Homeಮುಖಪುಟಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಮದುವೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ರಾಜಕೀಯ ಲಾಭಕ್ಕಾಗಿ ಒಂದು ಧರ್ಮದ ವಿರುದ್ಧ ದ್ವೇಷ ಭಾವನೆ ಹರಡುವುದು, ಪ್ರೊಪಗಂಡ ಮಾಡುವುದು ಕೊನೆಗೆ ತಮಗೆ ಎಂತಹ ದುಷ್ಪರಿಣಾಮ ಬೀರಬಹುದು ಎಂಬುದಕ್ಕೆ ಉತ್ತರಾಖಂಡ ರಾಜ್ಯದ ಈ ಬಿಜೆಪಿ ಮುಖಂಡ ತಾಜಾ ಉದಾಹರಣೆಯಾಗಿ ನಮ್ಮ ಮುಂದಿದ್ದಾರೆ. ತನ್ನ ಮಗಳು ಪ್ರೀತಿಸಿದ್ದ ಹುಡುಗನೊಂದಿಗೆ ಮದುವೆ ನಿಶ್ಚಯಿಸಿದ್ದರು. ಆದರೆ ಹಿಂದುತ್ವವಾದಿಗಳು ಅತಿಯಾದ ಒತ್ತಡಕ್ಕೆ ಬಲಿಯಾಗಿ ಸ್ವಂತ ಮಗಳ ಮದುವೆಯನ್ನೇ ರದ್ದುಗೊಳಿಸಬೇಕಾದ ದುಸ್ಥಿತಿ ಅವರದಾಗಿದೆ.

ಉತ್ತರಾಖಂಡದ ಪೌರಿ ಗರ್ವಾಲ್ ನಾಗಲ್ ಪಾಲಿಕಾ (ಪುರಸಭೆ) ಅಧ್ಯಕ್ಷ, ಬಿಜೆಪಿ ಮುಖಂಡ ಯಶಪಾಲ್ ಬೇನಮ್ ಅವರ ಪುತ್ರಿ ಮೋನಿಕಾ ಎಂಬುವವರು ಲಕ್ನೋ ವಿವಿಯಲ್ಲಿ ಓದುತ್ತಿದ್ದಾಗ ರಯೀಸ್ ಅಹ್ಮದ್ ಅವರ ಮಗ ಮೋನಿಸ್ ಅಹ್ಮದ್ ಅವರನ್ನು ಪ್ರೀತಿಸಿದ್ದರು. ಇಬ್ಬರೂ ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದರು. ಇದನ್ನು ಎರಡು ಕುಟುಂಬಗಳಿಗೆ ತಿಳಿಸಿ ಒಪ್ಪಿಗೆ ಪಡೆಯಲಾಗಿತ್ತು. ಮೇ 28 ರಂದು ಅವರ ಮದುವೆಗೆ ಸಕಲ ಸಿದ್ದತೆ ನಡೆಸಲಾಗಿತ್ತು. ಆದರೆ ಮದುವೆ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು ಈ ಅಂತರ್‌ಧರ್ಮೀಯ ಮದುವೆಗೆ ಅಡ್ಡಿಪಡಿಸಿದರು. ಮದುವೆ ರದ್ದುಗೊಳಿಸುವಂತೆ ತೀವ್ರ ಒತ್ತಡ ಹೇರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ್ದ ವಧುವಿನ ತಂದೆ ಬಿಜೆಪಿ ಮುಖಂಡ ಯಶಪಾಲ್ ಬೇನಮ್, “ಇದು 21ನೇ ಶತಮಾನ. ನಮ್ಮ ಮಕ್ಕಳು ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಯಾರೂ ಅದನ್ನು ವಿರೋಧಿಸಬಾರದು” ಎಂದಿದ್ದರು. ಇಷ್ಟು ದಿನ ಬಿಜೆಪಿ ಪಕ್ಷ ಮತ್ತು ಹಿಂದುತ್ವವಾದಿಗಳು ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ದ್ವೇಷ ಹರಡುತ್ತಿದ್ದಾಗ, ಲವ್ ಜಿಹಾದ್ ಎಂಬ ಸುಳ್ಳು ಕಥೆ ಕಟ್ಟುತ್ತಿದ್ದಾಗ ಅದನ್ನು ನೋಡಿ ಬೆಂಬಲಿಸಿದ್ದ ಅಥವಾ ಸುಮ್ಮನಿದ್ದ ಯಶಪಾಲ್ ಬೇನಮ್ ಈಗ ತನ್ನದೇ ಮಗಳ ಮದುವೆಗೆ ಬರುತ್ತಿರುವ ವಿರೋಧವನ್ನು ಟೀಕಿಸಿದ್ದಾರೆ.

‘ಈ ಘಟನೆಯನ್ನು ಧರ್ಮದ ಮೂಲಕ ನೋಡುತ್ತಿರುವವರಿಗೆ ನಾನು ಹೇಳುವುದೇನೆಂದರೆ ಇದು ಎರಡು ಕುಟುಂಬಗಳಿಗೆ ಸಂಬಂಧಿಸಿದ ಮಹತ್ವದ ವಿಷಯವಾಗಿದೆ. ಇಬ್ಬರು ಯುವಜನರ ಭವಿಷ್ಯ ಇದರಲ್ಲಿದೆ ಮತ್ತು ಈ ಪ್ರಕರಣದಲ್ಲಿ ನಮಗೆ ಧರ್ಮವು ಮುಖ್ಯವಲ್ಲ. ಆದರೆ ಈ ಮದುವೆ ಹಿಂದೂ ಸಂಪ್ರದಾಯದಂತೆ ನಡೆಯಲಿದೆ’ ಎಂದು ಬೇನಮ್ ಹೇಳಿದ್ದರು. ಆದರೂ ಸಹ ಹಿಂದುತ್ವವಾದಿಗಳು ಮುಸ್ಲಿಂ ಯುವಕನೊಂದಿಗೆ ಅವರ ಮಗಳ ಮದುವೆ ನಡೆಯಬಾರದೆಂದು ಆಗ್ರಹಿಸಿದ್ದರು.

ಬಿಜೆಪಿ ಸದಸ್ಯ ಮತ್ತು ರಾಜ್ಯ ಸರ್ಕಾರ ನಿರ್ವಹಿಸುವ ಗೋಸಂರಕ್ಷಣಾ ಆಯೋಗದ ಅಧ್ಯಕ್ಷರಾದ ಧರ್ಮವೀರ್ ಗುಸೇನ್ ಎಂಬುವವರು ಮಾತನಾಡಿ, “ನಾವು ಈಗಲೂ ಉತ್ತರಾಖಂಡದಲ್ಲಿ ಚಿಕ್ಕ ಧೋತಿ (ಕೆಳಭಾಗದ ಬ್ರಾಹ್ಮಣ) ಮತ್ತು ಉದ್ದ ಧೋತಿ (ಮೇಲುಭಾಗದ ಬ್ರಾಹ್ಮಣ) ಸಂಪ್ರದಾಯವನ್ನು ಅನುಸರಿಸುತ್ತೇವೆ. ಇದರರ್ಥ ನಾವು ನಮ್ಮ ಸಂಪ್ರದಾಯಗಳನ್ನು ನಂಬುತ್ತೇವೆ ಮತ್ತು ನಮ್ಮ ಸಂಸ್ಕೃತಿಯಲ್ಲಿ ಆಕ್ಷೇಪಾರ್ಹವಾದ ಯಾವುದನ್ನೂ ಸ್ವೀಕರಿಸಲು ಸಾಧ್ಯವಿಲ್ಲ. ಅಂತಹ ಮದುವೆಗಳನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಮದುವೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಇಂತಹ ಮದುವೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಜಿಲ್ಲಾ ವಿಎಚ್‌ಪಿ ಕಾರ್ಯಾಧ್ಯಕ್ಷ ದೀಪಕ್ ಗೌಡ ಹೇಳಿದ್ದಾರೆ.

ಈ ವಿವಾದಗಳು ಭುಗಿಲೆದ್ದ ನಂತರ ತನ್ನ ಮಗಳ ಮದುವೆಯನ್ನು ರದ್ದುಗೊಳಿಸುವುದಾಗಿ ಬಿಜೆಪಿ ಮುಖಂಡ ಯಶಪಾಲ್ ಬೇನಮ್ ತಿಳಿಸಿದ್ದಾರೆ. “ಸಾರ್ವಜನಿಕ ಪ್ರತಿನಿಧಿಯಾದ ನನಗೆ ನನ್ನ ಮಗಳ ಮದುವೆ ಪೊಲೀಸ್ ಮತ್ತು ಆಡಳಿತದ ರಕ್ಷಣೆಯಲ್ಲಿ ನಡೆಯುವುದು ಇಷ್ಟವಿಲ್ಲ. ನಾನು ಸಾರ್ವಜನಿಕ ಭಾವನೆಗಳನ್ನು ಗೌರವಿಸುತ್ತೇನೆ. ಹಾಗಾಗಿ ಸದ್ಯ ಮದುವೆ ಮುಂದೂಡುತ್ತಿದ್ದೇವೆ. ಅದೇ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯ ಬಗ್ಗೆ ಕುಟುಂಬದವರು, ಹಿತೈಷಿಗಳು ಮತ್ತು ವರನ ಕಡೆಯವರು ಒಟ್ಟಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ತನ್ನ ಮಗಳು ಯಾರನ್ನು ಮದುವೆಯಾಗಬೇಕೆಂದು ನಿರ್ಧರಿಸುವ ಹಕ್ಕು ಅವಳಿಗಾಗಲಿ, ತನಗಾಗಲಿ ಇಲ್ಲದ ಪರಿಸ್ಥಿತಿ ಆ ಬಿಜೆಪಿ ಮುಖಂಡನದಾಗಿದೆ. ಇದು ಸಂವಿಧಾನಬಾಹಿರವಾದುದು. ಬೇವು ಬಿತ್ತಿ, ಮಾವು ನಿರೀಕ್ಷಿಸಲಾಗುವುದಿಲ್ಲ ಎಂಬ ಗಾದೆ ಮಾತಿನಂತೆ ಇದೊಂದು ಎಲ್ಲರಿಗೂ ದೊಡ್ಡ ಕರೆಗಂಟೆಯಾಗಿದೆ. ರಾಜಕೀಯಕ್ಕೆ ಧರ್ಮವನ್ನು ಎಳೆದು ತರಬಾರದು ಮತ್ತು ಪ್ರತಿಯೊಬ್ಬರ ಆಯ್ಕೆ ಮತ್ತು ಹಕ್ಕುಗಳನ್ನು ಗೌರವಿಸಬೇಕು. ಆಗ ಮಾತ್ರ ನಾವು ಸಹ ಸ್ವತಂತ್ರವಾಗಿ ಬದುಕಲು ಸಾಧ್ಯ ಎಂಬುದನ್ನು ಈ ಘಟನೆ ನಿರೂಪಿಸಿದೆ.

ಇದನ್ನೂ ಓದಿ; ಕರಾವಳಿ: ಬೆಚ್ಚಿ ಬೀಳಿಸಿದ ಬುದ್ಧಿವಂತರ ಸೀಮೆಯ “ತಿರುಚು” ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...