Homeಮುಖಪುಟಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಮದುವೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ರಾಜಕೀಯ ಲಾಭಕ್ಕಾಗಿ ಒಂದು ಧರ್ಮದ ವಿರುದ್ಧ ದ್ವೇಷ ಭಾವನೆ ಹರಡುವುದು, ಪ್ರೊಪಗಂಡ ಮಾಡುವುದು ಕೊನೆಗೆ ತಮಗೆ ಎಂತಹ ದುಷ್ಪರಿಣಾಮ ಬೀರಬಹುದು ಎಂಬುದಕ್ಕೆ ಉತ್ತರಾಖಂಡ ರಾಜ್ಯದ ಈ ಬಿಜೆಪಿ ಮುಖಂಡ ತಾಜಾ ಉದಾಹರಣೆಯಾಗಿ ನಮ್ಮ ಮುಂದಿದ್ದಾರೆ. ತನ್ನ ಮಗಳು ಪ್ರೀತಿಸಿದ್ದ ಹುಡುಗನೊಂದಿಗೆ ಮದುವೆ ನಿಶ್ಚಯಿಸಿದ್ದರು. ಆದರೆ ಹಿಂದುತ್ವವಾದಿಗಳು ಅತಿಯಾದ ಒತ್ತಡಕ್ಕೆ ಬಲಿಯಾಗಿ ಸ್ವಂತ ಮಗಳ ಮದುವೆಯನ್ನೇ ರದ್ದುಗೊಳಿಸಬೇಕಾದ ದುಸ್ಥಿತಿ ಅವರದಾಗಿದೆ.

ಉತ್ತರಾಖಂಡದ ಪೌರಿ ಗರ್ವಾಲ್ ನಾಗಲ್ ಪಾಲಿಕಾ (ಪುರಸಭೆ) ಅಧ್ಯಕ್ಷ, ಬಿಜೆಪಿ ಮುಖಂಡ ಯಶಪಾಲ್ ಬೇನಮ್ ಅವರ ಪುತ್ರಿ ಮೋನಿಕಾ ಎಂಬುವವರು ಲಕ್ನೋ ವಿವಿಯಲ್ಲಿ ಓದುತ್ತಿದ್ದಾಗ ರಯೀಸ್ ಅಹ್ಮದ್ ಅವರ ಮಗ ಮೋನಿಸ್ ಅಹ್ಮದ್ ಅವರನ್ನು ಪ್ರೀತಿಸಿದ್ದರು. ಇಬ್ಬರೂ ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದರು. ಇದನ್ನು ಎರಡು ಕುಟುಂಬಗಳಿಗೆ ತಿಳಿಸಿ ಒಪ್ಪಿಗೆ ಪಡೆಯಲಾಗಿತ್ತು. ಮೇ 28 ರಂದು ಅವರ ಮದುವೆಗೆ ಸಕಲ ಸಿದ್ದತೆ ನಡೆಸಲಾಗಿತ್ತು. ಆದರೆ ಮದುವೆ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು ಈ ಅಂತರ್‌ಧರ್ಮೀಯ ಮದುವೆಗೆ ಅಡ್ಡಿಪಡಿಸಿದರು. ಮದುವೆ ರದ್ದುಗೊಳಿಸುವಂತೆ ತೀವ್ರ ಒತ್ತಡ ಹೇರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ್ದ ವಧುವಿನ ತಂದೆ ಬಿಜೆಪಿ ಮುಖಂಡ ಯಶಪಾಲ್ ಬೇನಮ್, “ಇದು 21ನೇ ಶತಮಾನ. ನಮ್ಮ ಮಕ್ಕಳು ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಯಾರೂ ಅದನ್ನು ವಿರೋಧಿಸಬಾರದು” ಎಂದಿದ್ದರು. ಇಷ್ಟು ದಿನ ಬಿಜೆಪಿ ಪಕ್ಷ ಮತ್ತು ಹಿಂದುತ್ವವಾದಿಗಳು ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ದ್ವೇಷ ಹರಡುತ್ತಿದ್ದಾಗ, ಲವ್ ಜಿಹಾದ್ ಎಂಬ ಸುಳ್ಳು ಕಥೆ ಕಟ್ಟುತ್ತಿದ್ದಾಗ ಅದನ್ನು ನೋಡಿ ಬೆಂಬಲಿಸಿದ್ದ ಅಥವಾ ಸುಮ್ಮನಿದ್ದ ಯಶಪಾಲ್ ಬೇನಮ್ ಈಗ ತನ್ನದೇ ಮಗಳ ಮದುವೆಗೆ ಬರುತ್ತಿರುವ ವಿರೋಧವನ್ನು ಟೀಕಿಸಿದ್ದಾರೆ.

‘ಈ ಘಟನೆಯನ್ನು ಧರ್ಮದ ಮೂಲಕ ನೋಡುತ್ತಿರುವವರಿಗೆ ನಾನು ಹೇಳುವುದೇನೆಂದರೆ ಇದು ಎರಡು ಕುಟುಂಬಗಳಿಗೆ ಸಂಬಂಧಿಸಿದ ಮಹತ್ವದ ವಿಷಯವಾಗಿದೆ. ಇಬ್ಬರು ಯುವಜನರ ಭವಿಷ್ಯ ಇದರಲ್ಲಿದೆ ಮತ್ತು ಈ ಪ್ರಕರಣದಲ್ಲಿ ನಮಗೆ ಧರ್ಮವು ಮುಖ್ಯವಲ್ಲ. ಆದರೆ ಈ ಮದುವೆ ಹಿಂದೂ ಸಂಪ್ರದಾಯದಂತೆ ನಡೆಯಲಿದೆ’ ಎಂದು ಬೇನಮ್ ಹೇಳಿದ್ದರು. ಆದರೂ ಸಹ ಹಿಂದುತ್ವವಾದಿಗಳು ಮುಸ್ಲಿಂ ಯುವಕನೊಂದಿಗೆ ಅವರ ಮಗಳ ಮದುವೆ ನಡೆಯಬಾರದೆಂದು ಆಗ್ರಹಿಸಿದ್ದರು.

ಬಿಜೆಪಿ ಸದಸ್ಯ ಮತ್ತು ರಾಜ್ಯ ಸರ್ಕಾರ ನಿರ್ವಹಿಸುವ ಗೋಸಂರಕ್ಷಣಾ ಆಯೋಗದ ಅಧ್ಯಕ್ಷರಾದ ಧರ್ಮವೀರ್ ಗುಸೇನ್ ಎಂಬುವವರು ಮಾತನಾಡಿ, “ನಾವು ಈಗಲೂ ಉತ್ತರಾಖಂಡದಲ್ಲಿ ಚಿಕ್ಕ ಧೋತಿ (ಕೆಳಭಾಗದ ಬ್ರಾಹ್ಮಣ) ಮತ್ತು ಉದ್ದ ಧೋತಿ (ಮೇಲುಭಾಗದ ಬ್ರಾಹ್ಮಣ) ಸಂಪ್ರದಾಯವನ್ನು ಅನುಸರಿಸುತ್ತೇವೆ. ಇದರರ್ಥ ನಾವು ನಮ್ಮ ಸಂಪ್ರದಾಯಗಳನ್ನು ನಂಬುತ್ತೇವೆ ಮತ್ತು ನಮ್ಮ ಸಂಸ್ಕೃತಿಯಲ್ಲಿ ಆಕ್ಷೇಪಾರ್ಹವಾದ ಯಾವುದನ್ನೂ ಸ್ವೀಕರಿಸಲು ಸಾಧ್ಯವಿಲ್ಲ. ಅಂತಹ ಮದುವೆಗಳನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಮದುವೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಇಂತಹ ಮದುವೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಜಿಲ್ಲಾ ವಿಎಚ್‌ಪಿ ಕಾರ್ಯಾಧ್ಯಕ್ಷ ದೀಪಕ್ ಗೌಡ ಹೇಳಿದ್ದಾರೆ.

ಈ ವಿವಾದಗಳು ಭುಗಿಲೆದ್ದ ನಂತರ ತನ್ನ ಮಗಳ ಮದುವೆಯನ್ನು ರದ್ದುಗೊಳಿಸುವುದಾಗಿ ಬಿಜೆಪಿ ಮುಖಂಡ ಯಶಪಾಲ್ ಬೇನಮ್ ತಿಳಿಸಿದ್ದಾರೆ. “ಸಾರ್ವಜನಿಕ ಪ್ರತಿನಿಧಿಯಾದ ನನಗೆ ನನ್ನ ಮಗಳ ಮದುವೆ ಪೊಲೀಸ್ ಮತ್ತು ಆಡಳಿತದ ರಕ್ಷಣೆಯಲ್ಲಿ ನಡೆಯುವುದು ಇಷ್ಟವಿಲ್ಲ. ನಾನು ಸಾರ್ವಜನಿಕ ಭಾವನೆಗಳನ್ನು ಗೌರವಿಸುತ್ತೇನೆ. ಹಾಗಾಗಿ ಸದ್ಯ ಮದುವೆ ಮುಂದೂಡುತ್ತಿದ್ದೇವೆ. ಅದೇ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯ ಬಗ್ಗೆ ಕುಟುಂಬದವರು, ಹಿತೈಷಿಗಳು ಮತ್ತು ವರನ ಕಡೆಯವರು ಒಟ್ಟಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ತನ್ನ ಮಗಳು ಯಾರನ್ನು ಮದುವೆಯಾಗಬೇಕೆಂದು ನಿರ್ಧರಿಸುವ ಹಕ್ಕು ಅವಳಿಗಾಗಲಿ, ತನಗಾಗಲಿ ಇಲ್ಲದ ಪರಿಸ್ಥಿತಿ ಆ ಬಿಜೆಪಿ ಮುಖಂಡನದಾಗಿದೆ. ಇದು ಸಂವಿಧಾನಬಾಹಿರವಾದುದು. ಬೇವು ಬಿತ್ತಿ, ಮಾವು ನಿರೀಕ್ಷಿಸಲಾಗುವುದಿಲ್ಲ ಎಂಬ ಗಾದೆ ಮಾತಿನಂತೆ ಇದೊಂದು ಎಲ್ಲರಿಗೂ ದೊಡ್ಡ ಕರೆಗಂಟೆಯಾಗಿದೆ. ರಾಜಕೀಯಕ್ಕೆ ಧರ್ಮವನ್ನು ಎಳೆದು ತರಬಾರದು ಮತ್ತು ಪ್ರತಿಯೊಬ್ಬರ ಆಯ್ಕೆ ಮತ್ತು ಹಕ್ಕುಗಳನ್ನು ಗೌರವಿಸಬೇಕು. ಆಗ ಮಾತ್ರ ನಾವು ಸಹ ಸ್ವತಂತ್ರವಾಗಿ ಬದುಕಲು ಸಾಧ್ಯ ಎಂಬುದನ್ನು ಈ ಘಟನೆ ನಿರೂಪಿಸಿದೆ.

ಇದನ್ನೂ ಓದಿ; ಕರಾವಳಿ: ಬೆಚ್ಚಿ ಬೀಳಿಸಿದ ಬುದ್ಧಿವಂತರ ಸೀಮೆಯ “ತಿರುಚು” ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...