Homeಮುಖಪುಟಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ...

ಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ ಮಾಡುವ ಪ್ರತಿಜ್ಞೆ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ವಿವಾದಿತ ಕಟ್ಟಡದ ಬಳಿಯಿದ್ದ ನವಾಬ್ ಸಮದ್ ಖಾನ್ ಅವರ ಸಮಾಧಿಯನ್ನು ಹಿಂದುತ್ವ ಗುಂಪುಗಳು ಧ್ವಸಂಗೊಳಿಸಿದ ಘಟನೆ ಸೋಮವಾರ (ಆ.11) ನಡೆದಿದೆ.

ಬಿಜೆಪಿ, ಬಜರಂಗದಳ ಸೇರಿದಂತೆ ವಿವಿಧ ಹಿಂದುತ್ವ ಗುಂಪುಗಳ ಸದಸ್ಯರು ಕೋಲುಗಳನ್ನು ಹಿಡಿದುಕೊಂಡು ಏಕಾಏಕಿ ವಿವಾದಿತ ಕಟ್ಟಡದ ಪರಿಸರಕ್ಕೆ ನುಗ್ಗಿದ್ದು, ಕಟ್ಟಡದ ಹೊರಗಡೆಯಿದ್ದ ಸಮಾಧಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ವಿಡಿಯೋಗಳು ವೈರಲ್ ಆಗಿವೆ.

ದುಷ್ಕೃತ್ಯದಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ವರದಿಗಳ ಪ್ರಕಾರ, ಫತೇಪುರ್ ಜಿಲ್ಲೆಯ ಸದರ್ ತಾಲೂಕಿನ ರೆಡಿಯಾ ಪ್ರದೇಶದ ಅಬು ನಗರದಲ್ಲಿರುವ ಸಮಾಧಿ ಮತ್ತು ಕಟ್ಟಡ ವಿವಾದ ಕೇಂದ್ರ ಬಿಂದುವಾಗಿದೆ. ಇಲ್ಲಿನ ಸರ್ವೆ ನಂಬರ್ 753ರಲ್ಲಿ ಮಕ್ಬರಾ ಮಾಂಗಿ( ಸೂಫಿ ಸಂತರ ಸಮಾಧಿ ಇರುವ ಜಾಗ ಎಂದು ಹೇಳಬಹುದು) ಇದೆ ಎಂದು ಸರ್ಕಾರದ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

ವಿಡಿಯೋಗಳಲ್ಲಿ ಇಸ್ಲಾಮಿಕ್ ಶೈಲಿಯ ಬೃಹತ್ ಪುರಾತನ ಕಟ್ಟಡ ಮತ್ತು ಅದರ ಸಮೀಪ ಸಮಾಧಿ ಇರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಪುರಾತನ ಕಟ್ಟಡದ ಅಂಗಳದಲ್ಲಿ ನವಾಬ್ ಸಮದ್ ಖಾನ್ ಅವರ ಸಮಾಧಿ ಇದೆ. ಇದನ್ನು ಸರ್ಕಾರ ರಾಷ್ಟ್ರೀಯ ಆಸ್ತಿ ಎಂದು ಗುರುತಿಸಿದೆ.

ಸರ್ಕಾರಿ ದಾಖಲೆಗಳಲ್ಲಿ ಕೂಡ ವಿವಾದಿತ ಕಟ್ಟಡವನ್ನು ಚಕ್ರವರ್ತಿ ಔರಂಗಜೇಬರ ಆಳ್ವಿಕೆಯಲ್ಲಿ ಪೈಲಾನಿಯ ಫೌಜ್‌ದಾರ್ ಆಗಿದ್ದ ನವಾಬ್ ಅಬ್ದುಸಮದ್ ಖಾನ್ ಬಹದ್ದೂರ್ ಅವರ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆ ಹಂಚಿಕೊಂಡಿದ್ದಾರೆ.

ಆದರೆ, ಹಿಂದುತ್ವ ಗುಂಪುಗಳು ಇದು ಠಾಕೂರ್ಜಿ ಮತ್ತು ಶಿವನಿಗೆ ಅರ್ಪಿತವಾದ ದೇವಾಲಯವಾಗಿದ್ದು, ಸಾವಿರ ವರ್ಷಗಳಿಗಿಂತ ಹಳೆಯದು ಎಂದು ಹೇಳಿಕೊಂಡಿವೆ.

ಸದರ್ ತಾಲೂಕಿನಲ್ಲಿರುವ ನವಾಬ್ ಅಬ್ದುಸಮದ್ ಅವರ ಸಮಾಧಿ ವಾಸ್ತವವಾಗಿ ಸಾವಿರ ವರ್ಷಗಳಷ್ಟು ಹಳೆಯದಾದ ಠಾಕೂರ್ಜಿ ಮತ್ತು ಶಿವನ ದೇವಾಲಯವಾಗಿದೆ ಎಂದು ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಮುಖ್ಲಾಲ್ ಪಾಲ್ ಆರೋಪಿಸಿದ ನಂತರ ವಿವಾದ ಭುಗಿಲೆದ್ದಿದೆ. ಕಟ್ಟಡದ ಒಳಗೆ ಕಮಲದ ಹೂವು ಮತ್ತು ತ್ರಿಶೂಲ ಇದೆ ಎಂದು ತಮ್ಮ ಆರೋಪಕ್ಕೆ ಹಿಂದುತ್ವ ಗುಂಪುಗಳು ಪುರಾವೆಯಾಗಿ ಉಲ್ಲೇಖಿಸಿದೆ.

ವರದಿಗಳ ಪ್ರಕಾರ, ಮುಖ್ಲಾಲ್ ಪಾಲ್ ಅವರು ಸನಾತನಿಗಳು ಸೋಮವಾರ ಬೆಳಿಗ್ಗೆ 9 ಗಂಟೆಗೆ ಪುರಿ ಠಾಕೂರ್ ಡಾಕ್ ಬಂಗಲೆಯಿಂದ ಮೆರವಣಿಗೆ ನಡೆಸಿ, ವಿವಾದಿತ ಜಾಗದಲ್ಲಿ ಪೂಜೆ ಸಲ್ಲಿಸಲು ಸೇರುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ.

ಅವರ ಕರೆಯ ನಂತರ, ಹಿಂದುತ್ವ ಸಂಘಟನೆಯ ಸದಸ್ಯರು ಸಮಾಧಿಯ ಹೊರಗಿನ ಪ್ರದೇಶವನ್ನು ಧ್ವಂಸಗೊಳಿಸಿದ್ದಾರೆ. ಉದ್ರಿಕ್ತರು ಪೂಜೆ ಸಲ್ಲಿಸಲು ಮುಂದಾಗಿದ್ದು ಬಿಗುವಿನ ವಾತಾವರಣ ಸೃಷ್ಟಿಸಿತ್ತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋಗಳಲ್ಲಿ ಕೈಯಲ್ಲಿ ಕೇಸರಿ ಧ್ವಜ ಮತ್ತು ಕೋಲುಗಳನ್ನು ಹಿಡಿದು ವಿವಾದಿತ ಕಟ್ಟಡದ ಪ್ರದೇಶಕ್ಕೆ ನುಗ್ಗಿದ ಹಿಂದುತ್ವ ಗುಂಪು, ಪುರಾತನ ಕಟ್ಟಡ ಮತ್ತು ಸಮಾಧಿಯ ಸುತ್ತ ದಾಂದಲೆ ನಡೆಸಿದ್ದನ್ನು ನೋಡಬಹುದು. ದುಷ್ಕರ್ಮಿಗಳು ಜೈಶ್ರೀರಾಮ್ ಘೋಷಣೆ ಕೂಗಿರುವುದು ಮತ್ತು ಪೊಲೀಸರ ಮುಂದೆಯೇ ವಿವಾದಿತ ಜಾಗಕ್ಕೆ ನುಗ್ಗುವುದು ಕೂಡ ವಿಡಿಯೋದಲ್ಲಿ ಇದೆ.

ಘಟನೆಯ ನಂತರ ಜಿಲ್ಲಾಡಳಿತ ಭಾರೀ ಪೊಲೀಸ್ ಮತ್ತು ಪಿಎಸಿ ಪಡೆಗಳನ್ನು ನಿಯೋಜಿಸಿದೆ ಮತ್ತು ವಿವಾದಿತ ಸ್ಥಳದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಮತ್ತಷ್ಟು ಅಶಾಂತಿ ಉಂಟಾಗದಂತೆ ಎಚ್ಚರ ವಹಿಸಿದೆ ಎಂದು ವರದಿಯಾಗಿದೆ.

ವಿವಾದಿತ ಪ್ರದೇಶದೊಳಗೆ ಯಾರೂ ಪ್ರವೇಶಿಸದಂತೆ ನೋಡಿಕೊಳ್ಳಲು ಜಿಲ್ಲಾ ಅಧಿಕಾರಿಯ ಆದೇಶದ ಮೇರೆಗೆ ಬ್ಯಾರಿಕೇಡ್ ಹಾಕಲಾಗುತ್ತಿದೆ.

ಫತೇಪುರ್ ಬಜರಂಗದಳ ಜಿಲ್ಲಾ ಸಹ-ಸಂಚಾಲಕ ಧರ್ಮೇಂದ್ರ ಸಿಂಗ್ ಕೂಡ ಸಮಾಧಿಯಲ್ಲಿ ಪೂಜೆ ಸಲ್ಲಿಸುವ ಬಗ್ಗೆ ಘೋಷಿಸಿದ್ದರು. “ನಾವು ಮಧ್ಯಾಹ್ನ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ. ಆಡಳಿತವು ನಮ್ಮನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯ ಉಪಾಧ್ಯಕ್ಷ ವೀರೇಂದ್ರ ಪಾಂಡೆ ಅವರು ಈ ಸ್ಥಳವು ಭಗವಾನ್ ಭೋಲೆನಾಥ ಮತ್ತು ಶ್ರೀಕೃಷ್ಣನಿಗೆ ಅರ್ಪಿತವಾದ ದೇವಾಲಯವಾಗಿದೆ, ಸಮಾಧಿಯಲ್ಲ ಎಂದು ಹೇಳಿದ್ದಾರೆ.

ಧಾರ್ಮಿಕ ಚಿಹ್ನೆಗಳು, ಪರಿಕ್ರಮ ಮಾರ್ಗ ಮತ್ತು ದೇವಾಲಯವನ್ನು ಅವರು ಸಾಕ್ಷಿಯಾಗಿ ತೋರಿಸಿದ್ದು, ಆಗಸ್ಟ್ 16 ರಂದು ಜನ್ಮಾಷ್ಟಮಿ ಆಚರಣೆಗಾಗಿ ಆ ಸ್ಥಳವನ್ನು ಸ್ವಚ್ಛಗೊಳಿಸಬೇಕು ಎಂದಿದ್ದಾರೆ.

“ನಾವು ಹತ್ತು ದಿನಗಳ ಹಿಂದೆಯೇ ಆಡಳಿತಕ್ಕೆ ಮಾಹಿತಿ ನೀಡಿದ್ದೆವು. ಆದರೆ, ಅವರು ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ” ಎಂದು ಪಾಂಡೆ ಹೇಳಿದ್ದು, ಇದು ಹಿಂದೂಗಳ ನಂಬಿಕೆಯ ಕೇಂದ್ರ ಸ್ಥಳ, ಮರಳಿ ಪಡೆಯುತ್ತೇವೆ ಎಂದಿದ್ದಾರೆ.

ಇಂಡಿಯಾ ಟುಡೇ ಪ್ರಕಾರ, ಆಡಳಿತವು ಭೂಮಿಯನ್ನು ಅಧಿಕೃತವಾಗಿ ರಾಷ್ಟ್ರೀಯ ಆಸ್ತಿ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಪುನರುಚ್ಚರಿಸಿದೆ. ಅಧಿಕಾರಿಗಳು ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ತಡೆಯಲು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ರಾಷ್ಟ್ರೀಯ ಉಲಮಾ ಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ಮೊಹಮ್ಮದ್ ನಸೀಮ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ಇತಿಹಾಸವನ್ನು ವಿರೂಪಗೊಳಿಸುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಎಂದಿದ್ದಾರೆ.

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ: ಮುಂದಿನ ವರ್ಷ ನಡೆಯುವ ಚುನಾವಣೆಗಾಗಿ ‘ನರೇಟಿವ್’ ಸೃಷ್ಟಿ ಎಂದು ತಜ್ಞರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...