Homeಮುಖಪುಟಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಮದುವೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ರಾಜಕೀಯ ಲಾಭಕ್ಕಾಗಿ ಒಂದು ಧರ್ಮದ ವಿರುದ್ಧ ದ್ವೇಷ ಭಾವನೆ ಹರಡುವುದು, ಪ್ರೊಪಗಂಡ ಮಾಡುವುದು ಕೊನೆಗೆ ತಮಗೆ ಎಂತಹ ದುಷ್ಪರಿಣಾಮ ಬೀರಬಹುದು ಎಂಬುದಕ್ಕೆ ಉತ್ತರಾಖಂಡ ರಾಜ್ಯದ ಈ ಬಿಜೆಪಿ ಮುಖಂಡ ತಾಜಾ ಉದಾಹರಣೆಯಾಗಿ ನಮ್ಮ ಮುಂದಿದ್ದಾರೆ. ತನ್ನ ಮಗಳು ಪ್ರೀತಿಸಿದ್ದ ಹುಡುಗನೊಂದಿಗೆ ಮದುವೆ ನಿಶ್ಚಯಿಸಿದ್ದರು. ಆದರೆ ಹಿಂದುತ್ವವಾದಿಗಳು ಅತಿಯಾದ ಒತ್ತಡಕ್ಕೆ ಬಲಿಯಾಗಿ ಸ್ವಂತ ಮಗಳ ಮದುವೆಯನ್ನೇ ರದ್ದುಗೊಳಿಸಬೇಕಾದ ದುಸ್ಥಿತಿ ಅವರದಾಗಿದೆ.

ಉತ್ತರಾಖಂಡದ ಪೌರಿ ಗರ್ವಾಲ್ ನಾಗಲ್ ಪಾಲಿಕಾ (ಪುರಸಭೆ) ಅಧ್ಯಕ್ಷ, ಬಿಜೆಪಿ ಮುಖಂಡ ಯಶಪಾಲ್ ಬೇನಮ್ ಅವರ ಪುತ್ರಿ ಮೋನಿಕಾ ಎಂಬುವವರು ಲಕ್ನೋ ವಿವಿಯಲ್ಲಿ ಓದುತ್ತಿದ್ದಾಗ ರಯೀಸ್ ಅಹ್ಮದ್ ಅವರ ಮಗ ಮೋನಿಸ್ ಅಹ್ಮದ್ ಅವರನ್ನು ಪ್ರೀತಿಸಿದ್ದರು. ಇಬ್ಬರೂ ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದರು. ಇದನ್ನು ಎರಡು ಕುಟುಂಬಗಳಿಗೆ ತಿಳಿಸಿ ಒಪ್ಪಿಗೆ ಪಡೆಯಲಾಗಿತ್ತು. ಮೇ 28 ರಂದು ಅವರ ಮದುವೆಗೆ ಸಕಲ ಸಿದ್ದತೆ ನಡೆಸಲಾಗಿತ್ತು. ಆದರೆ ಮದುವೆ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು ಈ ಅಂತರ್‌ಧರ್ಮೀಯ ಮದುವೆಗೆ ಅಡ್ಡಿಪಡಿಸಿದರು. ಮದುವೆ ರದ್ದುಗೊಳಿಸುವಂತೆ ತೀವ್ರ ಒತ್ತಡ ಹೇರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ್ದ ವಧುವಿನ ತಂದೆ ಬಿಜೆಪಿ ಮುಖಂಡ ಯಶಪಾಲ್ ಬೇನಮ್, “ಇದು 21ನೇ ಶತಮಾನ. ನಮ್ಮ ಮಕ್ಕಳು ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಯಾರೂ ಅದನ್ನು ವಿರೋಧಿಸಬಾರದು” ಎಂದಿದ್ದರು. ಇಷ್ಟು ದಿನ ಬಿಜೆಪಿ ಪಕ್ಷ ಮತ್ತು ಹಿಂದುತ್ವವಾದಿಗಳು ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ದ್ವೇಷ ಹರಡುತ್ತಿದ್ದಾಗ, ಲವ್ ಜಿಹಾದ್ ಎಂಬ ಸುಳ್ಳು ಕಥೆ ಕಟ್ಟುತ್ತಿದ್ದಾಗ ಅದನ್ನು ನೋಡಿ ಬೆಂಬಲಿಸಿದ್ದ ಅಥವಾ ಸುಮ್ಮನಿದ್ದ ಯಶಪಾಲ್ ಬೇನಮ್ ಈಗ ತನ್ನದೇ ಮಗಳ ಮದುವೆಗೆ ಬರುತ್ತಿರುವ ವಿರೋಧವನ್ನು ಟೀಕಿಸಿದ್ದಾರೆ.

‘ಈ ಘಟನೆಯನ್ನು ಧರ್ಮದ ಮೂಲಕ ನೋಡುತ್ತಿರುವವರಿಗೆ ನಾನು ಹೇಳುವುದೇನೆಂದರೆ ಇದು ಎರಡು ಕುಟುಂಬಗಳಿಗೆ ಸಂಬಂಧಿಸಿದ ಮಹತ್ವದ ವಿಷಯವಾಗಿದೆ. ಇಬ್ಬರು ಯುವಜನರ ಭವಿಷ್ಯ ಇದರಲ್ಲಿದೆ ಮತ್ತು ಈ ಪ್ರಕರಣದಲ್ಲಿ ನಮಗೆ ಧರ್ಮವು ಮುಖ್ಯವಲ್ಲ. ಆದರೆ ಈ ಮದುವೆ ಹಿಂದೂ ಸಂಪ್ರದಾಯದಂತೆ ನಡೆಯಲಿದೆ’ ಎಂದು ಬೇನಮ್ ಹೇಳಿದ್ದರು. ಆದರೂ ಸಹ ಹಿಂದುತ್ವವಾದಿಗಳು ಮುಸ್ಲಿಂ ಯುವಕನೊಂದಿಗೆ ಅವರ ಮಗಳ ಮದುವೆ ನಡೆಯಬಾರದೆಂದು ಆಗ್ರಹಿಸಿದ್ದರು.

ಬಿಜೆಪಿ ಸದಸ್ಯ ಮತ್ತು ರಾಜ್ಯ ಸರ್ಕಾರ ನಿರ್ವಹಿಸುವ ಗೋಸಂರಕ್ಷಣಾ ಆಯೋಗದ ಅಧ್ಯಕ್ಷರಾದ ಧರ್ಮವೀರ್ ಗುಸೇನ್ ಎಂಬುವವರು ಮಾತನಾಡಿ, “ನಾವು ಈಗಲೂ ಉತ್ತರಾಖಂಡದಲ್ಲಿ ಚಿಕ್ಕ ಧೋತಿ (ಕೆಳಭಾಗದ ಬ್ರಾಹ್ಮಣ) ಮತ್ತು ಉದ್ದ ಧೋತಿ (ಮೇಲುಭಾಗದ ಬ್ರಾಹ್ಮಣ) ಸಂಪ್ರದಾಯವನ್ನು ಅನುಸರಿಸುತ್ತೇವೆ. ಇದರರ್ಥ ನಾವು ನಮ್ಮ ಸಂಪ್ರದಾಯಗಳನ್ನು ನಂಬುತ್ತೇವೆ ಮತ್ತು ನಮ್ಮ ಸಂಸ್ಕೃತಿಯಲ್ಲಿ ಆಕ್ಷೇಪಾರ್ಹವಾದ ಯಾವುದನ್ನೂ ಸ್ವೀಕರಿಸಲು ಸಾಧ್ಯವಿಲ್ಲ. ಅಂತಹ ಮದುವೆಗಳನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಮದುವೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಇಂತಹ ಮದುವೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಜಿಲ್ಲಾ ವಿಎಚ್‌ಪಿ ಕಾರ್ಯಾಧ್ಯಕ್ಷ ದೀಪಕ್ ಗೌಡ ಹೇಳಿದ್ದಾರೆ.

ಈ ವಿವಾದಗಳು ಭುಗಿಲೆದ್ದ ನಂತರ ತನ್ನ ಮಗಳ ಮದುವೆಯನ್ನು ರದ್ದುಗೊಳಿಸುವುದಾಗಿ ಬಿಜೆಪಿ ಮುಖಂಡ ಯಶಪಾಲ್ ಬೇನಮ್ ತಿಳಿಸಿದ್ದಾರೆ. “ಸಾರ್ವಜನಿಕ ಪ್ರತಿನಿಧಿಯಾದ ನನಗೆ ನನ್ನ ಮಗಳ ಮದುವೆ ಪೊಲೀಸ್ ಮತ್ತು ಆಡಳಿತದ ರಕ್ಷಣೆಯಲ್ಲಿ ನಡೆಯುವುದು ಇಷ್ಟವಿಲ್ಲ. ನಾನು ಸಾರ್ವಜನಿಕ ಭಾವನೆಗಳನ್ನು ಗೌರವಿಸುತ್ತೇನೆ. ಹಾಗಾಗಿ ಸದ್ಯ ಮದುವೆ ಮುಂದೂಡುತ್ತಿದ್ದೇವೆ. ಅದೇ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯ ಬಗ್ಗೆ ಕುಟುಂಬದವರು, ಹಿತೈಷಿಗಳು ಮತ್ತು ವರನ ಕಡೆಯವರು ಒಟ್ಟಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ತನ್ನ ಮಗಳು ಯಾರನ್ನು ಮದುವೆಯಾಗಬೇಕೆಂದು ನಿರ್ಧರಿಸುವ ಹಕ್ಕು ಅವಳಿಗಾಗಲಿ, ತನಗಾಗಲಿ ಇಲ್ಲದ ಪರಿಸ್ಥಿತಿ ಆ ಬಿಜೆಪಿ ಮುಖಂಡನದಾಗಿದೆ. ಇದು ಸಂವಿಧಾನಬಾಹಿರವಾದುದು. ಬೇವು ಬಿತ್ತಿ, ಮಾವು ನಿರೀಕ್ಷಿಸಲಾಗುವುದಿಲ್ಲ ಎಂಬ ಗಾದೆ ಮಾತಿನಂತೆ ಇದೊಂದು ಎಲ್ಲರಿಗೂ ದೊಡ್ಡ ಕರೆಗಂಟೆಯಾಗಿದೆ. ರಾಜಕೀಯಕ್ಕೆ ಧರ್ಮವನ್ನು ಎಳೆದು ತರಬಾರದು ಮತ್ತು ಪ್ರತಿಯೊಬ್ಬರ ಆಯ್ಕೆ ಮತ್ತು ಹಕ್ಕುಗಳನ್ನು ಗೌರವಿಸಬೇಕು. ಆಗ ಮಾತ್ರ ನಾವು ಸಹ ಸ್ವತಂತ್ರವಾಗಿ ಬದುಕಲು ಸಾಧ್ಯ ಎಂಬುದನ್ನು ಈ ಘಟನೆ ನಿರೂಪಿಸಿದೆ.

ಇದನ್ನೂ ಓದಿ; ಕರಾವಳಿ: ಬೆಚ್ಚಿ ಬೀಳಿಸಿದ ಬುದ್ಧಿವಂತರ ಸೀಮೆಯ “ತಿರುಚು” ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...