Homeಮುಖಪುಟಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ...

ಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ ಮಾಡುವ ಪ್ರತಿಜ್ಞೆ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ವಿವಾದಿತ ಕಟ್ಟಡದ ಬಳಿಯಿದ್ದ ನವಾಬ್ ಸಮದ್ ಖಾನ್ ಅವರ ಸಮಾಧಿಯನ್ನು ಹಿಂದುತ್ವ ಗುಂಪುಗಳು ಧ್ವಸಂಗೊಳಿಸಿದ ಘಟನೆ ಸೋಮವಾರ (ಆ.11) ನಡೆದಿದೆ.

ಬಿಜೆಪಿ, ಬಜರಂಗದಳ ಸೇರಿದಂತೆ ವಿವಿಧ ಹಿಂದುತ್ವ ಗುಂಪುಗಳ ಸದಸ್ಯರು ಕೋಲುಗಳನ್ನು ಹಿಡಿದುಕೊಂಡು ಏಕಾಏಕಿ ವಿವಾದಿತ ಕಟ್ಟಡದ ಪರಿಸರಕ್ಕೆ ನುಗ್ಗಿದ್ದು, ಕಟ್ಟಡದ ಹೊರಗಡೆಯಿದ್ದ ಸಮಾಧಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ವಿಡಿಯೋಗಳು ವೈರಲ್ ಆಗಿವೆ.

ದುಷ್ಕೃತ್ಯದಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ವರದಿಗಳ ಪ್ರಕಾರ, ಫತೇಪುರ್ ಜಿಲ್ಲೆಯ ಸದರ್ ತಾಲೂಕಿನ ರೆಡಿಯಾ ಪ್ರದೇಶದ ಅಬು ನಗರದಲ್ಲಿರುವ ಸಮಾಧಿ ಮತ್ತು ಕಟ್ಟಡ ವಿವಾದ ಕೇಂದ್ರ ಬಿಂದುವಾಗಿದೆ. ಇಲ್ಲಿನ ಸರ್ವೆ ನಂಬರ್ 753ರಲ್ಲಿ ಮಕ್ಬರಾ ಮಾಂಗಿ( ಸೂಫಿ ಸಂತರ ಸಮಾಧಿ ಇರುವ ಜಾಗ ಎಂದು ಹೇಳಬಹುದು) ಇದೆ ಎಂದು ಸರ್ಕಾರದ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

ವಿಡಿಯೋಗಳಲ್ಲಿ ಇಸ್ಲಾಮಿಕ್ ಶೈಲಿಯ ಬೃಹತ್ ಪುರಾತನ ಕಟ್ಟಡ ಮತ್ತು ಅದರ ಸಮೀಪ ಸಮಾಧಿ ಇರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಪುರಾತನ ಕಟ್ಟಡದ ಅಂಗಳದಲ್ಲಿ ನವಾಬ್ ಸಮದ್ ಖಾನ್ ಅವರ ಸಮಾಧಿ ಇದೆ. ಇದನ್ನು ಸರ್ಕಾರ ರಾಷ್ಟ್ರೀಯ ಆಸ್ತಿ ಎಂದು ಗುರುತಿಸಿದೆ.

ಸರ್ಕಾರಿ ದಾಖಲೆಗಳಲ್ಲಿ ಕೂಡ ವಿವಾದಿತ ಕಟ್ಟಡವನ್ನು ಚಕ್ರವರ್ತಿ ಔರಂಗಜೇಬರ ಆಳ್ವಿಕೆಯಲ್ಲಿ ಪೈಲಾನಿಯ ಫೌಜ್‌ದಾರ್ ಆಗಿದ್ದ ನವಾಬ್ ಅಬ್ದುಸಮದ್ ಖಾನ್ ಬಹದ್ದೂರ್ ಅವರ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆ ಹಂಚಿಕೊಂಡಿದ್ದಾರೆ.

ಆದರೆ, ಹಿಂದುತ್ವ ಗುಂಪುಗಳು ಇದು ಠಾಕೂರ್ಜಿ ಮತ್ತು ಶಿವನಿಗೆ ಅರ್ಪಿತವಾದ ದೇವಾಲಯವಾಗಿದ್ದು, ಸಾವಿರ ವರ್ಷಗಳಿಗಿಂತ ಹಳೆಯದು ಎಂದು ಹೇಳಿಕೊಂಡಿವೆ.

ಸದರ್ ತಾಲೂಕಿನಲ್ಲಿರುವ ನವಾಬ್ ಅಬ್ದುಸಮದ್ ಅವರ ಸಮಾಧಿ ವಾಸ್ತವವಾಗಿ ಸಾವಿರ ವರ್ಷಗಳಷ್ಟು ಹಳೆಯದಾದ ಠಾಕೂರ್ಜಿ ಮತ್ತು ಶಿವನ ದೇವಾಲಯವಾಗಿದೆ ಎಂದು ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಮುಖ್ಲಾಲ್ ಪಾಲ್ ಆರೋಪಿಸಿದ ನಂತರ ವಿವಾದ ಭುಗಿಲೆದ್ದಿದೆ. ಕಟ್ಟಡದ ಒಳಗೆ ಕಮಲದ ಹೂವು ಮತ್ತು ತ್ರಿಶೂಲ ಇದೆ ಎಂದು ತಮ್ಮ ಆರೋಪಕ್ಕೆ ಹಿಂದುತ್ವ ಗುಂಪುಗಳು ಪುರಾವೆಯಾಗಿ ಉಲ್ಲೇಖಿಸಿದೆ.

ವರದಿಗಳ ಪ್ರಕಾರ, ಮುಖ್ಲಾಲ್ ಪಾಲ್ ಅವರು ಸನಾತನಿಗಳು ಸೋಮವಾರ ಬೆಳಿಗ್ಗೆ 9 ಗಂಟೆಗೆ ಪುರಿ ಠಾಕೂರ್ ಡಾಕ್ ಬಂಗಲೆಯಿಂದ ಮೆರವಣಿಗೆ ನಡೆಸಿ, ವಿವಾದಿತ ಜಾಗದಲ್ಲಿ ಪೂಜೆ ಸಲ್ಲಿಸಲು ಸೇರುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ.

ಅವರ ಕರೆಯ ನಂತರ, ಹಿಂದುತ್ವ ಸಂಘಟನೆಯ ಸದಸ್ಯರು ಸಮಾಧಿಯ ಹೊರಗಿನ ಪ್ರದೇಶವನ್ನು ಧ್ವಂಸಗೊಳಿಸಿದ್ದಾರೆ. ಉದ್ರಿಕ್ತರು ಪೂಜೆ ಸಲ್ಲಿಸಲು ಮುಂದಾಗಿದ್ದು ಬಿಗುವಿನ ವಾತಾವರಣ ಸೃಷ್ಟಿಸಿತ್ತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋಗಳಲ್ಲಿ ಕೈಯಲ್ಲಿ ಕೇಸರಿ ಧ್ವಜ ಮತ್ತು ಕೋಲುಗಳನ್ನು ಹಿಡಿದು ವಿವಾದಿತ ಕಟ್ಟಡದ ಪ್ರದೇಶಕ್ಕೆ ನುಗ್ಗಿದ ಹಿಂದುತ್ವ ಗುಂಪು, ಪುರಾತನ ಕಟ್ಟಡ ಮತ್ತು ಸಮಾಧಿಯ ಸುತ್ತ ದಾಂದಲೆ ನಡೆಸಿದ್ದನ್ನು ನೋಡಬಹುದು. ದುಷ್ಕರ್ಮಿಗಳು ಜೈಶ್ರೀರಾಮ್ ಘೋಷಣೆ ಕೂಗಿರುವುದು ಮತ್ತು ಪೊಲೀಸರ ಮುಂದೆಯೇ ವಿವಾದಿತ ಜಾಗಕ್ಕೆ ನುಗ್ಗುವುದು ಕೂಡ ವಿಡಿಯೋದಲ್ಲಿ ಇದೆ.

ಘಟನೆಯ ನಂತರ ಜಿಲ್ಲಾಡಳಿತ ಭಾರೀ ಪೊಲೀಸ್ ಮತ್ತು ಪಿಎಸಿ ಪಡೆಗಳನ್ನು ನಿಯೋಜಿಸಿದೆ ಮತ್ತು ವಿವಾದಿತ ಸ್ಥಳದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಮತ್ತಷ್ಟು ಅಶಾಂತಿ ಉಂಟಾಗದಂತೆ ಎಚ್ಚರ ವಹಿಸಿದೆ ಎಂದು ವರದಿಯಾಗಿದೆ.

ವಿವಾದಿತ ಪ್ರದೇಶದೊಳಗೆ ಯಾರೂ ಪ್ರವೇಶಿಸದಂತೆ ನೋಡಿಕೊಳ್ಳಲು ಜಿಲ್ಲಾ ಅಧಿಕಾರಿಯ ಆದೇಶದ ಮೇರೆಗೆ ಬ್ಯಾರಿಕೇಡ್ ಹಾಕಲಾಗುತ್ತಿದೆ.

ಫತೇಪುರ್ ಬಜರಂಗದಳ ಜಿಲ್ಲಾ ಸಹ-ಸಂಚಾಲಕ ಧರ್ಮೇಂದ್ರ ಸಿಂಗ್ ಕೂಡ ಸಮಾಧಿಯಲ್ಲಿ ಪೂಜೆ ಸಲ್ಲಿಸುವ ಬಗ್ಗೆ ಘೋಷಿಸಿದ್ದರು. “ನಾವು ಮಧ್ಯಾಹ್ನ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ. ಆಡಳಿತವು ನಮ್ಮನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯ ಉಪಾಧ್ಯಕ್ಷ ವೀರೇಂದ್ರ ಪಾಂಡೆ ಅವರು ಈ ಸ್ಥಳವು ಭಗವಾನ್ ಭೋಲೆನಾಥ ಮತ್ತು ಶ್ರೀಕೃಷ್ಣನಿಗೆ ಅರ್ಪಿತವಾದ ದೇವಾಲಯವಾಗಿದೆ, ಸಮಾಧಿಯಲ್ಲ ಎಂದು ಹೇಳಿದ್ದಾರೆ.

ಧಾರ್ಮಿಕ ಚಿಹ್ನೆಗಳು, ಪರಿಕ್ರಮ ಮಾರ್ಗ ಮತ್ತು ದೇವಾಲಯವನ್ನು ಅವರು ಸಾಕ್ಷಿಯಾಗಿ ತೋರಿಸಿದ್ದು, ಆಗಸ್ಟ್ 16 ರಂದು ಜನ್ಮಾಷ್ಟಮಿ ಆಚರಣೆಗಾಗಿ ಆ ಸ್ಥಳವನ್ನು ಸ್ವಚ್ಛಗೊಳಿಸಬೇಕು ಎಂದಿದ್ದಾರೆ.

“ನಾವು ಹತ್ತು ದಿನಗಳ ಹಿಂದೆಯೇ ಆಡಳಿತಕ್ಕೆ ಮಾಹಿತಿ ನೀಡಿದ್ದೆವು. ಆದರೆ, ಅವರು ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ” ಎಂದು ಪಾಂಡೆ ಹೇಳಿದ್ದು, ಇದು ಹಿಂದೂಗಳ ನಂಬಿಕೆಯ ಕೇಂದ್ರ ಸ್ಥಳ, ಮರಳಿ ಪಡೆಯುತ್ತೇವೆ ಎಂದಿದ್ದಾರೆ.

ಇಂಡಿಯಾ ಟುಡೇ ಪ್ರಕಾರ, ಆಡಳಿತವು ಭೂಮಿಯನ್ನು ಅಧಿಕೃತವಾಗಿ ರಾಷ್ಟ್ರೀಯ ಆಸ್ತಿ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಪುನರುಚ್ಚರಿಸಿದೆ. ಅಧಿಕಾರಿಗಳು ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ತಡೆಯಲು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ರಾಷ್ಟ್ರೀಯ ಉಲಮಾ ಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ಮೊಹಮ್ಮದ್ ನಸೀಮ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ಇತಿಹಾಸವನ್ನು ವಿರೂಪಗೊಳಿಸುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಎಂದಿದ್ದಾರೆ.

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ: ಮುಂದಿನ ವರ್ಷ ನಡೆಯುವ ಚುನಾವಣೆಗಾಗಿ ‘ನರೇಟಿವ್’ ಸೃಷ್ಟಿ ಎಂದು ತಜ್ಞರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...