Homeಮುಖಪುಟಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌'ಗೆ ತೆಲಂಗಾಣ ಸರ್ಕಾರದಿಂದ 'ಗದ್ದರ್' ಚಲನಚಿತ್ರ ಪ್ರಶಸ್ತಿ!

ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

- Advertisement -
- Advertisement -

ಕೋಮು ಧ್ರುವೀಕರಣದ ನಿರೂಪಣೆಗಾಗಿ ವ್ಯಾಪಕ ಟೀಕೆಗಳಿಗೆ ಗುರಿಯಾಗಿದ್ದ ‘ರಜಾಕಾರ್: ದಿ ಸೈಲಂಟ್ ಜಿನೊಸೈಡ್ ಆಫ್ ಹೈದರಾಬಾದ್’ ಚಿತ್ರಕ್ಕೆ ತೆಲಂಗಾಣದ ಕಾಂಗ್ರೆಸ್ ಸರ್ಕಾರವು ಶನಿವಾರ ಇತಿಹಾಸದ ಕುರಿತ ಅತ್ಯುತ್ತಮ ಚಲನಚಿತ್ರಕ್ಕೆ ನೀಡಲಾಗುವ ‘ತೆಲಂಗಾಣ ಗದ್ದರ್ ಚಲನಚಿತ್ರ ಪ್ರಶಸ್ತಿ’ಯನ್ನು ಪ್ರದಾನಿಸಿದೆ. 2024ರ ಈ ಚಿತ್ರವನ್ನು ತೆಲಂಗಾಣ ಬಿಜೆಪಿ ನಾಯಕ ಗೂಡೂರ್ ನಾರಾಯಣ ರೆಡ್ಡಿ ನಿರ್ಮಿಸಿದ್ದು, ಯಾಟಾ ಸತ್ಯನಾರಾಯಣ ನಿರ್ದೇಶಿಸಿದ್ದಾರೆ.

ತೆಲಂಗಾಣದ ಕ್ರಾಂತಿಕಾರಿ ಕವಿ ಗದ್ದರ್ ಹೆಸರಿನ ಈ ಪ್ರಶಸ್ತಿಯನ್ನು ಕಾಂಗ್ರೆಸ್ ಸರ್ಕಾರ 2025ರಲ್ಲಿ ಸ್ಥಾಪಿಸಿದ್ದು, ತೆಲುಗು ನಟಿ ಹಾಗೂ ಬಿಜೆಪಿ ನಾಯಕಿ ಜಯಸುಧಾ ಅವರು ರೇವಂತ್ ರೆಡ್ಡಿ ಸರ್ಕಾರ ರಚಿಸಿದ್ದ ಆಯ್ಕೆ ಸಮಿತಿಯ ಅಧ್ಯಕ್ಷೆಯಾಗಿದ್ದರು. ನಟ ಹಾಗೂ ಬಿಜೆಪಿಯ ಮಿತ್ರಪಕ್ಷ ಟಿಡಿಪಿಯ ಮಾಜಿ ಸಂಸದ ಮುರಳಿ ಮೋಹನ್ ಅವರೂ ಸಮಿತಿಯ ಸದಸ್ಯರಾಗಿದ್ದರು.

ರಜಾಕಾರ್ ಪರಿಸರ/ಪರಂಪರೆ/ಇತಿಹಾಸ ಕುರಿತು ಅತ್ಯುತ್ತಮ ಚಲನಚಿತ್ರ, ಭೀಮ್ಸ್ ಸೆಸಿರೊಲಿಯೊ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ ಮತ್ತು ನಲ್ಲ ಶ್ರೀನು ಅವರಿಗೆ ಅತ್ಯುತ್ತಮ ಮೇಕಪ್ ಕಲಾವಿದ; ಹೀಗೆ ಮೂರು ತೆಲಂಗಾಣ ಗದ್ದರ್ ಪ್ರಶಸ್ತಿಗಳನ್ನು ಗೆದ್ದಿದೆ.

ಹಿಂದುತ್ವದ ಅಜೆಂಡಾವನ್ನು ಮುಂದುವರಿಸಲು ಮತ್ತು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ನಿರ್ಮಿಸಲಾದ ಪ್ರೊಪಗಂಡ ಚಿತ್ರ ಎಂದು ವ್ಯಾಪಕ ಟೀಕೆಗೊಳಗಾಗಿದ್ದ ‘ರಜಾಕಾರ್’ಗೆ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಶಸ್ತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತರು ಮತ್ತು ಪ್ರತಿಪಕ್ಷಗಳ ನಾಯಕರು ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ಚಿತ್ರವು ಭಾರತ ಒಕ್ಕೂಟದಲ್ಲಿ ಹಿಂದಿನ ಹೈದರಾಬಾದ್ ರಾಜ್ಯದ ವಿಲೀನದ ಹಿನ್ನೆಲೆಯನ್ನು ಹೊಂದಿದೆ. ರಜಾಕಾರರು ಭಾರತ ಒಕ್ಕೂಟದಲ್ಲಿ ವಿಲೀನಗೊಳ್ಳುವುದು ಇಷ್ಟವಿರದಿದ್ದ ನಿಝಾಮರ ಕ್ರಿಯಾಶೀಲ ಅರೆಸೇನಾ ಪಡೆಯಾಗಿದ್ದರು.

ತೆಲಂಗಾಣ ರೈತರ ಹೋರಾಟವನ್ನು ಹತ್ತಿಕ್ಕಲು ರಜಾಕಾರರನ್ನು ನಿಯೋಜಿಸಲಾಗಿತ್ತು ಮತ್ತು ಅವರು ಮುಸ್ಲಿಮರು ಸೇರಿದಂತೆ ದಬ್ಬಾಳಿಕೆಯ ನಿಝಾಮ್ ಆಡಳಿತದ ವಿರುದ್ಧ ಹೋರಾಡುತ್ತಿದ್ದವರ ವಿರುದ್ಧ ಹಲವಾರು ದೌರ್ಜನ್ಯಗಳನ್ನು ಎಸಗಿದ್ದರು.

ಇತ್ತೀಚಿನ ವರ್ಷಗಳಲ್ಲಿ ತೆಲಂಗಾಣ ಬಿಜೆಪಿಯು ರಾಜಕೀಯ ಲಾಭಕ್ಕಾಗಿ ರಜಾಕಾರರ ಸಂಕೀರ್ಣ ಇತಿಹಾಸವನ್ನು ತಪ್ಪಾಗಿ ನಿರೂಪಿಸಲು ಪ್ರಯತ್ನಿಸುತ್ತಿದೆ. ಬೆಜೆಪಿಯು ತೆಲಂಗಾಣ ರೈತ ಬಂಡಾಯದ ಸೂಕ್ಷ್ಮ ವ್ಯತ್ಯಾಸಗಳನ್ನು ಮತ್ತು ನಿಝಾಮರ ರಜಾಕಾರರು ಪ್ರಬಲ ಜಾತಿಗಳ ಭೂಮಾಲಿಕರೊಂದಿಗೆ ಸೇರಿಕೊಂಡು ಕೆಳಜಾತಿಗಳವರೇ ಹೆಚ್ಚಿದ್ದ ಕಾರ್ಮಿಕರ ಮಲೆ ನಡೆಸಿದ್ದ ದೌರ್ಜನ್ಯಗಳನ್ನು ಬದಿಗಿಟ್ಟು ಅದನ್ನು ಧಾರ್ಮಿಕ ಕಿರುಕುಳದ ನಿದರ್ಶನವನ್ನಾಗಿ ಚಿತ್ರಿಸುವ ಮೂಲಕ ಹಿಂದು-ಮಸ್ಲಿಮ್ ಬಿರುಕನ್ನು ಸೃಷ್ಟಿಸಲು ಯತ್ನಿಸುತ್ತಿದೆ.

ಆರಂಭದಲ್ಲಿ 2023ರ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆಯಾಗಬೇಕಿದ್ದ ರಜಾಕರ್ ಚಿತ್ರವು, ಇಡೀ ಮುಸ್ಲಿಂ ಸಮುದಾಯವನ್ನು ಖಳನಾಯಕರನ್ನಾಗಿ ಚಿತ್ರೀಕರಿಸುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

‘ಹಿಂದುತ್ವ ಸಿನಿಮಾ’ಗೆ ಕಾಂಗ್ರೆಸ್ ಸರ್ಕಾರ ಅನುಮೋದನೆ ನೀಡುತ್ತಿರುವುದಕ್ಕೆ ಟೀಕೆ

ರಜಾಕಾರ್ ಚಿತ್ರಕ್ಕೆ ಪ್ರಶಸ್ತಿ ನೀಡುವ ನಿರ್ಧಾರಕ್ಕಾಗಿ ಮತ್ತು ತನ್ಮೂಲಕ ಚಿತ್ರದಲ್ಲಿನ ಮುಸ್ಲಿಮ ವಿರೋಧಿ ದೃಷ್ಟಿಕೋನಗಳನ್ನು ಮೌನವಾಗಿ ಅನುಮೋದಿಸಿದ್ದಕ್ಕಾಗಿ ಸಾಮಾಜಿಕ ಕಾರ್ಯಕರ್ತರು ಮತ್ತು ಪ್ರತಿಪಕ್ಷ ನಾಯಕರು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

“ರಜಾಕರ್ ಚಿತ್ರದ ಸೋಗಿನಲ್ಲಿ ಹೈದರಾಬಾದ್ ಮುಸ್ಲಿಮರ ವಿರುದ್ಧ ದ್ವೇಷವನ್ನು ಹರಡುವ ಬಿಜೆಪಿ ನಾಯಕರ ಪ್ರೊಪಗಂಡ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಿರುವುದು ಆಘಾತಕಾರಿಯಾಗಿದೆ. ತೆಲಂಗಾಣ ಕಾಂಗ್ರೆಸ್ ಮತ್ತು ಸಿಎಂ ರೇವಂತ್ ರೆಡ್ಡಿ ನಿರ್ದೇಶಕರ ಅಭಿಪ್ರಾಯಗಳನ್ನು ಅನುಮೋದಿಸುತ್ತಿದ್ದಾರೆ” ಎಂದು ಹೈದರಾಬಾದ್ ಮೂಲದ ನಾಗರಿಕ ಹಕ್ಕುಗಳ ಕಾರ್ಯಕರ್ತ ಎಸ್‌ಕ್ಯೂ ಮಸೂದ್ ಹೇಳಿದ್ದಾರೆ.

“ತೆಲಂಗಾಣ ರೈತ ಸಶಸ್ತ್ರ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರನ್ನು ಈ ಚಿತ್ರ ಅವಹೇಳನ ಮಾಡುತ್ತದೆ. ಭೂಮಾಲೀಕರು ಮತ್ತು ಜಮೀನ್ದಾರರ ವಿರುದ್ದದ ಭೂಮಿ, ಆಹಾರ ಮತ್ತು ಗುಲಾಮಗಿರಿಯಿಂದ ಸ್ವಾತಂತ್ರ್ಯಕ್ಕಾಗಿ ರೈತರು ಹೋರಾಟ ನಡೆಸಿದ್ದರು. ಆದರೆ, ರಜಾಕರ್ ಚಿತ್ರವು ಅದನ್ನು ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಸಂಘರ್ಷ ಎಂದು ಚಿತ್ರಿಸಿದೆ” ಎಂದು ತೆಲಂಗಾಣದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕ ತಕಲ್ಲಪಲ್ಲಿ ಶ್ರೀನಿವಾಸ್ ರಾವ್ ಹೇಳಿದ್ದಾರೆ.

ಮಜ್ಲಿಸ್ ಬಚಾವೋ ತೆಹ್ರೀಕ್ ವಕ್ತಾರ ಅಮ್ಜದುಲ್ಲಾ ಖಾನ್ ಅವರು ಕಾಂಗ್ರೆಸ್‌ನ ಜಾತ್ಯತೀತತೆ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮೌನವನ್ನು ಪ್ರಶ್ನಿಸಿದ್ದಾರೆ.

‘ರಜಾಕರ್ ‘ಚಿತ್ರವು ‘ದಿ ಕಾಶ್ಮೀರ್ ಫೈಲ್ಸ್’ ಮತ್ತು ‘ದಿ ಕೇರಳ ಸ್ಟೋರಿ’ ಪ್ರೊಪಗಂಡ ಚಿತ್ರಗಳ ವರ್ಗಕ್ಕೆ ಸೇರುತ್ತದೆ. ಇವೆರಡೂ, ಇತಿಹಾಸಲ್ಲಿ ಆಗಿ ಹೋದ ನೈಜ ಘಟನೆಗಳ ಸೋಗಿನಲ್ಲಿ ಇಡೀ ಭಾರತದ ಮುಸ್ಲಿಮರನ್ನು ಖಳನಾಯಕರಂತೆ ಚಿತ್ರಿಸುವ ಪ್ರಯತ್ನ ಮಾಡಿತ್ತು.

ಈ ಹಿಂದೆ ಇಂತಹ ಚಿತ್ರಗಳು ವಿವಿಧ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳಿಂದ ಪ್ರಶಸ್ತಿಗಳು, ತೆರಿಗೆ ರಿಯಾಯಿತಿ ಮತ್ತು ಪಕ್ಷದ ನಾಯಕರಿಂದ ಪ್ರಶಂಸೆಯ ರೂಪದಲ್ಲಿ ಅನುಮೋದನೆ ಪಡೆದಿವೆ. ಆದರೆ, ಕೋಮು ಸಂಘರ್ಷಗಳನ್ನು ಪ್ರಚೋದಿಸುವ ಬಿಜೆಪಿಯನ್ನು ಆಗಾಗ್ಗೆ ಟೀಕಿಸುವ ಸಿಎಂ ರೇವಂತ್ ರೆಡ್ಡಿ ಅವರು ರಜಾಕರ್‌ಗೆ ಬೆಂಬಲ ನೀಡಿರುವುದು ಹಲವರಿಗೆ ಆಶ್ಚರ್ಯವನ್ನುಂಟು ಮಾಡಿದೆ.

ಜೂನ್ 14 ರಂದು ಹೈದರಾಬಾದ್‌ನ ಹೈಟೆಕ್ಸ್ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೇವಂತ್ ರೆಡ್ಡಿ ಅವರು ರಜಾಕರ್ ಚಿತ್ರದ ನಿರ್ಮಾಪಕ ಮತ್ತು ಬಿಜೆಪಿ ನಾಯಕ ಗುಡೂರ್ ನಾರಾಯಣ ರೆಡ್ಡಿ ಅವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನದೊಂದಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ಇತರ ನಾಯಕರಿಗೆ ಧನ್ಯವಾದ ಹೇಳಿದ ನಾರಾಯಣ ರೆಡ್ಡಿ, “ಅವರೆಲ್ಲರೂ ಇತಿಹಾಸವನ್ನು ಗೌರವಿಸಿದ್ದಾರೆ ಮತ್ತು ನಮ್ಮ ಪ್ರಯತ್ನಗಳನ್ನು ನಿರ್ಲಕ್ಷಿಸಿಲ್ಲ. ರಜಾಕರಂತಹ ಗುಂಪುಗಳು ಮತ್ತೆ ಕಾಣಿಸಿಕೊಳ್ಳದಂತೆ ನೋಡಿಕೊಳ್ಳಲು ನಾವು ಇತಿಹಾಸದ ಚಲನಚಿತ್ರವನ್ನು ಪ್ರಚಾರ ಮಾಡಲು ಸಮರ್ಪಿತರಾಗಿದ್ದೇವೆ… ಉದಾಹರಣೆಗೆ ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ಏನಾಯಿತು ಎಂಬುದನ್ನು ನಾವು ನೋಡಿದ್ದೇವೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆಯ್ಕೆ ಸಮಿತಿಯ ವಿವಾದ

ಗದ್ದರ್ ತೆಲಂಗಾಣ ಚಲನಚಿತ್ರ ಪ್ರಶಸ್ತಿಗಳ (ಜಿಟಿಎಫ್‌ಎ) ನಿಯಮಗಳ ಷರತ್ತು 9(a) ಪ್ರಕಾರ, ತೆಲಂಗಾಣ ಸರ್ಕಾರವು ಅಯ್ಕೆ ಸಮಿತಿಯನ್ನು ರಚಿಸಬೇಕಾಗಿತ್ತು. ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ಅಧ್ಯಕ್ಷರು ಪ್ರಶಸ್ತಿಗಳ ಆಯ್ಕೆಗೆ ಸದಸ್ಯ-ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು.

ತೆಲಂಗಾಣ ಸರ್ಕಾರವು ಪ್ರಸಿದ್ಧ ತೆಲುಗು ನಟಿ ಮತ್ತು ರಾಜಕಾರಣಿ ಜಯಸುಧಾ ಅವರನ್ನು ಅಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಜಯಸುಧಾ, ನಂತರ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಪಿಗೆ) ಗೆ ಸೇರಿದ್ದರು. ಆಗಸ್ಟ್ 2023ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ನಿಯಮಾವಳಿಗಳ 21ನೇ ಷರತ್ತು ಪ್ರಕಾರ, ಕೋಮು ಸಾಮರಸ್ಯವನ್ನು ಭಂಗಗೊಳಿಸುವ ವಿಷಯಗಳನ್ನು ಹೊಂದಿರುವ ಯಾವುದೇ ಚಲನಚಿತ್ರ ಶಿಫಾರಸ್ಸನ್ನು ಆಯ್ಕೆ ಸಮಿತಿ ಪರಿಗಣಿಸಬಾರದು.

ಪ್ರಶಸ್ತಿ ಪ್ರದಾನ ಸಮಾರಂಭದ ಒಂದು ದಿನ ಮೊದಲು ಜೂನ್ 13 ರಂದು, ಆಯ್ಕೆ ಸಮಿತಿಯ ರಚನೆ ಪ್ರಕ್ರಿಯೆಯ ಸಿಂಧುತ್ವವನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

“ಜಿಟಿಎಫ್‌ಎ ನಿಯಮಾವಳಿಗಳ ನಿಯಮ 9(ಎ) ಅಡಿಯಲ್ಲಿ ಎರಡು ಆಯ್ಕೆ ಸಮಿತಿಗಳನ್ನು ರಚಿಸಲಾಗಿದೆ ಮತ್ತು ಆಯ್ಕೆ ಸಮಿತಿಯ ಹಲವು ಸದಸ್ಯರು ಪ್ರಶಸ್ತಿ ವಿಜೇತ ಕೆಲವು ಚಿತ್ರಗಳಲ್ಲಿ ನೇರ ಹಿತಾಸಕ್ತಿಗಳನ್ನು ಹೊಂದಿದ್ದಾರೆ” ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ನ್ಯಾಯಮೂರ್ತಿಗಳಾದ ಸ್ಯಾಮ್ ಕೋಶಿ ಮತ್ತು ನರಸಿಂಗ್ ರಾವ್ ನಂದಿಕೊಂಡ ಅವರ ಪೀಠವು ಪ್ರತಿವಾದಿಗಳಾದ ಜಿಟಿಎಫ್‌ಎ ಆಯ್ಕೆ ಸಮಿತಿ ಮತ್ತು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮ ಲಿಮಿಟೆಡ್‌ಗೆ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದೆ.

ಸೌಜನ್ಯ : thenewsminute.com
https://naanugauri.com/hate-speech-allegations-lawyers-group-condemns-delay-in-action-against-judge-yadav/
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....