Homeಮುಖಪುಟಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌'ಗೆ ತೆಲಂಗಾಣ ಸರ್ಕಾರದಿಂದ 'ಗದ್ದರ್' ಚಲನಚಿತ್ರ ಪ್ರಶಸ್ತಿ!

ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

- Advertisement -
- Advertisement -

ಕೋಮು ಧ್ರುವೀಕರಣದ ನಿರೂಪಣೆಗಾಗಿ ವ್ಯಾಪಕ ಟೀಕೆಗಳಿಗೆ ಗುರಿಯಾಗಿದ್ದ ‘ರಜಾಕಾರ್: ದಿ ಸೈಲಂಟ್ ಜಿನೊಸೈಡ್ ಆಫ್ ಹೈದರಾಬಾದ್’ ಚಿತ್ರಕ್ಕೆ ತೆಲಂಗಾಣದ ಕಾಂಗ್ರೆಸ್ ಸರ್ಕಾರವು ಶನಿವಾರ ಇತಿಹಾಸದ ಕುರಿತ ಅತ್ಯುತ್ತಮ ಚಲನಚಿತ್ರಕ್ಕೆ ನೀಡಲಾಗುವ ‘ತೆಲಂಗಾಣ ಗದ್ದರ್ ಚಲನಚಿತ್ರ ಪ್ರಶಸ್ತಿ’ಯನ್ನು ಪ್ರದಾನಿಸಿದೆ. 2024ರ ಈ ಚಿತ್ರವನ್ನು ತೆಲಂಗಾಣ ಬಿಜೆಪಿ ನಾಯಕ ಗೂಡೂರ್ ನಾರಾಯಣ ರೆಡ್ಡಿ ನಿರ್ಮಿಸಿದ್ದು, ಯಾಟಾ ಸತ್ಯನಾರಾಯಣ ನಿರ್ದೇಶಿಸಿದ್ದಾರೆ.

ತೆಲಂಗಾಣದ ಕ್ರಾಂತಿಕಾರಿ ಕವಿ ಗದ್ದರ್ ಹೆಸರಿನ ಈ ಪ್ರಶಸ್ತಿಯನ್ನು ಕಾಂಗ್ರೆಸ್ ಸರ್ಕಾರ 2025ರಲ್ಲಿ ಸ್ಥಾಪಿಸಿದ್ದು, ತೆಲುಗು ನಟಿ ಹಾಗೂ ಬಿಜೆಪಿ ನಾಯಕಿ ಜಯಸುಧಾ ಅವರು ರೇವಂತ್ ರೆಡ್ಡಿ ಸರ್ಕಾರ ರಚಿಸಿದ್ದ ಆಯ್ಕೆ ಸಮಿತಿಯ ಅಧ್ಯಕ್ಷೆಯಾಗಿದ್ದರು. ನಟ ಹಾಗೂ ಬಿಜೆಪಿಯ ಮಿತ್ರಪಕ್ಷ ಟಿಡಿಪಿಯ ಮಾಜಿ ಸಂಸದ ಮುರಳಿ ಮೋಹನ್ ಅವರೂ ಸಮಿತಿಯ ಸದಸ್ಯರಾಗಿದ್ದರು.

ರಜಾಕಾರ್ ಪರಿಸರ/ಪರಂಪರೆ/ಇತಿಹಾಸ ಕುರಿತು ಅತ್ಯುತ್ತಮ ಚಲನಚಿತ್ರ, ಭೀಮ್ಸ್ ಸೆಸಿರೊಲಿಯೊ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ ಮತ್ತು ನಲ್ಲ ಶ್ರೀನು ಅವರಿಗೆ ಅತ್ಯುತ್ತಮ ಮೇಕಪ್ ಕಲಾವಿದ; ಹೀಗೆ ಮೂರು ತೆಲಂಗಾಣ ಗದ್ದರ್ ಪ್ರಶಸ್ತಿಗಳನ್ನು ಗೆದ್ದಿದೆ.

ಹಿಂದುತ್ವದ ಅಜೆಂಡಾವನ್ನು ಮುಂದುವರಿಸಲು ಮತ್ತು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ನಿರ್ಮಿಸಲಾದ ಪ್ರೊಪಗಂಡ ಚಿತ್ರ ಎಂದು ವ್ಯಾಪಕ ಟೀಕೆಗೊಳಗಾಗಿದ್ದ ‘ರಜಾಕಾರ್’ಗೆ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಶಸ್ತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತರು ಮತ್ತು ಪ್ರತಿಪಕ್ಷಗಳ ನಾಯಕರು ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ಚಿತ್ರವು ಭಾರತ ಒಕ್ಕೂಟದಲ್ಲಿ ಹಿಂದಿನ ಹೈದರಾಬಾದ್ ರಾಜ್ಯದ ವಿಲೀನದ ಹಿನ್ನೆಲೆಯನ್ನು ಹೊಂದಿದೆ. ರಜಾಕಾರರು ಭಾರತ ಒಕ್ಕೂಟದಲ್ಲಿ ವಿಲೀನಗೊಳ್ಳುವುದು ಇಷ್ಟವಿರದಿದ್ದ ನಿಝಾಮರ ಕ್ರಿಯಾಶೀಲ ಅರೆಸೇನಾ ಪಡೆಯಾಗಿದ್ದರು.

ತೆಲಂಗಾಣ ರೈತರ ಹೋರಾಟವನ್ನು ಹತ್ತಿಕ್ಕಲು ರಜಾಕಾರರನ್ನು ನಿಯೋಜಿಸಲಾಗಿತ್ತು ಮತ್ತು ಅವರು ಮುಸ್ಲಿಮರು ಸೇರಿದಂತೆ ದಬ್ಬಾಳಿಕೆಯ ನಿಝಾಮ್ ಆಡಳಿತದ ವಿರುದ್ಧ ಹೋರಾಡುತ್ತಿದ್ದವರ ವಿರುದ್ಧ ಹಲವಾರು ದೌರ್ಜನ್ಯಗಳನ್ನು ಎಸಗಿದ್ದರು.

ಇತ್ತೀಚಿನ ವರ್ಷಗಳಲ್ಲಿ ತೆಲಂಗಾಣ ಬಿಜೆಪಿಯು ರಾಜಕೀಯ ಲಾಭಕ್ಕಾಗಿ ರಜಾಕಾರರ ಸಂಕೀರ್ಣ ಇತಿಹಾಸವನ್ನು ತಪ್ಪಾಗಿ ನಿರೂಪಿಸಲು ಪ್ರಯತ್ನಿಸುತ್ತಿದೆ. ಬೆಜೆಪಿಯು ತೆಲಂಗಾಣ ರೈತ ಬಂಡಾಯದ ಸೂಕ್ಷ್ಮ ವ್ಯತ್ಯಾಸಗಳನ್ನು ಮತ್ತು ನಿಝಾಮರ ರಜಾಕಾರರು ಪ್ರಬಲ ಜಾತಿಗಳ ಭೂಮಾಲಿಕರೊಂದಿಗೆ ಸೇರಿಕೊಂಡು ಕೆಳಜಾತಿಗಳವರೇ ಹೆಚ್ಚಿದ್ದ ಕಾರ್ಮಿಕರ ಮಲೆ ನಡೆಸಿದ್ದ ದೌರ್ಜನ್ಯಗಳನ್ನು ಬದಿಗಿಟ್ಟು ಅದನ್ನು ಧಾರ್ಮಿಕ ಕಿರುಕುಳದ ನಿದರ್ಶನವನ್ನಾಗಿ ಚಿತ್ರಿಸುವ ಮೂಲಕ ಹಿಂದು-ಮಸ್ಲಿಮ್ ಬಿರುಕನ್ನು ಸೃಷ್ಟಿಸಲು ಯತ್ನಿಸುತ್ತಿದೆ.

ಆರಂಭದಲ್ಲಿ 2023ರ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆಯಾಗಬೇಕಿದ್ದ ರಜಾಕರ್ ಚಿತ್ರವು, ಇಡೀ ಮುಸ್ಲಿಂ ಸಮುದಾಯವನ್ನು ಖಳನಾಯಕರನ್ನಾಗಿ ಚಿತ್ರೀಕರಿಸುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

‘ಹಿಂದುತ್ವ ಸಿನಿಮಾ’ಗೆ ಕಾಂಗ್ರೆಸ್ ಸರ್ಕಾರ ಅನುಮೋದನೆ ನೀಡುತ್ತಿರುವುದಕ್ಕೆ ಟೀಕೆ

ರಜಾಕಾರ್ ಚಿತ್ರಕ್ಕೆ ಪ್ರಶಸ್ತಿ ನೀಡುವ ನಿರ್ಧಾರಕ್ಕಾಗಿ ಮತ್ತು ತನ್ಮೂಲಕ ಚಿತ್ರದಲ್ಲಿನ ಮುಸ್ಲಿಮ ವಿರೋಧಿ ದೃಷ್ಟಿಕೋನಗಳನ್ನು ಮೌನವಾಗಿ ಅನುಮೋದಿಸಿದ್ದಕ್ಕಾಗಿ ಸಾಮಾಜಿಕ ಕಾರ್ಯಕರ್ತರು ಮತ್ತು ಪ್ರತಿಪಕ್ಷ ನಾಯಕರು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

“ರಜಾಕರ್ ಚಿತ್ರದ ಸೋಗಿನಲ್ಲಿ ಹೈದರಾಬಾದ್ ಮುಸ್ಲಿಮರ ವಿರುದ್ಧ ದ್ವೇಷವನ್ನು ಹರಡುವ ಬಿಜೆಪಿ ನಾಯಕರ ಪ್ರೊಪಗಂಡ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಿರುವುದು ಆಘಾತಕಾರಿಯಾಗಿದೆ. ತೆಲಂಗಾಣ ಕಾಂಗ್ರೆಸ್ ಮತ್ತು ಸಿಎಂ ರೇವಂತ್ ರೆಡ್ಡಿ ನಿರ್ದೇಶಕರ ಅಭಿಪ್ರಾಯಗಳನ್ನು ಅನುಮೋದಿಸುತ್ತಿದ್ದಾರೆ” ಎಂದು ಹೈದರಾಬಾದ್ ಮೂಲದ ನಾಗರಿಕ ಹಕ್ಕುಗಳ ಕಾರ್ಯಕರ್ತ ಎಸ್‌ಕ್ಯೂ ಮಸೂದ್ ಹೇಳಿದ್ದಾರೆ.

“ತೆಲಂಗಾಣ ರೈತ ಸಶಸ್ತ್ರ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರನ್ನು ಈ ಚಿತ್ರ ಅವಹೇಳನ ಮಾಡುತ್ತದೆ. ಭೂಮಾಲೀಕರು ಮತ್ತು ಜಮೀನ್ದಾರರ ವಿರುದ್ದದ ಭೂಮಿ, ಆಹಾರ ಮತ್ತು ಗುಲಾಮಗಿರಿಯಿಂದ ಸ್ವಾತಂತ್ರ್ಯಕ್ಕಾಗಿ ರೈತರು ಹೋರಾಟ ನಡೆಸಿದ್ದರು. ಆದರೆ, ರಜಾಕರ್ ಚಿತ್ರವು ಅದನ್ನು ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಸಂಘರ್ಷ ಎಂದು ಚಿತ್ರಿಸಿದೆ” ಎಂದು ತೆಲಂಗಾಣದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕ ತಕಲ್ಲಪಲ್ಲಿ ಶ್ರೀನಿವಾಸ್ ರಾವ್ ಹೇಳಿದ್ದಾರೆ.

ಮಜ್ಲಿಸ್ ಬಚಾವೋ ತೆಹ್ರೀಕ್ ವಕ್ತಾರ ಅಮ್ಜದುಲ್ಲಾ ಖಾನ್ ಅವರು ಕಾಂಗ್ರೆಸ್‌ನ ಜಾತ್ಯತೀತತೆ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮೌನವನ್ನು ಪ್ರಶ್ನಿಸಿದ್ದಾರೆ.

‘ರಜಾಕರ್ ‘ಚಿತ್ರವು ‘ದಿ ಕಾಶ್ಮೀರ್ ಫೈಲ್ಸ್’ ಮತ್ತು ‘ದಿ ಕೇರಳ ಸ್ಟೋರಿ’ ಪ್ರೊಪಗಂಡ ಚಿತ್ರಗಳ ವರ್ಗಕ್ಕೆ ಸೇರುತ್ತದೆ. ಇವೆರಡೂ, ಇತಿಹಾಸಲ್ಲಿ ಆಗಿ ಹೋದ ನೈಜ ಘಟನೆಗಳ ಸೋಗಿನಲ್ಲಿ ಇಡೀ ಭಾರತದ ಮುಸ್ಲಿಮರನ್ನು ಖಳನಾಯಕರಂತೆ ಚಿತ್ರಿಸುವ ಪ್ರಯತ್ನ ಮಾಡಿತ್ತು.

ಈ ಹಿಂದೆ ಇಂತಹ ಚಿತ್ರಗಳು ವಿವಿಧ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳಿಂದ ಪ್ರಶಸ್ತಿಗಳು, ತೆರಿಗೆ ರಿಯಾಯಿತಿ ಮತ್ತು ಪಕ್ಷದ ನಾಯಕರಿಂದ ಪ್ರಶಂಸೆಯ ರೂಪದಲ್ಲಿ ಅನುಮೋದನೆ ಪಡೆದಿವೆ. ಆದರೆ, ಕೋಮು ಸಂಘರ್ಷಗಳನ್ನು ಪ್ರಚೋದಿಸುವ ಬಿಜೆಪಿಯನ್ನು ಆಗಾಗ್ಗೆ ಟೀಕಿಸುವ ಸಿಎಂ ರೇವಂತ್ ರೆಡ್ಡಿ ಅವರು ರಜಾಕರ್‌ಗೆ ಬೆಂಬಲ ನೀಡಿರುವುದು ಹಲವರಿಗೆ ಆಶ್ಚರ್ಯವನ್ನುಂಟು ಮಾಡಿದೆ.

ಜೂನ್ 14 ರಂದು ಹೈದರಾಬಾದ್‌ನ ಹೈಟೆಕ್ಸ್ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೇವಂತ್ ರೆಡ್ಡಿ ಅವರು ರಜಾಕರ್ ಚಿತ್ರದ ನಿರ್ಮಾಪಕ ಮತ್ತು ಬಿಜೆಪಿ ನಾಯಕ ಗುಡೂರ್ ನಾರಾಯಣ ರೆಡ್ಡಿ ಅವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನದೊಂದಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ಇತರ ನಾಯಕರಿಗೆ ಧನ್ಯವಾದ ಹೇಳಿದ ನಾರಾಯಣ ರೆಡ್ಡಿ, “ಅವರೆಲ್ಲರೂ ಇತಿಹಾಸವನ್ನು ಗೌರವಿಸಿದ್ದಾರೆ ಮತ್ತು ನಮ್ಮ ಪ್ರಯತ್ನಗಳನ್ನು ನಿರ್ಲಕ್ಷಿಸಿಲ್ಲ. ರಜಾಕರಂತಹ ಗುಂಪುಗಳು ಮತ್ತೆ ಕಾಣಿಸಿಕೊಳ್ಳದಂತೆ ನೋಡಿಕೊಳ್ಳಲು ನಾವು ಇತಿಹಾಸದ ಚಲನಚಿತ್ರವನ್ನು ಪ್ರಚಾರ ಮಾಡಲು ಸಮರ್ಪಿತರಾಗಿದ್ದೇವೆ… ಉದಾಹರಣೆಗೆ ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ಏನಾಯಿತು ಎಂಬುದನ್ನು ನಾವು ನೋಡಿದ್ದೇವೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆಯ್ಕೆ ಸಮಿತಿಯ ವಿವಾದ

ಗದ್ದರ್ ತೆಲಂಗಾಣ ಚಲನಚಿತ್ರ ಪ್ರಶಸ್ತಿಗಳ (ಜಿಟಿಎಫ್‌ಎ) ನಿಯಮಗಳ ಷರತ್ತು 9(a) ಪ್ರಕಾರ, ತೆಲಂಗಾಣ ಸರ್ಕಾರವು ಅಯ್ಕೆ ಸಮಿತಿಯನ್ನು ರಚಿಸಬೇಕಾಗಿತ್ತು. ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ಅಧ್ಯಕ್ಷರು ಪ್ರಶಸ್ತಿಗಳ ಆಯ್ಕೆಗೆ ಸದಸ್ಯ-ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು.

ತೆಲಂಗಾಣ ಸರ್ಕಾರವು ಪ್ರಸಿದ್ಧ ತೆಲುಗು ನಟಿ ಮತ್ತು ರಾಜಕಾರಣಿ ಜಯಸುಧಾ ಅವರನ್ನು ಅಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಜಯಸುಧಾ, ನಂತರ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಪಿಗೆ) ಗೆ ಸೇರಿದ್ದರು. ಆಗಸ್ಟ್ 2023ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ನಿಯಮಾವಳಿಗಳ 21ನೇ ಷರತ್ತು ಪ್ರಕಾರ, ಕೋಮು ಸಾಮರಸ್ಯವನ್ನು ಭಂಗಗೊಳಿಸುವ ವಿಷಯಗಳನ್ನು ಹೊಂದಿರುವ ಯಾವುದೇ ಚಲನಚಿತ್ರ ಶಿಫಾರಸ್ಸನ್ನು ಆಯ್ಕೆ ಸಮಿತಿ ಪರಿಗಣಿಸಬಾರದು.

ಪ್ರಶಸ್ತಿ ಪ್ರದಾನ ಸಮಾರಂಭದ ಒಂದು ದಿನ ಮೊದಲು ಜೂನ್ 13 ರಂದು, ಆಯ್ಕೆ ಸಮಿತಿಯ ರಚನೆ ಪ್ರಕ್ರಿಯೆಯ ಸಿಂಧುತ್ವವನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

“ಜಿಟಿಎಫ್‌ಎ ನಿಯಮಾವಳಿಗಳ ನಿಯಮ 9(ಎ) ಅಡಿಯಲ್ಲಿ ಎರಡು ಆಯ್ಕೆ ಸಮಿತಿಗಳನ್ನು ರಚಿಸಲಾಗಿದೆ ಮತ್ತು ಆಯ್ಕೆ ಸಮಿತಿಯ ಹಲವು ಸದಸ್ಯರು ಪ್ರಶಸ್ತಿ ವಿಜೇತ ಕೆಲವು ಚಿತ್ರಗಳಲ್ಲಿ ನೇರ ಹಿತಾಸಕ್ತಿಗಳನ್ನು ಹೊಂದಿದ್ದಾರೆ” ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ನ್ಯಾಯಮೂರ್ತಿಗಳಾದ ಸ್ಯಾಮ್ ಕೋಶಿ ಮತ್ತು ನರಸಿಂಗ್ ರಾವ್ ನಂದಿಕೊಂಡ ಅವರ ಪೀಠವು ಪ್ರತಿವಾದಿಗಳಾದ ಜಿಟಿಎಫ್‌ಎ ಆಯ್ಕೆ ಸಮಿತಿ ಮತ್ತು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮ ಲಿಮಿಟೆಡ್‌ಗೆ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದೆ.

ಸೌಜನ್ಯ : thenewsminute.com
https://naanugauri.com/hate-speech-allegations-lawyers-group-condemns-delay-in-action-against-judge-yadav/
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...