Homeಮುಖಪುಟದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

- Advertisement -
- Advertisement -

ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಫೆಬ್ರವರಿ 5ರಂದು ಮುಂಬೈನಲ್ಲಿ ಹಿಂದುತ್ವ ಸಂಘಟನೆಗಳು ಆಯೋಜಿಸಿರುವ ರ್‍ಯಾಲಿಗೆ ಅನುಮತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

‘ಹಿಂದೂ ಜನಾಕ್ರೋಶ ಸಭೆ’ಯ ವಿಡಿಯೊ ರೆಕಾರ್ಡಿಂಗ್ ಮಾಡಿ ಮತ್ತು ಅದರ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠವು ಎಚ್ಚರಿಸಿದೆ.

“ಕಾನೂನನ್ನು ಧಿಕ್ಕರಿಸಿ ಮತ್ತು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸುವ ಯಾವುದೇ ದ್ವೇಷದ ಭಾಷಣವನ್ನು ಯಾರೂ ಮಾಡಬಾರದು ಎಂಬ ಷರತ್ತಿಗೆ ಒಳಪಟ್ಟು ಅನುಮತಿ ನೀಡಬಹುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಹಿಂದುತ್ವ ಸಂಘಟನೆಗಳ ಒಕ್ಕೂಟ ಸಂಸ್ಥೆಯಾದ ‘ಸಕಲ್ ಹಿಂದೂ ಸಮಾಜ’ದ ಈ ಕಾರ್ಯಕ್ರಮವನ್ನು ನಿಷೇಧಿಸುವಂತೆ ಕೋರಿ ಶಹೀನ್ ಅಬ್ದುಲ್ಲಾ ಎಂಬುವರು ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಜನವರಿ 29ರಂದು ಒಕ್ಕೂಟವು ನಡೆಸಿದ ರ್‍ಯಾಲಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣಗಳನ್ನು ಮಾಡಲಾಗಿದೆ ಎಂದು ಅಬ್ದುಲ್ಲಾ ವಾದಿಸಿದ್ದಾರೆ.

ಜನವರಿ 29 ರಂದು ನಡೆದ ರ್‍ಯಾಲಿಯಲ್ಲಿ ಬಿಜೆಪಿಯ ಹಲವು ಮುಖಂಡರು ಪಾಲ್ಗೊಂಡಿದ್ದರು. ಬಿಜೆಪಿಯ ಮುಂಬೈ ಘಟಕದ ಅಧ್ಯಕ್ಷ ಆಶಿಶ್ ಶೆಲಾರ್, ಮಹಾರಾಷ್ಟ್ರ ಸಂಸದರಾದ ಗೋಪಾಲ್ ಶೆಟ್ಟಿ ಮತ್ತು ಮನೋಜ್ ಕೋಟಕ್, ಮಾಜಿ ಸಂಸದ ಕಿರಿತ್ ಸೋಮಯ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಹಲವಾರು ನಾಯಕರು ಕೂಡ ಕಾರ್ಯಕ್ರಮದಲ್ಲಿ ಇದ್ದರು.

ಕಾರ್ಯಕ್ರಮದ ಭಾಷಣಕಾರರಲ್ಲಿ ಒಬ್ಬರಾದ ತೆಲಂಗಾಣ ಶಾಸಕ ಟಿ.ರಾಜಾ ಸಿಂಗ್ ಅವರು, “ಮುಸ್ಲಿಮರು ನಡೆಸುವ ಅಂಗಡಿಗಳಿಂದ ವಸ್ತುಗಳನ್ನು ಹಿಂದೂಗಳು ಕೊಳ್ಳಬಾರದು” ಎಂದು ದ್ವೇಷ ಕಾರಿದರು. ಹಿಂದುತ್ವ ಗುಂಪಿನ ಪಿತೂರಿ ಸಿದ್ಧಾಂತವೆಂದೇ ಬಣ್ಣಿಸಲಾದ ‘ಲವ್ ಜಿಹಾದ್’ ಮತ್ತು ‘ಧಾರ್ಮಿಕ ಮತಾಂತರಗಳ ವಿರುದ್ಧ’ದ ಕಾನೂನುಗಳಿಗೆ ಸಂಬಂಧಿಸಿದಂತೆ ಹಲವರು ಮಾತನಾಡಿದ್ದಾರೆ.

ಕಳೆದ ಮೂರು ತಿಂಗಳಲ್ಲಿ, ಸಕಲ ಹಿಂದೂ ಸಮಾಜವು ಮಹಾರಾಷ್ಟ್ರದ 20 ಜಿಲ್ಲೆಗಳಲ್ಲಿ ಇದೇ ರೀತಿಯ ರ್‍ಯಾಲಿಗಳನ್ನು ನಡೆಸಿದೆ. ಶುಕ್ರವಾರ ನಡೆದ ವಿಚಾರಣೆಯಲ್ಲಿ, ಮಹಾರಾಷ್ಟ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮನವಿಯನ್ನು ವಿರೋಧಿಸಿದರು. ಅರ್ಜಿದಾರರು ಕೆಲವೊಂದು ವಿಷಯಗಳನ್ನಷ್ಟೇ ಪ್ರಸ್ತಾಪಿಸಿದ್ದಾರೆ ಎಂದು ಆರೋಪಿಸಿದರು.

ಕೇರಳದ ನಿವಾಸಿಯಾಗಿದ್ದರೂ ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮದ ಬಗ್ಗೆ ಅರ್ಜಿದಾರರಿಗೆ ಏಕೆ ಕಾಳಜಿ ಇದೆ ಎಂದು ಪ್ರಶ್ನಿಸಿದರು.

“ಈಗ, ವ್ಯಕ್ತಿಗಳು ಆಯ್ದ ಕೆಲವೊಂದು ವಿಷಯಗಳನ್ನು ಇಟ್ಟುಕೊಂಡು ಈ ನ್ಯಾಯಾಲಯಕ್ಕೆ ಬರುತ್ತಿದ್ದಾರೆ” ಎಂದು ಮೆಹ್ತಾ ಹೇಳಿದರು. “ಈ ನ್ಯಾಯಾಲಯವನ್ನು ಈವೆಂಟ್‌ಗಳನ್ನು ನಡೆಸಲು ಅನುಮತಿಗಳನ್ನು ನೀಡುವ ಪ್ರಾಧಿಕಾರವಾಗಿ ಪರಿವರ್ತಿಸಬಹುದೇ?” ಎಂದು ಪ್ರಶ್ನಿಸಿದರು.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಕಪಿಲ್ ಸಿಬಲ್, ಕಾರ್ಯಕ್ರಮಕ್ಕೆ ಅನುಮತಿ ನೀಡುವ ಮೊದಲು ಜನವರಿ 29ರ ರ್‍ಯಾಲಿಯಲ್ಲಿ ಗಂಭೀರ ಹೇಳಿಕೆಗಳನ್ನು ನೀಡಿರುವುದನ್ನು ಪರಿಗಣಿಸಬೇಕಾಗಿದೆ ಎಂದು ವಾದಿಸಿದರು.

ಅಪರಾಧಗಳನ್ನು ತಡೆದು, ವ್ಯಕ್ತಿಗಳನ್ನು ಬಂಧಿಸುವ ಅಧಿಕಾರ ನೀಡುವ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 151 ಅನ್ನು ಅನ್ವಯಿಸಲು ಪೊಲೀಸರಿಗೆ ಆದೇಶಿಸುವಂತೆ ಅವರು ನ್ಯಾಯಾಲಯವನ್ನು ಒತ್ತಾಯಿಸಿದರು.

“ಅನುಮತಿ ನೀಡಿದರೆ, ಸೆಕ್ಷನ್ 151 ರ ಆದೇಶವನ್ನು ಅನ್ವಯಿಸುವುದು ಸಂಬಂಧಪಟ್ಟ ಅಧಿಕಾರಿಗಳ ಕರ್ತವ್ಯವಾಗಿರುತ್ತದೆ” ಎಂದು ನ್ಯಾಯಾಲಯ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...