Homeಮುಖಪುಟಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ...

ಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ ಮಾಡುವ ಪ್ರತಿಜ್ಞೆ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ವಿವಾದಿತ ಕಟ್ಟಡದ ಬಳಿಯಿದ್ದ ನವಾಬ್ ಸಮದ್ ಖಾನ್ ಅವರ ಸಮಾಧಿಯನ್ನು ಹಿಂದುತ್ವ ಗುಂಪುಗಳು ಧ್ವಸಂಗೊಳಿಸಿದ ಘಟನೆ ಸೋಮವಾರ (ಆ.11) ನಡೆದಿದೆ.

ಬಿಜೆಪಿ, ಬಜರಂಗದಳ ಸೇರಿದಂತೆ ವಿವಿಧ ಹಿಂದುತ್ವ ಗುಂಪುಗಳ ಸದಸ್ಯರು ಕೋಲುಗಳನ್ನು ಹಿಡಿದುಕೊಂಡು ಏಕಾಏಕಿ ವಿವಾದಿತ ಕಟ್ಟಡದ ಪರಿಸರಕ್ಕೆ ನುಗ್ಗಿದ್ದು, ಕಟ್ಟಡದ ಹೊರಗಡೆಯಿದ್ದ ಸಮಾಧಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ವಿಡಿಯೋಗಳು ವೈರಲ್ ಆಗಿವೆ.

ದುಷ್ಕೃತ್ಯದಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ವರದಿಗಳ ಪ್ರಕಾರ, ಫತೇಪುರ್ ಜಿಲ್ಲೆಯ ಸದರ್ ತಾಲೂಕಿನ ರೆಡಿಯಾ ಪ್ರದೇಶದ ಅಬು ನಗರದಲ್ಲಿರುವ ಸಮಾಧಿ ಮತ್ತು ಕಟ್ಟಡ ವಿವಾದ ಕೇಂದ್ರ ಬಿಂದುವಾಗಿದೆ. ಇಲ್ಲಿನ ಸರ್ವೆ ನಂಬರ್ 753ರಲ್ಲಿ ಮಕ್ಬರಾ ಮಾಂಗಿ( ಸೂಫಿ ಸಂತರ ಸಮಾಧಿ ಇರುವ ಜಾಗ ಎಂದು ಹೇಳಬಹುದು) ಇದೆ ಎಂದು ಸರ್ಕಾರದ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

ವಿಡಿಯೋಗಳಲ್ಲಿ ಇಸ್ಲಾಮಿಕ್ ಶೈಲಿಯ ಬೃಹತ್ ಪುರಾತನ ಕಟ್ಟಡ ಮತ್ತು ಅದರ ಸಮೀಪ ಸಮಾಧಿ ಇರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಪುರಾತನ ಕಟ್ಟಡದ ಅಂಗಳದಲ್ಲಿ ನವಾಬ್ ಸಮದ್ ಖಾನ್ ಅವರ ಸಮಾಧಿ ಇದೆ. ಇದನ್ನು ಸರ್ಕಾರ ರಾಷ್ಟ್ರೀಯ ಆಸ್ತಿ ಎಂದು ಗುರುತಿಸಿದೆ.

ಸರ್ಕಾರಿ ದಾಖಲೆಗಳಲ್ಲಿ ಕೂಡ ವಿವಾದಿತ ಕಟ್ಟಡವನ್ನು ಚಕ್ರವರ್ತಿ ಔರಂಗಜೇಬರ ಆಳ್ವಿಕೆಯಲ್ಲಿ ಪೈಲಾನಿಯ ಫೌಜ್‌ದಾರ್ ಆಗಿದ್ದ ನವಾಬ್ ಅಬ್ದುಸಮದ್ ಖಾನ್ ಬಹದ್ದೂರ್ ಅವರ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆ ಹಂಚಿಕೊಂಡಿದ್ದಾರೆ.

ಆದರೆ, ಹಿಂದುತ್ವ ಗುಂಪುಗಳು ಇದು ಠಾಕೂರ್ಜಿ ಮತ್ತು ಶಿವನಿಗೆ ಅರ್ಪಿತವಾದ ದೇವಾಲಯವಾಗಿದ್ದು, ಸಾವಿರ ವರ್ಷಗಳಿಗಿಂತ ಹಳೆಯದು ಎಂದು ಹೇಳಿಕೊಂಡಿವೆ.

ಸದರ್ ತಾಲೂಕಿನಲ್ಲಿರುವ ನವಾಬ್ ಅಬ್ದುಸಮದ್ ಅವರ ಸಮಾಧಿ ವಾಸ್ತವವಾಗಿ ಸಾವಿರ ವರ್ಷಗಳಷ್ಟು ಹಳೆಯದಾದ ಠಾಕೂರ್ಜಿ ಮತ್ತು ಶಿವನ ದೇವಾಲಯವಾಗಿದೆ ಎಂದು ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಮುಖ್ಲಾಲ್ ಪಾಲ್ ಆರೋಪಿಸಿದ ನಂತರ ವಿವಾದ ಭುಗಿಲೆದ್ದಿದೆ. ಕಟ್ಟಡದ ಒಳಗೆ ಕಮಲದ ಹೂವು ಮತ್ತು ತ್ರಿಶೂಲ ಇದೆ ಎಂದು ತಮ್ಮ ಆರೋಪಕ್ಕೆ ಹಿಂದುತ್ವ ಗುಂಪುಗಳು ಪುರಾವೆಯಾಗಿ ಉಲ್ಲೇಖಿಸಿದೆ.

ವರದಿಗಳ ಪ್ರಕಾರ, ಮುಖ್ಲಾಲ್ ಪಾಲ್ ಅವರು ಸನಾತನಿಗಳು ಸೋಮವಾರ ಬೆಳಿಗ್ಗೆ 9 ಗಂಟೆಗೆ ಪುರಿ ಠಾಕೂರ್ ಡಾಕ್ ಬಂಗಲೆಯಿಂದ ಮೆರವಣಿಗೆ ನಡೆಸಿ, ವಿವಾದಿತ ಜಾಗದಲ್ಲಿ ಪೂಜೆ ಸಲ್ಲಿಸಲು ಸೇರುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ.

ಅವರ ಕರೆಯ ನಂತರ, ಹಿಂದುತ್ವ ಸಂಘಟನೆಯ ಸದಸ್ಯರು ಸಮಾಧಿಯ ಹೊರಗಿನ ಪ್ರದೇಶವನ್ನು ಧ್ವಂಸಗೊಳಿಸಿದ್ದಾರೆ. ಉದ್ರಿಕ್ತರು ಪೂಜೆ ಸಲ್ಲಿಸಲು ಮುಂದಾಗಿದ್ದು ಬಿಗುವಿನ ವಾತಾವರಣ ಸೃಷ್ಟಿಸಿತ್ತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋಗಳಲ್ಲಿ ಕೈಯಲ್ಲಿ ಕೇಸರಿ ಧ್ವಜ ಮತ್ತು ಕೋಲುಗಳನ್ನು ಹಿಡಿದು ವಿವಾದಿತ ಕಟ್ಟಡದ ಪ್ರದೇಶಕ್ಕೆ ನುಗ್ಗಿದ ಹಿಂದುತ್ವ ಗುಂಪು, ಪುರಾತನ ಕಟ್ಟಡ ಮತ್ತು ಸಮಾಧಿಯ ಸುತ್ತ ದಾಂದಲೆ ನಡೆಸಿದ್ದನ್ನು ನೋಡಬಹುದು. ದುಷ್ಕರ್ಮಿಗಳು ಜೈಶ್ರೀರಾಮ್ ಘೋಷಣೆ ಕೂಗಿರುವುದು ಮತ್ತು ಪೊಲೀಸರ ಮುಂದೆಯೇ ವಿವಾದಿತ ಜಾಗಕ್ಕೆ ನುಗ್ಗುವುದು ಕೂಡ ವಿಡಿಯೋದಲ್ಲಿ ಇದೆ.

ಘಟನೆಯ ನಂತರ ಜಿಲ್ಲಾಡಳಿತ ಭಾರೀ ಪೊಲೀಸ್ ಮತ್ತು ಪಿಎಸಿ ಪಡೆಗಳನ್ನು ನಿಯೋಜಿಸಿದೆ ಮತ್ತು ವಿವಾದಿತ ಸ್ಥಳದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಮತ್ತಷ್ಟು ಅಶಾಂತಿ ಉಂಟಾಗದಂತೆ ಎಚ್ಚರ ವಹಿಸಿದೆ ಎಂದು ವರದಿಯಾಗಿದೆ.

ವಿವಾದಿತ ಪ್ರದೇಶದೊಳಗೆ ಯಾರೂ ಪ್ರವೇಶಿಸದಂತೆ ನೋಡಿಕೊಳ್ಳಲು ಜಿಲ್ಲಾ ಅಧಿಕಾರಿಯ ಆದೇಶದ ಮೇರೆಗೆ ಬ್ಯಾರಿಕೇಡ್ ಹಾಕಲಾಗುತ್ತಿದೆ.

ಫತೇಪುರ್ ಬಜರಂಗದಳ ಜಿಲ್ಲಾ ಸಹ-ಸಂಚಾಲಕ ಧರ್ಮೇಂದ್ರ ಸಿಂಗ್ ಕೂಡ ಸಮಾಧಿಯಲ್ಲಿ ಪೂಜೆ ಸಲ್ಲಿಸುವ ಬಗ್ಗೆ ಘೋಷಿಸಿದ್ದರು. “ನಾವು ಮಧ್ಯಾಹ್ನ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ. ಆಡಳಿತವು ನಮ್ಮನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯ ಉಪಾಧ್ಯಕ್ಷ ವೀರೇಂದ್ರ ಪಾಂಡೆ ಅವರು ಈ ಸ್ಥಳವು ಭಗವಾನ್ ಭೋಲೆನಾಥ ಮತ್ತು ಶ್ರೀಕೃಷ್ಣನಿಗೆ ಅರ್ಪಿತವಾದ ದೇವಾಲಯವಾಗಿದೆ, ಸಮಾಧಿಯಲ್ಲ ಎಂದು ಹೇಳಿದ್ದಾರೆ.

ಧಾರ್ಮಿಕ ಚಿಹ್ನೆಗಳು, ಪರಿಕ್ರಮ ಮಾರ್ಗ ಮತ್ತು ದೇವಾಲಯವನ್ನು ಅವರು ಸಾಕ್ಷಿಯಾಗಿ ತೋರಿಸಿದ್ದು, ಆಗಸ್ಟ್ 16 ರಂದು ಜನ್ಮಾಷ್ಟಮಿ ಆಚರಣೆಗಾಗಿ ಆ ಸ್ಥಳವನ್ನು ಸ್ವಚ್ಛಗೊಳಿಸಬೇಕು ಎಂದಿದ್ದಾರೆ.

“ನಾವು ಹತ್ತು ದಿನಗಳ ಹಿಂದೆಯೇ ಆಡಳಿತಕ್ಕೆ ಮಾಹಿತಿ ನೀಡಿದ್ದೆವು. ಆದರೆ, ಅವರು ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ” ಎಂದು ಪಾಂಡೆ ಹೇಳಿದ್ದು, ಇದು ಹಿಂದೂಗಳ ನಂಬಿಕೆಯ ಕೇಂದ್ರ ಸ್ಥಳ, ಮರಳಿ ಪಡೆಯುತ್ತೇವೆ ಎಂದಿದ್ದಾರೆ.

ಇಂಡಿಯಾ ಟುಡೇ ಪ್ರಕಾರ, ಆಡಳಿತವು ಭೂಮಿಯನ್ನು ಅಧಿಕೃತವಾಗಿ ರಾಷ್ಟ್ರೀಯ ಆಸ್ತಿ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಪುನರುಚ್ಚರಿಸಿದೆ. ಅಧಿಕಾರಿಗಳು ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ತಡೆಯಲು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ರಾಷ್ಟ್ರೀಯ ಉಲಮಾ ಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ಮೊಹಮ್ಮದ್ ನಸೀಮ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ಇತಿಹಾಸವನ್ನು ವಿರೂಪಗೊಳಿಸುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಎಂದಿದ್ದಾರೆ.

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ: ಮುಂದಿನ ವರ್ಷ ನಡೆಯುವ ಚುನಾವಣೆಗಾಗಿ ‘ನರೇಟಿವ್’ ಸೃಷ್ಟಿ ಎಂದು ತಜ್ಞರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...