನ ರೆಡಿಯಾ ಪ್ರದೇಶದ ಅಬು ನಗರದಲ್ಲಿರುವ ಸಮಾಧಿ ಮತ್ತು ಕಟ್ಟಡ ವಿವಾದ ಕೇಂದ್ರ ಬಿಂದುವಾಗಿದೆ. ಇಲ್ಲಿನ ಸರ್ವೆ ನಂಬರ್ 753ರಲ್ಲಿ ಮಕ್ಬರಾ ಮಾಂಗಿ( ಸೂಫಿ ಸಂತರ ಸಮಾಧಿ ಇರುವ ಜಾಗ ಎಂದು ಹೇಳಬಹುದು) ಇದೆ ಎಂದು ಸರ್ಕಾರದ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

ವಿಡಿಯೋಗಳಲ್ಲಿ ಇಸ್ಲಾಮಿಕ್ ಶೈಲಿಯ ಬೃಹತ್ ಪುರಾತನ ಕಟ್ಟಡ ಮತ್ತು ಅದರ ಸಮೀಪ ಸಮಾಧಿ ಇರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಪುರಾತನ ಕಟ್ಟಡದ ಅಂಗಳದಲ್ಲಿ ನವಾಬ್ ಸಮದ್ ಖಾನ್ ಅವರ ಸಮಾಧಿ ಇದೆ. ಇದನ್ನು ಸರ್ಕಾರ ರಾಷ್ಟ್ರೀಯ ಆಸ್ತಿ ಎಂದು ಗುರುತಿಸಿದೆ.

ಸರ್ಕಾರಿ ದಾಖಲೆಗಳಲ್ಲಿ ಕೂಡ ವಿವಾದಿತ ಕಟ್ಟಡವನ್ನು ಚಕ್ರವರ್ತಿ ಔರಂಗಜೇಬರ ಆಳ್ವಿಕೆಯಲ್ಲಿ ಪೈಲಾನಿಯ ಫೌಜ್‌ದಾರ್ ಆಗಿದ್ದ ನವಾಬ್ ಅಬ್ದುಸಮದ್ ಖಾನ್ ಬಹದ್ದೂರ್ ಅವರ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆ ಹಂಚಿಕೊಂಡಿದ್ದಾರೆ.

ಆದರೆ, ಹಿಂದುತ್ವ ಗುಂಪುಗಳು ಇದು ಠಾಕೂರ್ಜಿ ಮತ್ತು ಶಿವನಿಗೆ ಅರ್ಪಿತವಾದ ದೇವಾಲಯವಾಗಿದ್ದು, ಸಾವಿರ ವರ್ಷಗಳಿಗಿಂತ ಹಳೆಯದು ಎಂದು ಹೇಳಿಕೊಂಡಿವೆ.

ಸದರ್ ತಾಲೂಕಿನಲ್ಲಿರುವ ನವಾಬ್ ಅಬ್ದುಸಮದ್ ಅವರ ಸಮಾಧಿ ವಾಸ್ತವವಾಗಿ ಸಾವಿರ ವರ್ಷಗಳಷ್ಟು ಹಳೆಯದಾದ ಠಾಕೂರ್ಜಿ ಮತ್ತು ಶಿವನ ದೇವಾಲಯವಾಗಿದೆ ಎಂದು ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಮುಖ್ಲಾಲ್ ಪಾಲ್ ಆರೋಪಿಸಿದ ನಂತರ ವಿವಾದ ಭುಗಿಲೆದ್ದಿದೆ. ಕಟ್ಟಡದ ಒಳಗೆ ಕಮಲದ ಹೂವು ಮತ್ತು ತ್ರಿಶೂಲ ಇದೆ ಎಂದು ತಮ್ಮ ಆರೋಪಕ್ಕೆ ಹಿಂದುತ್ವ ಗುಂಪುಗಳು ಪುರಾವೆಯಾಗಿ ಉಲ್ಲೇಖಿಸಿದೆ.

ವರದಿಗಳ ಪ್ರಕಾರ, ಮುಖ್ಲಾಲ್ ಪಾಲ್ ಅವರು ಸನಾತನಿಗಳು ಸೋಮವಾರ ಬೆಳಿಗ್ಗೆ 9 ಗಂಟೆಗೆ ಪುರಿ ಠಾಕೂರ್ ಡಾಕ್ ಬಂಗಲೆಯಿಂದ ಮೆರವಣಿಗೆ ನಡೆಸಿ, ವಿವಾದಿತ ಜಾಗದಲ್ಲಿ ಪೂಜೆ ಸಲ್ಲಿಸಲು ಸೇರುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ.

ಅವರ ಕರೆಯ ನಂತರ, ಹಿಂದುತ್ವ ಸಂಘಟನೆಯ ಸದಸ್ಯರು ಸಮಾಧಿಯ ಹೊರಗಿನ ಪ್ರದೇಶವನ್ನು ಧ್ವಂಸಗೊಳಿಸಿದ್ದಾರೆ. ಉದ್ರಿಕ್ತರು ಪೂಜೆ ಸಲ್ಲಿಸಲು ಮುಂದಾಗಿದ್ದು ಬಿಗುವಿನ ವಾತಾವರಣ ಸೃಷ್ಟಿಸಿತ್ತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋಗಳಲ್ಲಿ ಕೈಯಲ್ಲಿ ಕೇಸರಿ ಧ್ವಜ ಮತ್ತು ಕೋಲುಗಳನ್ನು ಹಿಡಿದು ವಿವಾದಿತ ಕಟ್ಟಡದ ಪ್ರದೇಶಕ್ಕೆ ನುಗ್ಗಿದ ಹಿಂದುತ್ವ ಗುಂಪು, ಪುರಾತನ ಕಟ್ಟಡ ಮತ್ತು ಸಮಾಧಿಯ ಸುತ್ತ ದಾಂದಲೆ ನಡೆಸಿದ್ದನ್ನು ನೋಡಬಹುದು. ದುಷ್ಕರ್ಮಿಗಳು ಜೈಶ್ರೀರಾಮ್ ಘೋಷಣೆ ಕೂಗಿರುವುದು ಮತ್ತು ಪೊಲೀಸರ ಮುಂದೆಯೇ ವಿವಾದಿತ ಜಾಗಕ್ಕೆ ನುಗ್ಗುವುದು ಕೂಡ ವಿಡಿಯೋದಲ್ಲಿ ಇದೆ.

ಘಟನೆಯ ನಂತರ ಜಿಲ್ಲಾಡಳಿತ ಭಾರೀ ಪೊಲೀಸ್ ಮತ್ತು ಪಿಎಸಿ ಪಡೆಗಳನ್ನು ನಿಯೋಜಿಸಿದೆ ಮತ್ತು ವಿವಾದಿತ ಸ್ಥಳದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಮತ್ತಷ್ಟು ಅಶಾಂತಿ ಉಂಟಾಗದಂತೆ ಎಚ್ಚರ ವಹಿಸಿದೆ ಎಂದು ವರದಿಯಾಗಿದೆ.

ವಿವಾದಿತ ಪ್ರದೇಶದೊಳಗೆ ಯಾರೂ ಪ್ರವೇಶಿಸದಂತೆ ನೋಡಿಕೊಳ್ಳಲು ಜಿಲ್ಲಾ ಅಧಿಕಾರಿಯ ಆದೇಶದ ಮೇರೆಗೆ ಬ್ಯಾರಿಕೇಡ್ ಹಾಕಲಾಗುತ್ತಿದೆ.

ಫತೇಪುರ್ ಬಜರಂಗದಳ ಜಿಲ್ಲಾ ಸಹ-ಸಂಚಾಲಕ ಧರ್ಮೇಂದ್ರ ಸಿಂಗ್ ಕೂಡ ಸಮಾಧಿಯಲ್ಲಿ ಪೂಜೆ ಸಲ್ಲಿಸುವ ಬಗ್ಗೆ ಘೋಷಿಸಿದ್ದರು. “ನಾವು ಮಧ್ಯಾಹ್ನ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ. ಆಡಳಿತವು ನಮ್ಮನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯ ಉಪಾಧ್ಯಕ್ಷ ವೀರೇಂದ್ರ ಪಾಂಡೆ ಅವರು ಈ ಸ್ಥಳವು ಭಗವಾನ್ ಭೋಲೆನಾಥ ಮತ್ತು ಶ್ರೀಕೃಷ್ಣನಿಗೆ ಅರ್ಪಿತವಾದ ದೇವಾಲಯವಾಗಿದೆ, ಸಮಾಧಿಯಲ್ಲ ಎಂದು ಹೇಳಿದ್ದಾರೆ.

ಧಾರ್ಮಿಕ ಚಿಹ್ನೆಗಳು, ಪರಿಕ್ರಮ ಮಾರ್ಗ ಮತ್ತು ದೇವಾಲಯವನ್ನು ಅವರು ಸಾಕ್ಷಿಯಾಗಿ ತೋರಿಸಿದ್ದು, ಆಗಸ್ಟ್ 16 ರಂದು ಜನ್ಮಾಷ್ಟಮಿ ಆಚರಣೆಗಾಗಿ ಆ ಸ್ಥಳವನ್ನು ಸ್ವಚ್ಛಗೊಳಿಸಬೇಕು ಎಂದಿದ್ದಾರೆ.

“ನಾವು ಹತ್ತು ದಿನಗಳ ಹಿಂದೆಯೇ ಆಡಳಿತಕ್ಕೆ ಮಾಹಿತಿ ನೀಡಿದ್ದೆವು. ಆದರೆ, ಅವರು ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ” ಎಂದು ಪಾಂಡೆ ಹೇಳಿದ್ದು, ಇದು ಹಿಂದೂಗಳ ನಂಬಿಕೆಯ ಕೇಂದ್ರ ಸ್ಥಳ, ಮರಳಿ ಪಡೆಯುತ್ತೇವೆ ಎಂದಿದ್ದಾರೆ.

ಇಂಡಿಯಾ ಟುಡೇ ಪ್ರಕಾರ, ಆಡಳಿತವು ಭೂಮಿಯನ್ನು ಅಧಿಕೃತವಾಗಿ ರಾಷ್ಟ್ರೀಯ ಆಸ್ತಿ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಪುನರುಚ್ಚರಿಸಿದೆ. ಅಧಿಕಾರಿಗಳು ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ತಡೆಯಲು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ರಾಷ್ಟ್ರೀಯ ಉಲಮಾ ಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ಮೊಹಮ್ಮದ್ ನಸೀಮ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ಇತಿಹಾಸವನ್ನು ವಿರೂಪಗೊಳಿಸುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಎಂದಿದ್ದಾರೆ.

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ: ಮುಂದಿನ ವರ್ಷ ನಡೆಯುವ ಚುನಾವಣೆಗಾಗಿ ‘ನರೇಟಿವ್’ ಸೃಷ್ಟಿ ಎಂದು ತಜ್ಞರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...