Homeಮುಖಪುಟಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಮದುವೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ರಾಜಕೀಯ ಲಾಭಕ್ಕಾಗಿ ಒಂದು ಧರ್ಮದ ವಿರುದ್ಧ ದ್ವೇಷ ಭಾವನೆ ಹರಡುವುದು, ಪ್ರೊಪಗಂಡ ಮಾಡುವುದು ಕೊನೆಗೆ ತಮಗೆ ಎಂತಹ ದುಷ್ಪರಿಣಾಮ ಬೀರಬಹುದು ಎಂಬುದಕ್ಕೆ ಉತ್ತರಾಖಂಡ ರಾಜ್ಯದ ಈ ಬಿಜೆಪಿ ಮುಖಂಡ ತಾಜಾ ಉದಾಹರಣೆಯಾಗಿ ನಮ್ಮ ಮುಂದಿದ್ದಾರೆ. ತನ್ನ ಮಗಳು ಪ್ರೀತಿಸಿದ್ದ ಹುಡುಗನೊಂದಿಗೆ ಮದುವೆ ನಿಶ್ಚಯಿಸಿದ್ದರು. ಆದರೆ ಹಿಂದುತ್ವವಾದಿಗಳು ಅತಿಯಾದ ಒತ್ತಡಕ್ಕೆ ಬಲಿಯಾಗಿ ಸ್ವಂತ ಮಗಳ ಮದುವೆಯನ್ನೇ ರದ್ದುಗೊಳಿಸಬೇಕಾದ ದುಸ್ಥಿತಿ ಅವರದಾಗಿದೆ.

ಉತ್ತರಾಖಂಡದ ಪೌರಿ ಗರ್ವಾಲ್ ನಾಗಲ್ ಪಾಲಿಕಾ (ಪುರಸಭೆ) ಅಧ್ಯಕ್ಷ, ಬಿಜೆಪಿ ಮುಖಂಡ ಯಶಪಾಲ್ ಬೇನಮ್ ಅವರ ಪುತ್ರಿ ಮೋನಿಕಾ ಎಂಬುವವರು ಲಕ್ನೋ ವಿವಿಯಲ್ಲಿ ಓದುತ್ತಿದ್ದಾಗ ರಯೀಸ್ ಅಹ್ಮದ್ ಅವರ ಮಗ ಮೋನಿಸ್ ಅಹ್ಮದ್ ಅವರನ್ನು ಪ್ರೀತಿಸಿದ್ದರು. ಇಬ್ಬರೂ ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದರು. ಇದನ್ನು ಎರಡು ಕುಟುಂಬಗಳಿಗೆ ತಿಳಿಸಿ ಒಪ್ಪಿಗೆ ಪಡೆಯಲಾಗಿತ್ತು. ಮೇ 28 ರಂದು ಅವರ ಮದುವೆಗೆ ಸಕಲ ಸಿದ್ದತೆ ನಡೆಸಲಾಗಿತ್ತು. ಆದರೆ ಮದುವೆ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು ಈ ಅಂತರ್‌ಧರ್ಮೀಯ ಮದುವೆಗೆ ಅಡ್ಡಿಪಡಿಸಿದರು. ಮದುವೆ ರದ್ದುಗೊಳಿಸುವಂತೆ ತೀವ್ರ ಒತ್ತಡ ಹೇರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ್ದ ವಧುವಿನ ತಂದೆ ಬಿಜೆಪಿ ಮುಖಂಡ ಯಶಪಾಲ್ ಬೇನಮ್, “ಇದು 21ನೇ ಶತಮಾನ. ನಮ್ಮ ಮಕ್ಕಳು ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಯಾರೂ ಅದನ್ನು ವಿರೋಧಿಸಬಾರದು” ಎಂದಿದ್ದರು. ಇಷ್ಟು ದಿನ ಬಿಜೆಪಿ ಪಕ್ಷ ಮತ್ತು ಹಿಂದುತ್ವವಾದಿಗಳು ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ದ್ವೇಷ ಹರಡುತ್ತಿದ್ದಾಗ, ಲವ್ ಜಿಹಾದ್ ಎಂಬ ಸುಳ್ಳು ಕಥೆ ಕಟ್ಟುತ್ತಿದ್ದಾಗ ಅದನ್ನು ನೋಡಿ ಬೆಂಬಲಿಸಿದ್ದ ಅಥವಾ ಸುಮ್ಮನಿದ್ದ ಯಶಪಾಲ್ ಬೇನಮ್ ಈಗ ತನ್ನದೇ ಮಗಳ ಮದುವೆಗೆ ಬರುತ್ತಿರುವ ವಿರೋಧವನ್ನು ಟೀಕಿಸಿದ್ದಾರೆ.

‘ಈ ಘಟನೆಯನ್ನು ಧರ್ಮದ ಮೂಲಕ ನೋಡುತ್ತಿರುವವರಿಗೆ ನಾನು ಹೇಳುವುದೇನೆಂದರೆ ಇದು ಎರಡು ಕುಟುಂಬಗಳಿಗೆ ಸಂಬಂಧಿಸಿದ ಮಹತ್ವದ ವಿಷಯವಾಗಿದೆ. ಇಬ್ಬರು ಯುವಜನರ ಭವಿಷ್ಯ ಇದರಲ್ಲಿದೆ ಮತ್ತು ಈ ಪ್ರಕರಣದಲ್ಲಿ ನಮಗೆ ಧರ್ಮವು ಮುಖ್ಯವಲ್ಲ. ಆದರೆ ಈ ಮದುವೆ ಹಿಂದೂ ಸಂಪ್ರದಾಯದಂತೆ ನಡೆಯಲಿದೆ’ ಎಂದು ಬೇನಮ್ ಹೇಳಿದ್ದರು. ಆದರೂ ಸಹ ಹಿಂದುತ್ವವಾದಿಗಳು ಮುಸ್ಲಿಂ ಯುವಕನೊಂದಿಗೆ ಅವರ ಮಗಳ ಮದುವೆ ನಡೆಯಬಾರದೆಂದು ಆಗ್ರಹಿಸಿದ್ದರು.

ಬಿಜೆಪಿ ಸದಸ್ಯ ಮತ್ತು ರಾಜ್ಯ ಸರ್ಕಾರ ನಿರ್ವಹಿಸುವ ಗೋಸಂರಕ್ಷಣಾ ಆಯೋಗದ ಅಧ್ಯಕ್ಷರಾದ ಧರ್ಮವೀರ್ ಗುಸೇನ್ ಎಂಬುವವರು ಮಾತನಾಡಿ, “ನಾವು ಈಗಲೂ ಉತ್ತರಾಖಂಡದಲ್ಲಿ ಚಿಕ್ಕ ಧೋತಿ (ಕೆಳಭಾಗದ ಬ್ರಾಹ್ಮಣ) ಮತ್ತು ಉದ್ದ ಧೋತಿ (ಮೇಲುಭಾಗದ ಬ್ರಾಹ್ಮಣ) ಸಂಪ್ರದಾಯವನ್ನು ಅನುಸರಿಸುತ್ತೇವೆ. ಇದರರ್ಥ ನಾವು ನಮ್ಮ ಸಂಪ್ರದಾಯಗಳನ್ನು ನಂಬುತ್ತೇವೆ ಮತ್ತು ನಮ್ಮ ಸಂಸ್ಕೃತಿಯಲ್ಲಿ ಆಕ್ಷೇಪಾರ್ಹವಾದ ಯಾವುದನ್ನೂ ಸ್ವೀಕರಿಸಲು ಸಾಧ್ಯವಿಲ್ಲ. ಅಂತಹ ಮದುವೆಗಳನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಮದುವೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಇಂತಹ ಮದುವೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಜಿಲ್ಲಾ ವಿಎಚ್‌ಪಿ ಕಾರ್ಯಾಧ್ಯಕ್ಷ ದೀಪಕ್ ಗೌಡ ಹೇಳಿದ್ದಾರೆ.

ಈ ವಿವಾದಗಳು ಭುಗಿಲೆದ್ದ ನಂತರ ತನ್ನ ಮಗಳ ಮದುವೆಯನ್ನು ರದ್ದುಗೊಳಿಸುವುದಾಗಿ ಬಿಜೆಪಿ ಮುಖಂಡ ಯಶಪಾಲ್ ಬೇನಮ್ ತಿಳಿಸಿದ್ದಾರೆ. “ಸಾರ್ವಜನಿಕ ಪ್ರತಿನಿಧಿಯಾದ ನನಗೆ ನನ್ನ ಮಗಳ ಮದುವೆ ಪೊಲೀಸ್ ಮತ್ತು ಆಡಳಿತದ ರಕ್ಷಣೆಯಲ್ಲಿ ನಡೆಯುವುದು ಇಷ್ಟವಿಲ್ಲ. ನಾನು ಸಾರ್ವಜನಿಕ ಭಾವನೆಗಳನ್ನು ಗೌರವಿಸುತ್ತೇನೆ. ಹಾಗಾಗಿ ಸದ್ಯ ಮದುವೆ ಮುಂದೂಡುತ್ತಿದ್ದೇವೆ. ಅದೇ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯ ಬಗ್ಗೆ ಕುಟುಂಬದವರು, ಹಿತೈಷಿಗಳು ಮತ್ತು ವರನ ಕಡೆಯವರು ಒಟ್ಟಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ತನ್ನ ಮಗಳು ಯಾರನ್ನು ಮದುವೆಯಾಗಬೇಕೆಂದು ನಿರ್ಧರಿಸುವ ಹಕ್ಕು ಅವಳಿಗಾಗಲಿ, ತನಗಾಗಲಿ ಇಲ್ಲದ ಪರಿಸ್ಥಿತಿ ಆ ಬಿಜೆಪಿ ಮುಖಂಡನದಾಗಿದೆ. ಇದು ಸಂವಿಧಾನಬಾಹಿರವಾದುದು. ಬೇವು ಬಿತ್ತಿ, ಮಾವು ನಿರೀಕ್ಷಿಸಲಾಗುವುದಿಲ್ಲ ಎಂಬ ಗಾದೆ ಮಾತಿನಂತೆ ಇದೊಂದು ಎಲ್ಲರಿಗೂ ದೊಡ್ಡ ಕರೆಗಂಟೆಯಾಗಿದೆ. ರಾಜಕೀಯಕ್ಕೆ ಧರ್ಮವನ್ನು ಎಳೆದು ತರಬಾರದು ಮತ್ತು ಪ್ರತಿಯೊಬ್ಬರ ಆಯ್ಕೆ ಮತ್ತು ಹಕ್ಕುಗಳನ್ನು ಗೌರವಿಸಬೇಕು. ಆಗ ಮಾತ್ರ ನಾವು ಸಹ ಸ್ವತಂತ್ರವಾಗಿ ಬದುಕಲು ಸಾಧ್ಯ ಎಂಬುದನ್ನು ಈ ಘಟನೆ ನಿರೂಪಿಸಿದೆ.

ಇದನ್ನೂ ಓದಿ; ಕರಾವಳಿ: ಬೆಚ್ಚಿ ಬೀಳಿಸಿದ ಬುದ್ಧಿವಂತರ ಸೀಮೆಯ “ತಿರುಚು” ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...