Homeಮುಖಪುಟದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

- Advertisement -
- Advertisement -

ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಫೆಬ್ರವರಿ 5ರಂದು ಮುಂಬೈನಲ್ಲಿ ಹಿಂದುತ್ವ ಸಂಘಟನೆಗಳು ಆಯೋಜಿಸಿರುವ ರ್‍ಯಾಲಿಗೆ ಅನುಮತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

‘ಹಿಂದೂ ಜನಾಕ್ರೋಶ ಸಭೆ’ಯ ವಿಡಿಯೊ ರೆಕಾರ್ಡಿಂಗ್ ಮಾಡಿ ಮತ್ತು ಅದರ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠವು ಎಚ್ಚರಿಸಿದೆ.

“ಕಾನೂನನ್ನು ಧಿಕ್ಕರಿಸಿ ಮತ್ತು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸುವ ಯಾವುದೇ ದ್ವೇಷದ ಭಾಷಣವನ್ನು ಯಾರೂ ಮಾಡಬಾರದು ಎಂಬ ಷರತ್ತಿಗೆ ಒಳಪಟ್ಟು ಅನುಮತಿ ನೀಡಬಹುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಹಿಂದುತ್ವ ಸಂಘಟನೆಗಳ ಒಕ್ಕೂಟ ಸಂಸ್ಥೆಯಾದ ‘ಸಕಲ್ ಹಿಂದೂ ಸಮಾಜ’ದ ಈ ಕಾರ್ಯಕ್ರಮವನ್ನು ನಿಷೇಧಿಸುವಂತೆ ಕೋರಿ ಶಹೀನ್ ಅಬ್ದುಲ್ಲಾ ಎಂಬುವರು ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಜನವರಿ 29ರಂದು ಒಕ್ಕೂಟವು ನಡೆಸಿದ ರ್‍ಯಾಲಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣಗಳನ್ನು ಮಾಡಲಾಗಿದೆ ಎಂದು ಅಬ್ದುಲ್ಲಾ ವಾದಿಸಿದ್ದಾರೆ.

ಜನವರಿ 29 ರಂದು ನಡೆದ ರ್‍ಯಾಲಿಯಲ್ಲಿ ಬಿಜೆಪಿಯ ಹಲವು ಮುಖಂಡರು ಪಾಲ್ಗೊಂಡಿದ್ದರು. ಬಿಜೆಪಿಯ ಮುಂಬೈ ಘಟಕದ ಅಧ್ಯಕ್ಷ ಆಶಿಶ್ ಶೆಲಾರ್, ಮಹಾರಾಷ್ಟ್ರ ಸಂಸದರಾದ ಗೋಪಾಲ್ ಶೆಟ್ಟಿ ಮತ್ತು ಮನೋಜ್ ಕೋಟಕ್, ಮಾಜಿ ಸಂಸದ ಕಿರಿತ್ ಸೋಮಯ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಹಲವಾರು ನಾಯಕರು ಕೂಡ ಕಾರ್ಯಕ್ರಮದಲ್ಲಿ ಇದ್ದರು.

ಕಾರ್ಯಕ್ರಮದ ಭಾಷಣಕಾರರಲ್ಲಿ ಒಬ್ಬರಾದ ತೆಲಂಗಾಣ ಶಾಸಕ ಟಿ.ರಾಜಾ ಸಿಂಗ್ ಅವರು, “ಮುಸ್ಲಿಮರು ನಡೆಸುವ ಅಂಗಡಿಗಳಿಂದ ವಸ್ತುಗಳನ್ನು ಹಿಂದೂಗಳು ಕೊಳ್ಳಬಾರದು” ಎಂದು ದ್ವೇಷ ಕಾರಿದರು. ಹಿಂದುತ್ವ ಗುಂಪಿನ ಪಿತೂರಿ ಸಿದ್ಧಾಂತವೆಂದೇ ಬಣ್ಣಿಸಲಾದ ‘ಲವ್ ಜಿಹಾದ್’ ಮತ್ತು ‘ಧಾರ್ಮಿಕ ಮತಾಂತರಗಳ ವಿರುದ್ಧ’ದ ಕಾನೂನುಗಳಿಗೆ ಸಂಬಂಧಿಸಿದಂತೆ ಹಲವರು ಮಾತನಾಡಿದ್ದಾರೆ.

ಕಳೆದ ಮೂರು ತಿಂಗಳಲ್ಲಿ, ಸಕಲ ಹಿಂದೂ ಸಮಾಜವು ಮಹಾರಾಷ್ಟ್ರದ 20 ಜಿಲ್ಲೆಗಳಲ್ಲಿ ಇದೇ ರೀತಿಯ ರ್‍ಯಾಲಿಗಳನ್ನು ನಡೆಸಿದೆ. ಶುಕ್ರವಾರ ನಡೆದ ವಿಚಾರಣೆಯಲ್ಲಿ, ಮಹಾರಾಷ್ಟ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮನವಿಯನ್ನು ವಿರೋಧಿಸಿದರು. ಅರ್ಜಿದಾರರು ಕೆಲವೊಂದು ವಿಷಯಗಳನ್ನಷ್ಟೇ ಪ್ರಸ್ತಾಪಿಸಿದ್ದಾರೆ ಎಂದು ಆರೋಪಿಸಿದರು.

ಕೇರಳದ ನಿವಾಸಿಯಾಗಿದ್ದರೂ ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮದ ಬಗ್ಗೆ ಅರ್ಜಿದಾರರಿಗೆ ಏಕೆ ಕಾಳಜಿ ಇದೆ ಎಂದು ಪ್ರಶ್ನಿಸಿದರು.

“ಈಗ, ವ್ಯಕ್ತಿಗಳು ಆಯ್ದ ಕೆಲವೊಂದು ವಿಷಯಗಳನ್ನು ಇಟ್ಟುಕೊಂಡು ಈ ನ್ಯಾಯಾಲಯಕ್ಕೆ ಬರುತ್ತಿದ್ದಾರೆ” ಎಂದು ಮೆಹ್ತಾ ಹೇಳಿದರು. “ಈ ನ್ಯಾಯಾಲಯವನ್ನು ಈವೆಂಟ್‌ಗಳನ್ನು ನಡೆಸಲು ಅನುಮತಿಗಳನ್ನು ನೀಡುವ ಪ್ರಾಧಿಕಾರವಾಗಿ ಪರಿವರ್ತಿಸಬಹುದೇ?” ಎಂದು ಪ್ರಶ್ನಿಸಿದರು.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಕಪಿಲ್ ಸಿಬಲ್, ಕಾರ್ಯಕ್ರಮಕ್ಕೆ ಅನುಮತಿ ನೀಡುವ ಮೊದಲು ಜನವರಿ 29ರ ರ್‍ಯಾಲಿಯಲ್ಲಿ ಗಂಭೀರ ಹೇಳಿಕೆಗಳನ್ನು ನೀಡಿರುವುದನ್ನು ಪರಿಗಣಿಸಬೇಕಾಗಿದೆ ಎಂದು ವಾದಿಸಿದರು.

ಅಪರಾಧಗಳನ್ನು ತಡೆದು, ವ್ಯಕ್ತಿಗಳನ್ನು ಬಂಧಿಸುವ ಅಧಿಕಾರ ನೀಡುವ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 151 ಅನ್ನು ಅನ್ವಯಿಸಲು ಪೊಲೀಸರಿಗೆ ಆದೇಶಿಸುವಂತೆ ಅವರು ನ್ಯಾಯಾಲಯವನ್ನು ಒತ್ತಾಯಿಸಿದರು.

“ಅನುಮತಿ ನೀಡಿದರೆ, ಸೆಕ್ಷನ್ 151 ರ ಆದೇಶವನ್ನು ಅನ್ವಯಿಸುವುದು ಸಂಬಂಧಪಟ್ಟ ಅಧಿಕಾರಿಗಳ ಕರ್ತವ್ಯವಾಗಿರುತ್ತದೆ” ಎಂದು ನ್ಯಾಯಾಲಯ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...