Homeಮುಖಪುಟಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ...

ಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ ಮಾಡುವ ಪ್ರತಿಜ್ಞೆ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ವಿವಾದಿತ ಕಟ್ಟಡದ ಬಳಿಯಿದ್ದ ನವಾಬ್ ಸಮದ್ ಖಾನ್ ಅವರ ಸಮಾಧಿಯನ್ನು ಹಿಂದುತ್ವ ಗುಂಪುಗಳು ಧ್ವಸಂಗೊಳಿಸಿದ ಘಟನೆ ಸೋಮವಾರ (ಆ.11) ನಡೆದಿದೆ.

ಬಿಜೆಪಿ, ಬಜರಂಗದಳ ಸೇರಿದಂತೆ ವಿವಿಧ ಹಿಂದುತ್ವ ಗುಂಪುಗಳ ಸದಸ್ಯರು ಕೋಲುಗಳನ್ನು ಹಿಡಿದುಕೊಂಡು ಏಕಾಏಕಿ ವಿವಾದಿತ ಕಟ್ಟಡದ ಪರಿಸರಕ್ಕೆ ನುಗ್ಗಿದ್ದು, ಕಟ್ಟಡದ ಹೊರಗಡೆಯಿದ್ದ ಸಮಾಧಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ವಿಡಿಯೋಗಳು ವೈರಲ್ ಆಗಿವೆ.

ದುಷ್ಕೃತ್ಯದಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ವರದಿಗಳ ಪ್ರಕಾರ, ಫತೇಪುರ್ ಜಿಲ್ಲೆಯ ಸದರ್ ತಾಲೂಕಿನ ರೆಡಿಯಾ ಪ್ರದೇಶದ ಅಬು ನಗರದಲ್ಲಿರುವ ಸಮಾಧಿ ಮತ್ತು ಕಟ್ಟಡ ವಿವಾದ ಕೇಂದ್ರ ಬಿಂದುವಾಗಿದೆ. ಇಲ್ಲಿನ ಸರ್ವೆ ನಂಬರ್ 753ರಲ್ಲಿ ಮಕ್ಬರಾ ಮಾಂಗಿ( ಸೂಫಿ ಸಂತರ ಸಮಾಧಿ ಇರುವ ಜಾಗ ಎಂದು ಹೇಳಬಹುದು) ಇದೆ ಎಂದು ಸರ್ಕಾರದ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

ವಿಡಿಯೋಗಳಲ್ಲಿ ಇಸ್ಲಾಮಿಕ್ ಶೈಲಿಯ ಬೃಹತ್ ಪುರಾತನ ಕಟ್ಟಡ ಮತ್ತು ಅದರ ಸಮೀಪ ಸಮಾಧಿ ಇರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಪುರಾತನ ಕಟ್ಟಡದ ಅಂಗಳದಲ್ಲಿ ನವಾಬ್ ಸಮದ್ ಖಾನ್ ಅವರ ಸಮಾಧಿ ಇದೆ. ಇದನ್ನು ಸರ್ಕಾರ ರಾಷ್ಟ್ರೀಯ ಆಸ್ತಿ ಎಂದು ಗುರುತಿಸಿದೆ.

ಸರ್ಕಾರಿ ದಾಖಲೆಗಳಲ್ಲಿ ಕೂಡ ವಿವಾದಿತ ಕಟ್ಟಡವನ್ನು ಚಕ್ರವರ್ತಿ ಔರಂಗಜೇಬರ ಆಳ್ವಿಕೆಯಲ್ಲಿ ಪೈಲಾನಿಯ ಫೌಜ್‌ದಾರ್ ಆಗಿದ್ದ ನವಾಬ್ ಅಬ್ದುಸಮದ್ ಖಾನ್ ಬಹದ್ದೂರ್ ಅವರ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆ ಹಂಚಿಕೊಂಡಿದ್ದಾರೆ.

ಆದರೆ, ಹಿಂದುತ್ವ ಗುಂಪುಗಳು ಇದು ಠಾಕೂರ್ಜಿ ಮತ್ತು ಶಿವನಿಗೆ ಅರ್ಪಿತವಾದ ದೇವಾಲಯವಾಗಿದ್ದು, ಸಾವಿರ ವರ್ಷಗಳಿಗಿಂತ ಹಳೆಯದು ಎಂದು ಹೇಳಿಕೊಂಡಿವೆ.

ಸದರ್ ತಾಲೂಕಿನಲ್ಲಿರುವ ನವಾಬ್ ಅಬ್ದುಸಮದ್ ಅವರ ಸಮಾಧಿ ವಾಸ್ತವವಾಗಿ ಸಾವಿರ ವರ್ಷಗಳಷ್ಟು ಹಳೆಯದಾದ ಠಾಕೂರ್ಜಿ ಮತ್ತು ಶಿವನ ದೇವಾಲಯವಾಗಿದೆ ಎಂದು ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಮುಖ್ಲಾಲ್ ಪಾಲ್ ಆರೋಪಿಸಿದ ನಂತರ ವಿವಾದ ಭುಗಿಲೆದ್ದಿದೆ. ಕಟ್ಟಡದ ಒಳಗೆ ಕಮಲದ ಹೂವು ಮತ್ತು ತ್ರಿಶೂಲ ಇದೆ ಎಂದು ತಮ್ಮ ಆರೋಪಕ್ಕೆ ಹಿಂದುತ್ವ ಗುಂಪುಗಳು ಪುರಾವೆಯಾಗಿ ಉಲ್ಲೇಖಿಸಿದೆ.

ವರದಿಗಳ ಪ್ರಕಾರ, ಮುಖ್ಲಾಲ್ ಪಾಲ್ ಅವರು ಸನಾತನಿಗಳು ಸೋಮವಾರ ಬೆಳಿಗ್ಗೆ 9 ಗಂಟೆಗೆ ಪುರಿ ಠಾಕೂರ್ ಡಾಕ್ ಬಂಗಲೆಯಿಂದ ಮೆರವಣಿಗೆ ನಡೆಸಿ, ವಿವಾದಿತ ಜಾಗದಲ್ಲಿ ಪೂಜೆ ಸಲ್ಲಿಸಲು ಸೇರುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ.

ಅವರ ಕರೆಯ ನಂತರ, ಹಿಂದುತ್ವ ಸಂಘಟನೆಯ ಸದಸ್ಯರು ಸಮಾಧಿಯ ಹೊರಗಿನ ಪ್ರದೇಶವನ್ನು ಧ್ವಂಸಗೊಳಿಸಿದ್ದಾರೆ. ಉದ್ರಿಕ್ತರು ಪೂಜೆ ಸಲ್ಲಿಸಲು ಮುಂದಾಗಿದ್ದು ಬಿಗುವಿನ ವಾತಾವರಣ ಸೃಷ್ಟಿಸಿತ್ತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋಗಳಲ್ಲಿ ಕೈಯಲ್ಲಿ ಕೇಸರಿ ಧ್ವಜ ಮತ್ತು ಕೋಲುಗಳನ್ನು ಹಿಡಿದು ವಿವಾದಿತ ಕಟ್ಟಡದ ಪ್ರದೇಶಕ್ಕೆ ನುಗ್ಗಿದ ಹಿಂದುತ್ವ ಗುಂಪು, ಪುರಾತನ ಕಟ್ಟಡ ಮತ್ತು ಸಮಾಧಿಯ ಸುತ್ತ ದಾಂದಲೆ ನಡೆಸಿದ್ದನ್ನು ನೋಡಬಹುದು. ದುಷ್ಕರ್ಮಿಗಳು ಜೈಶ್ರೀರಾಮ್ ಘೋಷಣೆ ಕೂಗಿರುವುದು ಮತ್ತು ಪೊಲೀಸರ ಮುಂದೆಯೇ ವಿವಾದಿತ ಜಾಗಕ್ಕೆ ನುಗ್ಗುವುದು ಕೂಡ ವಿಡಿಯೋದಲ್ಲಿ ಇದೆ.

ಘಟನೆಯ ನಂತರ ಜಿಲ್ಲಾಡಳಿತ ಭಾರೀ ಪೊಲೀಸ್ ಮತ್ತು ಪಿಎಸಿ ಪಡೆಗಳನ್ನು ನಿಯೋಜಿಸಿದೆ ಮತ್ತು ವಿವಾದಿತ ಸ್ಥಳದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಮತ್ತಷ್ಟು ಅಶಾಂತಿ ಉಂಟಾಗದಂತೆ ಎಚ್ಚರ ವಹಿಸಿದೆ ಎಂದು ವರದಿಯಾಗಿದೆ.

ವಿವಾದಿತ ಪ್ರದೇಶದೊಳಗೆ ಯಾರೂ ಪ್ರವೇಶಿಸದಂತೆ ನೋಡಿಕೊಳ್ಳಲು ಜಿಲ್ಲಾ ಅಧಿಕಾರಿಯ ಆದೇಶದ ಮೇರೆಗೆ ಬ್ಯಾರಿಕೇಡ್ ಹಾಕಲಾಗುತ್ತಿದೆ.

ಫತೇಪುರ್ ಬಜರಂಗದಳ ಜಿಲ್ಲಾ ಸಹ-ಸಂಚಾಲಕ ಧರ್ಮೇಂದ್ರ ಸಿಂಗ್ ಕೂಡ ಸಮಾಧಿಯಲ್ಲಿ ಪೂಜೆ ಸಲ್ಲಿಸುವ ಬಗ್ಗೆ ಘೋಷಿಸಿದ್ದರು. “ನಾವು ಮಧ್ಯಾಹ್ನ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ. ಆಡಳಿತವು ನಮ್ಮನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯ ಉಪಾಧ್ಯಕ್ಷ ವೀರೇಂದ್ರ ಪಾಂಡೆ ಅವರು ಈ ಸ್ಥಳವು ಭಗವಾನ್ ಭೋಲೆನಾಥ ಮತ್ತು ಶ್ರೀಕೃಷ್ಣನಿಗೆ ಅರ್ಪಿತವಾದ ದೇವಾಲಯವಾಗಿದೆ, ಸಮಾಧಿಯಲ್ಲ ಎಂದು ಹೇಳಿದ್ದಾರೆ.

ಧಾರ್ಮಿಕ ಚಿಹ್ನೆಗಳು, ಪರಿಕ್ರಮ ಮಾರ್ಗ ಮತ್ತು ದೇವಾಲಯವನ್ನು ಅವರು ಸಾಕ್ಷಿಯಾಗಿ ತೋರಿಸಿದ್ದು, ಆಗಸ್ಟ್ 16 ರಂದು ಜನ್ಮಾಷ್ಟಮಿ ಆಚರಣೆಗಾಗಿ ಆ ಸ್ಥಳವನ್ನು ಸ್ವಚ್ಛಗೊಳಿಸಬೇಕು ಎಂದಿದ್ದಾರೆ.

“ನಾವು ಹತ್ತು ದಿನಗಳ ಹಿಂದೆಯೇ ಆಡಳಿತಕ್ಕೆ ಮಾಹಿತಿ ನೀಡಿದ್ದೆವು. ಆದರೆ, ಅವರು ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ” ಎಂದು ಪಾಂಡೆ ಹೇಳಿದ್ದು, ಇದು ಹಿಂದೂಗಳ ನಂಬಿಕೆಯ ಕೇಂದ್ರ ಸ್ಥಳ, ಮರಳಿ ಪಡೆಯುತ್ತೇವೆ ಎಂದಿದ್ದಾರೆ.

ಇಂಡಿಯಾ ಟುಡೇ ಪ್ರಕಾರ, ಆಡಳಿತವು ಭೂಮಿಯನ್ನು ಅಧಿಕೃತವಾಗಿ ರಾಷ್ಟ್ರೀಯ ಆಸ್ತಿ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಪುನರುಚ್ಚರಿಸಿದೆ. ಅಧಿಕಾರಿಗಳು ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ತಡೆಯಲು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ರಾಷ್ಟ್ರೀಯ ಉಲಮಾ ಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ಮೊಹಮ್ಮದ್ ನಸೀಮ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ಇತಿಹಾಸವನ್ನು ವಿರೂಪಗೊಳಿಸುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಎಂದಿದ್ದಾರೆ.

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ: ಮುಂದಿನ ವರ್ಷ ನಡೆಯುವ ಚುನಾವಣೆಗಾಗಿ ‘ನರೇಟಿವ್’ ಸೃಷ್ಟಿ ಎಂದು ತಜ್ಞರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...